ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಚೆಸ್ ವಿಶ್ವಕಪ್ : ಪ್ರಜ್ಞಾನಂದಗೆ ವಿರೋಚಿತ ಸೋಲು

Posted by Vidyamaana on 2023-08-24 12:42:34 |

Share: | | | | |


ಚೆಸ್ ವಿಶ್ವಕಪ್ : ಪ್ರಜ್ಞಾನಂದಗೆ ವಿರೋಚಿತ ಸೋಲು

ವಿಶ್ವಕಪ್ ಚೆಸ್ ಫೈನಲ್ ಪಂದ್ಯದಲ್ಲಿ 2 ದಶಕಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್ ಕಾರ್ಲ್ ಸನ್ವಿರುದ್ಧ ಸೋಲು ಕಂಡಿದ್ದಾರೆ.



ಆದರೆ ಸೋತರೂ ಕೊಟ್ಯಂತರ ಭಾರತೀಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.


ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್ ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್ ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.



ಗುರುವಾರ ನಡೆದ ಟೈ ಬ್ರೇಕರ್ ಪಂದ್ಯದಲ್ಲಿ ಮೊದಲ ಸೆಟ್ ನಲ್ಲಿ ಹಿನ್ನಡೆ ಅನುಭವಿಸಿದ ಅವರು ಆ ಬಳಿಕದ ಸುತ್ತಿನಲ್ಲಿ ಡ್ರಾ ಸಾಧಿಸಿದರು. ಆದರೆ 1-0 ಮುನ್ನಡೆ ಕಾಯ್ದುಕೊಂಡ ಮ್ಯಾಗ್ನಸ್ ಕಾರ್ಲ್ ಸನ್ ಗೆದ್ದು 6ನೇ ಬಾರಿ ವಿಶ್ವ ಕಿರೀಟ ಗೆದ್ದರು. ಪ್ರಜ್ಞಾನಂದ ಅವರು ವಿಶ್ವನಾಥನ್ ಆನಂದ್ ಬಳಿಕ ಚೆಸ್ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿದ ಕೇವಲ 2ನೇ ಭಾರತೀಯ ಎನಿಸಿಕೊಂಡಿದ್ದಾರೆ

ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

Posted by Vidyamaana on 2023-08-02 23:19:34 |

Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ಆ.3ರಂದು ಗುರುವಾರ ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಪ್ರೈವೇಟ್ ಬಸ್ ಸ್ಟಾಂಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್, ನೆಲ್ಲಿಕಟ್ಟೆ, ಎಳ್ಳುಡಿ ಮತ್ತು ಕಲ್ಲಾರೆ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಬಕ : ಓಜಾಲ ನಿವಾಸಿ ಉಸ್ಮಾನ್ ಹೃದಯಾಘಾತದಿಂದ ನಿಧನ

Posted by Vidyamaana on 2024-03-06 15:11:50 |

Share: | | | | |


ಕಬಕ : ಓಜಾಲ ನಿವಾಸಿ ಉಸ್ಮಾನ್ ಹೃದಯಾಘಾತದಿಂದ ನಿಧನ

ಪುತ್ತೂರು :- ಬಂಟ್ವಾಳ ತಾಲೂಕಿನ ಕುಲ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯಾನಪೋಯ ಆಸ್ಪತ್ರೆಯಲ್ಲಿ ಮಾ 06 ರಂದು  ಹೃದಯಾಘಾತದಿಂದ ನಿಧನರಾದರು 

ಹಲವಾರು ವರ್ಷಗಳಿಂದ ಸೆಕೆಂಡೆಂಡ್ ವಾಹನ ವ್ಯಾಪಾರಸ್ಥರು,ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಅಂಟೋ ಲಿಂಕ್ಸ್ ಮಾಲಕ ರಾಗಿದ್ದರು,ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ

ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಹತ್ಯೆ: ಗೆಳತಿ ಮತ್ತು ಆಕೆಯ ಪ್ರಿಯಕರ ಬಂಧನ

Posted by Vidyamaana on 2024-04-01 04:49:58 |

Share: | | | | |


ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಹತ್ಯೆ: ಗೆಳತಿ ಮತ್ತು ಆಕೆಯ ಪ್ರಿಯಕರ ಬಂಧನ

ರಾಂಚಿ: ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪ್ರಶಾಂತ್ ಕುಮಾರ್ ಸಿನ್ಹಾರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮಾಜಿ ಗೆಳತಿ ಕಾಜಲ್ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಶಾಂತ್ ಕುಮಾರ್ ಸಿನ್ಹಾ ಹತ್ಯೆ ಮಾಡಿ ಬಳಿಕ ಶವವನ್ನು ಜಾರ್ಖಂಡ್‌ನ ಹಜಾರಿಬಾಗ್‌ನ ಛದ್ವಾ ಸೇತುವೆಯ ಕೆಳಗೆ ಎಸೆಯಲಾಗಿತ್ತು.



ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ – ಹಸೆಮಣೆ ಏರಬೇಕಾಗಿದ್ದಾಕೆ ದುರ್ಮರಣ

Posted by Vidyamaana on 2023-12-29 13:43:53 |

Share: | | | | |


ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ – ಹಸೆಮಣೆ ಏರಬೇಕಾಗಿದ್ದಾಕೆ ದುರ್ಮರಣ

ಬಂಟ್ವಾಳ, ಡಿ.29: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿ.ಸಿ‌.ರೋಡ್ ಕೈಕಂಬದಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ತಡರಾತ್ರಿ ಸಾವನ್ನಪ್ಪಿದ್ದಾಳೆ. 


ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ನಿನ್ನೆ ರಾತ್ರಿ ಅಪಘಾತ ನಡೆದಿದ್ದು ಸ್ಥಳೀಯ ‌ನಿವಾಸಿ ಚೈತ್ರಾ (22 ) ಮೃತಪಟ್ಟ ಯುವತಿ. ಮಂಗಳೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ ಸಂಜೆ ವೇಳೆ ಬಸ್ಸಿನಲ್ಲಿ ಬಿಸಿ ರೋಡ್ ಬಂದಿದ್ದು ಬಳಿಕ ತಾಯಿ ಜೊತೆಗೆ ಸ್ನೇಹಿತೆಯ ಮನೆ ಕಡೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.  


ಸ್ನೇಹಿತೆಯ ರೋಸ್ ಕಾರ್ಯಕ್ರಮಕ್ಕೆಂದು ತಾಯಿ ಜೊತೆ ರಸ್ತೆ ಬದಿ ನಡೆದು ಹೋಗುತ್ತಿದ್ದರು ಎನ್ನಲಾಗಿದ್ದು ಕಾರಿನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಉಂಟಾಗಿದೆ‌. ಯುವತಿ ಗಂಭೀರ ಗಾಯಗೊಂಡಿದ್ದರು. ಇದೇ ವೇಳೆ, ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಹೆಚ್.ಸಿ.ರಮೇಶ್ ತಮ್ಮ ವಾಹನದಲ್ಲಿ ಯುವತಿಯನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಧ್ಯರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಯುವತಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಲ್ಲದೆ, ಮನೆಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾಗಿ ನಿಂತಿತ್ತು. ಘಟನೆ ಬೆನ್ನಲ್ಲೇ ಕಾರನ್ನು ಬಿಟ್ಟು ಅದರಲ್ಲಿದ್ದ ಮೂವರು ಯುವಕರು ಪರಾರಿಯಾಗಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ‌ಭೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ. 


ಯುವತಿಗೆ ಮದುವೆ ನಿಶ್ಚಿತಾರ್ಥ 


‌‌‌ಚೈತ್ರಾ ಮೇಕಪ್ ಕಲಾವಿದರಾಗಿದ್ದ ದಿ. ಭಾಸ್ಕರ್ ಆಚಾರ್ಯ ಅವರ ಮಗಳಾಗಿದ್ದು ಮಂಗಳೂರಿನ‌ ಪ್ರಸಿದ್ದ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದಳು. ಚೈತ್ರಾಗೆ ಮದುವೆ ನಿಶ್ಚಿತಾರ್ಥ ನಡೆದಿದ್ದು ಮುಂದಿನ ಮಾರ್ಚ್ 3ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಯುವಕರು ಕಾರನ್ನು ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಮಾದಕ ದ್ರವ್ಯ ಸೇವಿಸಿದ್ದರಿಂದ ಈ ರೀತಿ ಘಟನೆ ಆಗಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೈಗಳಲ್ಲಿ ಮೆಹೆಂದಿಯ ಬಣ್ಣವನ್ನು ಗಾಢವಾಗಿಸಲು ಸುಲಭವಾದ ಮಾರ್ಗಗಳು ಇಲ್ಲಿವೆ

Posted by Vidyamaana on 2023-10-31 14:13:02 |

Share: | | | | |


ಕೈಗಳಲ್ಲಿ ಮೆಹೆಂದಿಯ ಬಣ್ಣವನ್ನು ಗಾಢವಾಗಿಸಲು ಸುಲಭವಾದ ಮಾರ್ಗಗಳು ಇಲ್ಲಿವೆ

   ಕೈಗಳಿಗೆ ಹಚ್ಚಿದ ಮೆಹೆಂದಿ ಗಾಢ ಬಣ್ಣ ಬರದಿದ್ದರೆ ಬೇಸರವಾಗುವುದು ಕೂಡ ಉಂಟು. ಆದರೆ ಇನ್ನೂ ಮುಂದೆ ಕೈಗಳಲ್ಲಿ ಮೆಹೆಂದಿಯ ಬಣ್ಣವನ್ನು ಗಾಢವಾಗಿಸಲು ಈ ಸುಲಭವಾದ ಮಾರ್ಗಗಳನ್ನು ಪ್ರಯತ್ನಿಸಿ. ಮೆಹಂದಿ ಕೈಗಳ ಅಂದವನ್ನು ಹೆಚ್ಚಿಸುವುದರ ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳೂ ಕೂಡ ಇವೆ.ಹಬ್ಬಗಳ ಸಮಯದಲ್ಲಿ ಅಥವಾ ಮದುವೆ ಸಮಾರಂಭಗಳಲ್ಲಿ ಕೈಗಳಿಗೆ ಮೆಹೆಂದಿಯನ್ನು ಹಚ್ಚಲಾಗುತ್ತದೆ. ಆದರೆ ಕೈಗಳಿಗೆ ಹಚ್ಚಿದ ಮೆಹೆಂದಿ ಗಾಢ ಬಣ್ಣ ಬರದಿದ್ದರೆ ಬೇಸರವಾಗುವುದು ಕೂಡ ಉಂಟು. ಆದರೆ ಇನ್ನೂ ಮುಂದೆ ಕೈಗಳಲ್ಲಿ ಮೆಹೆಂದಿಯ ಬಣ್ಣವನ್ನು ಗಾಢವಾಗಿಸಲು ಈ ಸುಲಭವಾದ ಮಾರ್ಗಗಳನ್ನು ಪ್ರಯತ್ನಿಸಿ.


 ಹಬ್ಬದ ಸಮಯದಲ್ಲಿ ಮೆಹಂದಿಯನ್ನು ಹಚ್ಚುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮೆಹೆಂದಿಯ ಬಣ್ಣವು ಗಂಡ ಮತ್ತು ಹೆಂಡತಿಯ ನಡುವಿನ ಪ್ರೀತಿಯ ಆಳವನ್ನು ಪ್ರತಿಬಿಂಬಿಸುತ್ತದೆ ಎಂಬ ಮಾತಿದೆ.ಮೆಹೆಂದಿಯ ಬಣ್ಣವನ್ನು ಗಾಢವಾಗಿಸಲು ಸುಲಭ ಮಾರ್ಗಗಳು:


ಮೊದಲು ಕೈ ತೊಳೆಯಿರಿ:

ಮೆಹೆಂದಿ ಹಚ್ಚುವ ಮೊದಲು, ಕೈಗಳನ್ನು ಸಾಬೂನು ಅಥವಾ ಹ್ಯಾಂಡ್‌ವಾಶ್‌ನಿಂದ ಸರಿಯಾಗಿ ಸ್ವಚ್ಛಗೊಳಿಸಿ. ಕೆಲವೊಮ್ಮೆ ಕೈಯಲ್ಲಿರುವ ಬೆವರು ಹಾಗೂ ಕೊಳೆಯಿಂದಾಗಿ ಮೆಹೆಂದಿಯ ಬಣ್ಣ ಗಾಢವಾಗದಿರಲು ಕಾರಣವಾಗಬಹುದು.

ಮಾಯಿಶ್ಚರೈಸರ್ ಹಚ್ಚಬೇಡಿ:

  ನಿಮ್ಮ ಕೈಗಳನ್ನು ತೊಳೆದ ತಕ್ಷಣ ಮಾಯಿಶ್ಚರೈಸರ್ ಹಚ್ಚುವುದು ಉತ್ತಮ. ಆದರೆ ಮೆಹೆಂದಿಯನ್ನು ಹಚ್ಚುವ ಮೊದಲು ಮಾಯಿಶ್ಚರೈಸರ್ ಹಚ್ಚಬೇಡಿ. ಇವುಗಳಲ್ಲಿರುವ ರಾಸಾಯನಿಕಗಳು ಮೆಹಂದಿಯ ಬಣ್ಣವನ್ನು ಮಂದಗೊಳಿಸುತ್ತವೆ. ಆದ್ದರಿಂದ ಮಾಯಿಶ್ಚರೈಸರ್ ಅಥವಾ ಕ್ರೀಮ್ ಅನ್ನು ಮೆಹೆಂದಿಯನ್ನು ಹಚ್ಚುವ ಮೊದಲು ಅನ್ವಯಿಸುವುದನ್ನು ತಪ್ಪಿಸಿ.


ನಿಂಬೆ ಮತ್ತು ಸಕ್ಕರೆ:

ನಿಂಬೆ ರಸ ಮತ್ತು ಸಕ್ಕರೆಯ ಮನೆಮದ್ದನ್ನು ಸಹ ನೀವು ಪ್ರಯತ್ನಿಸಬಹುದು. ಇದು ತುಂಬಾ ಹಳೆಯ ಮನೆಮದ್ದು. ಇದಕ್ಕಾಗಿ ಒಂದು ಬಟ್ಟಲಿನಲ್ಲಿ ನಿಂಬೆ ರಸವನ್ನು ತೆಗೆದುಕೊಂಡು ಅದರಲ್ಲಿ ಸಕ್ಕರೆಯನ್ನು ಬೆರೆಸಿ ಮಿಶ್ರಣ ಮಾಡಿ. ಈಗ ಅದನ್ನು ಮೆಹೆಂದಿಯ ಮೇಲೆ ಸಿಂಪಡಿಸಿ.ಮೆಹೆಂದಿ ಒಣಗಿದ ನಂತರವೇ ನೀವು ರಸವನ್ನು ಅನ್ವಯಿಸಬೇಕು ಎಂಬುದನ್ನು ನೆನಪಿನಲ್ಲಿಡಿ.


ನೈಸರ್ಗಿಕವಾಗಿ ಒಣಗಲು ಬಿಡಿ:

ಮೆಹೆಂದಿಯ ಬಣ್ಣವನ್ನು ಗಾಢವಾಗಿಸಲು ನೀವು ಬಯಸಿದರೆ, ಅದನ್ನು ನೈಸರ್ಗಿಕವಾಗಿ ಒಣಗಲು ಬಿಡಿ. ಹೇರ್​​ ಡ್ರೈಯರ್​​ ಬಳಸಿ ಮೆಹೆಂದಿಯನ್ನು ಒಣಗಿಸುವುದರಿಂದ ಬಣ್ಣ ಮಾಸುವುದಲ್ಲದೆ ವಿನ್ಯಾಸವೂ ಹಾಳಾಗುತ್ತದೆ.


ಲವಂಗ ಹೊಗೆ:

ನಿಮ್ಮ ಕೈಯಲ್ಲಿರುವ ಮೆಹೆಂದಿಯ ಬಣ್ಣವನ್ನು ಗಾಢವಾಗಿಸಲು, ಲವಂಗ ಹೊಗೆಯ ವಿಧಾನವನ್ನು ಪ್ರಯತ್ನಿಸಬಹುದು. ಒಂದು ಬಾಣಲೆಯ ಮೇಲೆ ಲವಂಗದ ಕೆಲವು ತುಂಡುಗಳನ್ನು ಹಾಕಿ ಮತ್ತು ಕಡಿಮೆ ಉರಿಯಲ್ಲಿ ಹುರಿಯಿರಿ. ಹೊಗೆ ಬಂದ ತಕ್ಷಣ ಮೆಹೆಂದಿ ಕೈಗಳನ್ನು ಸ್ವಲ್ಪ ಹೊತ್ತು ಹೊಗೆ ತಾಗುವಂತೆ ಹಿಡಿಯಿರಿ.ಈ ಮನೆಮದ್ದು ತುಂಬಾ ಪರಿಣಾಮಕಾರಿ.

Recent News


Leave a Comment: