ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


10 ನಿಮಿಷ ತಡಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಬಿಟ್ಟು ಹಾರಿದ ವಿಮಾನ

Posted by Vidyamaana on 2023-07-28 02:35:54 |

Share: | | | | |


10 ನಿಮಿಷ ತಡಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಬಿಟ್ಟು ಹಾರಿದ ವಿಮಾನ

ಬೆಂಗಳೂರು : ವಿಮಾನ ನಿಲ್ದಾಮಕ್ಕೆ 10 ನಿಮಿಷ ತಡವಾಗಿ ಆಗಮಿಸಿದ ಕಾರಮಕ್ಕಾಗಿ ಹೈದರಾಬಾದ್ ಪ್ರಯಾಣಿಸಬೇಕಿದ್ದಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವರನ್ನು ಬಿಟ್ಟು ಏರ್ ಏಷ್ಯಾ ವಿಮಾನವು ಪ್ರಯಾಣ ಬೆಳೆಸಿದಂತ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ನಡೆದಿದೆ.ಈ ಘಟನೆಯಿಂದ ತೀವ್ರ ಮುಜುಗರಕ್ಕೆ ಒಳಗಾಗಿರುವಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಶಿಷ್ಟಾಚಾರ ಉಲ್ಲಂಘಿಸಿದ ಏರ್ ಏಷ್ಯಾ ಮೇಲೆ ಗರಂ ಆಗಿದ್ದು, ಸಂಸ್ಥೆ ಹಾಗೂ ಕೆಐಎ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.


ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಹೈದರಾಬಾದ್ ಗೆ ತೆರಳಲು ಗುರುವಾರ ಮಧ್ಯಾಹ್ನ 2 ಗಂಟೆಗೆ ಹೊರಡುವ ಏರ್ ಏಷ್ಯಾ ವಿಮಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಟಿಕೆಟ್ ಬುಕ್ ಮಾಡಲಾಗಿತ್ತು. ಆದರೇ ವಿಮಾನ ನಿಲ್ದಾಣಕ್ಕೆ 10 ನಿಮಿಷ ಅವರು ತಡವಾಗಿ ಆಗಮಿಸಿದ್ದರು.ರಾಜ್ಯಪಾಲರು ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ ಹೊತ್ತಿಗೆ ಅವರು ಪ್ರಯಾಣಿಸಬೇಕಿದ್ದಂತ ಏರ್ ಏಷ್ಯಾ ವಿಮಾನವು ಗಗನಕ್ಕಾರಿತ್ತು. ಈ ಘಟನೆಯಿಂದ ಬೇಸರಗೊಂಡ ಅವರು, ರಾಜ್ಯದ ಮೊದಲ ಪ್ರಜೆಯಾದ ತಮಗೆ ಅಗೌರವ ಸೂಚಿಸಲಾಗಿದೆ ಎಂಬುದಾಗಿ ಸಮಾಧಾನ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.


ಇದಾದ ಬಳಿಕ ಮಧ್ಯಾಹ್ನ 3.30ಕ್ಕೆ ಹೈದರಾಬಾದ್ ಗೆ ಹೊರಟಿಟ್ದ ಬೇರೆ ಏರ್ ಏಷ್ಯಾ ವಿಮಾನದಲ್ಲಿ ರಾಜ್ಯಪಾಲರು ಪ್ರಯಾಣ ಬೆಳೆಸಿದರು. ಆದ್ರೇ ತಮ್ಮನ್ನು ಬಿಟ್ಟು ತೆರಳಿದಂತ ನಿಗದಿತ ವಿಮಾನದ ವಿರುದ್ಧ ರಾಜ್ಯಪಾಲರ ಸೂಚನೆ ಮೇರೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ FIR ದಾಖಲಿಸಿ, ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

Posted by Vidyamaana on 2024-05-24 21:08:42 |

Share: | | | | |


ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು: ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ಮತ್ತು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರವು ಮೇ 24 ನೇ ಶುಕ್ರವಾರ ದಂದು ಬೆಥನಿ ಶಾಲೆಯ ಸಭಾಂಗಣದಲ್ಲಿ,ಬೆಥನಿ ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. 

ಸಂಪನ್ಮೂಲ ವ್ಯಕ್ತಿಗಳಾದ ವಂದನೀಯ ಭಗಿನಿ ಅನ್ನಾ ಮರಿಯ ಕಾರ್ಯದರ್ಶಿಗಳು, ಜೀವಂಧಾರ ಸಮಾಜ ಸೇವಾ ಸಂಘ ಕುಲಶೇಖರ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ವೇದಿಕೆಯಲ್ಲಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆಯ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ನ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರ ಬಿ ಎಸ್ ಹಾಗೂ ಬೆಥನಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಆಗ್ನೇಸ್ ಶಾಂತಿ ಬಿ ಎಸ್ ಉಪಸ್ಥಿತರಿದ್ದರು.

  

ಶಿವಮೊಗ್ಗದಲ್ಲಿ ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

Posted by Vidyamaana on 2024-07-06 13:28:18 |

Share: | | | | |


ಶಿವಮೊಗ್ಗದಲ್ಲಿ ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

   ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ.ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

ದಮಾಮ್‌ನಲ್ಲಿ ಬೆಂಕಿ ಅವಘಡ: ಮೂಡಬಿದಿರೆ ಕೋಟೆಬಾಗಿಲು ಮೂಲದ ಶೇಖ್‌ ಫಹದ್‌ ರವರ ಮಗು ಮೃತ್ಯು

Posted by Vidyamaana on 2024-05-26 20:18:32 |

Share: | | | | |


ದಮಾಮ್‌ನಲ್ಲಿ ಬೆಂಕಿ ಅವಘಡ: ಮೂಡಬಿದಿರೆ ಕೋಟೆಬಾಗಿಲು ಮೂಲದ ಶೇಖ್‌ ಫಹದ್‌ ರವರ ಮಗು ಮೃತ್ಯು

ದಮಾಮ್:‌ ಸೌದಿ ಅರೇಬಿಯಾದ ದಮಾಮ್‌ನಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂಡಬಿದಿರೆ ಮಗುವೊಂದು ಮೃತಪಟ್ಟು, ಮಗುವಿನ ತಂದೆ ತಾಯಿ, ಅಣ್ಣ ICU ನಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ಗೃಹ ಜ್ಯೋತಿ ಅನ್ನ ಭಾಗ್ಯ ಗೃಹ ಲಕ್ಷ್ಮೀ -ಗ್ಯಾರಂಟಿಗಳಿಗೆ ಮುಹೂರ್ತ ನಿಗದಿ- ಸಿದ್ದರಾಮಯ್ಯ

Posted by Vidyamaana on 2023-06-12 02:48:03 |

Share: | | | | |


ಗೃಹ ಜ್ಯೋತಿ ಅನ್ನ ಭಾಗ್ಯ ಗೃಹ ಲಕ್ಷ್ಮೀ -ಗ್ಯಾರಂಟಿಗಳಿಗೆ ಮುಹೂರ್ತ ನಿಗದಿ- ಸಿದ್ದರಾಮಯ್ಯ

ಬೆಂಗಳೂರು: ಮೊದಲ ಯೋಜನೆ ಅನುಷ್ಠಾನಗೊಂಡ ಬೆನ್ನಲ್ಲೇ ಇನ್ನೂ ಮೂರು ಗ್ಯಾರಂಟಿಗಳಿಗೆ ಮುಹೂರ್ತ ನಿಗದಿಯಾಗಿದೆ.

ಜುಲೈ 1ರಂದು 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಪೂರೈಸುವ “ಗೃಹ ಜ್ಯೋತಿ’ ಮತ್ತು ಮಾಸಿಕ ತಲಾ ಹತ್ತು ಕೆಜಿವರೆಗೆ ಅಕ್ಕಿ ವಿತರಿಸುವ “ಅನ್ನಭಾಗ್ಯ” ಜಾರಿಗೊಳಿಸಲಾಗುವುದು. ಇದರ ಬೆನ್ನಲ್ಲೇ ಬಹುತೇಕ ಆಗಸ್ಟ್‌ 16ರಂದು ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ “ಗೃಹಲಕ್ಷ್ಮೀ” ಗ್ಯಾರಂಟಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.


ವಿಧಾನಸೌಧ ಆವರಣದಲ್ಲಿ “ಶಕ್ತಿ’ ಯೋಜನೆಗೆ ಚಾಲನೆ ನೀಡಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನ ಭಾಗ್ಯ ಯೋಜನೆಯಿಂದ ವಾರ್ಷಿಕ 10,100 ಕೋಟಿ ರೂ. ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಹಿಂದಿನ ಒಂದು ವರ್ಷದ ಸರಾಸರಿ ಬಳಕೆ ಆಧರಿಸಿ ಗೃಹಬಳಕೆದಾರರ ವಿದ್ಯುತ್‌ ಸರಾಸರಿ ತೆಗೆಯಲಾಗಿದೆ. ಅದರಂತೆ ಒಂದು ಕುಟುಂಬ 70 ಯೂನಿಟ್‌ ಉಪಯೋಗಿಸುತ್ತದೆ. ಅದರ ಮೇಲೆ ಶೇ.10ರಷ್ಟು ಹೆಚ್ಚುವರಿ ಉಪಯೋಗಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪ್ರತಿಪಕ್ಷಗಳು 200 ಯೂನಿಟ್‌ ಪೂರ್ಣ ನೀಡಿಲ್ಲ ಎಂದು ವಾದಿಸುತ್ತಿವೆ. ಸರ್ಕಾರ ನಡೆಸಿದವರು ಆಡುವ ಮಾತುಗಳೇ ಇವು ಎಂದು ತರಾಟೆಗೆ ತೆಗೆದುಕೊಂಡರು.

ಗೃಹ ಜ್ಯೋತಿ ಯೋಜನೆ ಜುಲೈ 1ರಂದು ಚಾಲನೆ ನೀಡುವುದರಿಂದ ಆಗಸ್ಟ್‌ 1ರಿಂದ ವಿತರಣೆಯಾಗುವ ಬಿಲ್‌ ಮೂಲಕ ಗ್ರಾಹಕರಿಗೆ ಇದರ ಲಾಭ ಸಿಗಲಿದೆ. ಇನ್ನು ಯುವನಿಧಿ ಅಡಿ 2022-23ನೇ ಸಾಲಿನ ಪದವೀಧರರು ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರೈಸಿದವರಿಗೆ ಕ್ರಮವಾಗಿ ಮಾಸಿಕ 3 ಸಾವಿರ ಹಾಗೂ 1,500 ರೂ.ಗಳನ್ನು 24 ತಿಂಗಳು ಮಾತ್ರ ಸಹಾಯಧನ ನೀಡಲಾಗುವುದು ಎಂದರು

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಆಗಸ್ಟ್ 15ರಿಂದ ದೇಶಾದ್ಯಂತ ಹುಲಿ ರಮ್ ಲಭ್ಯ!

Posted by Vidyamaana on 2024-08-13 05:39:06 |

Share: | | | | |


ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಆಗಸ್ಟ್ 15ರಿಂದ ದೇಶಾದ್ಯಂತ ಹುಲಿ ರಮ್ ಲಭ್ಯ!

ಬೆಂಗಳೂರು : ಹುಲಿ ಅನ್ನೋ ಮದ್ಯ ಇದೀಗ ಕರ್ನಾಟಕ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದೆ. ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಾಗರಿ ರಮ್ ಇದಾಗಿದೆ.ದೇಹದ ತೂಕ ಕಡಿಮೆ ಮಾಡಲು ಈ ಕೋಕಂ ಜ್ಯೂಸ್ ಕುಡಿಯಿರಿ!

Recent News


Leave a Comment: