ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಸುದ್ದಿಗಳು News

Posted by vidyamaana on 2024-07-05 10:22:02 |

Share: | | | | |


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು.

2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 Share: | | | | |


ವಿಟ್ಲ: ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ; ಬಾಯಾರು ನಿವಾಸಿ ರಾಜೇಶ್ ಬಂಧನ

Posted by Vidyamaana on 2023-08-01 16:08:11 |

Share: | | | | |


ವಿಟ್ಲ: ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ; ಬಾಯಾರು ನಿವಾಸಿ  ರಾಜೇಶ್ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು  ವಿಟ್ಲ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.


ಕೇರಳ ಬಾಯಾರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ನೊಂದ ಬಾಲಕಿ ಐದು ಮಂದಿಯ ಹೆಸರನ್ನು ದೂರಿನಲ್ಲಿ ತಿಳಿಸಿದ್ದು ಮೂರು ಮಂದಿಯನ್ನು ರವಿವಾರ ಬಂಧಿಸಿದ್ದು, ಓರ್ವನನ್ನು ಸೋಮವಾರ ಬಂಧಿಸಿದರೆ, ಇನ್ನೋರ್ವ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಿನಂಗಡಿ ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದ ಡಿಯೋ ಅಪಘಾತ ಕುಪ್ಪೆಟ್ಟಿ ಅಬೂಬಕ್ಕರ್ ಸಿದ್ದೀಕ್ ಮೃತ್ಯು ಸವಾರ ಗಂಭೀರ ನಕಲಿ ನಂಬರ್ ಪ್ಲೇಟ್ ಪತ್ತೆ.

Posted by Vidyamaana on 2023-02-10 03:26:59 |

Share: | | | | |


ಉಪ್ಪಿನಂಗಡಿ ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದ ಡಿಯೋ ಅಪಘಾತ ಕುಪ್ಪೆಟ್ಟಿ ಅಬೂಬಕ್ಕರ್ ಸಿದ್ದೀಕ್  ಮೃತ್ಯು ಸವಾರ ಗಂಭೀರ ನಕಲಿ ನಂಬರ್ ಪ್ಲೇಟ್ ಪತ್ತೆ.

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಡಿಯೋ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ದುರ್ಘಟನೆ ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ಫೆ. 1 ರಂದು ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಓರ್ವ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಪ್ಪೆಟ್ಟಿಯ ಅಬೂಬಕ್ಕರ್ ಸಿದ್ದೀಕ್ ಎಂಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಫೆಬ್ರವರಿ 1 ರಂದು ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯ ದಿಂದ ಉಪ್ಪಿನಂಗಡಿಯಿಂದ ಕುಪ್ಪೆಟ್ಟಿ ಕಡೆಗೆ ಅತೀ ವೇಗದಿಂದ ಚಲಾಯಿಸಿಕೊಂಡು ಬಂದ ಡಿಯೋ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಉಪ್ಪಿನಂಗಡಿಯಿಂದ ಕಲ್ಲೇಗಿ ಕಡೆಗೆ ಚಲಿಸುತ್ತಿದ್ದ ಜೀತೋ ಟೆಂಪೊಗೆ ಹಿಂಬದಿಯಿಂದ ಡಿಕಿ ಹೊಡೆದಿದೆ ಎನಲಾಗಿದೆ. ಆದರೆ ಸ್ಕೂಟರ್ ಜೀತೋ ಟೆಂಪೊಗೆ ಡಿಕ್ಕಿ ಹೊಡೆದಿರುವ ಬಗ್ಗೆ ಜೀತೋ ಟೆಂಪೋದಲ್ಲಿ ಯಾವುದೇ ಕುರುಹುಗಳು ಪತ್ತೆ ಆಗಿಲ್ಲ ಎನ್ನಲಾಗಿದೆ.ಅಪ್ರಾಪ್ತ ಸ್ಕೂಟರ್ ಸವಾರರು ಹೆಲ್ಮಟ್ ಧರಿಸದ ಕಾರಣ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಸಂದರ್ಭದಲ್ಲಿ ಸವಾರ ಮತ್ತು ಸಹ ಸವಾರನ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಸಹ ಸವಾರ ಕುಪ್ಪೆಟ್ಟಿಯ ಅಬೂಬಕ್ಕರ್ ಸಿದ್ದೀಕ್ ಎಂಬಾತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದ KA 53 ER 6958 ಡಿಯೋ ಸ್ಕೂಟರಿನ ನಂಬರ್ ಪ್ಲೇಟ್ ನಕಲಿಯಾಗಿದ್ದು, ಈ ಬಗ್ಗೆ ಬಂಟ್ವಾಳದ ಸಾರಿಗೆ ಅಧಿಕಾರಿಗಳು ಪೊಲೀಸರಿಗೆ ದೂರನ್ನು ನೀಡಿದ್ದು, ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದಡಿಯೋ ಸ್ಕೂಟರಿನ ಅಸಲಿ ಮಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

       ಅಜಾಗರೂಕತೆ ಮತ್ತು ನಿರ್ಲಕ್ಷ್ಯತನ, ಹೆಲ್ಮಟ್ ಧರಿಸದೆ, ಇನ್ಸುರೆನ್ಸ್ ಇಲ್ಲದೆ,ಡ್ರೈವಿಂಗ್ ಲೈಸನ್ಸ್ ಇಲ್ಲದ ಅಪ್ರಾಪ್ತ ಮಕ್ಕಳಿಂದ ಸ್ಕೂಟರ್ ಚಲಾವಣೆ ಎಂಬ ಕಾರಣದಿಂದ ಪುತ್ತೂರು ಸಂಚಾರಿ  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಂಗಳಮುಖಿಯರ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕ ಆತ್ಮಹತ್ಯೆ

Posted by Vidyamaana on 2024-06-25 09:27:24 |

Share: | | | | |


ಮಂಗಳಮುಖಿಯರ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಹುಣಸೂರು ಗ್ರಾಮಾಂತರದಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಂಗಳಮುಖಿಯ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರಾಹುಲ್ ಮೌರ್ಯ (17) ಮೃತ ದುರ್ದೈವಿ ಎನ್ನಲಾಗಿದೆ. ಹುಣಸೂರಿನ ಕಿರಾಜಾಜಿ ಸರ್ಕಲ್ ಬಳಿ ಎಳನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್ ಮೌರ್ಯಗೆ ಎಳನೀರು ವ್ಯಾಪಾರ ಮಾಡಿ ಜೀವನ ಕಟ್ಟಿಕೊಂಡಿದ್ದನು.

ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

Posted by Vidyamaana on 2023-07-06 11:57:42 |

Share: | | | | |


ಸುಳ್ಯ- ಪಾಣತ್ತೂರು ರಸ್ತೆಯಲ್ಲಿ ಗುಡ್ಡ ಕುಸಿತ

ಸುಳ್ಯ: ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಸುಳ್ಯದಿಂದ ಕೇರಳದ ಪಾಣತ್ತೂರು ಸಂಪರ್ಕಿಸುವ ಕಲ್ಲಪಳ್ಳಿಯಲ್ಲಿ ಗುಡ್ಡದಿಂದ ಮಣ್ಣು ಕುಸಿದು ರಸ್ತೆ ಸಂಚಾರದಲ್ಲಿ ತಡೆ ಉಂಟಾಗಿರುವುದಾಗಿ ಘಟನೆ ಜು ೬ ರಂದು ಸಂಭವಿಸಿದೆ.

 ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಬಳಿಕ ಸ್ಥಳೀಯರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಇನ್ನೂ ಮಳೆ ಮುಂದುವರಿದರೆ ಗುಡ್ಡ ಇನ್ನಷ್ಟು ಕುಸಿಯುವ ಅಪಾಯ ಎದುರಾಗಿದ್ದು ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸಬೇಕು ಎಂದು ತಿಳಿಸಲಾಗಿದೆ .

ವಿವಾದಾತ್ಮಕ ಹೇಳಿಕೆ ವಿಚಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-05-24 15:27:22 |

Share: | | | | |


ವಿವಾದಾತ್ಮಕ ಹೇಳಿಕೆ ವಿಚಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

Posted by Vidyamaana on 2023-10-20 12:16:13 |

Share: | | | | |


ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಪ್ರಕರಣದ ಆರೋಪಿಗಳಾದ ಕುಲಾಯಿಯ ಗಿರಿಧರ್, ಕೈಕಂಬದ ದೀಕ್ಷಿತ್’ಗೆ ಜಾಮೀನು ಮಂಜೂರಾಗಿದೆ.

ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ಸಂಘಪರಿವಾರದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು

Recent News


Leave a Comment: