ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಕ್ರಿಕೆಟರ್ ಕಾರಿಯಪ್ಪ ಪ್ರೇಮ ಪುರಾಣದಲ್ಲಿ ಬಿಗ್ ಟ್ವಿಸ್ಟ್: ಸ್ಪಿನ್ನರ್ ಗೆ ಎದುರಾಗುವ ಹೊಸ ಸಂಕಷ್ಟ ಯಾವುದು?

Posted by Vidyamaana on 2023-12-26 12:34:18 |

Share: | | | | |


ಕ್ರಿಕೆಟರ್ ಕಾರಿಯಪ್ಪ ಪ್ರೇಮ ಪುರಾಣದಲ್ಲಿ ಬಿಗ್ ಟ್ವಿಸ್ಟ್: ಸ್ಪಿನ್ನರ್ ಗೆ ಎದುರಾಗುವ ಹೊಸ ಸಂಕಷ್ಟ ಯಾವುದು?

ಬೆಂಗಳೂರು : ಕೆಲ ಸೆಲೆಬ್ರೆಟಿಗಳು ಬದುಕಲ್ಲಿ ಲವ್ , ಸೆಕ್ಸ್, ದೋಖಾ ಅನ್ನೊದು ಕಾಮನ್ ಏನೂ ಅನ್ನೋಷ್ಟರ ಮಟ್ಟಿಗೆ ಆಗಿಬಿಟ್ಟಿದೆ. ಹೌದು. ಇದೀಗ ಕರ್ನಾಟಕದ ಕ್ರಿಕೆಟಿಗರೊಬ್ಬರ ಮೇಲೆ ಇಂತಹದೇ ಆರೋಪ ಕೇಳಿ ಬಂದಿದೆ.. ಸದ್ಯ ಕ್ರಿಕೆಟರ್ ನ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಾಜಿ ಸೈನಿಕರೊಬ್ಬರ ಪುತ್ರಿ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ….


ಕೊಡಗು ಮೂಲದ ಕ್ರಿಕೆಟಿಗ ಕೆ.ಸಿ.‌ಕಾರಿಯಪ್ಪ ವಿರುದ್ದ ಗಂಭೀರ ಆರೋಪ ಕೇಳಿ‌ ಬಂದಿದೆ.‌ಇನ್ಸ್ಟಾ ಗ್ರಾಮ್ ನಲ್ಲಿ ಪರಿಚಯವಾಗಿದ್ದ ಯುವತಿಯನ್ನ ಮದ್ವೆಯಾಗೋದಾಗಿ ನಂಬಿಸಿ ವಂಚಿಸಿದ್ದಾರಂತೆ. ಇನ್ನು ಕಾರಿಯಪ್ಪನಿಂದ ವಂಚನೆಗೊಳಗಾದ ಯುವತಿಯೂ ಕೊಡಗು ಮೂಲದವರಾಗಿದ್ದು, ಎರಡು ವರ್ಷಗಳ‌ ಹಿಂದೆ ಇಬ್ಬರಿಗೂ ಇನ್ಸ್ಟಾ ದಲ್ಲಿ‌ ಪರಿಚಯವಾಗಿತ್ತಂತೆ. ನಂತರ ಪರಿಚಯ ಪ್ರೇಮಕ್ಕೆ ತಿರುಗಿದ್ದು, ದೈಹಿಕ‌ ಸಂಪರ್ಕವೂ ಬೆಳೆಸಿ ಕೊನೆಗೆ ಸದ್ಯಕ್ಕೆ ಮಗು ಬೇಡ ಅಂತ ಅಬಾರ್ಷನ್ ಮಾಡಿಸಲು ಕಾರಿಯಪ್ಪನೇ ಬಲವಂತವಾಗಿ ಯುವತಿಗೆ ಮಾತ್ರೆ ನುಂಗಿಸಿದ್ದ ಎಂದು ಆರೋಪಿಸಲಾಗಿದೆ..


ಅದಾದ ಬಳಿಕ ಕಾರಿಯಪ್ಪ ಯುವತಿಯನ್ನ ಅವೈಡ್ ಮಾಡೋದಕ್ಕೆ ಶುರು ಮಾಡಿದ್ದಾನಂತೆ. ಅದೇ ವೇಳೆ ಕಾರಿಯಪ್ಪನ ಮತ್ತೊಬ್ಬ ಗರ್ಲ್ ಫ್ರೆಂಡ್ ಈ ಯುವತಿಗೆ ಕರೆ ಮಾಡಿ ವಿಚಾರಿಸಿದ್ದಾಳೆ‌.ಈ ವೇಳೆ ನನಗೆ ಮೋಸ ಮಾಡ್ತಿದ್ದೀಯ ನನ್ನನ್ನ ಮದ್ವೆಯಾಗು ಅಂತ ಒತ್ತಾಯಿಸಿದ್ದು, ಅದಕ್ಕೆ ಕಾರಿಯಪ್ಪ ವಿರೋಧ ವ್ಯಕ್ತಪಡಿಸಿದನಂತೆ. ಈ ಸಂಬಂಧ ನೊಂದ ಯುವತಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ಬಳಿಕ ಡ್ರಾಮ‌ ಶುರು ಮಾಡಿದ ಕಾರಿಯಪ್ಪ ಐಪಿಎಲ್ ಮುಗಿದ ಬಳಿಕ ಮದುವೆ ಆಗೋದಾಗಿ ನಂಬಿಸಿ ಕೇಸ್ ವಾಪಸ್ಸು ತೆಗೆಸಿಕೊಳ್ಳುವಂತೆ ಮಾಡಿದ್ದಾನಂತೆ.‌ನಂತರ ಮನೆಗೆ ಬಂದು ಮದ್ವೆಯಾಗೋದಾಗಿ ಮಾತುಕತೆ ಮಾಡಿ, ಟೂರ್ನಮೆಂಟ್ ಅದು ಇದು ಅಂತ ಅವೈಡ್ ಮಾಡಿದ್ದಾನಂತೆ. ಹೀಗಾಗಿ ಇದೀಗ ನನಗೆ ಮೋಸ ಮಾಡಿದ್ದಾನೆಂದು ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ಅತ್ತ ಕಾರಿಯಪ್ಪ ಸಹ ಯುವತಿ ವಿರುದ್ದ ಕೌಂಟರ್ ಕಂಪ್ಲೈಂಟ್ ದಾಖಲಿಸಿದ್ದು, ಯುವತಿ ನಡೆತೆ ಸರಿ ಇಲ್ಲ. ನನ್ನ ಮನೆ ಬಳಿ‌ಬಂದು ಗಲಾಟೆ ಮಾಡಿ, ಪೋಷಕರಿಗೆ ಬೆದರಿಕೆ ಹಾಕ್ತಾಳೆ ಅಂತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸದ್ಯ ಇಬ್ಬರು ಒಬ್ಬರಿಗೋಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು, ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲೆರಿದ್ದು, ಮುಂದೆ ಇಬ್ಬರ ಪ್ರೇಮ ಪುರಾಣ ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದು ನೋಡಬೇಕು. ಕೆಲ ಸೆಲೆಬ್ರೆಟಿಗಳು ಬದುಕಲ್ಲಿ ಲವ್ , ಸೆಕ್ಸ್, ದೋಖಾ ಅನ್ನೊದು ಕಾಮನ್ ಏನೂ ಅನ್ನೋಷ್ಟರ ಮಟ್ಟಿಗೆ ಆಗಿಬಿಟ್ಟಿದೆ. ಹೌದು. ಇದೀಗ ಕರ್ನಾಟಕದ ಕ್ರಿಕೆಟಿಗರೊಬ್ಬರ ಮೇಲೆ ಇಂತಹದೇ ಆರೋಪ ಕೇಳಿ ಬಂದಿದೆ.. ಸದ್ಯ ಕ್ರಿಕೆಟರ್ ನ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಾಜಿ ಸೈನಿಕರೊಬ್ಬರ ಪುತ್ರಿ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ…


ಸದ್ಯ ಇಬ್ಬರು ಒಬ್ಬರಿಗೋಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು, ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲೆರಿದ್ದು, ಮುಂದೆ ಇಬ್ಬರ ಪ್ರೇಮ ಪುರಾಣ ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದು ನೋಡಬೇಕು.

ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಮುಸ್ಕಾತ್ ತಾಜ್ ಮನನೊಂದು ನೇಣಿಗೆ ಶರಣು

Posted by Vidyamaana on 2023-12-07 04:26:35 |

Share: | | | | |


ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಮುಸ್ಕಾತ್ ತಾಜ್ ಮನನೊಂದು ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಪತಿಯ ಜೊತೆಗಿನ ವೈಮನಸ್ಸಿನಿಂದ ಪತ್ನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರು ಮುಸ್ಕಾತ್ ತಾಜ್ (21)


ಮುಸ್ಕಾತ್ ತಾಜ್ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

Posted by Vidyamaana on 2024-01-09 09:59:52 |

Share: | | | | |


ಮಂಗನ ಕಾಯಿಲೆಗೆ ಶಿವಮೊಗ್ಗದ ಯುವತಿ ಬಲಿ

ಶಿವಮೊಗ್ಗ, ಜ 09: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.


ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್​ಲೆಟ್ ಕಡಿಮೆಯಾಗಿತ್ತು. ಆರ್​ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್​ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್​ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.


ಯುವತಿಯಲ್ಲಿ ರಕ್ತದಲ್ಲಿ‌ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್​ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್​ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್​ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್​ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.

ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಶರತ್

Posted by Vidyamaana on 2024-03-05 21:27:17 |

Share: | | | | |


ಪ್ರೀತಿ ನಿರಾಕರಿಸಿದ  ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಶರತ್

ಹಾಸನ : ಪ್ರೀತಿ ನಿರಾಕರಿಸಿದ ಶಾಲಾ ಬಾಲಕಿಯನ್ನು ಕೊಂದು ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ. ಅರಸೀಕೆರೆ ತಾಲೂಕಿನ ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಬಾಲಕಿಯಾಗಿದ್ದು, ಶರತ್‌ (23) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು  ಭೂಮಿಕಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಶರತ್ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ವಿದ್ಯಾರ್ಥಿನಿ ಭೂಮಿಕಾ ಶಾಲೆ ಮುಗಿಸಿ ಮನೆಗೆ ಹೋಗುವಾಗ ತೋಟದಲ್ಲಿ ಆಕೆಯನ್ನು ಅಡ್ಡಗಟ್ಟಿದ ಶರತ್‌ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.


ಕೊಲೆ ಮಾಡಿದ ಬಳಿಕ ಅರಸೀಕೆರೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಯುಪಿ ಪೊಲೀಸ್ ಡಿಪಾರ್ಟ್ಮೆಂಟ್ ಸೇರ್ತಾರ ಪೆಟ್ ಕಿಂಗ್ ಸನ್ನಿ ಲಿಯೋನ್!?

Posted by Vidyamaana on 2024-02-18 15:57:23 |

Share: | | | | |


ಯುಪಿ ಪೊಲೀಸ್ ಡಿಪಾರ್ಟ್ಮೆಂಟ್ ಸೇರ್ತಾರ ಪೆಟ್ ಕಿಂಗ್ ಸನ್ನಿ ಲಿಯೋನ್!?

ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಹೆಸರಿನೊಂದಿಗೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸನ್ನಿ ಲಿಯೋನ್ ಹೆಸರಿನ ಪ್ರವೇಶ ಪತ್ರ ಮತ್ತು ಆಕೆಯ ಎರಡು ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.

ಉತ್ತರ ಪ್ರದೇಶದ ಯುಪಿ ಪೊಲೀಸ್ ಕಾನ್ಸ್‌ಟೇಬಲ್(Police Constable) ನೇಮಕಾತಿ ಪರೀಕ್ಷೆಯಂದು ಪ್ರವೇಶಪತ್ರವೊಂದರಲ್ಲಿ ಸನ್ನಿ ಲಿಯೋನ್(Sunny Leone) ಚಿತ್ರ ಇರುವುದು ಕಂಡುಬಂದಿದೆ. ಈ ಪೋಸ್ಟರ್ ಎಲ್ಲೆಡೆ ವೈರಲ್ ಆಗಿದೆ. ಪರೀಕ್ಷೆಯ ಮೊದಲ ದಿನ, ಕನೌಜ್ ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಯ ಪ್ರವೇಶ ಪತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಅಡ್ಮಿಟ್ ಕಾರ್ಡ್ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿರುವಾಗಲೇ ಈ ಅಡ್ಮಿಟ್ ಕಾರ್ಡ್ ಇಡೀ ದೇಶದಲ್ಲಿ ಚರ್ಚೆಗೆ ಗ್ರಾಸವಾಯಿತು. ಅಷ್ಟಕ್ಕೂ ಈ ಅಡ್ಮಿಟ್ ಕಾರ್ಡ್ ನಲ್ಲಿ ಏನಿತ್ತು ಇಲ್ಲಿದೆ ಮಾಹಿತಿ.


ಈ ಘಟನೆಯು ಕನೌಜ್ ಜಿಲ್ಲೆಯ ತಿರ್ವಾ ಪಟ್ಟಣ ಪ್ರದೇಶದಲ್ಲಿರುವ ಸೋನಶ್ರೀ ಬಾಲಕಿಯರ ಕಾಲೇಜಿನಲ್ಲಿ ನಡೆದಿದೆ, ಅಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿತ್ತು, ಅದೇ ಪರೀಕ್ಷಾ ಕೇಂದ್ರದಲ್ಲಿ, ಅಭ್ಯರ್ಥಿ ಅಂಕಿತ್‌ನ ಪ್ರವೇಶ ಪತ್ರದಲ್ಲಿ ಸಿನಿ ತಾರೆ ಸನ್ನಿ ಲಿಯೋನ್ ಚಿತ್ರವನ್ನು ಅಂಟಿಸಲಾಗಿತ್ತು. ಮಹೋಬಾ ಜಿಲ್ಲೆಯ ನಿವಾಸಿ, ಅಂಕಿತ್ ಚಿತ್ರದ ಜಾಗದಲ್ಲಿ ಈ ಫೋಟೊವಿತ್ತು. ಈ ಅಡ್ಮಿಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಸುದ್ದಿ ರಾಜ್ಯಾದ್ಯಂತ ಹಬ್ಬಿತ್ತು.


ಅಡ್ಮಿಟ್ ಕಾರ್ಡ್‌ನಲ್ಲಿ ಬರೆದಿರುವ ನಂಬರ್‌ನಲ್ಲಿ ಫೋನ್‌ನಲ್ಲಿ ಮಾಹಿತಿ ತೆಗೆದುಕೊಂಡಾಗ, ವಿದ್ಯಾರ್ಥಿ ಅಂಕಿತ್ ಅವರು ಸಾರ್ವಜನಿಕ ಸೇವಾ ಕೇಂದ್ರದಿಂದ ಅರ್ಜಿಯನ್ನು ಭರ್ತಿ ಮಾಡಿರುವುದಾಗಿ ಹೇಳಿದರು. ಆದರೆ ಫೋಟೋವನ್ನು ಹೇಗೆ ಬದಲಾಯಿಸಲಾಗಿದೆ ಎಂಬುದು ತಿಳಿದಿಲ್ಲ.


ಈ ಫೋಟೋವನ್ನು ಬದಲಾಯಿಸಿದ್ದರಿಂದ, ಅವರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಈ ಪ್ರವೇಶ ಪತ್ರದಲ್ಲಿ ನಮೂದಿಸಿರುವ ವಿಳಾಸ ಮುಂಬೈ. ಆದರೆ ನೋಂದಣಿ ಸಮಯದಲ್ಲಿ ತವರು ಜಿಲ್ಲೆಯನ್ನು ಕನ್ನೌಜ್ ಎಂದು ಉಲ್ಲೇಖಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ಪ್ರಕಾರ, ಈ ಪ್ರವೇಶ ಪತ್ರದಲ್ಲಿ ಯಾವುದೇ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಲಿಲ್ಲ.

ಗಾಂಧಿ ಜಯಂತಿ ದಿನ 1 ಗಂಟೆ ಶ್ರಮದಾನ ಮಾಡಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

Posted by Vidyamaana on 2023-09-25 14:38:42 |

Share: | | | | |


ಗಾಂಧಿ ಜಯಂತಿ ದಿನ 1 ಗಂಟೆ ಶ್ರಮದಾನ ಮಾಡಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯ ಅಂಗವಾಗಿ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಸೇವಾ ಕಾರ್ಯಕ್ರಮದಲ್ಲಿ ಎಲ್ಲಾ ಜನರು ಭಾಗವಹಿಸಬೇಕೆಂದು ಅವರು ಒತ್ತಾಯಿಸಿದರು.ಮನ್ ಕಿ ಬಾತ್ ಮತ್ತು ವಂದೇ ಭಾರತ್ ರೈಲುಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದರು. “ನಿಮ್ಮ ಬೀದಿಯಲ್ಲಿ ಅಥವಾ ನಿಮ್ಮ ನೆರೆಹೊರೆಯಲ್ಲಿ, ಉದ್ಯಾನವನ, ನದಿ, ಸರೋವರ ಅಥವಾ ಇತರ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ನೀವು ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಬಹುದು. ಅಮೃತ ಸರೋವರ ನಿರ್ಮಾಣವಾಗುವ ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕು” ಎಂದು ಪ್ರಧಾನಿ ಹೇಳಿದರು.


ಆದರೆ.. ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್ (ಒಂದು ದಿನಾಂಕ ಒಂದು ಗಂಟೆ ಒಟ್ಟಿಗೆ) ಎಂದು ಕರೆಯಲ್ಪಡುವ ಅಭಿಯಾನದ ಭಾಗವಾಗಲು ಅವರು ಬಯಸುತ್ತಾರೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮಾರುಕಟ್ಟೆ ಸ್ಥಳಗಳು, ರೈಲ್ವೆ ಹಳಿಗಳು, ಜಲಮೂಲಗಳು, ಪ್ರವಾಸಿ ಸ್ಥಳಗಳು, ಧಾರ್ಮಿಕ ಸ್ಥಳಗಳು ಮುಂತಾದ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಚಟುವಟಿಕೆಗಳಲ್ಲಿ ಭಾಗವಹಿಸಲು ಎಲ್ಲಾ ವರ್ಗದ ನಾಗರಿಕರನ್ನು ಕೇಳಲಾಗಿದೆ. ಗ್ರಾಮ ಪಂಚಾಯತ್, ನಾಗರಿಕ ವಿಮಾನಯಾನ, ರೈಲ್ವೆ, ಮಾಹಿತಿ ಮತ್ತು ತಂತ್ರಜ್ಞಾನ, ಸರ್ಕಾರಿ ಸಂಸ್ಥೆಗಳು ಸೇರಿದಂತೆ ಸರ್ಕಾರದ ಎಲ್ಲಾವಲಯಗಳು ನಾಗರಿಕರ ನೇತೃತ್ವದ ಸ್ವಚ್ಚತಾ ಕಾರ್ಯಕ್ರಮಗಳಿಗೆ ಅನುಕೂಲ ಮಾಡಿಕೊಡಲಿವೆ ಎಂದು ಅದು ಹೇಳಿದೆ.


ಅಭಿಯಾನಕ್ಕಾಗಿ swachhtahiseva.com ವೆಬ್ಸೈಟ್ ಅನ್ನು ಸಹ ರಚಿಸಲಾಗಿದೆ, ಅಲ್ಲಿ ಎಲ್ಲಾ ಕಾರ್ಯಕ್ರಮಗಳು ಲಭ್ಯವಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಜಿಒಗಳು, ಆರ್ಡಬ್ಲ್ಯೂಎಗಳು ಮತ್ತು ಖಾಸಗಿ ಸಂಸ್ಥೆಗಳು ಸಹ ಇಂತಹ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬಹುದು. ಸ್ವಯಂಸೇವಕರು ತಮ್ಮ ಚಟುವಟಿಕೆಗಳ ಫೋಟೋಗಳನ್ನು ತೆಗೆದುಕೊಳ್ಳಬಹುದು ಮತ್ತು ಅವುಗಳನ್ನು ಸೈಟ್ನಲ್ಲಿ ಅಪ್ಲೋಡ್ ಮಾಡಬಹುದು.


ಆದರೆ.. ಈ ಅಭಿಯಾನವನ್ನು ಸಾಮಾಜಿಕ ಮಾಧ್ಯಮಗಳು, ಇನ್ಪುಟ್ಗಳು ಮತ್ತು ಬ್ರಾಂಡ್ ಅಂಬಾಸಿಡರ್ಗಳಂತಹ ಸರ್ಕಾರಿ ಸಂಸ್ಥೆಗಳು ಉತ್ತೇಜಿಸುತ್ತವೆ. ಮನೆಯ ತ್ಯಾಜ್ಯವನ್ನು ಸಂಗ್ರಹಿಸಲು ಬಳಸುವ ಕಸದ ವ್ಯಾನ್ ಗಳು ಈ ಕಾರ್ಯಕ್ರಮವನ್ನು ಉತ್ತೇಜಿಸಲು ಜಾಹೀರಾತುಗಳು ಮತ್ತು ಜಿಂಗಲ್ಸ್ ಗಳನ್ನು ನುಡಿಸುತ್ತವೆ. ಜನರನ್ನುಸಂವೇದನಾಶೀಲಗೊಳಿಸಲು ವಿಶೇಷ ಮೊಬೈಲ್ ಕಾಲರ್ ಟ್ಯೂನ್ ಗಳನ್ನು ಸ್ಥಾಪಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮಧ್ಯೆ.. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಸ್ವಚ್ಛ ಭಾರತ ಅಭಿಯಾನದ ಒಂಬತ್ತನೇ ವಾರ್ಷಿಕೋತ್ಸವವನ್ನು ಅಕ್ಟೋಬರ್ 2 ರಂದು ಆಚರಿಸಲಾಗುವುದು.



Leave a Comment: