Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2022-12-15 14:31:23 |
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಭಾರತೀಯ ಸೇನೆಯಿಂದ ಇತ್ತೀಚೆಗೆ ನಿವೃತ್ತಿಗೊಂಡ ಯೋಧ ಹವಾಲ್ದಾರ್ ನಂದಾವರ ವಿಶ್ವನಾಥ ಶೆಣೈ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್ನ ಶ್ರೀ ಶಂಕರ ಸಭಾಭವನದಲ್ಲಿ ಶನಿವಾರ ಕಾರ್ಯಕ್ರಮ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಹವಾಲ್ದಾರ್ ವಿಶ್ವನಾಥ ಶೆಣೈ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ದೊರಕುವುದೇ ಒಂದು ಅಪೂರ್ವ ಸಂಗತಿ. ಇತ್ತೀಚೆಗೆ ಅಗ್ನಿವೀರ್ ಎಂಬ ಯೋಜನೆಯ ಮೂಲಕ ಯುವಶಕ್ತಿ ಭಾರತೀಯ ಸೈನ್ಯವನ್ನು ಸೇರಿಕೊಳ್ಳುವುದಕ್ಕೆ ಅವಕಾಶಗಳು ತೆರೆದುಕೊಂಡಿವೆ ಎಂದರಲ್ಲದೆ ಈಚೆಗಿನ ದಿನಗಳಲ್ಲಿ ರಾಷ್ಟ್ರದ ಗಡಿ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಮುತುವರ್ಜಿ ವಹಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ನಾವಿಂದು ಸುಖವಾದ ಜೀವನ ಸಾಗಿಸುವಲ್ಲಿ ವೀರಯೋಧರ ತ್ಯಾಗವಿದೆ. ಹೆತ್ತ ತಂದೆತಾಯಿಗಿಂತ, ಮಡದಿ ಮಕ್ಕಳಿಗಿಂತಲೂ ದೇಶವೇ ಮುಖ್ಯ ಎಂಬ ಭಾವನೆಯಿಂದ ರಾಷ್ಟ್ರಕ್ಕಾಗಿಯೇ ತನ್ನನ್ನು ತಾನು ಸಮರ್ಪಿಸುವ ಯೋಧನಿಗೆ ಗೌರವ ನೀಡಬೇಕಾದದ್ದು ಭಾರತೀಯರೆಲ್ಲರÀ ಕರ್ತವ್ಯ. ಪ್ರತಿಯೊಬ್ಬನೂ ದೇಶದ ವೀರ ಯೋಧ ತಾನಾಗುವುದಕ್ಕೆ ಸಾಧ್ಯವೇ ಎಂದು ಕೇಳಿಕೊಳ್ಳಬೇಕಿದೆ. ತನ್ಮೂಲಕ ಭಾರತಾಂಬೆಯ ಸೇವೆಗೆ ಮನಮಾಡಬೇಕಿದೆ ಎಂದರು.
Posted by Vidyamaana on 2023-07-28 23:15:14 |
ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 26 ರಂದು
💥 ಮಧ್ಯಾಹ್ನ 2.30 ಕ್ಕೆ ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿಶೇ.100 ಅಂಕಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದಿಂದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವುದು
💥 ಮಧ್ಯಾಹ್ನ 3 ಗಂಟೆಗೆ ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
💥 ಸಂಜೆ 7.30 ಕ್ಕೆಮನಿಷಾ ಸಭಾಂಗಣದಲ್ಲಿ ರೋಟರೀಕ್ಲಬ್ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ.
Posted by Vidyamaana on 2024-01-05 21:23:18 |
ಪುತ್ತೂರು: ಅಕ್ರಮ ಮಧ್ಯ ಮಾರಾಟ ಮಾಡಿದ್ದಾರೇ ಎನ್ನಲಾದ ಪ್ರಕರಣದ ಆರೋಪಿ ಆಶೋಕ್ ಸುವರ್ಣ ರವರನ್ನು ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಸದ್ರಿ ಪ್ರಕರಣದಿಂದ ಖುಲಾಸೆ ಮಾಡಿರುತ್ತದೆ.
ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ನ್ಯೂ ಜನತಾ ಕಾಲೋನಿಯಲ್ಲಿರುವ ಆಶೋಕ್ ಸುವರ್ಣ ಎಂಬವರಿಗೆ ಸೇರಿದ ಮನೆಯ ಒಳಗಡೆ ಅಡಿಗೆ ಕೋಣೆಯಲ್ಲಿ 2 ಗುಂಡಿಗಳನ್ನು ತೆಗೆದು ಅದರ ಒಳಗೆ ಅಕ್ರಮವಾಗಿ ಮಧ್ಯದ ಬಾಟಲಿಗಳನ್ನು ಇಟ್ಟು ಟೈಲ್ಸ್ ಮುಚ್ಚಿರುವುದನ್ನು ಹಾಗೂ ನೈಲಾನ್ ಚೀಲದಲ್ಲಿ ಮಧ್ಯದ ಬಾಟಲಿಗಳನ್ನು ಇಟ್ಟಿರುವುದನ್ನು ಪತ್ತೆ ಹಚ್ಚಿದ್ದು, ಸೊತ್ತುಗಳನ್ನು ವಶಕ್ಕೆ ತೆಗೆದೆಕೊಂಡು ಈ ನಿಟ್ಟಿನಲ್ಲಿ ದೂರು ದಾಖಲಿಸಿಕೊ0ಡ ಅಬಕಾರಿ ಪೊಲೀಸರು ಆಶೋಕ್ ಸುವರ್ಣರವರನ್ನು ಬ0ಧಿಸಿದ್ದರು ಹಾಗೂ ಅವರ ಮೇಲೆ ಕೇಸು ದಾಖಲಿಸಿದ್ದರು ಹಾಗೂ ನ್ಯಾಯಾಲಯಕ್ಕೆ ಅ0ತಿಮ ವರದಿಯನ್ನು ಸಲ್ಲಿಸಿದ್ದರು.
ಹೀಗಿರುವಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ಹ0ತ ಹ0ತವಾಗಿ ತನಿಖೆಗೆ ಕೈಗೆತ್ತಿಕೊ0ಡು ಹಾಗೂ ಪ್ರೋಸಿಕ್ಯೂಷನ್ ಸುಮಾರು 7 ಸಾಕ್ಷಿಗಳನ್ನು ತನಿಖೆ ನಡೆಸಿ ಮತ್ತು 8 ದಾಖಲೆಗಳನ್ನು ಹಾಗೂ ಸುಮಾರು 27 ಮುದ್ದೆ ಮಾಲುಗಳನ್ನು ಪರಿಶೀಲಿಸಿ, ಪ್ರೋಸಿಕ್ಯೂಷನ್ ಈ ಪ್ರಕರಣವನ್ನು ಸ0ಶಯಾತೀತವಾಗಿ ಸಾಭೀತುಪಡಿಸಲು ವಿಫಲವಾಗಿದೆ ಎ0ದೂ ತೀರ್ಮಾನಿಸಿ, ಆರೋಪಿಯನ್ನು ನಿರಪರಾದಿಯೆಂದು ಬಿಡೂಗಡೆಗೊಳಿಸಲು ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧಿಶರಾದ ಶ್ರೀಯುತ ಶಿವಣ್ಣ ಹೆಚ್ ಆರ್ ರವರು ಆದೇಶಿಸಿರುತ್ತಾರೆ.
ಆರೋಪಿಯ ಪರವಾಗಿ ಹಿರಿಯ ವಕೀಲರಾದ ಕಜೆ ಲಾ ಚೇಂಬರ್ಸ್ನ ಶ್ರೀ.ಮಹೇಶ್ ಕಜೆಯವರು ವಾದಿಸಿದ್ದರು.
Posted by Vidyamaana on 2024-04-17 23:05:31 |
ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ
Posted by Vidyamaana on 2024-02-22 16:40:09 |
ಪುತ್ತೂರು: ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಲ್ಲಿ ಡಿಯೋವನ್ನು ಚಲಾಯಿಸುತ್ತಿದವರು ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.
ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
Posted by Vidyamaana on 2024-06-27 08:40:07 |
ಮಂಗಳೂರು, ಜೂನ್.26: ಪ್ರಕೃತಿ ವಿಕೋಪವನ್ನು ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ. ಆದರೆ, ಮುಂಜಾಗ್ರತೆ ವಹಿಸದೆ ಇಳಿಜಾರಿನಲ್ಲಿ ಮನೆ ಕಟ್ಟಿಕೊಂಡಿರುವುದು ಇಲ್ಲಿ ಕಂಡುಬಂದಿದೆ. ಬೆಟ್ಟದ ಇಳಿಜಾರಿನಲ್ಲಿ ಈ ರೀತಿ ಮನೆ ಮಾಡಿರುವುದು ರಾಜ್ಯದಲ್ಲಿ ಸಾವಿರಾರು ಇರಬಹುದು. ಮಳೆಯ ಸಂದರ್ಭದಲ್ಲಿ ತೊಂದರೆ ಆಗಬಲ್ಲಂತಹ ಇಂತಹ ಮನೆಗಳನ್ನು ಗುರುತಿಸಿ, ಅಲ್ಲಿನ ನಿವಾಸಿಗಳಿಗೆ ಬೇರೆಡೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ