ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಮೌಶ್ಮಿ ಶೆಟ್ಟಿ ಪಾತ್ರತೋಟ ಸಾಧನೆ

Posted by Vidyamaana on 2023-11-30 07:46:28 |

Share: | | | | |


ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಮೌಶ್ಮಿ ಶೆಟ್ಟಿ ಪಾತ್ರತೋಟ ಸಾಧನೆ

ಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರ ತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.


ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು ವಿ ಟಿವಿ ಯ ಮುಖ್ಯಸ್ಥರೂ ಆಗಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ಮತ್ತು ಸ್ನೇಹ ದಂಪತಿಯ ಪುತ್ರಿ.

ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

Posted by Vidyamaana on 2023-07-07 23:11:51 |

Share: | | | | |


ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್  ತಿಳಿಸಿದ್ದಾರೆ.


ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ

BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

Posted by Vidyamaana on 2024-08-07 13:07:16 |

Share: | | | | |


BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

ನವದೆಹಲಿ : ಇಂದು ಚಿನ್ನ ಗೆಲ್ಲುವ ಭಾರತದ ಕನಸು ಭಗ್ನಗೊಂಡಿದೆ. ಪ್ಯಾರಿಸ್: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಂಡಿದ್ದಾರೆ.50 ಕೆಜಿ ವಿಭಾಗದಲ್ಲಿ ಹೋರಾಡುವ ಕುಸ್ತಿಪಟು 100 ಗ್ರಾಂ ಅಧಿಕ ತೂಕ ಹೊಂದಿರುವುದು ಕಂಡುಬಂದಿದೆ.ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ವಿನೇಶ್ ಅವರ ಅನರ್ಹತೆಯ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

Posted by Vidyamaana on 2023-10-12 01:26:40 |

Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ಏನಿರಲಿದೆ?

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್‌ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.


ಪ್ರಯೋಜನ ಏನು?

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್‌ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್‌ ಬಳಕೆದಾರರಿಗೆ ಈ ಫ್ಲಾಶ್‌ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.


ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

– ರಾಜಕುಮಾರ್‌, ಸಹಾಯಕ ನಿರ್ದೇಶಕ (ಟೆಕ್ನಾಲಜಿ), ದೂರಸಂಪರ್ಕ ಇಲಾಖೆ.

ಲೋಕಸಭಾ ಕಣಕ್ಕೆ ಧುಮುಕಿದ ಅರುಣ್ ಕುಮಾರ್ ಪುತ್ತಿಲ ಸಂಸದ ನಳಿನ್ ಏನಂದ್ರು

Posted by Vidyamaana on 2024-02-29 16:48:05 |

Share: | | | | |


ಲೋಕಸಭಾ ಕಣಕ್ಕೆ ಧುಮುಕಿದ ಅರುಣ್ ಕುಮಾರ್ ಪುತ್ತಿಲ  ಸಂಸದ ನಳಿನ್ ಏನಂದ್ರು

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತವಾದ ಬೆನ್ನಲ್ಲೇ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತಿಲ ಪರಿವಾರ ಎಂಬುದು ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ ಎಂದು ಕಟೀಲ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಕುಮಾರ್ ಪುತ್ತಿಲ ಅವರನ್ನು ಮನವೊಲಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವು ಬಹಳ ವರ್ಷಗಳ ಹೋರಾಟದಿಂದ ಈ ಮಟ್ಟಕ್ಕೆ ಬೆಳೆದಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನ್ನು ಎದುರಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಪಕ್ಷಕ್ಕೆ ಎದುರಾಳಿ ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ನಿರ್ಮಾಣವಾದ ಬಳಿಕ ಬಿಜೆಪಿ ಪರವಾದ ವಾತಾವರಣ ಅದ್ಭುತವಾಗಿದೆ. ಹಿಂದುತ್ವ,ರಾಷ್ಟ್ರವಾದ,ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಸಮಸ್ಯೆ ಬೇರೆ, ಈಗಿನ ವಿಚಾರ ಬೇರೆ. ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುತ್ತೇನೆ. ಟಿಕೆಟ್ ಕೊಡುವುದು ಅಥವಾ ಬಿಡುವುದು ರಾಷ್ಟ್ರೀಯ ನಾಯಕರ ತೀರ್ಮಾನ ಎಂದರು.

ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

Posted by Vidyamaana on 2023-12-01 08:29:57 |

Share: | | | | |


ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

ಕಡಬ: ಹಾಸನದಲ್ಲಿ ನಡೆದಿದ್ದ ಶಾಲಾ ಶಿಕ್ಷಕಿ ಕಿಟ್ರ್ಯಾಪ್ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.


ಕಡಬ ತಾಲೂಕಿನ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಾಹ ಮಾಡಿ ಕೊಡಲು ಒಪ್ಪದ ಕಾರಣಕ್ಕೆ ಹಾಸನ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲೆ ಶಿಕ್ಷಕಿಯನ್ನು ರಾಮು ಎಂಬಾತ ಅಪಹರಣ ಮಾಡಿದ್ದನು.

ನೆಲ್ಯಾಡಿ ಬಳಿ ಕಿಟ್ರ್ಯಾಪ್ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ವಶಕ್ಕೆ ಪಡೆದು, ಅಪಹರಣಕ್ಕೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.

ಮದುವೆಗೆ ಒಪ್ಪದ ಅತ್ತೆ ಮಗಳನ್ನು ಸಂಬಂಧಿ ರಾಮು ಎಂಬಾತ ತನ್ನ ಗೆಳೆಯರ ಜೊತೆ ಸೇರಿ ಇನ್ನೋವಾ ಕಾರಿನಲ್ಲಿ ಕಿಟ್ರ್ಯಾಪ್ ಮಾಡಿದ್ದನು.

ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.

Recent News


Leave a Comment: