ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ

Posted by Vidyamaana on 2024-05-23 09:53:42 |

Share: | | | | |


ನಿವೃತ್ತ ಶಿಕ್ಷಕ  ಚಂದ್ರಶೇಖರ ಕುಂಜತ್ತಾಯ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು

ಚೆಲ್ಯಡ್ಕ ಮುಳುಗು ಸೇತುವೆ ದುರಸ್ತಿ ಕಾರ್ಯ – ಬೇರೆ ಮಾರ್ಗದಲ್ಲಿ ಸಂಚರಿಸಲು ಸೂಚನೆ

Posted by Vidyamaana on 2023-10-27 07:27:10 |

Share: | | | | |


ಚೆಲ್ಯಡ್ಕ ಮುಳುಗು ಸೇತುವೆ ದುರಸ್ತಿ ಕಾರ್ಯ – ಬೇರೆ ಮಾರ್ಗದಲ್ಲಿ ಸಂಚರಿಸಲು ಸೂಚನೆ

ಪುತ್ತೂರು : ತಾಲೂಕಿನ ಮುಳುಗು ಸೇತುವೆಗಳಲ್ಲಿ ಒಂದಾದ ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್‌ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ.27 ರಿಂದ ನ. 6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ.


ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ-ಪಾಣಾಜೆ ಮೂಲಕ ಕೇರಳ ಪ್ರವೇಶಿಸುವ ವಾಹನಗಳು ಬದಲಿ ರಸ್ತೆಯಾಗಿ ದೇವಸ್ಯ- ಬೈರೋಡಿ-ಕಾಪಿಕಾಡು-ಕೈಕಾರ ಮಾರ್ಗವಾಗಿ ವಾಹನಗಳು ಚಲಿಸುವಂತೆ ಸೂಚನೆ ನೀಡಲಾಗಿದೆ.

ತಾಜ್ ಮಹಲ್ ಆವರಣದಲ್ಲಿ ರೀಲ್ : ಯುವತಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಯೋಧ Watch Video

Posted by Vidyamaana on 2024-04-07 13:42:45 |

Share: | | | | |


ತಾಜ್ ಮಹಲ್ ಆವರಣದಲ್ಲಿ ರೀಲ್ : ಯುವತಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಯೋಧ  Watch Video

ನವದೆಹಲಿ: ಆಗ್ರಾದ ತಾಜ್ ಮಹಲ್ನಲ್ಲಿ ಶನಿವಾರ ಸಿಐಎಸ್‌ಎಫ್ ಜವಾನ್ ಮತ್ತು ಮಹಿಳಾ ಪ್ರವಾಸಿಗರ ನಡುವೆ ಘರ್ಷಣೆ ಭುಗಿಲೆದ್ದಿದೆ.ವರದಿಗಳ ಪ್ರಕಾರ, ತಾಜ್ ಮಹಲ್ ಆವರಣದಲ್ಲಿ ರೀಲ್ ಚಿತ್ರೀಕರಿಸುವ ಬಗ್ಗೆ ವಾಗ್ವಾದದ ನಂತರ ಜಗಳ ಪ್ರಾರಂಭವಾಯಿತು. ಈ ಘಟನೆಯ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಮತ್ತು ಪ್ರಸ್ತುತ ವೈರಲ್ ಆಗುತ್ತಿದೆ.

ಉತ್ತರಕಶಿ ಸುರಂಗ ದುರಂತ ಎರಡು ಮೀಟರ್‌ ಕೊರೆದರೆ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಬಹುದು: ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಸೈಯದ್‌ ಅಟಾ ಹಸ್ನೈನ್‌

Posted by Vidyamaana on 2023-11-28 17:49:47 |

Share: | | | | |


ಉತ್ತರಕಶಿ ಸುರಂಗ ದುರಂತ  ಎರಡು ಮೀಟರ್‌ ಕೊರೆದರೆ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಬಹುದು: ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಸೈಯದ್‌ ಅಟಾ ಹಸ್ನೈನ್‌

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ (Uttarkashi Tunnel) ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ನಡೆಯುತ್ತಿರುವ ಕಾರ್ಯಾಚರಣೆಯು ಕೊನೆಯ ಹಂತ ತಲುಪಿದೆ. ರ‍್ಯಾಟ್‌ ಹೋಲ್‌ ಮೈನಿಂಗ್‌ (Rat Hole Mining) ಮೂಲಕ ಸುಮಾರು 58 ಮೀಟರ್‌ ಸುರಂಗವನ್ನು ಕೊರೆಯಲಾಗಿದ್ದು, ಇನ್ನು ಎರಡೇ ಮೀಟರ್‌ ಬಾಕಿ ಇದೆ.ಎರಡು ಮೀಟರ್‌ ಕೊರೆದರೆ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಬಹುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಸದಸ್ಯ ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಸೈಯದ್‌ ಅಟಾ ಹಸ್ನೈನ್‌ ಮಾಹಿತಿ ನೀಡಿದ್ದಾರೆ.


ರಕ್ಷಣಾ ಕಾರ್ಯಾಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರುವುದು ನಮ್ಮ ಕರ್ತವ್ಯವಾಗಿದೆ. ಇದುವರೆಗೆ 58 ಮೀಟರ್‌ ಕೊರೆಯಲಾಗಿದೆ. ಇನ್ನೂ ಎರಡು ಮೀಟರ್‌ ಕೊರೆಯುವುದು ಬಾಕಿ ಇದೆ. ಈಗಾಗಲೇ ನಾವು ಕಾರ್ಮಿಕರ ಸಮೀಪ ತೆರಳಿದ್ದೇವೆ. ಕಾರ್ಮಿಕರ ಧ್ವನಿಯು ನಮಗೆ ಕೇಳುತ್ತಿದೆ. ಸ್ವಲ್ಪ ವಿಳಂಬವಾದರೂ ಪರವಾಗಿಲ್ಲ, ಎಲ್ಲ ಕಾರ್ಮಿಕರನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಉತ್ತರಕಾಶಿ ಸುರಂಗದಲ್ಲಿಯೇ ತಾತ್ಕಾಲಿಕವಾಗಿ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಲ್ಲದೆ, ಏಮ್ಸ್‌ ವೈದ್ಯರ ನಾಲ್ಕು ತಂಡಗಳು ಸುರಂಗದ ಬಳಿಯೇ ಬೀಡುಬಿಟ್ಟಿವೆ. ಯಾವಾಗ ಬೇಕಾದರೂ ಜನರನ್ನು ಹೊರಗೆ ಕರೆತರುವ ಸಾಧ್ಯತೆ ಇರುವುದರಿಂದ ಅವರ ಆರೋಗ್ಯವನ್ನು ಕ್ಷಿಪ್ರವಾಗಿ ತಪಾಸಣೆ ಮಾಡಲು ಸುರಂಗದಲ್ಲಿಯೇ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಸುರಂಗದ ಹೊರಗೆ ಸುಮಾರು 16 ಆಂಬುಲೆನ್ಸ್‌ಗಳು ಕಾಯುತ್ತಿದ್ದು, ತಪಾಸಣೆ ಬಳಿಕ ಅವರನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಲಾಗುತ್ತದೆ ಎನ್ನಲಾಗಿದೆ.


ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ. ಕೊನೆಗೆ 17 ದಿನಗಳ ಬಳಿಕ ಎಲ್ಲ ಕಾರ್ಮಿಕರ ರಕ್ಷಣೆಯು ಕೊನೆಯ ಹಂತ ತಲುಪಿದೆ.

ಸಮುದ್ರದಲ್ಲಿ ವಿಮಾನ ಪತನ; ಖ್ಯಾತ ನಟ, ಇಬ್ಬರು ಪುತ್ರಿಯರು ಸಾವು

Posted by Vidyamaana on 2024-01-06 09:27:19 |

Share: | | | | |


ಸಮುದ್ರದಲ್ಲಿ ವಿಮಾನ ಪತನ; ಖ್ಯಾತ ನಟ, ಇಬ್ಬರು ಪುತ್ರಿಯರು ಸಾವು

ಲಾಸ್ ಎಂಜಲೀಸ್: 30 ವರ್ಷಗಳ ವೃತ್ತಿಜೀವನದಲ್ಲಿ ಟಾಮ್ ಕ್ರೂಸ್ ಮತ್ತು ಜಾರ್ಜ್ ಕ್ಲೂನಿ ಅವರೊಂದಿಗೆ ಚಲನಚಿತ್ರಗಳಲ್ಲಿ ನಟಿಸಿದ ಜರ್ಮನ್ ಮೂಲದ ಅಮೇರಿಕನ್ ನಟ ಕ್ರಿಶ್ಚಿಯನ್ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ಗುರುವಾರ ಕೆರಿಬಿಯನ್ ದ್ವೀಪದ ಕರಾವಳಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.


ನಟ ಹಾಗು ಇಬ್ಬರು ಪುತ್ರಿಯರ ಜೊತೆ ಸಣ್ಣ ವಿಮಾನದಲ್ಲಿ ಸೇಂಟ್ ಲೂಸಿಯಾಕ್ಕೆ ಹೋಗುತ್ತಿದ್ದಾಗ ಬೆಕ್ವಿಯಾ ಬಳಿಯ ಪೆಟಿಟ್ ನೆವಿಸ್ ದ್ವೀಪದ ಪಶ್ಚಿಮದಲ್ಲಿ ತಾಂತ್ರಿಕ ತೊಂದರೆಗೆ ಒಳಗಾಗಿ ಸಮುದ್ರದಲ್ಲಿ ಪತನಗೊಂಡು ಆಲಿವರ್ ಮತ್ತು ಇಬ್ಬರು ಪುತ್ರಿಯರಾದ 10 ವರ್ಷದ ಮಡಿತಾ ಕ್ಲೆಪ್ಸರ್ ಮತ್ತು 12 ವರ್ಷದ ಆನಿಕ್ ಕ್ಲೆಪ್ಸರ್ ಸಾವನ್ನಪ್ಪಿದ್ದಾರೆ.ಅಲ್ಲದೆ ಅಪಘಾತದಲ್ಲಿ ಪೈಲಟ್ ರಾಬರ್ಟ್ ಸ್ಯಾಚ್ಸ್ ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು. ಅಪಘಾತಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ ತಾಂತ್ರಿಕ ಸಮಸ್ಯೆಯಿಂದ ವಿಮಾನ ಅಪಘಾತಕ್ಕೆ ಒಳಗಾಗಿರಬಹುದು ಎಂದು ಮೂಲಗಳು ಮಾಹಿತಿ ನೀಡಿವೆ.


ವಿಮಾನ ಸಮುದ್ರದಲ್ಲಿ ಪತನಗೊಳ್ಳುತ್ತಿದ್ದಂತೆ ಮೀನುಗಾರರು, ಮುಳುಗುತಜ್ಞರು ಮತ್ತು ಕೋಸ್ಟ್ ಗಾರ್ಡ್ ಸಿಬಂದಿಗಳು ಸ್ಥಳಕ್ಕೆ ಧಾವಿಸಿ, ಆಲಿವರ್ ಅವರ ಪುತ್ರಿಯರಾದ ಆನಿಕ್ ಮತ್ತು ಮಡಿತಾ ಕ್ಲೆಪ್ಸರ್ ಮತ್ತು ವಿಮಾನದ ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ನಾಲ್ವರ ಶವಗಳನ್ನು ಹೊರತೆಗೆದಿದ್ದಾರೆ.ಫಾರೆವರ್ ಹೋಲ್ಡ್ ಯುವರ್ ಪೀಸ್” ಗಾಗಿ ತನ್ನ ಅಂತಿಮ ದೃಶ್ಯಗಳ ಚಿತ್ರೀಕರಣವನ್ನು ಇತ್ತೀಚೆಗೆ ಆಲಿವರ್ ಮುಗಿಸಿದ್ದರು, ನಟನ ಅಗಲಿಕೆಗೆ ಹಾಲಿವುಡ್ ಸಂತಾಪ ಸೂಚಿಸಿದೆ. ಆಲಿವರ್ ನಿಧನಕ್ಕೆ ಚಿತ್ರದ ನಿರ್ದೇಶಕ ನಿಕ್ ಲಿಯಾನ್ ಮತ್ತು ಸಹ-ನಟ ಬಾಯಿ ಲಿಂಗ್ ಅವರೂ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಲಿಯಾನ್ ತಮ್ಮ ಸಹದ್ಯೋಗಿಯನ್ನು ನೆನಪಿಸಿಕೊಂದು ಆತ ಒಬ್ಬ ನನ್ನ ಉತ್ತಮ ಸಹೋದ್ಯೋಗಿ, ನಟ ಮತ್ತು ಸ್ನೇಹಿತನಾಗಿದ್ದಕ್ಕಾಗಿ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.

ನ್ಯೂಜಿಲ್ಯಾಂಡ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

Posted by Vidyamaana on 2023-11-15 22:40:21 |

Share: | | | | |


ನ್ಯೂಜಿಲ್ಯಾಂಡ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಮುಂಬೈ: ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಗೆಲುವು ಸಾಧಿಸಿದೆ.


ಮುಹಮ್ಮದ್ ಶಮಿ ಶಿಸ್ತುಬದ್ಧ ಬೌಲಿಂಗ್ ದಾಳಿ ವಿರಾಟ್ ಮತ್ತು ಶ್ರೇಯಸ್ ಅಮೋಘ ಶತಕದ ನೆರವಿನಿಂದ ಭಾರತ ಸೆಮಿ ಫೈನಲ್ ನಲ್ಲಿ ನ್ಯೂಝಿಲ್ಯಾಂಡ್ ಮಣಿಸಿ ಕಳೆದ ಬಾರಿಯ ವಿಶ್ವಕಪ್ ಸೋಲಿನ ಸೇಡು ತೀರಿಸಿಕೊಂಡಿದೆ.


ವಿರಾಟ್ ಸಾರ್ವಕಾಲಿಕ ದಾಖಲೆಯ 50 ನೇ ಏಕದಿನ ಶತಕ ಹಾಗೂ ಮುಹಮ್ಮದ್ ಶಮಿ ಜೀವನ ಶ್ರೇಷ್ಠ ವಿಶ್ವಕಪ್ ನ 4 ಐದು ವಿಕೆಟ್ ಗೊಂಚಲು ನೆರವಿಂದ ಭಾರತ ಫೈನಲ್ ಪ್ರವೇಶಿಸಿದೆ.ಭಾರತ ನೀಡಿದ 398 ರನ್ ಗುರಿ ಬೆನ್ನತ್ತಿದ ಕಿವೀಸ್ ತೀವ್ರ ಹೋರಾಟ ನೀಡಿ ಸೋಲೊಪ್ಪಿಕೊಂಡಿದೆ.ಭಾರತದ ಕಠಿಣ ಗುರಿ ಬೆನ್ನತ್ತಲು ಸ್ಪೋಟಕ ಆರಂಭದ ನಿರೀಕ್ಷೆಯಲ್ಲಿ ಬ್ಯಾಟಿಂಗ್ ಗೆ ಬಂದಿದ್ದಕಿವೀಸ್ ಗೆ ಮುಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು. ನ್ಯೂಝಿಲ್ಯಾಂಡ್ ಓಪನರ್ ಗಳಾದ ಡೆವೋನ್ ಕಾನ್ವೆ ಹಾಗೂ ರಚಿನ್ ರವೀಂದ್ರ ಕ್ರಮವಾಗಿ 13 ರನ್ ಗೆ ಮುಹಮ್ಮದ್ ಶಮಿ ಎಸೆತದಲ್ಲಿ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಗೆ ಕ್ಯಾಚಿತ್ತು ಔಟ್ ಆದರು. ಬಳಿಕ ಬ್ಯಾಟಿಂಗ್ ಬಂದ ನಾಯಕ ಕೇನ್ ವಿಲಿಯಮ್ಪನ್ ಹಾಗೂ ಡೆರಲ್ ಮಿಚೆಲ್ ಜೋಡಿ, ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಚೇತರಿಕೆ ನೀಡುವಲ್ಲಿ ಯಶಸ್ವಿ ಯಾದರು. ಭಾರತೀಯ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ವಿಲಿಯನ್ಸನ್ 69 ರನ್ ಗಳಿಸಿ ಶಮಿ ಎಸೆತದಲ್ಲಿ ವಿಕೆಟ್ ಒಪ್ಪಿಸಿದರೆ, ಡರೆಲ್ ಮಿಚೆಲ್ 119 ಎಸೆತಗಳಲ್ಲಿ 9 ಬೌಂಡರಿ 7 ಸಿಕ್ಸರ್ ನೆರವಿನಿಂದ ಸ್ಪೋಟಕ ಬ್ಯಾಟಿಂಗ್ ಮುಂದುವರಿಸಿ ಕಿವೀಸ್ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಶಮಿ ಬೌಲಿಂಗ್ ನಲ್ಲಿ ಜಡೇಜಾಗೆ ವಿಕೆಟ್ ನೀಡಿ ಪೆವಿಲಿಯನ್ ಸೇರಿಕೊಂಡರು.

Recent News


Leave a Comment: