Posted by vidyamaana on 2024-07-03 13:36:16 |
ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.
ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
ಮದುವೆಯಾಗಿದ್ದ ಶ್ರೀಕಾಂತ್!
ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-01-25 16:33:53 |
ಪುತ್ತೂರು: ಗಣರಾಜ್ಯೋತ್ಸವ ಪ್ರಯುಕ್ತ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕಿನಲ್ಲಿ ಜ. 26ರಂದು ಮಧ್ಯಾಹ್ನ 2ರಿಂದ 6ರವರೆಗೆ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಉಚಿತ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ 1200 ರೂ. ಮೌಲ್ಯದ ಎಲುಬು ಸಾಂದ್ರತ ಪರೀಕ್ಷೆ (Bone mineral density test) ಅನ್ನು ಉಚಿತವಾಗಿ ಮಾಡಲಾಗುವುದು. ಪುತ್ತೂರಿನ ಖ್ಯಾತ ಎಲುಬು ಮತ್ತು ಕೀಲು ಸರ್ಜನ್ ಡಾ. ಸಚಿನ್ ಶಂಕರ್ ಹಾರಕೆರೆ ಅವರು ಶಿಬಿರದಲ್ಲಿ ಸಂದರ್ಶನಕ್ಕೆ ಲಭ್ಯರಿರುವರು. ಅಲ್ಲದೇ, ಫಿಸಿಯೋಥೇರೇಪಿ ತಜ್ಞರ ಸಂದರ್ಶನ ಹಾಗೂ ಫಿಸಿಯೋಥೇರೇಪಿ ಚಿಕಿತ್ಸೆ ಉಚಿತವಾಗಿ ನಡೆಯಲಿದೆ.
ಎಲುಬು ಮತ್ತು ಕೀಲು ಸಂಬಂಧಿಸಿದ ವ್ಯಾಧಿಗಳಾದ ಸಂಧಿ ವಾತಾ, ಆಮವಾತ, ಕತ್ತು ನೋವು, ಸೊಂಟ ನೋವು, ಭುಜ ನೋವು, ಎಲುಬು ಮುರಿತ, ಸ್ಪೋರ್ಟ್ಸ್ ಇಂಜ್ಯೂರಿ ಇತ್ಯಾದಿ ಸಮಸ್ಯೆಗಳಿರುವವರು ಶಿಬಿರದ ಪ್ರಯೋಜನವನ್ನು ಪಡೆಯಬಹುದು ಎಂದು ಪುರುಷರಕಟ್ಟೆ ಸಿದ್ಧಣ್ಣ ಕಾಂಪ್ಲೆಕ್ಸಿನಲ್ಲಿರುವ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕಿನ ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞ ಡಾ. ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ಪ್ರಕಟಣೆಯಲ್ಲಿ ತಿಳಿಸಿದರು.
Posted by Vidyamaana on 2023-11-22 15:47:10 |
ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ಯನ್ನು ಉಡುಪಿ ಕೋರ್ಟಿಗೆ ಬುಧವಾರ ಹಾಜರುಪಡಿಸಲಾಯಿತು. ಆತನಿಗೆ ಡಿಸೆಂಬರ್ 5 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.
ವಿಚಾರಣೆ ಮುಗಿಸಿ ಆರೋಪಿಯನ್ನು ಮಲ್ಪೆ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದರು. ಈ ಮೊದಲು ಪೊಲೀಸರು ನವೆಂಬರ್ 28 ರವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರೂ ಮಹಜರು ಪ್ರಕ್ರಿಕೆ ಪೂರ್ಣಗೊಂಡಿರುವ ಕಾರಣ ಮುಂಚಿತವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಘಟನೆಯ ವಿವರ: ನವೆಂಬರ್ 12ರಂದು ನೇಜಾರಿನ ತೃಪ್ತಿ ಲೇಔಟ್ ನಲ್ಲಿರುವ ಮನೆಗೆ ಬಂದು ತಾಯಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದ.ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ನೂರ್ ಮೊಹಮ್ಮದ್ ಅವರ ಪತ್ನಿ ಹಸೀನಾ (48), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21), ಪುತ್ರ ಅಸೀಮ್ (14) ಹತ್ಯೆಗೀಡಾಗಿದ್ದರು.
Posted by Vidyamaana on 2022-12-15 14:18:07 |
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ೨೦೨೨-೨೩ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.
ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿ ಮಾತನಾಡಿ, ಒಂದು ಹಣತೆಯಿಂದ ಸಾವಿರಾರು ಹಣತೆಗಳನ್ನು ಹಚ್ಚಬಹುದು. ಹಾಗೆಯೇ ನಮ್ಮ ಜ್ಞಾನವನ್ನು ಇತರರೊಂದಿಗೆ ಹಂಚಿದಲ್ಲಿ ಮಾತ್ರ ಅದು ವೃದ್ಧಿಯಾಗುತ್ತದೆ. ಜ್ಞಾನವನ್ನು ತಲೆಯಲ್ಲಿಟ್ಟು ಮೆರೆಯದೆ ಹೃದಯದಲ್ಲಿಟ್ಟು ವಿನಮ್ರವಾಗಿ ನಡೆದುಕೊಂಡರೆ ಜೀವನ ಸಾರ್ಥಕವಾಗುವುದು. ನಾಯಕರು ಅನುಯಾಯಿಗಳನ್ನು ಸೃಷ್ಠಿಸುವ ಬದಲು ನಾಯಕರನ್ನು ಸೃಷ್ಠಿಸಬೇಕು. ವ್ಯಕ್ತಿಗಳನ್ನು ಹಾಗೂ ವ್ಯಕ್ತಿತ್ವಗಳನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾಸಂಸ್ಥೆಗಳು ಮಹತ್ತರ ಪಾತ್ರ ವಹಿಸುತ್ತವೆ. ಯುವಕರು ಒಂದು ಹೆಜ್ಜೆ ಮುಂದೆ ಇಡುವ ಮುನ್ನ ಇಟ್ಟ ಹೆಜ್ಜೆ ಸರಿಯಾಗಿದೆಯೇ ಎಂದು ಪರಾಮರ್ಶಿಸಬೇಕು. ಬದುಕಿನ ಜಂಜಾಟಗಳ ನಡುವೆ ನಮಗೆ ಬರಬಹುದಾದ ಅದ್ಭುತ ಅವಕಾಶಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.
ಅಧ್ಯ÷ಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಜೆರೋಮ್ ಲಾರೆನ್ಸ್ ಮಸ್ಕರೇಞಸ್, ವಿದ್ಯಾರ್ಥಿ ಸಮೂಹಕ್ಕೆ ಒಳಿತನ್ನು ಮಾಡಲು ನಾಯಕರನ್ನು ಚುನಾಯಿಸಲಾಗಿದೆ. ನೀವು ಯಾರಾದರೊಬ್ಬ ವ್ಯಕ್ತಿಯನ್ನು ಪ್ರೀತಿಸಿದಲ್ಲಿ ಅವರ ಒಳಿತು ಹಾಗೂ ಸಂತೋಷಕ್ಕಾಗಿ ಸದಾ ಶ್ರಮಿಸುತ್ತೀರಿ. ನಿಮ್ಮ ಹೆತ್ತವರನ್ನು ಪ್ರೀತಿಸಿದಂತೆಯೇ ಕಲಿತ ವಿದ್ಯಾಸಂಸ್ಥೆಯನ್ನೂ ಪ್ರೀತಿಸಿರಿ. ನಾಯಕರು ತಮ್ಮ ಜವಾಬ್ದಾರಿಗಳನ್ನು ಪ್ರೀತಿಯಿಂದಲೇ ನಿರ್ವಹಿಸಿದಲ್ಲಿ ಸಂಸ್ಥೆಯನ್ನು ಸುಲಭವಾಗಿ ಮುನ್ನಡೆಸಬಹುದಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಾಯ್ ದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮೌರಿಸ್ ಮಸ್ಕರೇಞಸ್, ವಿದ್ಯಾರ್ಥಿ ಸಂಘದ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಹಿರಿಯವಿದ್ಯಾರ್ಥಿ ಸಂಘದ ಅಧ್ಯಕ್ಷ ಎ. ಜಗಜೀವನ್ ದಾಸ್ ರೈ ಶುಭಹಾರೈಸಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಪ್ರೌಢಶಾಲಾ ಮುಖ್ಯಶಿಕ್ಷಕಿ ಕಾರ್ಮಿನ್ ಪಾಯಸ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ವಿ.ಜೆ. ಫೆರ್ನಾಂಡಿಸ್, ಕ್ಸೇವಿಯರ್ ಡಿಸೋಜ ಉಪಸ್ಥಿತರಿದ್ದರು.
ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಆಶಿಕ್ ಸ್ವಾಗತಿಸಿದರು. ಕಾರ್ಯದರ್ಶಿ ಅನುಶ್ರೀ ಅತಿಥಿಗಳನ್ನು ಪರಿಚಯಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿ ಜೋನ್ ವಿಸ್ಟನ್ ಟೈಟಸ್ ಡಯಾಸ್ ಅತಿಥಿಗಳನ್ನು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಶಿವಾನಿ ವಂದಿಸಿದರು. ತೃತೀಯ ಬಿಎಸ್ಸಿ ವಿದ್ಯಾರ್ಥಿ ನಿರಕ್ಷಾ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಕೆ., ಭಾರತಿ ಎಸ್. ರೈ ಉಪಸ್ಥಿತರಿದ್ದರು.
Posted by Vidyamaana on 2023-09-24 14:23:52 |
ಮಂಗಳೂರು: ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ ಎಂದು ಕರ್ನಾಟಕ ಸರಕಾರದ ಶಿಕ್ಷಣ ಸಚಿವರು, ಮಂಗಳೂರು ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಉಸ್ತುವಾರಿಯಾದ ಮಧು ಬಂಗಾರಪ್ಪ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ನ ಕೈಹಿಡಿಯಲಿದ್ದಾರೆ. ಮತೀಯ ವಾದ ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ ಪ್ರತಿಬಿಂಬಿತವಾಗಲಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕಾರ್ಯಕರ್ತರ, ಸಂಘ ಸಂಸ್ಥೆಗಳ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ವೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್ ರವರು ಸಭೆಯ ಅಧ್ಯಕ್ಷತೆ ವಹಿಸಿದರು.
ಮಾಜಿ ಸಚಿವರಾದ ಬಿ ರಮಾನಾಥ್ ರೈ, ಅಭಯಚಂದ್ರ ಜೈನ್ ಮಾತನಾಡಿದರು.
ಬಿ ಇಬ್ರಾಹಿಂ, ಅಶೋಕ್ ಕುಮಾರ್ ರೈ, ಜೆ ಆರ್ ಲೋಬೊ, ಮಿಥುನ್ ರೈ, ಇಬ್ರಾಹಿಂ ಕೊಡಿಜಾಲ್, ಶಶಿದರ್ ಹೆಗ್ಡೆ, ಲುಕ್ಮನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೃಪಾ ಆಳ್ವಾ, ಅಶ್ವಿನ್ ಕುಮಾರ್ ರೈ, ಪದ್ಮರಾಜ್ ಆರ್, ಇನಾಯತ್ ಅಲಿ, ಜಿ ಕೃಷ್ಣಪ್ಪ, ಬ್ಲಾಕ್ ಅಧ್ಯಕ್ಷರುಗಳು , ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಮನಪಾ ಸದಸ್ಯರು ಉಪಸ್ಥಿತರಿದ್ದರು
Posted by Vidyamaana on 2023-05-06 08:42:14 |
ಸುಳ್ಯ: ನಿನ್ನೆ ಕುಂದಾಪುರದ ಸಮೀಪದ ಬಿಡ್ಕಲ್ ಕಟ್ಟೆಯ ಸೌಡ ಹೊಳೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಐವರ್ನಾಡಿನ ಯುವಕನ ಮೃತದೇಹ ನದಿಯಲ್ಲಿ ನಿನ್ನೆ ಪತ್ತೆಯಾಗಿದೆ.ಅಗ್ನಿ ಶಾಮಕ ದಳದವರು ಮತ್ತು ಮುಳುಗುತಜ್ಞರು ಸತತ ಹುಡುಕಾಟ ನಡೆಸಿದ್ದು ನದಿಗೆ ಇಳಿದ 300 ಮೀ ಅಂತರದಲ್ಲಿ ಮೃತದೇಹ ಪತ್ತೆಯಾಗಿದೆ.
ಕುಂದಾಪುರ ತಾಲೂಕಿನ ಬಿಟ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್.ಎಂ. (21) ಮಧ್ಯಾಹ್ನ ಹೊಳೆಗೆ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿ ನಾಪತ್ತೆಯಾಗಿದ್ದರು.
ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ಎ.29 ರಂದು ಬೆಳಿಗ್ಗೆ ತನ್ನ ಮನೆಯಾದ ಐವರ್ನಾಡಿನ ಮಡ್ತಿಲದಿಂದ ಮೂಡಬಿದ್ರೆಗೆ ಬಂದಿದ್ದರು. ಅಲ್ಲಿಂದ ಸ್ನೇಹಿತರೊಂದಿಗೆ ಸೌಡ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದರು. ಸೌಡ ಸಮೀಪದ ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-06-05 16:31:52 |
ಬೆಂಗಳೂರು :- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಾ? ಡಿಎಂ ಮಾಡಿ. ಡಿಎಂ ಮಾಡುವುದರ ಜೊತೆಗೆ ಪೇಜ್ ಲೈಕ್ ಮಾಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಲೈಕ್ಗಳಿಗಾಗಿ ಕಿಡಿಗೇಡಿಗಳು ದಂಧೆಗಿಳಿದಿದ್ದಾರೆ.
ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲವು ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಇಡೀ ಹಾಸನದೆಲ್ಲೆಡೆ ಹರಿದಾಡಿತ್ತು. ಕಿಡಿಗೇಡಿಗಳು ಪ್ರಜ್ವಲ್ ರೇವಣ್ಣ ಹೆಸರು ಹಾಳು ಮಾಡುವ ಉದ್ದೇಶದಿಂದ ಹಾಸನದ ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಕಡೆ ಪೆನ್ ಡ್ರೈವ್ಗಳನ್ನು ಇಟ್ಟಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋ ಹರಿಬಿಟ್ಟಿದ್ದರು. ಮಹಿಳೆಯ ಮುಖ ಕೂಡ ಬ್ಲರ್ ಮಾಡಿರಲಿಲ್ಲ. ವಿಡಿಯೋ ವೈರಲ್ ಆದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಅದೆಷ್ಟೋ ಮಹಿಳೆಯರು ಸಾಯಲು ಯತ್ನಿಸಿದ್ದಾರೆ. ಕುಟುಂಬದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಮಾನನಷ್ಟ ಅನುಭವಿಸಿದ್ದಾರೆ. ಇದೆಲ್ಲ ಒಂದು ಕಡೆ ಆದ್ರೆ ಮತ್ತೊಂದೆಡೆ ಕೆಲ ಕಿಡಿಗೇಡಿಗಳು ಇದೇ ವಿಡಿಯೋಗಳನ್ನು ಇಟ್ಟುಕೊಂಡು ದಂಧೆಗೆ ಇಳಿದಿದ್ದಾರೆ.