ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಸುದ್ದಿಗಳು News

Posted by vidyamaana on 2024-07-22 17:34:57 |

Share: | | | | |


ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ :ಪೆರಿಯಡ್ಕ ನಿವಾಸಿ ರೆಹಮಾನ್ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಿಸಿಟಿವಿಗೆ ಒತ್ತಾಯ: ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ ಹಾಕಿದ್ದು ಇನ್ನೂ ಪತ್ತೆಯಾಗಿಲ್ಲ.

ಈ ಘಟನೆಯಲ್ಲಿ ಆರೋಪಿಯನ್ನು ಊರಾವರೇ ಹಿಡಿದುಕೊಟ್ಟಿದ್ದಾರೆ. ಪೆರಿಯಡ್ಕ ಜಂಕ್ವನ್ ನಲ್ಲಿ ಪೊಲೀಸ್ ಇಲಾಖೆಯ ಸಿಸಿಟಿವಿ ಅಗತ್ಯತೆ ಇದೆ ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದರು.

 Share: | | | | |


ಪುತ್ತೂರಿಗೆ ಬಂತುMost Expected ಹ್ಯುಂಡೈ ಎಕ್ಸ್ ಟರ್

Posted by Vidyamaana on 2023-07-14 06:18:39 |

Share: | | | | |


ಪುತ್ತೂರಿಗೆ ಬಂತುMost Expected  ಹ್ಯುಂಡೈ ಎಕ್ಸ್ ಟರ್

ಪುತ್ತೂರು: ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಕಾರನ್ನು ಪುತ್ತೂರಿನ ಜನರಿಗೆ ಪರಿಚಯಿಸುವ ಹಿನ್ನೆಲೆಯಲ್ಲಿ ಜುಲೈ 14 ಶುಕ್ರವಾರ ಸಂಜೆ  4 ಗಂಟೆಗೆ ದರ್ಬೆಯಲ್ಲಿರುವ ಕಾಂಚನ‌ ಹುಂಡೈ ಶೋರೂಂನಲ್ಲಿ ಖ್ಯಾತ ಯೂಟ್ಯೂಬರ್ ಧನ್ರಾಜ್ ಆಚಾರ್ ಬಿಡುಗಡೆಗೊಳಿಸಲಿದ್ದಾರೆ.

ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5,99,900 ಆಗಿದೆ. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇತ್ತೀಚೆಗೆ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ. ಹೊಸದಾಗಿ ಬಿಡುಗಡೆಯಾದ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಕುರಿತು ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು ಇಲ್ಲಿದೆ.


ಬೆಲೆ ರೂಪಾಂತರಗಳು: ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ-ಎಸ್‌ಯುವಿಯು EX , EX(O) , S , S (O) , SX , SX(O), ಮತ್ತು SX(O) Connect ಎಂಬ 7  ಟ್ರಿಮ್ ಹಂತಗಳಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಆರಂಭಿಕ ಬೆಲೆಯು ರೂ.5,99,900 ಆದರೆ, ಇದರ ಟಾಪ್ ಸ್ಪೆಕ್ ಮಾದರಿಗೆ ರೂ.9.31,990 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.ಎಂಜಿನ್: ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 83 bhp ಪವರ್ ಮತ್ತು 114 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.ಎಕ್ಸ್‌ಟರ್ ಕಾರಿನ CNG ಆವೃತ್ತಿಯು 69bhp ಪವರ್ ಮತ್ತು 95 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.ಇನ್ನು CNG ಆವೃತ್ತಿಯು 27.1 ಕಿ.ಮೀ ಮೈಲೇಜ್ ನೀಡುತ್ತದೆ.


ವಿನ್ಯಾಸ:ಈ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕಾರಿನ ಮುಂಭಾಗ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಕ್ಲಾಮ್‌ಶೆಲ್ ಬಾನೆಟ್ ಮತ್ತು ಎಚ್ ಆಕಾರದ ಎಲ್‌ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿವೆ. ಇನ್ನು ಈ ಮೈಕ್ರೋ ಎಸ್‍ಯುವಿಗೆ ಸುಲಭವಾಗಿ ಪ್ರವೇಶಿಸಲು ಮತ್ತು ಹೊರಬರಲು ಡೋರುಗಳು ವಿಶಾಲವಾಗಿ ತೆರೆದುಕೊಳ್ಳುತ್ತವೆ.ಬಣ್ಣಗಳ ಆಯ್ಕೆ: ಹ್ಯುಂಡೈ ಎಕ್ಸ್‌ಟರ್ ಕಾರ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳು ಹೊಸದಾಗಿ ಪರಿಚಯಿಸಲಾಗಿವೆ. ಗ್ರಾಹಕರು ತಮ್ಮ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು.


ಫಿಚರ್ಸ್: ಈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಹೊಂದಿದೆ.


ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ. ಒಟ್ಟಾರೆಯಾಗಿ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), VSM ಮತ್ತು HAC (ಹಿಲ್ ಅಸಿಸ್ಟ್ ಕಂಟ್ರೋಲ್) ಸೇರಿದಂತೆ 26 ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ.

ಹೆಚ್ಚಿನ ವಿವರ /ಮಾಹಿತಿಗಾಗಿ ಸಂಪರ್ಕಿಸಿ.....

RANJITH

Branch Manager

+91 97408 73450

Afwan

Sales Consultant M +91 9480389310

Kanchana Automobiles Private Limited. Opp St. Philomena School, Darbe, Puttur-574201 www.kanchana.hyundaimotor.in Hyundai Helpline :1800-1024645, 1800-114645

ಬ್ರೇಕಿಂಗ್ ನ್ಯೂಸ್ ಕೊಡೋಕೆ ನಾನು ಉಡುಪಿಗೆ ಬಂದಿಲ್ಲ ಖುಷ್ಬು ಸುಂದರ್

Posted by Vidyamaana on 2023-07-27 14:52:14 |

Share: | | | | |


ಬ್ರೇಕಿಂಗ್ ನ್ಯೂಸ್ ಕೊಡೋಕೆ ನಾನು ಉಡುಪಿಗೆ ಬಂದಿಲ್ಲ ಖುಷ್ಬು ಸುಂದರ್

ಉಡುಪಿ: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.


ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. 


ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು. 


ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.

ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಬಂಟರ ಭವನದಲ್ಲಿ ಶ್ರದ್ಧಾಂಜಲಿ ಸಭೆ

Posted by Vidyamaana on 2023-09-03 11:03:06 |

Share: | | | | |


ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಬಂಟರ ಭವನದಲ್ಲಿ ಶ್ರದ್ಧಾಂಜಲಿ ಸಭೆ

ಪುತ್ತೂರು:ಇತ್ತೀಚೆಗೆ ನಿಧನರಾದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಶ್ರದ್ಧಾಂಜಲಿ ಸಭೆಯು ಸೆ.೨ರಂದು ಕೊಂಬೆಟ್ಟು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.

ನುಡಿ ನಮನದ ಸಲ್ಲಿಸಿದ ಪುತ್ತೂರಿನ ಖ್ಯಾತ ವೈದ್ಯರು, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ. ಸುರೇಶ್ ಪುತ್ತೂರಾಯ ಮಾತನಾಡಿ, ಹುಟ್ಟಿದ ಮನುಷ್ಯನಿಗೆ ಮರಣ ನಿಶ್ವಿತ. ಆದರೂ ಸೀತಾರಾಮ ಶೆಟ್ಟಿಯವರಿಗೆ ಸಣ್ಣ ವಯಸ್ಸಿನಲ್ಲಿಯೇ ವೇಗವಾಗಿ ಬಂದೊದಗಿದೆ. ಸದಾ ಸಮಾಜ ಮುಖಿ ವ್ಯಕ್ತಿತ್ವದ ಸೀತಾರಾಮ ಶೆಟ್ಟಿಯವರು ಸೀತಣ್ಣ ಎಂದೇ ಎಲ್ಲರೊಂದಿಗೆ ಗುರುತಿಸಿಕೊಂಡವರು. ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಎಲ್ಲಾ ಸಂದರ್ಭಗಳಲ್ಲಿಯೂ ಮುಂಚೂಣಿಯಲ್ಲಿ ನಿಂತು ಬಹಳಷ್ಟು ಉತ್ತಮ ಕೆಲಸ ಮಾಡಿದವರು. ಒಡನಾಡಿಯಾಗಿ ಸಂಪ್ಯದ ಜನತೆಯೊಂದಿಗೆ ಅನ್ಯೋನ್ಯತೆಯಿಂದಿದ್ದವರು ಎಂದರು.

ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಸದಾ ನಗುಮೊಗದಿಂದ ಎಲ್ಲರೊಂದಿಗೆ ಬೆರೆಯುತ್ತಿದ್ದ ಸೀತಾರಾಮ ಶೆಟ್ಟಿಯವರ ಮರಣ ವಾರ್ತೆ ಯಾರಿಗೂ ನಂಬಲು ಸಾಧ್ಯವಾಗಿಲ್ಲ. ಹಲವಾರು ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಎಲ್ಲರೊಂದಿಗೆ ಪ್ರೀತಿಯಿಂದ ಇದ್ದವರು. ಯುವ ಬಂಟರ ಸಂಘದ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ನಿರ್ವಹಿಸಿದವರು. ತಾನು ಬಾಳಿ ಬೆಳಗಿನ ಅಲ್ಪ ಅವಧಿಯಲ್ಲಿಯೇ ಉತ್ತಮ ಸೇವೆ ನೀಡಿದವರು. ಸಹೋದರರು ಪರಸ್ಪರ ಅನ್ಯೋನ್ಯತೆಯಿಂದ ಇದ್ದ ಅವರ ಬದುಕು ನಾವು ಯಾವ ರೀತಿ ಬದುಕಬೇಕೆಂಬುದಕ್ಕೆ ಆದರ್ಶವಾಗಿದ್ದ ಅವರು ಸಮಾಜದ ಪ್ರೀತಿ ಗಳಿಸಿದವರು ಎಂದರು.

ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಮಾತನಾಡಿ, ಹಲವು ಸಮಾಜಮುಖಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಸೀತಾರಾಮ ಶೆಟ್ಟಿಯವರು ಎಲ್ಲರೊಂದಿಗೆ ಸಹೋದರೆತೆಯಿಂದ ಬೆರೆಯುತ್ತಿದ್ದವರು. ಎಲ್ಲರೊಂದಿಗೂ ಆದರದಿಂದ ಮಾತನಾಡಿಸುವವರು. ಸಂಪ್ಯ ನವಚೇತನ ಯುವಕ ಮಂಡಲ, ಕಂಬಳತ್ತಡ್ಡ ಶ್ರೀಕೃಷ್ಣ ಯುವಕ ಮಂಡಲ, ಜೇಸಿಐ, ಯುವ ಬಂಟರ ಸಂಘಗಳಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ ಅವರು ಯುವಕರಿಗೆ ಅದರ್ಶಪ್ರಾಯರಾಗಿದ್ದರು ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಸವಣೂರು ವಿದ್ಯಾರಶ್ಮೀ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಎಪಿಎಂಸಿ ಮಾಜಿ ಸದಸ್ಯ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ, ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ನಾಥ ಶೆಟ್ಟಿ, ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಕ್ಷಯ ಗ್ರೂಪ್‌ನ ಮ್ಹಾಲಕ ಜಯಂತ ನಡುಬೈಲು, ಉದ್ಯಮಿ ಪುರಂದರ ರೈ ಮಿತ್ರಂಪಾಡಿ, ಬಂಟರ ಸಂಘದ ಕೋಶಾಧಿಕಾರಿ ಕೃಷ್ಣ ಪ್ರಸಾದ್ ಆಳ್ವ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ರಾಕೇಶ್ ರೈ ಕೆಡೆಂಜಿ, ಬಿರುಮಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಜೆ ರೈ, ಗಣೇಶ್ ರೈ ಮೂಲೆ, ವಸಂತ ರೈ ದುಗ್ಗಳ, ಜಯರಾಮ ರೈ ನುಳಿಯಾಲು, ಮಹಾಬಲ ರೈ ವಳತ್ತಡ್ಕ, ಸೀತಾರಾಮ ಶೆಟ್ಟಿಯವರ ಸಹೋದರರಾದ ಜಯಂತ ಶೆಟ್ಟಿ, ರವೀಂದ್ರ ಶೆಟ್ಟಿ, ಕುಟುಂಬಸ್ಥರು ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಏನಿದು ಹಸಿರು ಪಟಾಕಿ? ಖರೀದಿಸುವಾಗ ಅವುಗಳನ್ನು ಗುರುತಿಸುವುದು ಹೇಗೆ?

Posted by Vidyamaana on 2023-10-11 08:38:40 |

Share: | | | | |


ಏನಿದು ಹಸಿರು ಪಟಾಕಿ? ಖರೀದಿಸುವಾಗ ಅವುಗಳನ್ನು ಗುರುತಿಸುವುದು ಹೇಗೆ?

ಭಾರತೀಯ ಸಂಸ್ಕೃತಿ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ (Diwali) ಸಮೀಪಿಸುತ್ತಿದೆ. ಮನೆಗಳಲ್ಲಿ ದೀಪಗಳನ್ನು ಬೆಳಗಿ, ಪಟಾಕಿ ಸಿಡಿಸಿ ಸಂಭ್ರಮಿಸಲು ಎಲ್ಲರೂ ಕಾಯುತ್ತಿದ್ದಾರೆ. ಪಟಾಕಿ ಹಬ್ಬ ಬಂತೆಂದರೆ ಸಾಕು, ಪರಿಸರ ಕಾಳಜಿ ಕೂಗೂ ಕೇಳಿಬರುತ್ತೆ. ವಾಯುಮಾಲಿನ್ಯ ಸಮಸ್ಯೆ ಕಾರಣ ಹಾನಿಕಾರಕ ಪಟಾಕಿಗಳ ಬದಲಿಗೆ ಪರಿಸರಕ್ಕೆ ಪೂರಕವಾದ ಪಟಾಕಿಗಳನ್ನು ಸಿಡಿಸುವಂತೆ ಸರ್ಕಾರಗಳು ಪ್ರತಿ ವರ್ಷ ಜಾಗೃತಿ ಮೂಡಿಸುತ್ತಲೇ ಇವೆ. ಈ ಅಭಿಯಾನಕ್ಕೆ ಅನೇಕ ಸಂಘಟನೆಗಳು ಸಹ ಕೈಜೋಡಿಸಿವೆ.


ವಾಯುಮಾಲಿನ್ಯದ ಕೇಂದ್ರ ಸ್ಥಾನವಾದ ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಜೈಲು ಗ್ಯಾರಂಟಿ. ಅಂತೆಯೇ ಅನೇಕ ರಾಜ್ಯಗಳಲ್ಲಿ ಸಂಪೂರ್ಣ ನಿರ್ಬಂಧ ವಿಧಿಸದಿದ್ದರೂ, ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು (Green Crackers) ಸಿಡಿಸುವಂತೆ ಸಲಹೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತಿದೆ.ಹಾಗಾದರೆ ಏನಿದು ಹಸಿರು ಪಟಾಕಿ? ಮಾರುಕಟ್ಟೆಗಳಲ್ಲಿ ಅತ್ಯಾಕರ್ಷಕ ಪ್ಯಾಕೆಟ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪರಿಸರಕ್ಕೆ ಹಾನಿಕಾರವಾದ ಪಟಾಕಿಗಳ ನಡುವೆ ಹಸಿರು ಪಟಾಕಿಗಳನ್ನು ಗುರುತಿಸಿ ಖರೀದಿಸುವುದಾದರೂ ಹೇಗೆ?


ಸಾಮಾನ್ಯ ಪಟಾಕಿ ಹಾಗೂ ಹಸಿರು ಪಟಾಕಿಗೆ ಇರುವ ವ್ಯತ್ಯಾಸವೇನು?

ಒಂದರ್ಥದಲ್ಲಿ ಹೇಳುವುದಾದರೆ, ಹಸಿರು ಪಟಾಕಿ ಹಾಗೂ ಸಾಮಾನ್ಯ ಪಟಾಕಿ ಎರಡು ಕೂಡ ಮಾಲಿನ್ಯ ಉಂಟು ಮಾಡುತ್ತವೆ. ಆದರೆ ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಶೇಕಡಾ 30 ರಷ್ಟು ಕಡಿಮೆ ವಾಯು ಮಾಲಿನ್ಯಕಾರಕವನ್ನು ಹೊರಸೂಸುತ್ತದೆ. ಹಸಿರು ಪಟಾಕಿಗಳು ಮಾಲಿನ್ಯಕಾರಕ ಹೊಗೆ ಹೊರಸೂಸುವುದನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ, ಧೂಳನ್ನು ಹೀರಿಕೊಳ್ಳುತ್ತದೆ. ಅಲ್ಲದೇ ಬೇರಿಯಮ್ ನೈಟ್ರೇಟ್‌ನಂತಹ ಅಪಾಯಕಾರಿ ಅಂಶಗಳನ್ನು ಹೊಂದಿರುವುದಿಲ್ಲ. ಸಾಮಾನ್ಯ ಪಟಾಕಿಗಳಲ್ಲಿನ ವಿಷಕಾರಿ ಲೋಹಗಳನ್ನು ಕಡಿಮೆ ಅಪಾಯಕಾರಿ ಸಂಯುಕ್ತಗಳೊಂದಿಗೆ ಬದಲಾಯಿಸಲಾಗುತ್ತದೆ. ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ದ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರಕಾರ, ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಕಳಪೆಯಾಗಿರುವ ನಗರಗಳು ಮತ್ತು ಪಟ್ಟಣಗಳಲ್ಲಿ ಮಾತ್ರ ಹಸಿರು ಪಟಾಕಿಗಳನ್ನು ಅನುಮತಿಸಲಾಗಿದೆ.

ಹಸಿರು ಪಟಾಕಿ ಎಲ್ಲಿ ಸಿಗುತ್ತೆ? ಗುರುತಿಸುವುದು ಹೇಗೆ?

ಹಸಿರು ಪಟಾಕಿಗಳ ಉತ್ಪಾದನೆಗೆ ಸಂಬಂಧಿಸಿದಂತೆ ಸರ್ಕಾರ ದೇಶದ 230 ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಹಸಿರು ಪಟಾಕಿಗಳ ಲಭ್ಯತೆ ಹಾಗೂ ಅವುಗಳನ್ನು ಗುರುತಿಸುವ ಬಗ್ಗೆ ಜನರಲ್ಲಿ ಗೊಂದಲ ಇದೆ. ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಸರ್ಕಾರ ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಗಷ್ಟೇ ಮಾರಾಟಕ್ಕೆ ಅನುಮತಿ ನೀಡಿರುತ್ತದೆ.


ಗ್ರಾಹಕರು ತಾವು ಖರೀದಿಸುವ ಪಟಾಕಿಗಳು ಹಸಿರು ಪಟಾಕಿ ಹೌದೆ? ಅಥವಾ ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಲು, ಪಟಾಕಿ ಪ್ಯಾಕ್‌ ಮೇಲಿನ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಬೇಕು. ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (CSIR), ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಹಾಗೂ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯ ವಿಶಿಷ್ಟ ಹಸಿರು ಲೋಗೋ ಮೂಲಕ ಸಹ ಹಸಿರು ಪಟಾಕಿಗಳನ್ನು ಗುರುತಿಸಬಹುದಾಗಿದೆ. SWAS, SAFAL ಮತ್ತು STAR ಎಂಬ ಮೂರು ವರ್ಗದಲ್ಲಿ ಹಸಿರು ಪಟಾಕಿಗಳು ಸಿಗುತ್ತವೆ. ಇವನ್ನು CSIR ಅಭಿವೃದ್ಧಿಪಡಿಸಿದೆ.CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್

ಹಸಿರು ಪಟಾಕಿಗಳು ಹೂ ಕುಂಡ, ಸುರುಸುರು ಬತ್ತಿ ರೀತಿ ಇರುತ್ತವೆ. ನಕಲಿ ಉತ್ಪನ್ನಗಳ ಮಾರಾಟ ತಪ್ಪಿಸಲು ಹಸಿರು ಪಟಾಕಿಗಳ ಮೇಲೆ ಕ್ಯೂಆರ್‌ ಕೋಡ್‌ ವ್ಯವಸ್ಥೆ ಇರುತ್ತದೆ. ಹಸಿರು ಪಟಾಕಿಗಳು ಶೆಲ್‌ ಗಾತ್ರಕ್ಕಿಂತಲೂ ಕಡಿಮೆ ಗಾತ್ರದಲ್ಲಿ ಮಾಡಲಾಗಿರುತ್ತದೆ. ಬೀದಿ ಬದಿ ವ್ಯಾಪಾರಿಗಳಿಂದ ಹಸಿರು ಪಟಾಕಿಗಳನ್ನು ಖರೀದಿಸಬಾರದು. ಪರವಾನಗಿ ಹೊಂದಿರುವ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು. ಗೂಗಲ್ ಪ್ಲೇಸ್ಟೋರ್‌ನಿಂದ CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್ ಬಳಸಿ ಸ್ಕ್ಯಾನರ್ ಅನ್ನು ಡೌನ್‌ಲೋಡ್ ಮಾಡಿ ಅದರ ಮೂಲಕ ಗ್ರಾಹಕರು ಹಸಿರು ಪಟಾಕಿಗಳನ್ನು ಗುರುತಿಸಬಹುದು.ಹಸಿರು ಪಟಾಕಿ ಸಿಡಿಸುವವರು ಈ ಅಂಶಗಳನ್ನು ಗಮನದಲ್ಲಿಡಿ

ಹಸಿರು ಪಟಾಕಿಗಳನ್ನು ಸುಡುವಾಗ ಪಟಾಕಿ ಹಾಗೂ ನಿಮ್ಮ ನಡುವಿನ ಅಂತರ ಹೆಚ್ಚಿರಬೇಕು. ಕೈಯನ್ನು ನೇರವಾಗಿ ಇರಿಸಿ ಪಟಾಕಿಗೆ ಕಿಡಿ ತಾಗಿಸಬೇಕು. ಪಟಾಕಿಗಳನ್ನು ಸಿಡಿಸುವಾಗ ಬೂಟುಗಳನ್ನು ಧರಿಸುವುದು ಉತ್ತಮ. ಆಟದ ಮೈದಾನಗಳಂತಹ ತೆರೆದ ಸ್ಥಳಗಳಲ್ಲಿ ಪಟಾಕಿಗಳನ್ನು ಸಿಡಿಸುವುದು ಒಳಿತು. ಹಸಿರು ಪಟಾಕಿಗಳನ್ನು ಬೆಳಗಿಸುವ ಸಂದರ್ಭದಲ್ಲಿ ಒಂದೆರಡು ಬಕೆಟ್‌ಗಳಷ್ಟು ನೀರನ್ನು ಹತ್ತಿರದಲ್ಲಿ ಇಟ್ಟುಕೊಳ್ಳಬೇಕು. ಪಟಾಕಿ ಸಿಡಿಸುವವರು ಉದ್ದವಾದ, ಸಡಿಲವಾದ ಸಿಂಥೆಟಿಕ್ ಬಟ್ಟೆಗಳನ್ನು ಧರಿಸಬಾರದು.

ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಪ್ರಭಾಕರ್ ಭಟ್ ಕಲ್ಲಡ್ಕ

Posted by Vidyamaana on 2023-05-18 11:40:22 |

Share: | | | | |


ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಪ್ರಭಾಕರ್ ಭಟ್ ಕಲ್ಲಡ್ಕ

ಪುತ್ತೂರು: ಬಿಜೆಪಿ ಮುಖಂಡರಿಬ್ಬರ ಅವಹೇಳನಕಾರಿ ಬ್ಯಾನರ್ ವಿಚಾರದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟು ಮಾರಣಾಂತಿಕವಾಗಿ ಲಾಠಿ ಏಟುತಿಂದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದು ಕಾರ್ಯಕರ್ತರನ್ನು ಡಾ. ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಡಾ. ಭಟ್ ಅವರು, ಗಾಯಾಳು ಯುವಕನಲ್ಲಿ ಮಾತನಾಡಿದಾಗ ಆತ ಹೇಳಿದಂತೆ ಮೇಲಿನಿಂದ ಒತ್ತಡವಿದೆ ಎಂದು ಪೊಲೀಸರು ಹೇಳಿ ಹೊಡೆದಿದ್ದಾರೆ ಎಂದು ಹೇಳುತ್ತಿದ್ದಾನೆ, ಹಾಗಾದ್ರೆ ಯಾರ ಒತ್ತಡ ಎಂಬುದನ್ನು ಬಹಿರಂಗಪಡಿಸಬೇಕು. ಇದರಲ್ಲಿ ಕಾಂಗ್ರೆಸ್‌ನವರ ಕೈವಾಡ ಇರುವ ಶಂಕೆಯಿದೆ. ಹಿಂದು ಕಾರ್ಯಕರ್ತರನ್ನು ದೃತಿಗೆಡಿಸುವ ಕಾರ್ಯವನ್ನು ನಾವು ಸಹಿಸೋದಿಲ್ಲ ಎಂದು ಅವರು ಹೇಳಿದರು.

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ - ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿಯ ಪೊಲೀಸ್ ವಶಕ್ಕೆ

Posted by Vidyamaana on 2023-10-14 18:59:44 |

Share: | | | | |


ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ - ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿಯ ಪೊಲೀಸ್ ವಶಕ್ಕೆ

ಮಂಗಳೂರು : ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ ​ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್  ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಬಂಧಿತ ಆರೋಪಿ.


ಹಮಾಸ್ ಬೆಂಬಲಿಸಿ, ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ಜಾಕಿರ್ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.


ಈ ಕೃತ್ಯದ ಬಗ್ಗೆ ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿ ಆರೋಪಿ ಜಾಕಿರ್ ಯಾನ ಜಾಕಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಇನ್ನು ಈ ಆರೋಪಿತನ ಮೇಲೆ ಈ ಹಿಂದ ಕೂಡ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

Recent News


Leave a Comment: