ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


15 ಲಕ್ಷ ರೂ.ಗಾಗಿ ನಮ್ಮ ಮನೆಯಲ್ಲಿ 11 ಬ್ಯಾಂಕ್ ಖಾತೆ ತೆರೆದೆವು..!; ಲಾಲು

Posted by Vidyamaana on 2023-09-01 16:21:30 |

Share: | | | | |


15 ಲಕ್ಷ ರೂ.ಗಾಗಿ ನಮ್ಮ ಮನೆಯಲ್ಲಿ 11 ಬ್ಯಾಂಕ್ ಖಾತೆ ತೆರೆದೆವು..!; ಲಾಲು

ಮುಂಬಯಿ: ‘ನರೇಂದ್ರ ಮೋದಿ ಕೊಡುತ್ತೇನೆ ಎಂದು ಹೇಳಿದ 15 ಲಕ್ಷ ರೂ.ಗಾಗಿ ನಾನು, ನನ್ನ ಪತ್ನಿ,ಏಳು ಪುತ್ರಿಯರು ಸೇರಿ ಇಬ್ಬರು ಪುತ್ರರು 11 ಬ್ಯಾಂಕ್ ಖಾತೆಗಳನ್ನೂ ತೆರೆದೆವು’ ಎಂದು ಆರ್ ಜೆಡಿ ನಾಯಕ ಲಾಲು ಯಾದವ್ ತಮ್ಮ ಹಳೇ ಸ್ಟೈಲ್ ನಲ್ಲಿ ಹಾಸ್ಯ ಚಟಾಕಿ ಹಾರಿಸುವ ಮೂಲಕ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಗಮನ ಸೆಳೆದರು.



ಶುಕ್ರವಾರ ಇಂಡಿಯಾ ಮೈತ್ರಿಕೂಟದ ವೇದಿಕೆಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ಮಾತನಾಡಿದರು. ಈ ವೇಳೆ ಅಲ್ಲಿದ್ದ ನಾಯಕರು ನಗುತ್ತಿರುವುದು ಕಂಡು ಬಂತು. ತಮ್ಮ ಭಾಷಣದಲ್ಲಿ, ಮೈತ್ರಿಯಲ್ಲಿ ಭಾಗಿಯಾಗಿರುವ ಎಲ್ಲಾ ಪಕ್ಷಗಳು ಒಟ್ಟಾಗಿ ಹೋರಾಡುವ ಬಗ್ಗೆಯೂ ಲಾಲು ಹೇಳಿದರು.


‘ನನ್ನ ಹಾಗೂ ದೇಶದ ಇತರ ನಾಯಕರ ಹಣ ಸ್ವಿಸ್ ಬ್ಯಾಂಕ್ ನಲ್ಲಿದೆ ಎಂದು ಪ್ರಚಾರ ಮಾಡಿದ್ದರು. ನಾವು ಬರುತ್ತೇವೆ ಸ್ವಿಸ್ ಬ್ಯಾಂಕಿನಿಂದ ಹಣ ತಂದು ದೇಶದ ಎಲ್ಲ ಜನರಿಗೂ ಖಾತೆ ತೆರೆದು 15 ಲಕ್ಷ ರೂ.ರೂ.ಗಳನ್ನು ಠೇವಣಿ ಇಡುವುದಾಗಿ ಹೇಳಿದರು. ನಾವೂ ಬಲೆಗೆ ಬಿದ್ದೆವು’ ಎಂದರು.


‘ವಿರೋಧ ಪಕ್ಷಗಳು ಒಟ್ಟಿಗೆ ಇರದಿರುವ ಲಾಭವನ್ನು ಪ್ರಧಾನಿ ಮೋದಿ ಬಳಸಿಕೊಂಡಿದ್ದಾರೆ  ಬೆಲೆಗಳು ನಿರಂತರವಾಗಿ ಏರುತ್ತಿವೆ’ ಎಂದು ಲಾಲು ಆರೋಪಿಸಿದರು

ಕೇರಳದ ಈ ಪಟ್ಟಣಕ್ಕೆ ಕಳೆದ 8 ವರ್ಷಗಳಿಂದ ಇಸ್ರೇಲ್ ಜತೆ ಇದೆ ವಿಶೇಷ ನಂಟು

Posted by Vidyamaana on 2023-10-19 16:23:09 |

Share: | | | | |


ಕೇರಳದ ಈ ಪಟ್ಟಣಕ್ಕೆ ಕಳೆದ 8 ವರ್ಷಗಳಿಂದ ಇಸ್ರೇಲ್ ಜತೆ ಇದೆ ವಿಶೇಷ ನಂಟು

ಕಣ್ಣೂರು: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್

ವಿಚಾರದಲ್ಲಿ ದೇಶದ ರಾಜಕೀಯ ಪಕ್ಷಗಳು ಮತ್ತು ಜನರು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಕೇರಳ ಕೂಡ ಇದರಿಂದ ಹೊರತಲ್ಲ. ಆದರೆ ಕೇರಳದ ಒಂದು ಪಟ್ಟಣಕ್ಕೂ, ಇಸ್ರೇಲ್ ಪೊಲೀಸ್ ಇಲಾಖೆಗೂ ಒಂದು ವಿಶಿಷ್ಟ ನಂಟು ಇದೆ ಎನ್ನುವುದು ಗೊತ್ತೇ? ಮುಖ್ಯವಾಗಿ ಅ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ ಕೇರಳದ ಉತ್ತರ ಭಾಗದಲ್ಲಿನ ಈ ಪಟ್ಟಣದ ಜನರ ಗುಂಪೊಂದು ಇಸ್ರೇಲ್‌ಗಾಗಿ ಮತ್ತಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ!.


ಕಣ್ಣೂರಿನಲ್ಲಿನ ಮರ್ಯಮ್ ಅಪಾರೆಲ್ ಪ್ರೈ ಲಿಮಿಟೆಡ್ ಎಂಬ ಉಡುಪು ತಯಾರಿಕಾ ಕಂಪೆನಿಯು ಕಳೆದ ಎಂಟು ವರ್ಷಗಳಿಂದ ಇಸ್ರೇಲಿ ಪೊಲೀಸರಿಗಾಗಿ ಸಮವಸ್ತ್ರಗಳನ್ನು ಹೊಲೆದು ಕೊಡುತ್ತಿದೆ. ವರ್ಷಕ್ಕೆ ಸರಾಸರಿ ಒಂದು ಲಕ್ಷ ಯುನಿಟ್‌ಗಳಷ್ಟು ಸಮವಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ.ಸಮವಸ್ತ್ರಗಳ ಗುಣಮಟ್ಟ ಪರಿಶೀಲಿಸಲು ಪ್ರತಿ ವರ್ಷವೂ ಇಸ್ರೇಲ್ ಪೊಲೀಸ್ ಅಧಿಕಾರಿಗಳು ಫ್ಯಾಕ್ಟರಿಗೆ ಭೇಟಿ ನೀಡುತ್ತಾರೆ. ಮುಂಬಯಿಯಲ್ಲಿ ನೆಲೆಯೂರಿರುವ ಕೇರಳದ ಉದ್ಯಮಿ ಥಾಮಸ್ ಒಲಿಕ್ಕಲ್ ಮಾಲೀಕತ್ವದ ಫ್ಯಾಕ್ಟರಿ ಇದು. ಎಂಟು ವರ್ಷಗಳಿಂದ ಪೂರೈಕೆ


ಇಸ್ರೇಲಿ ಪೊಲೀಸರ ಜತೆಗಿನ ವ್ಯವಹಾರದ ಕುರಿತು ಮಾತನಾಡಿದ ಫ್ಯಾಕ್ಟರಿ ವ್ಯವಸ್ಥಾಪಕ ಶಿಜಿನ್ ಕುಮಾರ್, ಎಂಟು ವರ್ಷಗಳ ಹಿಂದೆ ಇಸ್ರೇಲಿ ಪೊಲೀಸರು ಈ ಬಗ್ಗೆ ವಿಚಾರಿಸಿದ್ದರು. ಅಂದಿನಿಂದಲೂ ಅವರಿಗೆ ಸಮವಸ್ತ್ರಗಳನ್ನು ಫ್ಯಾಕ್ಟರಿ ಪೂರೈಕೆ ಮಾಡುತ್ತಿದೆ ಎಂದು ತಿಳಿಸಿದರು. "ನಾವು ಫಿಲಿಪ್ಪಿನ್ಸ್ ಸೇನೆಗೆ ಹಾಗೂ ಕುವೈತ್ ಸರ್ಕಾರದ ಅಧಿಕಾರಿಗಳಿಗೆ ಈ ಮೊದಲು ಸಮವಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದೆವು. ಬಳಿಕ ಇಸ್ರೇಲ್‌ನಿಂದ ಬೇಡಿಕೆ ಬಂದಿತ್ತು.

ಸಮವಸ್ತ್ರಗಳಪೂರೈಕೆಯ ಒಪ್ಪಂದ ಮಾಡಿಕೊಳ್ಳುವುದಕ್ಕೂ ಮುನ್ನ ನಮ್ಮ ಫ್ಯಾಕ್ಟರಿ ಹೇಗೆ ಕೆಲಸ ಮಾಡುತ್ತದೆ ಎಂದು ಪರಿಶೀಲಿಸಲು ಇಸ್ರೇಲಿ ಪೊಲೀಸ್ ಅಧಿಕಾರಿಗಳು ಕೇರಳಕ್ಕೆ ಭೇಟಿ ನೀಡಿದ್ದರು ಎಂದು ಶಿಜಿನ್ ಹೇಳಿದರು."ಪ್ರತಿ ವರ್ಷವೂ ನಮಗೆ ಬರುವ ಬೇಡಿಕೆಗಳನ್ನು ಯಶಸ್ವಿಯಾಗಿ ಪೂರೈಕೆ ಮಾಡಿದ್ದೇವೆ ಎಂದು ತಿಳಿಸಿದರು.


ಕೇರಳದ ಕಂಪೆನಿ ಘಟಕವು ಮೊದಲು ತಿರುವನಂತಪುರಂನಲ್ಲಿತ್ತು. ಬಳಿಕ ಅದು ಕಣ್ಣೂರಿಗೆ ಸ್ಥಳಾಂತರಗೊಂಡಿತು. ಸುಮಾರು 1500 ಮಂದಿ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಶೇ 95ಕ್ಕೂ ಹೆಚ್ಚು ಮಂದಿ ಮಹಿಳೆಯರು. ಉದ್ಯಮದ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುವ ಸಾಮರ್ಥ್ಯ ಪಡೆಯಲು ತನ್ನ ಉದ್ಯೋಗಿಗಳಿಗೆ ಕಂಪೆನಿಯು ವಿಶೇಷ ಹಾಗೂ ನಿರ್ದಿಷ್ಟ ತರಬೇತಿಗಳನ್ನು ನೀಡುತ್ತದೆ.ಇಸ್ರೇಲ್ ಪೊಲೀಸರಿಗೆ ಸಮವಸ್ತ್ರದ ಅಂಗಿಗಳನ್ನು ಸಿದ್ಧಪಡಿಸಲು ಸ್ಥಳೀಯ ಘಟಕದ ನೂರಾರು ದರ್ಜಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಎರಡು ಜೇಬುಗಳ ಅಂಗಿಗಳ ಜತೆಗೆ, ತೋಳುಗಳಿಗೆ ಇಸ್ರೇಲ್ ಪೊಲೀಸ್ ಇಲಾಖೆಯ ಟ್ರೇಡ್‌ಮಾರ್ಕ್ ಚಿಹ್ನೆಯನ್ನು ವಿನ್ಯಾಸಗೊಳಿಸಿ ಅಳವಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.

ಇಡುಕ್ಕಿ ಜಿಲ್ಲೆಯ ತೊಡುಪುಳದವರಾದ ಥಾಮಸ್ ಒಲಿಕ್ಕಲ್, ಯುದ್ಧ ಆರಂಭವಾದ ಬಳಿಕವೂ ಇಸ್ರೇಲ್ ಪೊಲೀಸರು ಕಂಪೆನಿಯನ್ನು ಸಂಪರ್ಕಿಸಿದ್ದು, ಮತ್ತಷ್ಟು ಸಮವಸ್ತ್ರಗಳಿಗಾಗಿ ಹೆಚ್ಚುವರಿ ಆರ್ಡ‌್ರಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-04-01 16:31:44 |

Share: | | | | |


ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಪುತ್ತೂರು: ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.

ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.

ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದರು.

ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. 

BREAKING: ಹೆಚ್‌.ಡಿ ರೇವಣ್ಣ ಗೆ ಬಿಗ್ ಶಾಕ್: ಮೇ.8ರವರೆಗೆ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

Posted by Vidyamaana on 2024-05-05 20:55:30 |

Share: | | | | |


BREAKING: ಹೆಚ್‌.ಡಿ ರೇವಣ್ಣ ಗೆ ಬಿಗ್ ಶಾಕ್: ಮೇ.8ರವರೆಗೆ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ ಅನ್ನು ಕೋರ್ಟ್ ನೀಡಿದೆ. ಅವರನ್ನು ಮೇ.8ರವರೆಗೆ 3 ದಿನಗಳ ಕಾಲ ಎಸ್‌ಐಟಿ ವಶಕ್ಕೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ನೀಡಿ, ಕೋರ್ಟ್ ಆದೇಶಿಸಿದೆಇಂದು ಬೌರಿಂಗ್ ಆಸ್ಪತ್ರೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಆರೋಗ್ಯ ತಪಾಸಣೆ ನಡೆಸಿದ ಬಳಿಕ, ಕೋರಮಂಗಲದಲ್ಲಿರುವಂತ 17ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ ವಿಧಿವಶ

Posted by Vidyamaana on 2023-02-16 15:37:25 |

Share: | | | | |


ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ ವಿಧಿವಶ

   ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯಾದ ‘ಬಲಿಪ ಹಾಡುಗಾರಿಕೆ’ಯನ್ನು ಆರು  ದಶಕಗಳಿಂದ  ಉಣ ಬಡಿಸಿದ ಯಕ್ಷಗಾನದ ಸರ್ವಶ್ರೇಷ್ಟ ಭಾಗವತರಲ್ಲಿ ಒಬ್ಬರಾದ  ಬಲಿಪ ನಾರಾಯಣ ಭಾಗವತರು  ( 84) ಇಂದು ಇಹಲೋಕ ತ್ಯಜಿಸಿದ್ದಾರೆ.  ಈ ಮೂಲಕ ಯಕ್ಷ ಪ್ರಿಯರನ್ನು ತನ್ನ ಭಾಗವತಿಕೆಯ ಮೂಲಕ ಸೆಳೆಯುತ್ತಿದ್ದ ಕಂಚಿನ ಕಂಠ ಮೌನವಾಗಿದೆ. ಭಾಗವತಿಕೆಯ ರಂಗದಲ್ಲಿ ಅಗ್ರಜರೆನಿಸಿದ ಬಲಿಪ ನಾರಾಯಣ ಭಾಗವತರು ಬಲಿಪ ಪರಂಪರೆಯ ಕೊಂಡಿ.   ತನ್ನ ಕೊನೆಯ ದಿನಗಳಲ್ಲಿ ಅವರು ಮೂಡುಬಿದಿರೆ ನೂಯಿಯಲ್ಲಿ ವಾಸಿಸುತ್ತಿದ್ದರುತೆಂಕುತಿಟ್ಟು ಯಕ್ಷಗಾನದ ಪ್ರಾತಿನಿಧಿಕ ಶೈಲಿಯ ಮೇರು ಭಾಗವತರಾದ ಬಲಿಪ ಭಾಗವತರ ಅಜ್ಜನ ಹೆಸರು ಕೂಡಾ ಬಲಿಪ ನಾರಾಯಣ ಭಾಗವತರೆಂದೇ. ಅವರು ಸ್ವಾತಂತ್ರ್ಯ ಪೂರ್ವದಲ್ಲೇ ಯಕ್ಷಗಾನದ ತಾರಾ ವರ್ಚಸ್ಸಿನ ಸುವಿಖ್ಯಾತ ಭಾಗವತರು. ರಂಗದ ಒಳ ಹೊರಗಿನ ವ್ಯವಹಾರ ಮತ್ತು ಜನ್ಮದಾತ ಸಿದ್ಧಿಯಿಂದ ಅಕ್ಷರಶಃ ‘ಹುಲಿ’ಯಂತೆ ಮೆರೆದು ಆ ಕಾಲದ ಕೀರ್ತಿ ಪಡೆದವರು.ಅಂತಹಾ ಅಜ್ಜನ ಹಿನ್ನೆಲೆಯಲ್ಲಿ ಅದೇ ಶೈಲಿಯನ್ನು ಅನುಸರಿಸಿ, ಕೈದಾಟಿಸಿದ ಈಗಿನ ಬಲಿಪ ನಾರಾಯಣ ಭಾಗವತರು ಸುಮಾರು 63ವರ್ಷಗಳಷ್ಟು ಕಾಲ ಸಕ್ರಿಯವಾಗಿ ಹಾಡಿ ಯಕ್ಷರಾತ್ರಿಗಳನ್ನು ಬೆಳಗಿಸಿದವರು.ಅನೇಕ ಕಲಾವಿದರನ್ನು ರೂಪಿಸಿದ್ದಾರೆ. ಸುಮಾರು 70ರಷ್ಟು ಪ್ರಸಂಗಕಾವ್ಯಗಳು ಮತ್ತದರ ಪ್ರಸ್ತುತಿಯ ರಂಗನಡೆ-ಮಾಹಿತಿ ಅವರಿಗೆ ಕಂಠಸ್ಥ.


“ನೋಡಿ ನಿರ್ಮಲ ಜಲ ಸಮೀಪದಿ…”, “ಜಗವು ನಿನ್ನಾಧೀನ ಖಗಪತಿ ವಾಹನ…”, “ರಾಮಕೃಷ್ಣರು ಮನೆಗೆ ಬಂದರು ಬಾಗಿಲು ತೆರೆಯಿರೊ”, “ಎಲವೋ ಕುಂತೀ ಸುತನೇ” ಎಂಬಿತ್ಯಾದಿ ವಿವಿಧ ಸ್ವರ ಏರಿಳಿತದ ಸಮ್ಮಿಲನ-ಸಮತೋಲನ ಹೊಂದಿದ್ದ ‘ಬಲಿಪ’ ಶೈಲಿಗೆ ಅದರದ್ದೇ ಆದ ತೂಕ-ಸ್ಥರ…ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು  ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ


ವೈಯಕ್ತಿಕ ಜೀವನ


ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ 13, 1938 ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು 7ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು 13ನೇ ವರ್ಷದಲ್ಲಿ ರಂಗ ಪ್ರವೇಶಗೈದರು. ಇವರ ಪತ್ನಿ ಶ್ರೀಮತಿ ಜಯಲಕ್ಷ್ಮಿ. ಇವರ ನಾಲ್ವರು ಪುತ್ರರ ಪೈಕಿ, ಮಾಧವ ಬಲಿಪರಿಗೆ ಹಿಮ್ಮೇಳವಾದನ ತಿಳಿದಿದ್ದು, ಶಿವಶಂಕರ ಬಲಿಪ ಮತ್ತು ಪ್ರಸಾದ ಬಲಿಪರು ಉತ್ತಮ ಭಾಗವತರು, ಪ್ರಸಾದ ಬಲಿಪರು ಕಟೀಲು ಮೇಳದಲ್ಲಿ ಮುಖ್ಯ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ವರ್ಷ ನಿಧನ ಹೊಂದಿದ್ದರು.  ಇನ್ನೋರ್ವ ಪುತ್ರ ಶಶಿಧರ್ ಬಲಿಪ ಕೃಷಿಕರು.


ಯಕ್ಷಗಾನ ಕ್ಷೇತ್ರಕ್ಕೆ ಕೊಡುಗೆ


ಬಲಿಪ ನಾರಾಯಣ ಭಾಗವತರು 60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಡ್ರೆ ಜಠಾಧಾರಿ ಮೇಳವನ್ನು ಇವರು ಮೊದಲಿಗೆ ಆರಂಭಿಸಿದರು. ಯಕ್ಷಗಾನದ  50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪರಿಗಿದೆ. 30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಾರೆ. ಇವರನ್ನು ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ.ಬಲಿಪ ನಾರಾಯಣ ಭಾಗವತರು ಐದು ದಿನದ ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದು ಯಕ್ಷಗಾನದ ಇತಿಹಾಸದಲ್ಲೇ ಇದೊಂದು ಮಹತ್ವದ ಕೃತಿಯಾಗಿದೆ.

ಪ್ರಶಸ್ತಿಗಳು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010

ಸಾಮಗ ಪ್ರಶಸ್ತಿ 2012

ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’ 2003

ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ 2002

71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ, 2003

ಪದವೀಧರ ಯಕ್ಷಗಾನ ಮಂಡಳಿ ಮುಂಬಯಿ `ಅಗರಿ ಪ್ರಶಸ್ತಿ’ 2002

ಶೇಣಿ ಪ್ರಶಸ್ತಿ, 2002

ಕವಿ ಮುದ್ದಣ ಪುರಸ್ಕಾರ, 2003ಕೂಡ್ಲು ಸುಬ್ರಾಯ ಶ್ಯಾನುಭೋಗ ಪ್ರಶಸ್ತಿ, 2003

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವತಿಯಿಂದ ಬೆಂಗಳೂರಿನ ರಾಜ್ಯಮಟ್ಟದ ಸನ್ಮಾನ,2003

ಕರ್ನಾಟಕ ಸಂಘ ದುಬೈಯಲ್ಲಿ ಸನ್ಮಾನ, 2003

ಪಾರ್ತಿಸುಬ್ಬ ಪ್ರಶಸ್ತಿ

ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಪ್ರೇಮಿಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ; ಯುವಕನ ಪೋಷಕರ ಮೇಲೆ ಹುಡುಗಿಯ ಮಾವಂದಿರು ಹಲ್ಲೆ

Posted by Vidyamaana on 2023-12-31 16:43:05 |

Share: | | | | |


ಪ್ರೇಮಿಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ; ಯುವಕನ ಪೋಷಕರ ಮೇಲೆ ಹುಡುಗಿಯ ಮಾವಂದಿರು ಹಲ್ಲೆ

ದಾವಣಗೆರೆ (ಡಿ.31) : ಪ್ರೇಮಿಗಳು ಪ್ರೀತಿ ಮದುವೆಯಾಗಿದ್ದಕ್ಕೆ ಯುವಕನ ಪೋಷಕರ ಮೇಲೆ ಹುಡುಗಿಯ ಸಂಬಂಧಿಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ನಡೆದಿದೆ.ಆರುಂಡಿ ಬಸಪ್ಪ ಹಾಗು ಪತ್ನಿ ಮಲ್ಲಮ್ಮನ ಮೇಲೆ ಮಾರಣಾಂತಿಕ ಹಲ್ಲೆ.ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಲೇಬೆನ್ನೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಏನಿದು ಘಟನೆ?


ಕಮಲಾಪುರದ ಸಿದ್ದಾರ್ಥ ಹಾಗು ಸೃಷ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೇಮಿಗಳಿಗೆ ಮದುವೆಯಾಗಲು ಜಾರಿ ಅಡ್ಡಿಯಾಗಿದ್ದರಿಂದ ಯುವತಿಯ ಪೋಷಕರು ವಿರೋಧಿಸಿದ್ದರು. ಈ ಹಿನ್ನೆಲೆ ಕಳೆದ 20 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ. ಬಳಿಕ ಸಬ್ ರಿಜಿಸ್ಟರ್ ನಲ್ಲಿ ಆಪೀಸ್ ನಲ್ಲಿ ನೋಂದಣಿ ಮಾಡಿಸಿದ್ದರು.ಮಗಳು ಬೇರೆ ಜಾತಿ ಯುವಕನೊಂದಿಗೆ ಮದುವೆಯಾಗಿರುವ ವಿಚಾರ ಗೊತ್ತಾಗಿ ನಿನ್ನೆ ಸಂಜೆ ಹುಡುಗನ ಮನೆಗೆ ನುಗ್ಗಿದ್ದ ಯುವತಿ ಪೋಷಕರು. ಸಿದ್ಧಾರ್ಥ ತಂದೆಯಾ ಆರುಂಡಿ ಬಸಪ್ಪ, ಪತ್ನಿ ಮಲ್ಲಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಜಾತಿ ಬೇರೆ ಬೇರೆ ಎಂಬ ಕಾರಣ ನೀಡಿ ಇವರೇ ಮದುವೆ ಮಾಡಿಸಿದ್ದಾರೆಂದು ಆರುಂಡಿ ಬಸಪ್ಪನ ಮೈಮೇಲಿನ ಬಟ್ಟೆ ಬಿಚ್ಚಿ ಅಮಾನುಷವಾಗಿ ಥಳಿಸಿರುವ ಹುಡುಗಿಯ ಮಾವಂದಿರು. ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿರುವ ಬಸಪ್ಪನಿಗೆ ದಾವಣಗೆರೆ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಪ್ರಕರಣ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Recent News


Leave a Comment: