ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಕೆಮ್ಮಾರ ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Posted by Vidyamaana on 2023-10-17 20:10:42 |

Share: | | | | |


ಕೆಮ್ಮಾರ  ವುಮೆನ್ಸ್ ಶರೀಹತ್ ಕಾಲೇಜಿನಲ್ಲಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ ಮನಾರ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

ಉಪ್ಪಿನಂಗಡಿ; ಪ್ರತೀ ನಿಮಿಷವು ಜಗತ್ತು ಬದಲಾವಣೆಯತ್ತ ದಾಪುಗಾಲು ಹಾಕುತ್ತಿದ್ದು ಒಂದು ಸಮಾಜವು ಈ ಬದಲಾವಣೆಯನ್ನು ಅರ್ಥ ಮಾಡಿಕೊಂಡು ವಿನೂತನ ಆವಿಷ್ಕಾರಗಳ ಮೂಲಕ ಬದಲಾವಣೆಗೆ ಒಡ್ಡಿಕೊಂಡು ತಮ್ಮ ಸಮಾಜವನ್ನು ರಕ್ಷಿಸಿ ಕೊಳ್ಳಬೆಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಕೆಮ್ಮಾರ ಶಂಸುಲ್ ಉಲಮಾ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷ ಎಸ್ ಬಿ ದಾರಿಮಿ ಅಭಿಪ್ರಾಯ ಪಟ್ಟಿದ್ದಾರೆ.

ಅವರು  ಕೆಮ್ಮಾರ ಶಕ್ತಿ ನಗರದ ವುಮೆನ್ಸ್ ಶರೀಹತ್ ಕಾಲೇಜಿನ ವಿಧ್ಯಾರ್ಥಿನಿಯರಿಗಾಗಿ ಮೀಲಾದ್ ಪ್ರಯುಕ್ತ ಹಮ್ಮಿಕೊಂಡ "ಮನಾರ"ಕಲಾ ಸಾಂಸ್ಕೃತಿಕ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾನಾಡಿದರು. 

  ಹಿಂದಿನ ಕಾಲದಲ್ಲಿ ನಮ್ಮ ಮಹಿಳೆಯರು ಅಡಿಗೆ ಮನೆಗೆ ಸೀಮಿತವಾಗಿದ್ದರು.ಆದರೆ ಇಂದು ಸಮಸ್ತ ದ ಉಲಮಾಗಳ ಉತ್ತಮ ಕಾರ್ಯವೈಖರಿಯಿಂದಾಗಿ ಮುಸ್ಲಿಂ ಮಹಿಳೆಯರು ಕೂಡಾ ವೈಧ್ಯಕೀಯ ,ಶೈಕ್ಷಣಿಕ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದು ಪ್ರತಿಭಾವಂತರಾಗಿ ಮುಂದಿನ ತಲೆಮಾರನ್ನೂ ವಿದ್ಯಾವಂತರನ್ನಾಗಿಸುವಲ್ಲಿ ಸಫಲರಾಗುತ್ತಿದ್ದಾರೆ.ಇದು ಉತ್ತಮ ಬೆಳವಣಿಗೆಯಾಗಿದ್ದು,

ಮುಸ್ಲಿಮರು ಕಾಲದ ಕರೆಯನ್ನು ಸ್ವೀಕರಿಸುವುದಿಲ್ಲ ಎನ್ನುವವರಿಗೆ ಇದು ತಕ್ಕ ಉತ್ತರ ಕೂಡಾ ಆಗಿದೆ ಎಂದು ನುಡಿದರು.

ಕಾರ್ಯಕ್ರಮವನ್ನು ಪೆರಿಯಡ್ಕ ಖತೀಬರಾದ ಅಬ್ದುಲ್ ರಹಿಮಾನ್ ಪೈಝಿ ಉದ್ಗಾಟಿಸಿದರು.

ಟ್ರಸ್ಟಿ ಸದಸ್ಯರಾದ ಉಮರ್ ಹಾಜಿ ಕೋಡಿಯಾಡಿ,ಬಶೀರ್ ಹಾಜಿ ದಾರಂದಕುಕ್ಕು,ಹಸೈನಾರ್ ಹಾಜಿ ಕೊಯಿಲ,ರಶೀದ್ ಹಾಜಿ ಪರ್ಲಡ್ಕ,ಇಸಾಕ್  ಕೆಮ್ಮಾರ,ಅಬ್ದುಲ್ಲ ಉಸ್ತಾದ್ ಕೆಮ್ಮಾರ,ಇಬ್ರಾಹಿಂ ಬಡಿಲ, ಯುನಿಕ್ ಅಬ್ದುಲ್ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು,ಕೆ ಎಂ ಎ ಕೊಡುಂಗೈ ಸ್ವಾಗತಿಸಿ, ಕೊನೆಗೆ ವಂದಿಸಿದರು.

ಬಾಸ್ಕೆಟ್ ಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿ

Posted by Vidyamaana on 2023-12-07 04:29:12 |

Share: | | | | |


ಬಾಸ್ಕೆಟ್ ಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿ

ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿಯ


ಎಸ್‌ಎಫ್‌ಎಸ್‌ ಶಾಲೆಯ ವಿದ್ಯಾರ್ಥಿನಿ ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.


ಮೃತ ಬಾಲಕಿಯ ಹೆಸರು ಚಾರ್ವಿ (16). ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ಧ: ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್

Posted by Vidyamaana on 2023-07-29 03:29:43 |

Share: | | | | |


ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ಧ: ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್

ಮಂಗಳೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು.


ಅವರು ಜು.28ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 


 ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು, ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, ಸ್ನಾನ ಘಟ್ಟಗಳು, ಚಾರಣ ತಾಣಗಳಿಗೆ ತೆರಳದಂತೆ ನಿರ್ಬಂಧಿಸಲಾಗಿದೆ, ಅದನ್ನ ಉಲ್ಲಂಘಿಸಿದ್ದಲ್ಲೀ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಜಿಲ್ಲೆಯ ದೇವಸ್ಥಾನಗಳ ಆಡಳಿತ ಮಂಡಳಿಗಳಿಗೆ ನೀರು ಹರಿಯುತ್ತಿರುವ ಸ್ಥಳಗಳಿಗೆ ಪ್ರವೇಶ ನಿಬರ್ಂಧದ ಬಗ್ಗೆ ಸೂಚನೆ ನೀಡುವಂತೆ ತಿಳಿಸಿದ್ದು, ಅದನ್ನು ಮೀರುವಂತಿಲ್ಲ. ಚಾರಣೀಗರು ನಿಷೇಧಿತ ಸ್ಥಳಗಳಲ್ಲಿ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜುರುಗಿಸಲಾಗುವುದು ಎಂದು ಎಚ್ಚರಿಸಿದರು.


ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶಗಳನ್ನು ಪ್ರಾಕೃತಿಕ ವಿಕೋಪಕ್ಕೆ ಒಳಗಾಗುವ ಅಪಾಯಕಾರಿ ಪ್ರದೇಶಗಳು ಎಂದು ಗುರುತಿಸಲಾಗಿದ್ದು, ಅದರೊಂದಿಗೆ ಜಿಲ್ಲೆಯೊಳಗೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ 87 ಸ್ಥಳಗಳನ್ನು ಅಪಾಯ ಸ್ಥಳಗಳೆಂದು ಗುರುತಿಸಲಾಗಿದೆ,  ಚಾರ್ಮಾಡಿ ಘಾಟಿಯಲ್ಲಿಗೆ 34 ಕಡೆಗಳಲ್ಲಿ ಅಪಾಯ ಸ್ಥಳಗಳನ್ನು ಗುರುತಿಸಲಾಗಿದೆ, ಅಪಾಯಕಾರಿ ಸಂದರ್ಭ ಎದುರಾಗುವಾಗ ಅಲ್ಲಿ ಸಾರ್ವಜನಿಕರು, ಪ್ರಯಾಣಿಕರು ತೆರಳಬಾರದು ಎಂದರು.


ಜಿಲ್ಲೆಯಲ್ಲಿ ಈಗಾಗಲೇ 25 ಎನ್‍ಡಿಆರ್‍ಎಫ್, 38 ಎಸ್‍ಡಿಆರ್‍ಎಫ್, 190 ಅಗ್ನಿಶಾಮಕ ದಳ ಹಾಗೂ 76 ಜನ ಗೃಹ ರಕ್ಷಕ ದಳ ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲಾಗಿದೆ, ಜಿಲ್ಲೆಯಲ್ಲಿ ಪ್ರತೀ ಗ್ರಾಮ ಮಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆಯಲ್ಲಿ ವಾರ್ಡ್ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಕೇಂದ್ರಗಳನ್ನು ತೆರೆಯಲಾಗಿದೆ. ಅದಕ್ಕೆ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅಲ್ಲಿ ಏನಾದರೂ ಅಪಾಯ ಸಂಭವಿಸಿದಲ್ಲಿ ನೋಡಲ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಕ್ರಮ ಕೈಗೊಳ್ಳಲಿದ್ದಾರೆ. ಹೆಚ್ಚಿನ ಕ್ರಮ ಜರುಗಬೇಕಾಗಿದ್ದಲ್ಲಿ ತಹಶೀಲ್ದಾರರ್‍ಗೆ ಅವರು  ತಿಳಿಸಲಿದ್ದಾರೆ. ಇದಕ್ಕಾಗಿ ಜಿಲ್ಲೆಯಾಧ್ಯಂತ 34 ಕಂಟ್ರೋಲ್ ರೂಂ. ತೆರೆಯಲಾಗಿದ್ದು, ಅವರಿಗೆ ಕರೆ ಮಾಡುವಂತೆ ಕೋರಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಮಾತನಾಡಿ, ಹೊರಗಿನಿಂದ ಜಿಲ್ಲೆಯ ದೇವಸ್ಥಾನಕ್ಕೆ ಬರುವವರು ಸಾಕಷ್ಟು ಜಾಗೃತಿ ವಹಿಸಬೇಕಾಗಿದೆ. ಅಗತ್ಯವಿದ್ದರೆ ಮಾತ್ರ ಬರುವುದು ಸೂಕ್ತ. ಈಗಾಗಲೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವಂತಹ 2 ರಸ್ತೆಗಳು ಮುಚ್ಚಲಾಗಿದೆ. ರಸ್ತೆ ತಡೆ ಉಂಟಾದಲ್ಲಿ ಸಮಸ್ಯೆಯಾಗಲಿದೆ. ಹೊರಗಿನಿಂದ ಬರುವವರು ನೀರಿಗೆ ಇಳಿಯುವುದು, ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. 


ನಗರ ಪೊಲೀಸ್ ಆಯುಕ್ತ ಕುಲ್‍ ದೀಪ್ ಕುಮಾರ್ ಜೈನ್ ಮಾತನಾಡಿ, ಹೊರ ಜಿಲ್ಲೆಯಿಂದ ಇಲ್ಲಿಗೆ ಬರುವವರು ಮಳೆ ಸಂದರ್ಭದಲ್ಲಿ ಗೂಗಲ್ ಮ್ಯಾಪ್ ಬಳಸುವುದು ಸೂಕ್ತ. ಯಾವ ರಸ್ತೆಯನ್ನು ಮುಚ್ಚಿದೆ, ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ತನಕ ಮುಚ್ಚಲಾಗುವುದು ಎಂಬ ಮಾಹಿತಿ ಲಭಿಸಲಿದೆ, ಇದರಿಂದ ಅವರ ಪ್ರಯಾಣಕ್ಕೆ ಅನುಕೂಲವಾಗುವುದು ಎಂದರು.

ಕೇರಳದ ಹನಿಟ್ರ್ಯಾಪ್ ಗ್ಯಾಂಗ್ ಮಂಗಳೂರಿನಲ್ಲಿ ಅರೆಸ್ಟ್

Posted by Vidyamaana on 2024-02-02 14:36:15 |

Share: | | | | |


ಕೇರಳದ ಹನಿಟ್ರ್ಯಾಪ್ ಗ್ಯಾಂಗ್ ಮಂಗಳೂರಿನಲ್ಲಿ ಅರೆಸ್ಟ್

ಕಾಸರಗೋಡು, ಫೆ.2 ಕಾಸರಗೋಡಿನ ವ್ಯಕ್ತಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ದು ಹನಿಟ್ರ್ಯಾಪ್ ಮಾಡಿರುವ ಪ್ರಕರಣದ ಬೆನ್ನತ್ತಿದ ಮೇಲ್ಪರಂಬ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾಂಗಾಡ್‌ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಬಗ್ಗೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  

ಕೋಜಿಕ್ಕೋಡ್ ಮೂಲದ ಎಂ.ಪಿ‌.ರುಬೀನಾ(29), ಆಕೆಯ ಪತಿ ಪ್ರಕರಣದ ಸೂತ್ರಧಾರ ಫೈಝಲ್‌ (37), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್‌. ಸಿದ್ದಿಕ್‌ (48), ಮಾಂಗಾಡ್‌ನ‌ ದಿಲ್ಶಾದ್‌ (40), ಮುಟ್ಟತ್ತೋಡಿಯ ನಫೀಸತ್‌ ಮಿಸ್ರಿಯ (40), ಮಾಂಗಾಡ್‌ನ‌ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್‌ನ‌ ರಫೀಕ್‌ ಮಹಮ್ಮದ್ (42) ಬಂಧಿತ ಆರೋಪಿಗಳು. 

ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು. 

ಲ್ಯಾಪ್‌ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದಾರೆ. ಆನಂತರವೂ, ಆರೋಪಿಗಳು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು. 

ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್‌ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ

Posted by Vidyamaana on 2024-05-01 16:35:32 |

Share: | | | | |


ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಾಧಕರಿಗೆ ಅಭಿನಂದನೆ, ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆ ಮೇ.4 ಜೈನ ಭವನ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ವತಿಯಿಂದ ನೀಡಲಾಗುತ್ತಿರುವ ಸ್ವರ್ಣ ಸಾಧನಾ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದ ಅನನ್ಯ ಸಾಧಕ, ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಹೇಳಿದರು.

ಕಾರ್ಯಕ್ರಮದ ಉದ್ಘಾಟನೆ, ಪ್ರಶಸ್ತಿಪ್ರದಾನವನ್ನು ಕ್ಯಾಂಪ್ಕೋ ನಿವೃತ್ತ ಆಡಳಿತ ನಿರ್ದೇಶಕ ಕೆ. ಪ್ರಮೋದ್ ಕುಮಾರ್ ರೈ ಮಾಡಲಿದ್ದು, ಅಭಿನಂದನಾ ಭಾಷಣವನ್ನು ವಿವೇಕಾನಂದ ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್. ಜಿ. ಮಾಡಲಿದ್ದಾರೆ. ಸಾಧನೆ ಮಾಡಿದ ಎಸ್. ಆರ್. ಕೆ. ಲ್ಯಾಡರ್ ನ ಕೇಶವ ಅಮೈ, ದೆಹಲಿಯಲ್ಲಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ (ಎನ್.ಸಿ.ಸಿ.)

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

Posted by Vidyamaana on 2024-04-04 12:53:09 |

Share: | | | | |


ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.

Recent News


Leave a Comment: