ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಸುದ್ದಿಗಳು News

Posted by vidyamaana on 2024-07-08 08:41:02 |

Share: | | | | |


ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್‌ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

 Share: | | | | |


ವರ್ಗಾವಣೆಗೊಂಡ ಗಿರೀಶ್ ನಂದನ್

Posted by Vidyamaana on 2023-07-07 14:08:27 |

Share: | | | | |


ವರ್ಗಾವಣೆಗೊಂಡ ಗಿರೀಶ್ ನಂದನ್

ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.

ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

Posted by Vidyamaana on 2024-03-05 17:45:47 |

Share: | | | | |


ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.

ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.

ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.

ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.

ಚೀನಾ ಫಂಡಿಂಗ್ ಆರೋಪ: ನ್ಯೂಸ್ ಕ್ಲಿಕ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

Posted by Vidyamaana on 2023-10-03 11:34:47 |

Share: | | | | |


ಚೀನಾ ಫಂಡಿಂಗ್ ಆರೋಪ: ನ್ಯೂಸ್ ಕ್ಲಿಕ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

ನವದೆಹಲಿ: ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್ ಕ್ಲಿಕ್ ಸುದ್ದಿ ಪೋರ್ಟಲ್ ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Readmore..,...

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!


ಅಕ್ರಮ ಹಣ ವರ್ಗಾವಣೆ ಮತ್ತು ಚೀನಾ ಪರವಾದ ವಿಷಯವನ್ನು ತನ್ನ ವೇದಿಕೆಯಲ್ಲಿ ಪ್ರಕಟಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಘಟಕ ಮಂಗಳವಾರ ನ್ಯೂಸ್ಕ್ಲಿಕ್ ಮಾಧ್ಯಮಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.


ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಪ್ರಕರಣದಲ್ಲಿ ನ್ಯೂಸ್ ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.


ಮಾಧ್ಯಮವೊಂದರ ವರದಿ ಪ್ರಕಾರ ಪೊಲೀಸರು ತನಿಖೆ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳನ್ನೂ ವಶಪಡಿಸಿಕೊಂಡಿದ್ದಾರೆ. ಇವುಗಳಲ್ಲಿ ಲ್ಯಾಪ್ ಟಾಪ್, ಮೊಬೈಲ್ ಫೋನ್ ಗಳು, ಹಾರ್ಡ್ ಡಿಸ್ಕ್ ಗಳು ಕೂಡ ಸೇರಿವೆ.

ಕಾಂಗ್ರೆಸ್ ಸಮಾಲೋಚನಾ ಸಭೆಯಲ್ಲಿ ಸೋಲು – ಗೆಲುವಿನ ಲೆಕ್ಕಾಚಾರ

Posted by Vidyamaana on 2023-05-30 09:10:06 |

Share: | | | | |


ಕಾಂಗ್ರೆಸ್ ಸಮಾಲೋಚನಾ ಸಭೆಯಲ್ಲಿ ಸೋಲು – ಗೆಲುವಿನ ಲೆಕ್ಕಾಚಾರ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲು – ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಂಗಳೂರು ಜಿಲ್ಲಾ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಜಿಲ್ಲಾ  ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಯಿತು.

ಪುತ್ತೂರು ಶಾಸಕ ಅಶೋಕ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಸಹಿತ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-07-30 02:11:27 |

Share: | | | | |


ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ, ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ, ಈ ಯೋಜನೆಗಳು ಜನರಿಗೆ ಪ್ರಯೋಜನವಾಗಿದ್ದು ಜನ ಸರಕರದ ಯೋಜನೆಗೆ ಬೆಂಬಲ ನೀಡುತ್ತಿದ್ದಾರೆ, ಕಾರ್ಯಕರ್ತರು ಪ್ರತೀ ಮನೆಗೆ ತೆರಳಿ ಕಾಂಗ್ರೆಸ್ ಸಾಧನೆಯನ್ನು ತಿಳಿಸಿ ಅದನ್ನು ಮತವಾಗಿ ಪರಿವರ್ತನೆ ಮಾಡಬೇಕಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜು.೨೯ ರಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಮುಂದಿನ ತಿಂಗಳು ಪ್ರತೀ ಮನೆ ಯಜಮನಿಯ ಖಾತೆಗೆ ೨ ಸಾವಿರ ಜಮೆಯಾಗಲಿದೆ, ವಿದ್ಯುತ್ ಉಚಿತವಾಗಲಿದೆ, ೫ ಕೆ ಜಿ ಅಕ್ಕಿ ಮತ್ತು ೫ ಕೆ ಜಿ ಅಕ್ಕಿಯ ಹಣ ಖಾತೆಗೆ ಜಮಾವಣೆಯಗಿದೆ. ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರು ಸಂಚಾರ ಮಾಡುತ್ತಿದ್ದಾರೆ ಇದೆಲ್ಲವೂ ಕಾಂಗ್ರೆಸ್ ಬಡವರಿಗಾಗಿ ಮಾಡಿದ ಯೋಜನೆಗಳಾಗಿದೆ ಎಂದು ಶಾಸಕರು ಹೇಳಿದರು. ಸರಕಾರ ಒಳ್ಳೆಯ ಯೋಜನೆಗಳನ್ನು ಇನ್ನೂ ಜಾರಿ ಮಾಡಲಿದ್ದು ಪ್ರತೀಯೊಬ್ಬ ಕಾರ್ಯಕರ್ತನೂ ಪಕ್ಷ ಕಟ್ಟುವಲ್ಲಿ ಮುತವರ್ಜಿವಹಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.


ನಾನು ಯಾಕೆ ಕಾರ್ಯಕ್ರಮಕ್ಕೆ ತಡವಾಗಿ ಬರುತ್ತೇನೆ ಗೊತ್ತುಂಟಾ?

ಶಾಸಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಗಳಿಗೆ ಬರುತ್ತಿಲ್ಲ, ಒಂದು ಗಂಟೆ ಎರಡು ಗಂಟೆ ತಡವಾಗಿ ಬರುತ್ತಿದ್ದಾರೆ ಎಂದು ಕಾರ್ಯಕರ್ತರು ಶಾಸಕರಲ್ಲಿ ಹೇಳಿದರು. ಇದಕ್ಕೆ ಉತ್ತರಿಸಿದ ಶಾಸಕರು ನಾನು ಕಾರ್ಯಕ್ರಮಕ್ಕೆ ತಡವಾಗಿ ಬರುವುದು ಸತ್ಯ ಯಾಕೆಂಧರೆ ನಾನು ಒಂದು ಕಾರ್ಯಕ್ರಮಕ್ಕೆ ಹೋದಾಗ ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಒಂದಷ್ಟು ಮಂದಿ ನನ್ನ ಕ್ಷೇತ್ರದ ಮತದಾರರು ಅರ್ಜಿ ಹಿಡಿದುಕೊಂಡು ಅಥವಾ ತಮ್ಮ ಸಂಕಷ್ಟವನ್ನು ಹೇಳಲು ಕಾಯುತ್ತಿರುತ್ತಾರೆ ಅವರನ್ನು ಬಿಟ್ಟು ಬರುವುದು ಹೇಗೆ? ನನಗೆ ಜನ ಮತ ಹಾಕಿದ್ದು ಅವರ ಸಂಕಷ್ಟಗಳಿಗೆ, ನೋವುಗಳಿಗೆ ಸ್ಪಂದಿಸಲು, ನಾನು ಅವರ ನೋವಿಗೆ ಸ್ಪಂದಿಸದೇ ಇದ್ದರೆ ಅದು ನಾನು ಮಾಡುವ ದೊಡ್ಡ ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು. ತನ್ನ ಕ್ಷೇತ್ರದ ಯಾವುದೇ ಒಬ್ಬ ವ್ಯಕ್ತಿ ನನ್ನನ್ನು ಹುಡುಕಿಕೊಂಡು ಸಂಕಷ್ಟ ಹೇಳಲು ಬಂದಲ್ಲಿ ನಾನು ಅವರಿಗೆ ಸಮಾಧಾನ ಹೇಳಿಯೇ ಬರುತ್ತೇನೆ ಅದು ನನ್ನ ಕರ್ತವ್ಯವಾಗಿದೆ. ತಡವಾಗಿ ಬಂದರೆ ಕ್ಷಮೆ ಇರಲಿ ನಾನು ಜನರಿಗೋಸ್ಕರ ಇರುವವನಾಗಿದ್ದೇನೆ, ಅವರಿಗೋಸ್ಕರ ಕೆಲಸವನ್ನು ಮಾಡುತ್ತೇನೆ ಎಂದು ಶಾಸಕರು ಹೇಳಿದರು.


ಕಚೇರಿ ಆದ ಮೇಲೆ ಎಲ್ಲಾ ಸಮಸ್ಯೆ ಇತ್ಯರ್ಥ

ಶಾಸಕರ ನೂತನ ಕಚೇರಿ ಕೆಲಸ ಪ್ರಾರಂಭವಾಗಿದ್ದು ಕಚೇರಿ ಆದ ಮೇಲೆ ಎಲ್ಲವೂ ಪರಿಹಾರವಾಗಲಿದೆ. ಕಚೇರಿ ಆರಂಭವಾದ ಬಳಿಕ ವಿವಿಧ ಸೆಕ್ಷನ್‌ಗಳನ್ನು ತೆರೆಯುತ್ತೇನೆ. ಫಲಾನುಭವಿಗಳು ಕಚೇರಿಗೆ ತೆರಳಿ ಅಲ್ಲಿ ಅರ್ಜಿ ನೀಡಬಹುದಾಗಿದ್ದು ನಿಮ್ಮ ಕೆಲವೊಂದು ಸಮಸ್ಯೆಗಳಿಗೆ ಕಚೇರಿಯಲ್ಲೇ ಪರಿಹಾರವೂ ದೊರೆಯಲಿದೆ ಎಂದು ಶಾಸಕರು ಹೇಳಿದರು. ಕಾಮಗಾರಿಗೆ ಸಂಬಂಧಪಟ್ಟ ಅರ್ಜಿಗಳನ್ನು ವಲಯ ಮತ್ತು ಬೂತ್ ಅಧ್ಯಕ್ಷರ ಮೂಲಕ ನನ್ನಲ್ಲಿ ನೀಡಬಹುದಾಗಿದೆ ಎಂದು ಹೇಳಿದರು.

ವಲಯ, ಬೂತ್ ಅಧ್ಯಕ್ಷರೇ ಮುಖ್ಯ

ಪ್ರತೀ ಗ್ರಾಮಮಟ್ಟದಲ್ಲಿ ವಲಯ ಮತ್ತು ಬೂತ್ ಅಧ್ಯಕ್ಷರಿದ್ದಾರೆ. ಕಟ್ಟಕಡೇಯ ಕಾರ್ಯಕರ್ತರ ಸಂಪರ್ಕ ಇರುವುದು ಅವರಿಗೆ ಯಾವುದೇ ಅರ್ಜಿಗಳನ್ನು ನೀಡುವಾಗ ವಲಯ ಮತ್ತು ಬೂತ್ ಅಧ್ಯಕ್ಷರನ್ನು ಸಂಪರ್ಕಿಸಿಯೇ ಬರಬೇಕು. ನೀವು ಅರ್ಜಿ ನೀಡಿ ಹೋದರೆ ಅದನ್ನು ಗ್ರಾಮದ ಅಧ್ಯಕ್ಷರುಗಳಿಗೆ ಮಾಹಿತಿ ನೀಡಲಾಗುತ್ತದೆ. ವಲಯ , ಬೂತ್ ಮತ್ತು ಕಾರ್ಯಕರ್ತರನ್ನು ಕಡೆಗಣಿಸಿ ಯಾವುದೇ ಕೆಲಸ ಕಾರ್ಯಗಳು ನಡೆಯವುದೇ ಇಲ್ಲ ಎಂದು ಶಾಸಕರು ಹೇಳಿದರು.

ಎರಡೇ ತಿಂಗಳಲ್ಲಿ ೯೬೦ ಕೋಟಿ ತಂದಿದ್ದೇನೆ

ಶಾಸಕನಾಗಿ ಎರಡೇ ತಿಂಗಳಲ್ಲಿ ೯೬೦ ಕೋಟಿ ತಂದಿದ್ದೇನೆ. ಕ್ಷೇತ್ರ ವ್ಯಾಪ್ತಿಯಲ್ಲಿ ೨೪ ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಯೋಜನೆಗೆ ಸರಕಾರದಿಂದ ೯೬೦ ಕೋಟಿ ಮಂಜೂರು ಮಾಡಿಸಿದ್ದು ಟೆಂಡರ್ ಕರೆದ ಬಳಿಕ ಕಾಮಗಾರಿ ಆರಂಭವಾಗಲಿದೆ. ಪುತ್ತೂರು ತಾಲೂಕು ಮತ್ತು ಸುಳ್ಯದ ೩೦ ಗ್ರಾಮಗಳನ್ನು ಈ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಶಾಸಕರು ಹೇಳಿದರು.


೧೪ ದಿನದ ಅಧಿವೇಶನದಲ್ಲಿ ೧೧ ಪ್ರಶ್ನೆ ಹಾಕಿದ್ದೇನೆ

ಶಾಸಕನಗಿ ಚೊಚ್ಚಲ ಅಧಿವೆಶನದಲ್ಲಿ ಭಾಗವಹಿಸಿದ್ದೇನೆ. ೧೪ ದಿನಗಳ ಅಧಿವೇಶನದಲ್ಲಿ ೧೧ ಪ್ರಶ್ನೆಗಳನ್ನು ಕೇಳಿದ್ದೇನೆ. ಕರಾವಳಿಯ ಕೃಷಿಕರಿಗೆ, ಬಡವರಿಗೆ, ನಿರುದ್ಯೋಗಿಗಳಿಗೆ, ತುಳುಭಾಷೆಗೆ, ತುಳಿತಕ್ಕೊಳಗಾದವರ ಪರ ಮಾತನಾಡಿದ್ದೇನೆ. ಮುಂದೆಯೂ ಮತನಾಡುತ್ತೇನೆ. ತನ್ನ ಕ್ಷೇತ್ರದ ಜನರಿಗಾಗಿ ತಾನು ಸರಕಾರದ ಜೊತೆ ಗಲಾಟೆ ಮಾಡಿಯಾದರೂ ಅನುದಾನವನ್ನು ತರುತ್ತೇನೆ, ಕೊಟ್ಟ ಮಾತನ್ನು ಉಳಿಸಿಯೇ ಉಳಿಸುತ್ತೇನೆ.



ಮಲಗಿದ್ದಲ್ಲೇ ಇರುವವರಿಗೆ ಮಸಾಶನ ಕೊಡಿಸುವೆ

ಮರದಿಂದ ಬಿದ್ದು, ಪಾರ್ಶ್ವವಾಯು ಪೀಡಿತರಾಗಿ, ಅಪಘಾತದಿಂದ ಅಥವ ಇನ್ನಾವುದಾದರೂ ಕಾಯಿಲೆಯಿಂದ ಮನೆಯಲ್ಲೇ ಮಲಗಿದ ಸ್ಥಿತಿಯಲ್ಲಿ ಇರುವವರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಮಾಸಾಶನ ನೀಡುವಂತೆ ಮನವಿ ಮಾಡಿದ್ದೇನೆ. ಅದನ್ನು ನೀಡುವವರೆಗೂ ನಾನು ಸುಮ್ಮನಿರುವುದಿಲ್ಲ ಹೋರಾಟ ಮಾಡಿಯಾದರೂ ತಂದೇ ತರುತ್ತೇನೆ. ಬಡವರ ಕಣ್ಣೀರೊರೆಸಲು ಶಾಸಕನಾಗಿದ್ದೇನೆ ಆ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಎಂದು ಶಾಸಕರು ಹೇಳಿದರು.


ಮಹಿಳಾ ತಂಡವನ್ನು ಕಟ್ಟಬೇಕಿದೆ

ಪಕ್ಷವನ್ನು ಕಟ್ಟಲು ಮಹಿಳೆಯರ ತಂಡವನ್ನು ಕಾರ್ಯಕರ್ತರು ಕಟ್ಟಬೇಕು. ಈಗಾಗಲೇ ಸರಕರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಪರವಾಗಿದ್ದು ಇದನ್ನು ಬಳಸಿಕೊಂಡು ಪ್ರತೀ ಬೂತ್‌ನಲ್ಲಿ ಮಹಿಳೆಯರ ತಂಡವನ್ನು ಕಟ್ಟುವ ಮೂಲಕ ಪಕ್ಷದ ಪರ ಪ್ರಚಾರವನ್ನು ನಡೆಸಬೇಕು. ಮುಂದಿನ ದಿನಗಳಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶವನ್ನು ನಡೆಸಬೇಕಾಗಿದ್ದು ಇದಕ್ಕಾಗಿ ಈಗಿಂದಲೇ ಎಲ್ಲರೂ ಸಜ್ಜಾಗಬೇಕು ಎಂದು ಶಾಸಕರು ಹೇಳಿದರು.



ಅಧ್ಯಕ್ಷರುಗಳಿಗೆ ಪವರ್ ಇದೆ

ಸಣ್ಣ ವಿಚಾರಗಳನ್ನು ತನ್ನ ಬಳಿ ಹೇಳಬೇಡಿ ಅದನ್ನು ಪಕ್ಷದ ವಿವಿಧ ವಲಯಗಳ ಅಧ್ಯಕ್ಷರುಗಳೇ ಪರಿಹರಿಸಬೇಕು. ನಿಮ್ಮಿಂದ ಪರಿಹಾರ ಮಾಡಲು ಸಾಧ್ಯವಾಗುವ ಜನರ ಸಮಸ್ಯೆಗಳನ್ನು ನೀವೇ ಪರಿಹಾರ ಮಾಡಬೇಕು ಕಾಂಗ್ರೆಸ್ ಶಾಸಕ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವ ಕಾರಣ ಅಧ್ಯಕ್ಷರುಗಳಿಗೆ ಪವರ್ ಇದೆ ಅದನ್ನು ಪಕ್ಷಕ್ಕಾಗಿ , ಜನರಿಗಾಗಿ ಬಳಸಿಕೊಳ್ಳಿ. ನಿಮ್ಮಿಂದ ಸಾಧ್ಯವೇ ಇಲ್ಲವಾದರೆ ಮಾತ್ರ ನನ್ನ ಗಮನಕ್ಕೆ ತನ್ನಿ ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು.


ಮೂರು ತಿಂಗಳ ಬಳಿಕ ಹೊಸ ಪಡಿತರ ಕಾರ್ಡು

ಹೊಸ ಪಡಿತರ ಚೀಟಿ ಸಿಗುತ್ತಿಲ್ಲ ಎಂಬ ದೂರುಗಳಿವೆ ಎಂದು ಶಾಸಕರ ಗಮನಕ್ಕೆ ತಂದಾಗ ಹೊಸ ಪಡಿತರ ಚೀಟಿಯನ್ನು ಮೂರು ತಿಂಗಳ ಬಳಿಕ ನೀಡಲಾಗುತ್ತದೆ. ಸುಮಾರು ೧ ಕೋಟಿ ಅರ್ಜಿಗಳು ಬಾಕಿ ಇದೆ. ಆರೋಗ್ಯ ಸಮಸ್ಯೆಗಳಿದ್ದವರು ಆಸ್ಪತ್ರೆಗೆ ಅಥವಾ ವಿಮೆ ಪಡೆದುಕೊಳ್ಳಲು ರೇಶನ್ ಕಾರ್ಡು ಬೇಕಾದಲ್ಲಿ ಅದನ್ನು ಸಂಬಂದಿಸಿದವರ ಗಮನಕ್ಕೆ ತಂದರೆ ತುರ್ತು ಪರಿಗಣಿಸಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.

ವೇದಿಕೆಯಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಜಿಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ್ ರೈ ಮಠಂತಬೆಟ್ಟು, ಪಟ್ಟಣ ಪಂಚಾಯತ್ ಸದಸ್ಯ ವಿಕೆಎಂ ಅಶ್ರಫ್, ಬ್ಲಾಕ್ ಅಲ್ಪಸಂಖ್ಯತ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಂ ಕುದ್ದುಪದವು, ವಿಟ್ಲ ಬ್ಲಾಕ್ ಸಂಘಟನಾ ಕಾರ್ಯದರ್ಶಿ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಪ್ರಹ್ಲಾದ್ ಉಪ್ಪಿನಂಗಡಿ, ಬ್ಲಾಕ್ ಉಪಾಧ್ಯಕ್ಷರಾದ ಜಯರಾಂ ಬಳ್ಳಾಲ್ ಬೀಡು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ರಶೀದ್ ವಿ ಎಂ, ಕಾರ್ಯದರ್ಶಿ ಸುನಿತಾ ಕೋಟ್ಯಾನ್, ಬ್ಲಾಕ್ ಕಾರ್ಯದರ್ಶಿ ಅಬ್ದುಲ್‌ರಹಿಮಾನ್ ಯುನಿಕ್, ಎಸ್ ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಮಾಜಿ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಯೂತ್ ಬ್ಲಾಕ್ ಅಧ್ಯಕ್ಷರಾದ ಫಾರೂಕ್ ಪೆರ್ನೆ ಮೊದಲಾದವರು ಉಪಸ್ಥಿತರಿದ್ದರು.


ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ

Posted by Vidyamaana on 2023-08-07 05:20:38 |

Share: | | | | |


ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‌ ವುಡ್‌ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.


ವಿದೇಶಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವರಿಗೆ ಹಠಾತ್‌ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬ್ಯಾಂಕಾಕ್‌ ನಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.


ಸ್ಪಂದನಾ ವಿಜಯ್ ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಜನಿಸಿದರು. ಮಾಜಿ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರು ನಟ ವಿಜಯ್ ರಾಘವೇಂದ್ರ ಅವರನ್ನು 2007ರಲ್ಲಿ ವಿವಾಹವಾದರು. ಸ್ಪಂದನಾ ಅವರು 2016 ರಲ್ಲಿ ವಿ. ರವಿಚಂದ್ರನ್ ಜೊತೆಗೆ “ಅಪೂರ್ವ” ಚಿತ್ರದಲ್ಲಿ ನಟಿಸಿದ್ದಾರೆ.



Leave a Comment: