ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಅಂಗಡಿ ಮೇಲೆ ಅಪ್ಪಳಿಸಿದ ಕಾರು:

Posted by Vidyamaana on 2024-08-15 23:34:50 |

Share: | | | | |


ವಿಟ್ಲ: ಚಾಲಕನ ನಿಯಂತ್ರಣ ಕಳೆದು ಅಂಗಡಿ ಮೇಲೆ ಅಪ್ಪಳಿಸಿದ ಕಾರು:

ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ಕಳೆದು ಅಂಗಡಿ ಮೇಲೆ ಅಪ್ಪಳಿಸಿದ ಪರಿಣಾಮ ಒಬ್ಬ ಗಾಯಗೊಂಡು ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ವಿಟ್ಲ- ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ನಡೆದಿದೆ.

ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಪುತ್ತೂರು ನಗರಸಭೆ ಉಪಚುನಾವಣೆ : ವಾರ್ಡ್-11 ರಲ್ಲಿ ಬಿಜೆಪಿ ಮನೆ ಮನೆ ಭೇಟಿ

Posted by Vidyamaana on 2023-12-18 22:10:56 |

Share: | | | | |


ಪುತ್ತೂರು ನಗರಸಭೆ ಉಪಚುನಾವಣೆ : ವಾರ್ಡ್-11 ರಲ್ಲಿ ಬಿಜೆಪಿ ಮನೆ ಮನೆ ಭೇಟಿ

ಪುತ್ತೂರು : ಡಿ.22 ರಂದು ನಡೆಯಲಿರುವ ನಗರಸಭೆ ಉಪಚುನಾವಣೆಗೆ ಸಂಬಂಧಿಸಿ ನೆಲ್ಲಿಕಟ್ಟೆ ವಾರ್ಡ್ 11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಅವರ ಪರವಾಗಿ ಬಿಜೆಪಿಯಿಂದ ಮನೆ ಮನೆ ಭೇಟಿ ಮತಯಾಚನೆ ಆರಂಭಗೊಂಡಿದೆ.ಪುಡಾ ಮಾಜಿ ಅಧ್ಯಕ್ಷ ಎಸ್.ಅಪ್ಪಯ್ಯ ಮಣಿಯಾಣಿ, ಬೂತ್ ಅಧ್ಯಕ್ಷ ಗಣೇಶ್ ಕಾಮತ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್. ಶೆಟ್ಟಿ, ನಗರಸಭೆ ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸದಸ್ಯರಾದ ಮಮತಾ ರಂಜನ್, ಪೂರ್ಣಿಮಾ, ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಸತೀಶ್ ನ್ಯಾಕ್ ಪರ್ಲಡ್ಕ, ರೋಹಿತ್ ನೆಲ್ಲಿಕಟ್ಟೆ, ಆರ್ಯಾವು ಗ್ರಾ.ಪಂ ಅಧ್ಯಕ್ಷೆ ಗೀತಾ, ನೆಲ್ಲಿಕಟ್ಟೆ ನಿವಾಸಿಗಳಾದ ಗೌತಮ್, ಉಲ್ಲಾಸ್ ಪೈ, ಶೇಖರ್ ಬ್ರಹ್ಮನಗರ, ಅಶೋಕ್ ಬ್ರಹ್ಮನಗರ, ಮೋಹನ್ ಮಡಿವಾಳ, ಸಂಕೇತ್ ಸಹಿತ ಹಲವಾರು ಮಂದಿ ಮನೆಮನೆ ಮತಯಾಚನೆಯಲ್ಲಿ ಭಾಗವಹಿಸಿದ್ದರು.


ವಾರ್ಡ್‌ ವಿವಿಧ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.


ವಾರ್ಡ್ 11 ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ರೋಹಿತ್ ನೆಲ್ಲಿಕಟ್ಟೆ ಅವರು ಬಿಜೆಪಿ ಅಭ್ಯರ್ಥಿ ರಮೇಶ್ ರೈ ಅವರ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನೆಲ್ಲಿಕಟ್ಟೆ ವಾರ್ಡ್-11 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ರೋಹಿತ್ ಅವರು ಪಕ್ಷದ ಮುಖಂಡರಿಗೆ ಕೋರಿಕೆ ಸಲ್ಲಿಸಿದ್ದರು. ಆದರೆ ಅವರಿಕೆ ಅವಕಾಶ ದೊರೆಯದೆ ದಾಮೋದರ್ ಭಂಡಾರ್ಕರ್ ಅವರಿಗೆ ಪಕ್ಷ ಅವಕಾಶ ನೀಡಿದೆ. ಇದರಿಂದ ಅಸಮಾಧಾನಗೊಂಡು ರೋಹಿತ್ ಅವರು ಬಿಜೆಪಿ ಅಭ್ಯರ್ಥಿಯ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫೆ.18 : ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Posted by Vidyamaana on 2023-02-17 05:34:28 |

Share: | | | | |


ಫೆ.18 : ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಕಡಬ : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಒರುಂಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಫೆ.18 ಶನಿವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ.

ಮಹಾಶಿವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಭಜನಾ ತಂಡಗಳಿಂದ ಸಂಜೆ 6 ಕ್ಕೆ ಕುಣಿತ ಭಜನೆ,  ಮಹಾಪೂಜೆ  ಮತ್ತು ರಾತ್ರಿ 9ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 12 ಕ್ಕೆ ಮಹಾಶಿವರಾತ್ರಿಯ ವಿಶೇಷ ಪೂಜೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

ಸುಳ್ಯ : ಬೈಕ್ - ಕಾರು ಭೀಕರ ಅಪಘಾತ

Posted by Vidyamaana on 2023-05-22 15:57:01 |

Share: | | | | |


ಸುಳ್ಯ : ಬೈಕ್ - ಕಾರು ಭೀಕರ ಅಪಘಾತ

ಸುಳ್ಯ:  ಇಲ್ಲಿನ ಪಾಲಡ್ಕ ಬಳಿ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಮೇ 22 ರಂದು ವರದಿಯಾಗಿದೆ.

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ ಕೆವಿಜಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಎಂಬವರು ಸ್ಥಳದಲ್ಲೇ ಮೃತಪಟ್ಟರು.

ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ ಗಾಯಗಳಾಗಿದ್ದು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು ಜಾತ್ರೆ : ಯುವಶಕ್ತಿ ಸೇವಾಪಥ ನೇತೃತ್ವದಲ್ಲಿ ಏ. 9ರಂದು ಶ್ರಮದಾನ

Posted by Vidyamaana on 2023-04-07 12:50:46 |

Share: | | | | |


ಪುತ್ತೂರು ಜಾತ್ರೆ : ಯುವಶಕ್ತಿ ಸೇವಾಪಥ  ನೇತೃತ್ವದಲ್ಲಿ ಏ. 9ರಂದು ಶ್ರಮದಾನ

ಪುತ್ತೂರು: ಯುವಶಕ್ತಿ ಸೇವಾಪಥ  ನೇತೃತ್ವದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 9ರಂದು ಶ್ರಮದಾನ ಸೇವೆ ನಡೆಯಲಿದೆ.

ಯುವಶಕ್ತಿ ಸೇವಾಪಥ ದ.ಕ. ಇದರ ನೇತೃತ್ವದಲ್ಲಿ ಮಿತ್ರಸಂಸ್ಥೆಗಳ ಒಗ್ಗೂಡುವಿಕೆಯೊಂದಿಗೆ ಶ್ರಮದಾನ ಸೇವೆ ಆಯೋಜಿಸಲಾಗಿದೆ.

ಹತ್ತೂರು ಸಂಭ್ರಮಿಸುವ ಪುತ್ತೂರ ಒಡೆಯನ ಜಾತ್ರೋತ್ಸವದ ಶುಭಸಮಯದಿ ಶ್ರಮಸೇವೆಗೈಯೋಣ ಬನ್ನಿ ಎಂಬ ಧ್ಯೇಯವಾಕ್ಯದೊಂದಿಗೆ ಶ್ರಮದಾನ ನಡೆಯಲಿದೆ. ಈಗಾಗಲೇ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ಖ್ಯಾತಿ ಗಳಿಸಿರುವ ಯುವಶಕ್ತಿ  ಸೇವಾಪಥ  ತಂಡ ಏಪ್ರಿಲ್ 9ರಂದು ಜಾತ್ರೋತ್ಸವ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಮುಂದಾಗಿದೆ ಎಂದು ಸಂಘಟಕರು ಮಾಧ್ಯಮ ಪ್ರಕಟಣೆಗೆ ತಿಳಿಸಿದ್ದಾರೆ .

Recent News


Leave a Comment: