Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-03-07 11:20:12 |
ಬಂಟ್ವಾಳ: ಜಿಲ್ಲೆಯ ಕೇಂದ್ರ ಮಂಗಳೂರಿನ ಸನಿಹದಲ್ಲೇ ಇರುವ, ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲೂ ತೆರೆದುಕೊಂಡಿರುವ ತಾಲೂಕು ಬಂಟ್ವಾಳ. ಆದರೆ ಇಡೀ ರಾಜ್ಯದಲ್ಲೇ ಇರುವ ಸಂಚಾರಿ ಕಾನೂನುಗಳು ಇಲ್ಲಿಗೆ ಅನ್ವಯ ಆಗುವುದಿಲ್ವಂತೆ!
ಹೌದು! ಇದು ವಿಚಿತ್ರವಾದರೂ ಸತ್ಯ. ಬಂಟ್ವಾಳದ ನಾಗರಿಕರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರೆ ಸಹಸವಾರ ಬಿಡಿ ಸವಾರರೇ ಹೆಲ್ಮೆಟ್ ಧರಿಸುವುದಿಲ್ಲ. ಸಾಮಾನ್ಯವಾಗಿ ಎಲ್ಲಾ ಕಡೆ ಇಬ್ಬರು ಬೈಕಿನಲ್ಲಿ ಹೋಗುತ್ತಾರೆ. ಆದರೆ ಇಲ್ಲೇಲ್ಲ ಮೂರು-ಮೂರು ಮಂದಿ ಒಂದೇ ಬೈಕಿನಲ್ಲಿ ಸಂಚರಿಸುತ್ತಾರೆ. ಕಾರಿನಲ್ಲಿ ಹೋಗುವವರಾದರೆ ಸೀಟು ಬೆಲ್ಟ್ ಹಾಕಬೇಕೆಂದೇ ಇಲ್ವಂತೆ! ರಿಕ್ಷಾದಲ್ಲಂತೂ ಕೇಳುವುದೇ ಬೇಡ. ಚಾಲಕನ ಅಕ್ಕ-ಪಕ್ಕ ಮೂವರನ್ನು ಅಂದರೆ ಚಾಲಕ ಸೇರಿ ನಾಲ್ಕು ಮಂದಿ ತೆರಳುವುದೂ ಇದೆ. ಇನ್ನು ಚಾಲನೆ ಸಂದರ್ಭ ಮೊಬೈಲ್ ಫೋನ್ ಬಳಕೆಗೆ ಯಾವುದೇ ನಿರ್ಬಂಧವಿಲ್ಲ.
ಹೀಗೆ ಸಾಗುತ್ತದೆ ಬಂಟ್ವಾಳದ ಸಂಚಾರಿ ಕಾನೂನು ಉಲ್ಲಂಘನೆಯ ಪಟ್ಟಿ. ಇದೇನು ಉಲ್ಲಂಘನೆಯೋ, ಅಥವಾ ರಾಜ್ಯದಲ್ಲೆಡೆ ಇರುವ ಕಾನೂನು ಇಲ್ಲಿ ಮಾತ್ರ ಇಲ್ಲವೇ? ಏನೊಂದು ತಿಳಿಯುತ್ತಿಲ್ಲ.
ಬಿ.ಸಿ.ರೋಡನ್ನು ಸೀಳಿ ಸಾಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲೇ ಇಂತಹ ಸಂಚಾರಿ ಕಾನೂನು ಉಲ್ಲಂಘನೆಯ ಘಟನೆಗಳು ನಮ್ಮ ಕಣ್ಣೆದುರಿಗೆ ರಾಚುತ್ತವೆ. ಪೇಟೆ ಬಿಟ್ಟು ಗ್ರಾಮೀಣ ಭಾಗಕ್ಕೆ ಹೋದರಂತೂ, ಕಾನೂನಿನ ಅಂಕುಶವೇ ಇಲ್ಲ ಎಂಬಂತೆ ಭಾಸವಾಗುತ್ತಿದೆ. ಅಷ್ಟರಮಟ್ಟಿಗೆ ಸಂಚಾರಿ ಕಾನೂನುಗಳು ಉಲ್ಲಂಘನೆ ಆಗುತ್ತಿವೆ.
ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಹಳ ಶಿಸ್ತಿನಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ರಾತ್ರಿ ಗಸ್ತನ್ನು ಕೂಡ ಗಟ್ಟಿಗೊಳಿಸಿದ್ದು, ಜಿಲ್ಲೆಯೆಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ. ಆದರೆ ಬಂಟ್ವಾಳವನ್ನು ಮಾತ್ರ ಯಾಕೆ ಗಮನಿಸುತ್ತಿಲ್ಲ ಎನ್ನುವುದೇ ಯಕ್ಷ ಪ್ರಶ್ನೆ.
ಸಂಚಾರಿ ಕಾನೂನು ಬಿಗಿಗೊಳಿಸುವುದು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ತುಂಬಾ ಅನುಕೂಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮನಸು ಮಾಡಿದರೆ, ಇದೇನು ದೊಡ್ಡ ವಿಷಯವೇ ಅಲ್ಲ. ಒಂದೇ ದಿನದಲ್ಲಿ ಕಾನೂನು ಜಾರಿ ಮಾಡಬಹುದು.
ಟ್ರಾಫಿಕ್ ಠಾಣೆಯೂ ಇದೆ!
ಜಿಲ್ಲೆಯಲ್ಲಿ ಮಂಗಳೂರು ಬಿಟ್ಟರೆ ಅತೀ ಹೆಚ್ಚು ವಾಹನ ದಟ್ಟಣೆ ಹೊಂದಿರುವ ತಾಲೂಕು ಬಂಟ್ವಾಳ. ಮಾತ್ರವಲ್ಲ ರಾಷ್ಟ್ರೀಯ ಹೆದ್ದಾರಿ ಈ ತಾಲೂಕನ್ನು ಸೀಳಿಕೊಂಡೇ ಮುಂದೆ ಹೋಗಿರುವುದರಿಂದ, ಜನಜಂಗುಳಿ ಜಾಸ್ತಿ. ಈ ಎಲ್ಲಾ ಕಾರಣದಿಂದಾಗಿ ಬಂಟ್ವಾಳಕ್ಕೆ ಸಂಚಾರಿ ಪೊಲೀಸ್ ಠಾಣೆಯನ್ನು ಮಂಜೂರು ಮಾಡಿದ್ದು, ಕಾರ್ಯಚರಣೆ ನಡೆಸುತ್ತಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಇದ್ದಾರೆ. ಹೀಗಿದ್ದರೂ, ಇಷ್ಟೊಂದು ಸಂಚಾರಿ ಕಾನೂನು ಉಲ್ಲಂಘನೆಗಳೇಕೆ? ತಿಳಿಯುತ್ತಿಲ್ಲ. ಅಪಘಾತದಂತಹ ಪ್ರಕರಣಗಳು ಘಟಿಸಿ, ಬಳಿಕ ಬಡಿದಾಡಿಕೊಳ್ಳುವ ಬದಲು ಈಗಲೇ ಎಚ್ಚೆತ್ತುಕೊಳ್ಳುವುದು ಸೂಕ್ತವಲ್ಲವೇ?
Posted by Vidyamaana on 2024-04-13 17:59:15 |
ಮಾಣಿ - ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ ಅಪಾಯಕಾರಿ ಧರೆಯನ್ನು ತೆರವು ಮಾಡಿ ವಾಹನ ಸಂಚಾರ ಗೋಚರಿಸುವಂತೆಬಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಶಾಸಕರಿಗೆ ಅನೇಕ ಮಂದಿ ಮನವಿ ಯನ್ನು ಮಾಡಿದ್ದರು.ಈಮನವಿಗೆ ಸ್ಪಂದಿಸಿದ ಶಾಸಕರು ಸ್ಥಳ ವೀಕ್ಷಣೆ ಮಾಡಿ ಅಫಾಯಕಾರಿಧರೆಯನ್ನು ತೆರವುಮಾಡುವಂತೆ ರಾ. ಹೆದ್ದಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ
Posted by Vidyamaana on 2023-09-23 20:22:34 |
ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.
ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
Posted by Vidyamaana on 2023-10-02 07:44:52 |
ಸುಳ್ಯ: ಸಮಾಜಕ್ಕೆ ಬೇಕಾದ ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸುತ್ತಿರುವ ವಿದ್ಯಾಮಾತ ಅಕಾಡೆಮಿ, ಅವಿಭಜಿತ ಜಿಲ್ಲಾಕೇಂದ್ರಗಳಾದ ಮಂಗಳೂರು, ಉಡುಪಿ, ಕುಂದಾಪುರದಲ್ಲೂ ಆರಂಭವಾಗಲಿ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಶುಭಹಾರೈಸಿದರು.
ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಮೂಲಕ ಮನೆ ಮಾತಾಗಿರುವ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸುಳ್ಯ ರಥಬೀದಿಯ ಟಿಎಪಿಸಿಎಂಎಸ್ ಕಟ್ಟಡದಲ್ಲಿ ಗುರುವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಎಸ್, ಐಪಿಎಸ್ ಮೂಲಕ ನಮ್ಮ ಊರಿನ ಯುವಕರು, ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎನ್ನುವ ಆಶಯದೊಂದಿಗೆ ವಿದ್ಯಾಮಾತಾದ ಭಾಗ್ಯೇಶ್ ರೈ ಕೆಲಸ ನಿರ್ವಹಿಸುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಅವರ ಎಲ್ಲಾ ಆಶಯಗಳು ಈಡೇರಲಿ ಎಂದು ಹಾರೈಸಿದರು.
ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಯಶಸ್ವಿ ಸಾಧನೆ ಮಾಡಿ .ಇದೀಗ ಸುಳ್ಯದಲ್ಲಿ ಶಾಖೆಯೊಂದು ಆರಂಭಗೊಂಡಿದೆ ಸಂತಸ. ಸುಳ್ಯ ಶಿಕ್ಷಣ ಕ್ಷೇತ್ರದಲ್ಲಿ ಪುತ್ತೂರಿಗಿಂತಲೂ ಎತ್ತರ ಏರಿದೆ. ಆರ್ಥಿಕ ಸಮಸ್ಯೆಯಿರುವಂತಹ ವಿದ್ಯಾರ್ಥಿಗಳಿಗೂ ಅಕಾಡೆಮಿ ತರಬೇತಿ ನೀಡೋ ಕಾರ್ಯ ಮಾಡುವಲ್ಲಿ ಸೈ ಎನಿಸಿದ್ದು ಮಂಗಳೂರಿನಲ್ಲಿ ಕೂಡ ಶಾಖೆ ಶೀಘ್ರದಲ್ಲೇ ಉದ್ಘಾಟನೆಯಾಗಲಿಯೆಂದು ಹೇಳಿದರು.
ಸುಳ್ಯದ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ, ಈ ಕಟ್ಟಡದಲ್ಲಿ ಒಳ್ಳೆಯ ತರಬೇತಿ ಕೇಂದ್ರ ಆರಂಭವಾಗಬೇಕುನ್ನುವ ಆಕಾಂಕ್ಷೆಯಿತ್ತು, ಅದು ಈಗ ಭಾಗ್ಯಶ್ ರೈ ಮೂಲಕ ಪೂರ್ಣ ವಾಗಿದೆ. ಐ.ಎ.ಎಸ್,ಕೆ.ಎ.ಎಸ್ ತರಬೇತಿ ಕೇಂದ್ರವೇ ಇಲ್ಲದಿರುವ ಸುಳ್ಯಕ್ಕೆ ಅತ್ಯುತ್ತಮ ಭಾಗ್ಯ ಒದಗಿಬಂದಿದೆ.ಅಕಾಡೆಮಿ ಯೋಜನೆ ಯೋಚನೆ ಹಾಗೂ ವ್ಯವಸ್ಥೆಯಿಂದ ಯಶಸ್ಸು ಸಾಧ್ಯವಾಗಲಿಯೆಂದು ಹೇಳಿದರು.
ವಿದ್ಯಾರ್ಥಿಗಳಿಗೆ, ಸಾಧಕರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಸನ್ಮಾನ
ಭಾರತೀಯ ಸೇನೆಗೆ ಆಯ್ಕೆಗೊಂಡಿರುವ 2 ಜಿಲ್ಲೆಯ 6 ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದ ಸಾಧಕರೂ ಹಾಗೂ ಅಕಾಡೆಮಿಯ ಸಿಬ್ಬಂದಿ ವರ್ಗಕ್ಕೆ ಅತಿಥಿಗಳ ಮುಖೇನ ಸನ್ಮಾನ ಕಾರ್ಯಕ್ರಮ ನಡೆಯಿತು
ಭಾಗ್ಯಶ್ ರೈಯವರ ತಂದೆ-ತಾಯಿ ಎ.ಕೆ.ತಿಮ್ಮಪ್ಪ ರೈ ಪುತ್ರಿ ದೇವಿದ್ಯಾ ರೈ,ಕೊಳ್ತಿಗೆ ಕೆಳಗಿನ ಮನೆ ಮತ್ತು ರತ್ನಾವತಿ ಟಿ.ರೈ, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ಪಿ.ಸಿ.ಜಯರಾಮ್, ಜಯಪ್ರಕಾಶ್ ರೈ, ಪ್ರೊ| ಬಾಲಚಂದ್ರ ಗೌಡ, ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ನಗರ ಕಾಂಗ್ರೆಸ್ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ಗಣೇಶ್ ಶೆಟ್ಟಿ, ಲಯನ್ಸ್ ಪುತ್ತೂರ್ದ ಮುತ್ತು ಅಧ್ಯಕ್ಷ ರವೀಂದ್ರ ಪೈ, ರವಿಪ್ರಸಾದ್ ಶೆಟ್ಟಿ, ಶ್ರೀಪ್ರಸಾದ್ ಪಾಣಾಜೆ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ್ ರೈ, ಪಿ.ಎಸ್.ಗಂಗಾಧರ್, ಭಾಗ್ಯಶ್ ರೈ ಸಹೋದರ ಯೋಗೀಶ್ ರೈ ಮತ್ತು ಚಿಕ್ಕಪ್ಪ ಎ.ಕೆ.ಜಯರಾಮ ರೈ, ಅತ್ತೆ-ಮಾವ ಸಂಕಪ್ಪ ಶೆಟ್ಟಿ ಹಾಗೂ ಪ್ರೇಮಾ ಎಸ್ ಶೆಟ್ಟಿ, ಟಿಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ ದೇರಪ್ಪಜ್ಜನಮನೆ, ಅರವಿಂದ ಚೊಕ್ಕಾಡಿ, ಡಾ| ಪೂವಪ್ಪ ಕಣಿಯೂರು, ವಿನಯ ಕಂದಡ್ಕ, ಪಿ.ಬಿ.ಸುಧಾಕರ ರೈ,ಸುಭಾಶ್ಚಂದ್ರ ರೈ ಸಾರ್ಯ, ಹರಿನಾಥ ರೈ ಕೂಡೇಲು, ವಿದ್ಯಾಮಾತಾ ಅಕಾಡೆಮಿ ಇದರ ಬೋಧಕ ಹಾಗೂ ಬೋಧಕೇತರ ವೃಂದ, ವಿದ್ಯಾರ್ಥಿಗಳ ಸಹಿತ ಹಲವರು ಹಾಜರಿದ್ದರು. ಭಾಗ್ಯಶ್ ರೈ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ನಿರೂಪಿಸಿ, ಅಕಾಡೆಮಿಯ ಸಂಚಾಲಕಿ ರಮ್ಯಾ ಭಾಗೇಶ್ ರೈ ವಂದಿಸಿದರು.ಕಾರ್ಯಕ್ರಮದ ನಡುವೆ ಪುತ್ತೂರಿನ ವಿಶ್ವ ಕಲಾ ನಿಕೇತನ ತಂಡದಿಂದ ನೃತ್ಯ ಕಾರ್ಯಕ್ರಮ ನೆರವೇರಿತು. ಇದಕ್ಕೂ ಮೊದಲು ವೇದಿಕೆ ಮುಂಭಾಗದ ನಟರಾಜ ಮೂರ್ತಿಗೆ ಗೌರವ ಅರ್ಪಣೆ ನೆರವೇರಿತು. ಸಂಜೆ ದುರ್ಗಾ ನಮಸ್ಕಾರವೂ ನಡೆಯಿತು.
ವಿದ್ಯಾಮಾತಾ ಅಕಾಡೆಮಿ:
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ಕಳೆದ 5 ವರ್ಷಗಳಲ್ಲಿ 4000 ಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವ ಅವಕಾಶವನ್ನು ಮಾಡಿಕೊಟ್ಟಿದೆ. ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆ ಇದೀಗ ಸುಳ್ಯದಲ್ಲಿ ಶಾಖೆಯನ್ನು ತೆರೆದಿದೆ.
ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಅವರು 2017ರಲ್ಲಿ ಪುತ್ತೂರಿನಲ್ಲಿ ವಿದ್ಯಾಮಾತಾ ಫೌಂಡೇಶನ್ 2017ನ್ನು ಹುಟ್ಟು ಹಾಕಿದರು. 2020ರಲ್ಲಿ ವಿದ್ಯಾಮಾತಾ ಅಕಾಡಮಿ ಸ್ಥಾಪಿಸಿ ಸರ್ಕಾರದ ಮಾನ್ಯತೆ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಆರಂಭಿಸಿದರು.ಕಳೆದ ಎರಡು ವರ್ಷಗಳಲ್ಲಿ 90 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸರ್ಕಾರಿ ಸೇವೆಗೆ ಸೇರುವಂತೆ ತರಬೇತು ಮಾಡಿದ್ದಾರೆ. ಸುಮಾರು 4000 ಕ್ಕೂ ಅಧಿಕ ಮಂದಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಲಭ್ಯವಾಗುವಂತೆ ಅವಕಾಶ ಕಲ್ಪಿಸಿದ್ದಾರೆ. ಸುಳ್ಯ ತಾಲೂಕಿನಲ್ಲಿ ಇದೀಗ ಶಾಖೆ ಆರಂಭಿಸಿದ್ದಾರೆ. ಎಲ್ಲಾ ವೃತ್ತಿಪರ ಕೋರ್ಸ್ ಗಳ ಅರ್ಜಿ,ಉದ್ಯೋಗ ಮಾಹಿತಿ,ತರಬೇತಿ, ಎಲ್ಲಾ ಶ್ರೇಣಿಯ ಉದ್ಯೋಗಗಳಿಗೆ ತರಬೇತಿ ಈ ಸಂಸ್ಥೆಯಲ್ಲಿ ಸಿಗುತ್ತದೆ.
Posted by Vidyamaana on 2023-08-14 15:37:15 |
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಆಗುತ್ತಿರುವ ಅಭಿವೃದ್ದಿ ಮತ್ತು ಜನಪರ ಯೋಜನೆಗಳನ್ನು ಮನಗಂಡು ಇಂದು ಅನೇಕ ಮಂದಿ ಬಿಜೆಪಿಗರು ಕಾಂಗ್ರೆಸ್ ಸೇರುತ್ತಿದ್ದಾರೆ. ಇಂದು ಉಪ್ಪಿನಂಗಡಿಯಲ್ಲಿ ನಡೆದ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ವೇಳೆ ಬಿಜೆಪಿ ಬೆಂಬಲಿತರು ಕಾಂಗ್ರೆಸ್ಗೆ ಸೇರಿದ್ದು ಅತ್ಯಂತ ಸಂತೋಷದ ವಿಚಾರವಾಗಿದ್ದು ಇದರಿಂದ ಬಿಜೆಪಿ ತೆಕ್ಕೆಯಲ್ಲಿದ್ದ ಉಪ್ಪಿನಂಗಡಿ ಗ್ರಾಪಂ ಇಂದು ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಮುಂದೆ ಉಪ್ಪಿನಂಗಡಿ ಗ್ರಾಪಂ ನ ಪ್ರತೀ ವಾರ್ಡಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಜನರ ಸೇವೆ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ ಬೆಂಬಲಿತರು ಇಂದು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ವಾರ್ಡನ್ನು ಅಭಿವೃದ್ದಿ ಮಾಡಿಲ್ಲ ಇದೇ ಕಾರಣಕ್ಕೆ ಜನ ಇಂದು ಕಾಂಗ್ರೆಸ್ಗೆ ತಂಢೋಪತಂಡವಾಗಿ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳು ಇಂದು ಜನರ ಮನಸ್ಸನ್ನು ತಲುಪಿದೆ. ಮುಂದೆ ಅನೇಕ ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಗ್ರಾಪಂ ಸದಸ್ಯರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಅವರನ್ನು ಪಕ್ಷಕ್ಕೆ ಸೇರಿಸುವ ಕೆಲಸ ನಿರಂತರವಾಗಿ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎರಡು ಗ್ರಾಪಂ ಆಡಳಿತವನ್ನು ಕಾಂಗ್ರೆಸ್ ಬಿಜೆಪಿಯಿಂದ ಕಸಿದುಕೊಂಡಿದೆ. ಆರ್ಯಾಪು ಗ್ರಾಪಂ ನ ನಿಕಟಪೂರ್ವ ಉಪಾಧ್ಯಕ್ಷರು ಸಹಿತ ಇಬ್ಬರು ಇಂದು ಕಾಂಗ್ರೆಸ್ ಸೇರಿಕೊಂಡಿದ್ದಾರೆ . ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ , ಸಿದ್ದರಾಮಯ್ಯ ಸರಕಾರದ ಬಡವರ ಪರ ಯೋಜನೆಗಳು ಜನರನ್ನು ಕಾಂಗ್ರೆಸ್ನತ್ತ ಆಕರ್ಷಿಸುವಂತೆ ಮಾಡಿದೆ ಎಂದು ಶಾಸಕರು ಹೇಳಿದರು.
ಪಕ್ಷಕ್ಕೆ ಸೇರ್ಪಡೆಯಾದವರನ್ನು ಅತ್ಯಂತ ಗೌರವಾದರಗಳಿಂದ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಹೇಳಿದ ಶಾಸಕರು ಇಂದು ನನಗೆ ಅತ್ಯಂತ ಸಂತೋಷ ದಿನವಾಗಿದೆ ಎಂದು ಹೇಳಿದರು. ಉಪ್ಪಿನಂಗಡಿ ಗ್ರಾಪಂ ನಲ್ಲಿ ಮುಂದಿನ ದಿನಗಳಲ್ಲಿ ಪ್ರತೀ ವಾರ್ಡಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲಿದೆ. ಬಡವರ ಕೆಲಸಗಳು ಆಗಲಿದೆ ಇದರಲ್ಲಿ ಯಾವುದೇ ಅನುಮಾನವೇ ಬೇಡ. ಪಕ್ಷಕ್ಕೆ ಇನ್ನಷ್ಟು ಮಂದಿಯನ್ನು ಸೇರ್ಪಡೆಗೊಳಿಸುವ ಮೂಲಕ ನಾವು ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡಿ ಕ್ಷೇತ್ರದ ಪ್ರತೀ ಮನೆಗೂ ಕಾಂಗ್ರೆಸ್ನ ಯೋಜನೆಗಳು ದೊರಕುವಂತೆ ಮಾಡಬೇಕು ಎಂದು ಹೇಳಿದರು.ಪಕ್ಷೇತರ ಸದಸ್ಯರಾದ ಸಣ್ಣಣ್ಣ ಮಡಿವಾಳ, ನಾಲ್ವರು ಎಸ್ಡಿಎಪಿಐ ಸದಸ್ಯರಾದ ರಶೀದ್, ಸೌಧ, ಮೈಶಿದಿ ಮತ್ತು ನೆಬಿಸಾ ರವರು ಕಾಂಗ್ರೆಸ್ ಬೆಂಬಲಿತರಿಗೆ ಬೆಂಬಲ ನೀಡಿದರು. ನೂತನ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಪಕ್ಷೇತರ ಸದಸ್ಯರನ್ನು ಶಾಸಕರು ಶಾಲು ಹೊದಿಸಿ ಗೌರವಿಸಿದರು.
ಬಿಜೆಪಿ ಆಡಳಿತದ ವೈಫಲ್ಯದಿಂದ ಕಾಂಗ್ರೆಸ್ ಸೇರಿದ್ದಾರೆ
ಹಿಂದಿನ ಅವಧಿಯಲ್ಲಿದ್ದ ಬಿಜೆಪಿ ಗ್ರಾಪಂ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡದೇ ಇರುವ ಕಾರಣ ಬಿಜೆಪಿ ಬೆಂಬಲಿತರು ಅಭಿವೃದ್ದಿಯ ದೃಷ್ಟಿಯಿಂದ ಕಾಂಗ್ರೆಸ್ ಸೇರಿದ್ದಾರೆ. ಪಕ್ಷೇತರ ಅಭ್ಯರ್ಥಿ ಸಣ್ಣನ್ನ ಅವರು ಬೆಂಬಲ ನೀಡಿದ್ದಾರೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಎಸ್ಡಿಪಿಐ ಯವರು ಕಾಂಗ್ರೆಸ್ಗೆ ಬೆಂಬಲವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಉಪ್ಪಿನಂಘಡಿ ಬಿಜೆಪಿ ಮುಕ್ತವಾಗಲಿದೆ , ಜನರು ನಮಗೆ ಖಂಡಿತವಾಗಿಯೂ ಆಶೀರ್ವಾದ ಮಡಲಿದ್ದಾರೆ. ಇನ್ನಷ್ಟು ಬಿಜೆಪಿ ಬೆಂಬಲಿತ ಸದಸ್ಯರು ನಮ್ಮ ಶಾಸಕರ ಅಭಿವೃದ್ದಿ ಕೆಲಸವನ್ನು ಮನಗಂಡು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿಯವರು ಹೇಳಿದರು.
ವಿಟ್ಲ ಉಪ್ಪಿನಗಂಡಿ ಬ್ಲಾಕ್ ಮಾಜಿ ಅಧ್ಯಕ್ಷಮುರಳೀಧರ್ ರೈ ಮಠಂತಬೆಟ್ಟು ಮಾತನಾಡಿ ಗ್ರಾಪಂ ಉಪ್ಪಿನಂಗಡಿ ಗ್ರಾಪಂ ಚುನಾವಣೆಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಗ್ರಾಪಂ ಸದಸ್ಯರುಗಳಾದ ಯು ಟಿ ತೌಸೀಫ್, ಅಬ್ದುಲ್ರಹಿಮಾನ್ ಮಠ, ಇಬ್ರಾಹಿಂ ಪುಳಿತ್ತಡಿ, ವಿನಾಯಕ ಪೈ, ವಿಟ್ಲ ಉಪ್ಪಿನಂಗಡಿ ಮಾಜಿ ಬ್ಲಾಕ್ ಅಧ್ಯಕ್ಷರಾದ ಪ್ರವೀಣ್ಚಂಧ್ರ ಆಳ್ವ, ಡಿಸಿಸಿ ಕಾರ್ಯದರ್ಶಿ ಉಮಾನಾಥ ಶೆಟ್ವ ಪೆರ್ನೆ, ಮಹಮ್ಮದ್ ಕೆಂಪಿ, ಸಿದ್ದಿಕ್ ಕೆಂಪಿ, ಶಬ್ಬೀರ್ ಕೆಂಪಿ, ಸೋಮನಾಥ ರಾಮನಗರ, ವೆಂಕಪ್ಪ ಪೂಜಾರಿ, ಕೃಷ್ಣ ರಾವ್ ಅರ್ತಿಲ, ಅಝೀಝ್ ಬಸ್ತಿಕ್ಕಾರ್, ಉಮೇಶ್ ರಾಮನಗರ , ಮಜೀದ್ , ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಸುಶಾನ್ ಶೆಟ್ಟಿ, ಸುಮಿತ್ ಶೆಟ್ಟಿ, ದಾಮೋಧರ ಭಂಡಾರ್ಕರ್, ನಗರಸಭಾ ಸದಸ್ಯ ಶಕ್ತಿ ಸಿನ್ಹಾ, ನಝೀರ್ ಮಠ, ವಲಯಾಧ್ಯಕ್ಷ ಆದಂ ಮಠ, ಕೃಷ್ಣಪ್ಪ ಎನ್, ಇಬ್ರಾಹಿಂ ಆಚಿ ಕೆಂಪಿ, ಝಕರಿಯ್ಯಾ ಕೊಡಿಪ್ಪಾಡಿ, ಮುಸ್ತಫಾ, ಯು ಟಿ ಫೌಝರ್, ರಫೀಕ್ ಝೆನ್ ಮತ್ತಿತರರು ಉಪಸ್ಥಿತರಿದ್ದರು.
Posted by Vidyamaana on 2024-03-13 10:09:57 |
ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧಾನರಾದರು.
1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು, 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು . ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ನ ಆಧಾರ ಸ್ಥಂಭವಾಗಿದ್ದರುರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಪ್ರಸ್ತುತ ಪುತ್ತೂರು ನಗರ ಸಹ ಸಂಘ ಚಾಲಕ್ ಆಗಿ ಜವಬ್ದಾರಿ ನಿರ್ವಹಿಸುತ್ತಿದ್ದರು. ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪುತ್ತೂರು ಭಾಗದ ಮೇಲುಸ್ತುವಾರಿಯಾಗಿದ್ದ ಅವರು ಈ ಭಾಗದಲ್ಲಿ ಹತ್ತು ಹಲವು ಜನೌಷಧಿ ಕೇಂದ್ರಗಳ ಆರಂಭಕ್ಕೆ ಕಾರಣಿಭೂತರಾಗಿದ್ದರು.
ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ ಶೆಟ್ಟಿಯವರು, ಪ್ರಸ್ತುತ ನೆಹರೂ ನಗರದ ಬಲಮುರಿ ಗಣಪತಿ ದೇವಸ್ಥಾನದ ಬಳಿ ನಂದಿಲದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಅಪಾರ ಶಿಷ್ಯವರ್ಗ, ಬಂಧು ಮಿತ್ರರನ್ನು ಅಗಲಿದ್ದಾರೆ.