ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಗೆ ಆಹ್ವಾನ

Posted by Vidyamaana on 2024-06-08 17:26:58 |

Share: | | | | |


ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಗೆ ಆಹ್ವಾನ

ಮಾಲೆ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ.

ಭಾರತ ಸರ್ಕಾರದ ಮಂತ್ರಿಗಳ ಪರಿಷತ್ ನೀಡಿದ ಆಹ್ವಾನವನ್ನು ಸ್ವೀಕರಿಸಲಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ.

ಸ್ಕರಿಯ ಎಂ.ಎ ಫಾರೂಕ್ ಶೇಖ್ ಮುಕ್ವೆ ಪ್ರಶಾಂತ್ ರೈ ಸಾರಥ್ಯದ 7ನೇ ವರ್ಷದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 ಸನ್ಮಾನ ಕಾರ್ಯಕ್ರಮ

Posted by Vidyamaana on 2024-01-25 06:28:39 |

Share: | | | | |


ಸ್ಕರಿಯ ಎಂ.ಎ ಫಾರೂಕ್ ಶೇಖ್ ಮುಕ್ವೆ  ಪ್ರಶಾಂತ್ ರೈ ಸಾರಥ್ಯದ 7ನೇ ವರ್ಷದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 ಸನ್ಮಾನ ಕಾರ್ಯಕ್ರಮ

ಪುತ್ತೂರು: ಸ್ಕರಿಯ ಎಂ.ಎ., ಫಾರೂಕ್ ಶೇಖ್ ಮುಕ್ವೆ ಹಾಗೂ ಪ್ರಶಾಂತ್ ರೈ ಸಾರಥ್ಯದ ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 7ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ. 21ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಲಾಯರ್ಸ್ ಇಲೆವೆನ್ ತಂಡವನ್ನು ಸೋಲಿಸಿ ಪಿ ಇ ಟಿ ಇಲೆವೆನ್ ತಂಡವು ಚಾಂಪಿಯನ್ನಾಗಿ ಹೊರಹೊಮ್ಮಿತ್ತು. ಲಾಯರ್ಸ್ ಇಲೆವೆನ್ ತಂಡ ರನ್ನರ್ ಪ್ರಶಸ್ತಿ ಪಡೆದುಕೊಂಡರೆ ಮೂರನೇ ಸ್ಥಾನವನ್ನು ವಿವೇಕಾನಂದ ತಂಡ ಮತ್ತು ನಾಲ್ಕನೇ ಸ್ಥಾನವನ್ನು ಸುದ್ದಿ ಇಲೆವೆನ್ ತಂಡ ತಮ್ಮದಾಗಿಸಿಕೊಂಡಿತು. ಪೊಲೀಸ್ ಇಲೆವನ್ ಮತ್ತು ವಿವೇಕಾನಂದ ಕಾಲೇಜು ಇಲೆವನ್ ಮಹಿಳಾ ತಂಡಗಳ ನಡುವೆ ನಡೆದ ಪ್ರದರ್ಶನ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜು ಇಲೆವನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿ, ಪೊಲೀಸ್ ಇಲೆವೆನ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.




ಪಂದ್ಯಾಟ ಉದ್ಘಾಟಿಸಿ ಮಾತನಾಡಿದ ಡಿವೈಎಸ್ಪಿ ಅರುಣ್ ನಾಗೇಗೌಡ, ಸಂಘಟಕರಿಗೂ ಆಟಗಾರರಿಗೂ ಶುಭ ಹಾರೈಸಿದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ  ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ವಿವಿಧ ಇಲಾಖೆಗಳು ಸಂಘ ಸಂಸ್ಥೆಗಳು ಒಟ್ಟು ಸೇರಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದರೆ ಇಲಾಖೆಗಳ ಮಧ್ಯ ಬಾಂಧವ್ಯ ಮೂಡಿಸಲು ಸಾಧ್ಯ. ಕ್ರಿಕೆಟ್ ಪಂದ್ಯಾಟದ ಮೂಲಕ ಸಂಘಟಕರು ಒಳ್ಳೆಯ ಕಾರ್ಯಕ್ರಮ ಆಯೋಜನೆ ಮಾಡಿದ್ದೀರಿ. ಇಂತಹ ಕಾರ್ಯಕ್ರಮಗಳು ಇಂದಿನ ಅಗತ್ಯ. ಸಾರ್ವಜನಿಕರಿಗೂ ಇಲಾಖೆಗಳ ಮತ್ತು ಅಧಿಕಾರಿಗಳ ಪರಿಚಯಕ್ಕೆ ಇದು ಸುಲಭ ಎಂದು ಹೇಳಿ ಶುಭ ಹಾರೈಸಿದರು



ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ ಕೃಷ್ಣ ಭಟ್ ಮಾತನಾಡಿ, ಬಾಂಧವ್ಯ ಟ್ರೋಫಿ ವಿವಿಧ ಇಲಾಖೆಗಳೊಂದಿಗೆ ಬಾಂಧವ್ಯವನ್ನು ಬೆಳೆಸಲು ಹಮ್ಮಿಕೊಂಡಿರುವಂತಹ ವಿಶೇಷ ಕಾರ್ಯಕ್ರಮ. ಅದಕ್ಕೆ ಸಂಘಟಕರಿಗೆ ನಾನು ಅಭಿನಂದಿಸುತ್ತೇನೆ ಎಂದು ಹೇಳಿ ಶುಭ ಹಾರೈಸಿದರು.


 ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ಇಲಾಖೆಗಳು ಸೌಹಾರ್ದತೆಯಿಂದ ಕೆಲಸಗಳು ಮಾಡಬೇಕು. ಸರಕಾರಿ ಅಧಿಕಾರಿಗಳು ದಿನನಿತ್ಯದ ಕೆಲಸದ ಒತ್ತಡದ ನಡುವೆ ಒಂದು ದಿನ ಎಲ್ಲಾ ಇಲಾಖೆಗಳು ಒಟ್ಟು ಸೇರಿ ಆಟ ಆಡುವುದು ಉತ್ತಮ ಬೆಳವಣಿಗೆ. ಮುಂದಿನ ಸಮಾಜಮುಖಿ ಕೆಲಸ ಕಾರ್ಯಗಳ ಚಿಂತನೆ ಇಟ್ಟುಕೊಂಡು ಈ ಬಾಂಧವ್ಯ ಟ್ರೋಪಿ ನಡೆಯುತ್ತಿದೆ. ಮುಂದಿನ ವರ್ಷ ವಿಜೃಂಭಣೆಯಿಂದ ನಡೆಯಲಿ ಎಂದು ಹೇಳಿ ಶುಭ ಹಾರೈಸಿದರು.


ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಗೆಲುವಿಗಿಂತ ಭಾಗವಹಿಸುವುದೇ ಮುಖ್ಯ ಎಂಬ  ಧ್ಯೇಯದೊಂದಿಗೆ ಎಲ್ಲಾ ತಂಡಗಳು ಆಡುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಶುಭ ಹಾರೈಸಿದರು.


ಉದ್ಯಮಿ ಸಹಜ್ ರೈ ಮಾತನಾಡಿ, ಪುತ್ತೂರಿನ ಇತಿಹಾಸದಲ್ಲಿ ವಿವಿಧ ಇಲಾಖೆಗಳನ್ನು ಒಂದೇ ಕಡೆ ಸೇರಿಸಿ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುವ ಕಾರ್ಯಕ್ರಮ ಇದ್ರೆ ಬಾಂಧವ್ಯ ಟೋಪಿ ಮಾತ್ರ ಎಂದು ಹೇಳಿ ಶುಭ ಹಾರೈಸಿದರು.


ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್, ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ, ಸುದ್ದಿ ಸಮೂಹ ಸಂಸ್ಥೆಗಳ ಸಿಇಓ ಸೃಜನ್ ಊರುಬೈಲ್, ಮೆಸ್ಕಾಂ ಇಂಜಿನಿಯರ್ ರಾಮಚಂದ್ರ, ಉದ್ಯಮಿಗಳಾದ ಶಿವರಾಮ ಆಳ್ವ ಮುಖ್ಯ ಅತಿಥಿಗಳಾಗಿ ಆಗಮಸಿ ಶುಭ ಹಾರೈಸಿದರು.


ಸಮಾರೋಪ:

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ  ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ   ಡಾ. ಯು.ಪಿ. ಶಿವಾನಂದ್ ಮಾತನಾಡಿ, ಪಂದ್ಯಾಟದ ಯಶಸ್ಸಿನ ಹಿಂದಿರುವ ಫಾರೂಕ್ ನಮ್ಮ ಸುದ್ದಿಯ ಭಾಗ. ಸ್ಕರಿಯ ಹಾಗೂ ಪ್ರಶಾಂತ್ 7 ವರ್ಷಗಳ ಹಿಂದೆ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದಾಗ ಇದು ಸಾಧ್ಯವೇ ಎಂದು ಯೋಚನೆ ಮಾಡಿದ್ದೆವು. ಈ 7 ವರ್ಷಗಳಿಂದ ಪಂದ್ಯ ಅತ್ಯದ್ಭುತವಾಗಿ ನಡೆದುಕೊಂಡು ಬಂದಿದೆ. ಜನರಲ್ಲಿ ಬಾಂಧವ್ಯ ಮೂಡಿಸುವ ಇಂತಹ ಚಿಂತನೆಗೆ ಅಭಿನಂದನೆ ಸಲ್ಲಿಸಬೇಕು. ಪುರುಸೋತಿಲ್ಲದ ಜನರನ್ನು ಮತ್ತು ಸಮಾಜಕ್ಕೆ ಕೊಡುಗೆ ನೀಡುವವರನ್ನು ಕ್ರೀಡೆಯೊಳಗೆ ತಂದು ಬೆರೆಯುವಂತೆ ಮಾಡುವುದು ಅತ್ಯಂತ ಒಳ್ಳೆಯ ಕೆಲಸವಾಗಿದೆ. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿ ಶುಭ ಹಾರೈಸಿದರು


ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಕ್ರೀಡೆ ಎಂದರೆ ಮೊದಲು ನೆನಪಾಗುವುದು ಒಲಿಂಪಿಕ್ಸ್. ಇದು ದೇಶ ದೇಶಗಳನ್ನು ಒಂದುಗೂಡಿಸುವ ಕೆಲಸ ಮಾಡಿದೆ. ಒಟ್ಟು ಜನಸಂಖ್ಯೆಯ 60 ಶೇ. ಜನ 40ಕ್ಕಿಂತ ಕೆಳಗಿನವರು. ನಾವು ಕ್ರೀಡೆಯಲ್ಲಿ ತೊಡಗಿಸಿಕೊಂಡು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ಅವಕಾಶ ಇದೆ. ಜೊತೆಗೆ ಪ್ರೀತಿ ವಿಶ್ವಾಸದ, ಬಾಂಧವ್ಯದ ಜೀವನ ನಡೆಸಲು ಕೂಡ ಈ ಕ್ರೀಡೆ ಸಹಕಾರಿಯಾಗಿದೆ. ನಾನು ಕಳೆದ 7 ವರ್ಷಗಳಿಂದಲೂ ಬಾಂಧವ್ಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದೇನೆ. ಶಾಸಕನಾಗಿ, ಮಾಜಿ ಶಾಸಕನಾಗಿಯೂ ಬಂದಿದ್ದೇನೆ. ಇಂತಹ ಉತ್ತಮ ಕ್ರೀಡಾಕೂಟ ಆಯೋಜನೆ ಮಾಡಿದ ಸ್ಕರೀಯ, ಫಾರೂಕ್ ಶೇಖ್ ಮತ್ತು ಪ್ರಶಾಂತ್ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮೂವರು ಮೊದಲಿಗೆ ಸೇರಿದಾಗ ಇವರು ಏನು ಮಾಡಬಹುದು ಎಂದು ಸ್ವಲ್ಪ ಅಪಸ್ವರ ಇತ್ತು. ಆದರೆ ಇಂದು ಇವರು ಏನು ಮಾಡಬಹುದು ಎನ್ನುವುದು ಗೊತ್ತಾಗಿದೆ ಎಂದು ಹೇಳಿ ಶುಭ ಹಾರೈಸಿದರು.

ಪೊಲೀಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ, ಜಂಬೂರಾಜ್ ಮಹಾಜನ್, ರಾಜೇಶ್, ಉದಯ ರವಿ, ಪ್ರೇಮ ಬೇಕರಿ ಮಾಲಕ ವಿನೋದ್ ಅವರ ಪುತ್ರಿಯರಾದ ಅಮೃತ ಅದ್ಯಾತ, ಬಿಕೆ ಬಿಲ್ಡ್ ಮಾರ್ಟ್ ಮಾಲಕ ಮೊಯ್ದೀನ್, ಮಂಗಳೂರು ಕಟೀಲ್ ಲಾಜಿಸ್ಟಿಕಿನ ಜನಾರ್ದನ ಪೂಜಾರಿ ಅತಿಥಿಯಾಗಿ ಭಾಗವಹಿಸಿದರು.

ಇದೇ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಹಾಗೂ 400 ಮೀಟರ್ ಹರ್ಡಲ್ಸ್ ನ ರಾಷ್ಟ್ರೀಯ ಕ್ರೀಡಾಪಟು ಅನಘ ಕೆ.ಎ., ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಜುವೆನ್ನಾ ಡ್ಯಾಝಲ್ ಕುಟಿನ್ಹಾ, ರಾಷ್ಟ್ರಮಟ್ಟದ ತ್ರೋಬಾಲ್ ಆಟಗಾರ ಮಹಮ್ಮದ್ ಶಾನ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಪಂದ್ಯಾಟದ್ದುದಕ್ಕೂ ಉಪಾಹಾರ, ಊಟ, ಪಾನೀಯದ ವ್ಯವಸ್ಥೆಯನ್ನು ಉಚಿತವಾಗಿ ಮಾಡಲಾಗಿತ್ತು.

ಬಾಂದವ್ಯ ಟ್ರೋಫಿ ಯ ಸಂಘಟಕ ಸ್ಕರಿಯ ಯಂ ಎ ಸ್ವಾಗತಿಸಿ, ಪ್ರಶಾಂತ್ ರೈ ವಂದಿಸಿದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ

Posted by Vidyamaana on 2024-08-14 07:32:29 |

Share: | | | | |


ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ

ಚಿಕ್ಕಮಗಳೂರು: ಭಿಕ್ಷೆ ಬೇಡಲು ಬುರ್ಖಾ ಧರಿಸಿ ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ಮಂಗಳವಾರ (ಆ.13) ನಡೆದಿದೆ.ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡ ಯುವಕನ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬುರ್ಖಾ ತೊಟ್ಟು ನಗರದ ಮಲ್ಲಂದೂರು ರಸ್ತೆಯಲ್ಲಿ ಯುವಕನ ಓಡಾಟ ನಡೆಸುವಾಗ ಅನುಮಾನಗೊಂಡು ಜನರು ಹಿಡಿದಿದ್ದಾರೆ.

ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

Posted by Vidyamaana on 2023-09-21 20:47:54 |

Share: | | | | |


ಮೊಬೈಲ್​​ ಫೋನ್​​ ಕಳೆದು ಹೋದ್ರೆ ಗಾಬರಿ ಆಗ್ಬೇಡಿ

   ಮೊಬೈಲ್​​ ಕಳೆದು ಹೋದ ತಕ್ಷಣ ನಮಗಾಗುವ ಗಾಬರಿ ಅಷ್ಟಿಷ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ.ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿ ಮತ್ತು ನಮ್ಮ ಮೊಬೈಲ್​ ಡೇಟಾ ಸೋರಿಕೆಯಾಗುವ ಟೆನ್ಶನ್​ ತುಂಬಾನೆ ಇರುತ್ತೆ.ಆದ್ರೆ ಇನ್ಮುಂದೆ ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆಯಪ್( KSP Application ) ಸಹಾಯ ಮಾಡಲಿದೆ. 


ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ಸಂಚಾರ್ ಸಾಥಿ ಪೋರ್ಟಲ್ ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆಯಪಲ್‌ ಐಫೋನ್​ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್​ನಲ್ಲಿ ಕಾರ್ಯನಿರ್ವಹಿಸಲಿದೆ.

ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ- ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Posted by Vidyamaana on 2024-04-02 05:48:30 |

Share: | | | | |


ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ- ಕೋಟ್ಯಾಂತರ   ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್  ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ  ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.

ಕಬಕ ಕಲ್ಲಂದಡ್ಕ ರಸ್ತೆಗೆ ಶಾಸಕರಿಂದ ಗುದ್ದಲಿಪೂಜೆ

Posted by Vidyamaana on 2024-01-15 15:49:05 |

Share: | | | | |


ಕಬಕ ಕಲ್ಲಂದಡ್ಕ ರಸ್ತೆಗೆ ಶಾಸಕರಿಂದ ಗುದ್ದಲಿಪೂಜೆ

ಪುತ್ತೂರು: ಹಲವಾರು ವರ್ಷಗಳಿಂದ ರಸ್ತೆ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ಕಬಕ ಗ್ರಾಮದ ಕಲ್ಲಂದಡ್ಕಕ್ಕೆ ರೂ. ೨೦ ಲಕ್ಷ ಅನುದಾನವನ್ನು ನೀಡಿದ್ದೇನೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಚುನಾವಣಾ ಬಹಿಷ್ಕಾರ ಮಾಡುವುದಾಗಿ ನೀವು ಹೆಳದಿದೀರಿ ನಾನು ಭರವಸೆ ಕೊಟ್ಟಿದ್ದೆ ಅದನ್ನು ಈಡೇರಿಸಿದ್ದೇನೆ ಎಂದು ಶಾಶಕರಾದ ಅಶೋಕ್ ರೈ ಹೇಳಿದರು.


ಅವರು ಕಲ್ಲಂದಡ್ಕದಲ್ಲಿ ರೂ. ೨೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ನಾನು ಸುಳ್ಳು ಭರವಸೆಗಳನ್ನು ನೀಡಿ ಹೋಗಿಲ್ಲ, ಕೊಟ್ಟ ಮಾತಿನಂತೆ ಇಲ್ಲಿಗೆ ಬಂದು ನಿಮಗೆ ರಸ್ತೆ ಮಾಡಿಸಿಕೊಟ್ಟಿದ್ದೇನೆ ಮುಂದಿನ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಶಾಸಕರು ಮನವಿ ಮಾಡಿದರು.


ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಡಿ ಕಲ್ಲಂದಡ್ಕದಲ್ಲಿ ರಸ್ತೆ ಇಲ್ಲದೆ ಹಲವಾರು ವರ್ಷಗಳಿಂದ ಜನತೆ ತೊಂದರೆಯಲ್ಲಿದ್ದರು. ರಾಜಕೀಯ ದುರುದ್ದೇಶದಿಂದ ಇಲ್ಲಿ ರಸ್ತೆ ಕಾಮಗಾರಿ ಮಾಡಿರಲಿಲ್ಲ. ಚುನಾವಣೆ ಬಹಿಷ್ಕಾರ ಮಾಡುವುದಾಗಿ ಘೋಷಣೆ ಮಡಿದ್ದ ಇಲ್ಲಿನ ಸುಮಾರು ೪೦ ಕುಟುಂಬಗಳಿಗೆ ಈಗ ಸಂತಸವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು ವಿರೋಧ ಪಕ್ಷದವರಿಗೆ ಸಹಿಸಲು ಸಾಧ್ಯವಾಗದೆ ಕಿರುಚಾಡುತ್ತಿದ್ದಾರೆ ಎಂದು ಹೇಳಿದರು.


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಮಾತನಾಡಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವ ಅರಂಭವಾಗಿದೆ. ಜನರ ನಿರೀಕ್ಷೆಗೂ ಮೀರಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಹಂಚಿಕೆ ಮಾಡುವ ಮೂಲಕ ರಾಜಧರ್ಮ ಪಾಲನೆ ಮಡುತ್ತಿರುವ ಶಾಸಕರಿಗೆ ಅಭಿನಂದಿಸುವುದಾಗಿ ಹೇಳಿದರು.


ಅಕ್ರಮಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಢರು, ಕಾರ್ಯಕರ್ತರು ಉಪಸ್ಥಿತರಿದ್ದರು.

Recent News


Leave a Comment: