ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಹೆಚ್.ಡಿ. ರೇವಣ್ಣ ಬಂಧನ

Posted by Vidyamaana on 2024-05-04 20:04:28 |

Share: | | | | |


ಹೆಚ್.ಡಿ. ರೇವಣ್ಣ ಬಂಧನ

ಬೆಂಗಳೂರು: ಲೈಂಗಿಕ ಪ್ರಕರಣ ಮತ್ತು ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಬಂಧಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಐಡಿ ಕಚೇರಿಗೆ ಕರೆತಂದಿದ್ದಾರೆ. ಇವತ್ತು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ

ಕೆ.ಆರ್ ನಗರ ಠಾಣೆಯಲ್ಲಿ‌ ದಾಖಲಾಗಿರುವ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನ ನಡೆದಿದೆ.

ಕೆಎಂಎಫ್‌ ಅಧ್ಯಕ್ಷರಾಗಿ ಸಿದ್ದರಾಮಯ್ಯ ಆಪ್ತ ಭೀಮಾ ನಾಯ್ಕ್ ಆಯ್ಕೆ

Posted by Vidyamaana on 2023-06-21 09:50:57 |

Share: | | | | |


ಕೆಎಂಎಫ್‌ ಅಧ್ಯಕ್ಷರಾಗಿ ಸಿದ್ದರಾಮಯ್ಯ ಆಪ್ತ ಭೀಮಾ ನಾಯ್ಕ್ ಆಯ್ಕೆ

ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು.ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್​ ಅವರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನ ಒಲಿದಿದೆ.


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ, ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾದರು.ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್‌, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನ ಹೊಂದಿದ್ದರು, ಆದ್ರೆ, ಭೀಮಾ ನಾಯ್ಕ್​ಗೆ ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸಿಲ್ಲ. ಇದರಿಂದ ಮತದಾನ ನಡೆಯದೇ ಭೀಮಾ ನಾಯ್ಕ್ ಅವರು​ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು, ಆದರೆ ಸಿದ್ದರಾಮಯ್ಯ ಅವರ ಆಪ್ತರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.

ಪತ್ನಿಯ ಕಿರುಕುಳ ಆರೋಪ: ಮನನೊಂದು ಸಾವಿಗೆ ಶರಣಾದ ನವವಿವಾಹಿತ ಕಿರಣ್

Posted by Vidyamaana on 2023-08-02 12:14:01 |

Share: | | | | |


ಪತ್ನಿಯ ಕಿರುಕುಳ ಆರೋಪ: ಮನನೊಂದು ಸಾವಿಗೆ ಶರಣಾದ ನವವಿವಾಹಿತ ಕಿರಣ್

ಹಾಸನ: ನವವಿವಾಹಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನಡೆದಿದೆ.

ಕಿರಣ್ ಬಿ.ಬಿ. (26) ಮೃತ ಯುವಕ. ಇನ್ನು ಮೂಲತಃ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದವನಾದ ಕಿರಣ್, ಬೇಕರಿ ನಡೆಸುತ್ತಿದ್ದ. ಕಳೆದ ಫೆ.19 ರಂದು ದಂಡಿಗನಹಳ್ಳಿ ಹೋಬಳಿಯ ವಗರಹಳ್ಳಿ ಗ್ರಾಮದ ಸ್ಪಂದನಾ (24) ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ನಂತರ ಪತ್ನಿ ಸ್ಪಂದನಾ ಸೇರಿ ಆಕೆಯ ತಂದೆ ವಾಸು, ತಾಯಿ ಗೀತಾ, ಅಜ್ಜಿ ರತ್ನಮ್ಮ ಹಣಕ್ಕಾಗಿ ಬೇಡಿಕೆಯಿಟ್ಟು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಮದುವೆಯಾಗಿ ಒಂದು ವರ್ಷವೂ ಕಳೆದಿಲ್ಲ ಅಷ್ಟರಲ್ಲಿಯೇ ಕಿರಣ್ ವಿರುದ್ಧ ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಿದ್ದ ಬಗ್ಗೆ ಕಿರಣ್ ಪೋಷಕರು ಆರೋಪ ಮಾಡಿದ್ದಾರೆ. ಇನ್ನು ಜೈಲುಪಾಲಾಗಿದ್ದ ಕಿರಣ್,ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ಎಲ್ಲಾ ಘಟನೆಯಿಂದ ಮನನೊಂದು ಜುಲೈ 31ರ ರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

Posted by Vidyamaana on 2023-10-09 08:56:05 |

Share: | | | | |


ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತವಾಗಿದೆ, ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ , ಪ್ರಾಣತ್ಯಾಗವನ್ನು ಮಾಡಿದ್ದಾರೆ. ನಮ್ಮ ದೇಶಕ್ಕೆ ಸುಲಭದಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ ಆದರೆ ನಾವಿಂದು ದೇಶದ ಇತಿಹಾಸವನ್ನು ಮರೆತು ಧರ್ಮ, ಜಾತಿಯ ಹೆಸರಿನಲ್ಲಿ ಕಚ್ಚಾಟ ನಡೆಸಿ ಭಾರತದ ಸೌಂದರ್ಯವನ್ನೇ ಹಾಳುಮಾಡುತ್ತಿದ್ದೇವೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಟ್ಟಂಪಾಡಿ ಗ್ರಾಮದ ಇರ್ದೆ ಪೇರಲ್ತಡ್ಕ ನವೀಕೃತಗೊಂಡ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲಾ ಧರ್ಮಗಳು ನ್ಯಾಯ, ಸತ್ಯ, ಅಹಿಂಸೆಯನ್ನೇ ಕಲಿಸುತ್ತದೆ, ಆದರೆ ಆ ಧರ್ಮವನ್ನು ನಂಬಿರುವ ನಾವು ನಾನು ಮೇಲು ಅವನು ಕೀಲು ಎಂಬ ದೃಷ್ಟಿಯಿಂದ ಕಚ್ಚಾಟ ಮಾಡುತ್ತಿದ್ದೇವೆ ಇದು ಸಲ್ಲದು, ಭಾರತ ವಿಶ್ವಗುರುವಾಗಬೇಕಾದರೆ ದೇಶದಲ್ಲಿ ಕೋಮು ಸೌಹಾರ್ಧತೆ ನೆಲೆಯೂರಬೇಕು, ಪ್ರತೀಯೊಬ್ಬ ಭಾರತೀಯರೂ ಒಂದೇ ತಾಯಿ ಮಕ್ಕಳಂತೆ ಬಾಳಿಬದುಕಬೇಕಾಗಿದೆ ಎಂದು ಹೇಳಿದರು.ನೊಂದವರಿಗೆ ನಾವು ಧರ್ಮ , ಜಾತಿ ನೋಡದೆ ಸಹಾಯ ಮಾಡುವ , ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ಇದ್ದಲ್ಲಿ ಮಾತ್ರ ನಮ್ಮ ಊರು ಶಾಂತಿಯ ನೆಲೆ ಬೀಡಾಗಲು ಸಾಧ್ಯ ಎಂಬುದನ್ನು ಪ್ರತೀಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು ರಾಜಕೀಯ ಲಾಭಕ್ಕೋಸ್ಕರ ಕೆಲವೊಂದು ರಾಜಕೀಯ ಪಕ್ಷಗಳು ಇಲ್ಲಿ ಕೋಮು ವಿಷ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿದೆ ಇದರ ಬಗ್ಗೆ ಜನರಲ್ಲಿ ಜಾಗೃತಿಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಮಂಜೇಶ್ವರ ಸಾಸಕರಾದ ಎಂ ಕೆ ಎಂ ಅಶ್ರಫ್‌ರವರು ಮಾತನಾಡಿ ಭಾರತದ ಜಾತ್ಯಾತೀತ ತತ್ವ ಅದು ಎಂದೆಂದೂ ಇಲ್ಲಿ ನೆಲೆ ನಿಲ್ಲಿದೆ ಅದನ್ನು ತೊಡೆದು ಹಾಕಲು ಯಾವ ಕೋಮು ಶಕ್ತಿಗೂ ಸಾಧ್ಯವಿಲ್ಲ. ದೇಶದಲ್ಲಿ ೯೦ ಶೇ. ಜನರಲ್ಲಿ ಹರಿಯುವ ರಕ್ತ ಅದು ಸೌಹಾರ್ಧತೆಯ ರಕ್ತವಾಗಿದೆ. ದೇಶದ ಮೊದಲ ಸ್ವಾತಂತರ್‍ಯ ಹೋರಾಟವನ್ನು ಆರಂಭ ಮಾಡಿದ್ದು ಓರ್ವ ಮುಸ್ಲಿಂ ಧರ್ಮಗುರುವಾಗಿದ್ದರ ಅವರಿಗೆ ಇಲ್ಲಿನ ಶೇ.೧೦೦ ಹಿಂಧೂ ಬಂಧುಗಳು ಬೆಂಬಲ ನೀಡಿದ್ದರು ಎಂಬ ಇತಿಹಾಸವನ್ನು ನಾವು ಮರೆಯಬಾರದು. ದೇಶದ ಸೌಹಾರ್ಧತೆಯನ್ನು ಹಾಳು ಮಾಡುವ ಶಕ್ತಿಗಳ ವಿರುದ್ದ ನಾವು ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದರು. ಕೆಪಿಸಿಸಿ ಸಂಯೋಜಕರಾದ ಕವು ಹೇಮನಾಥ ಶೆಟ್ಟಿ ಮಾತನಾಡಿ ಸೌರ್ಹಾರ್ಧತೆ ಎಂಬುದು ಹೃದಯದಲ್ಲಿ ಹುಟ್ಟುವಂತದ್ದು ಕೋಮುವಾದ ಮೈಗೂಡಿಸಿಕೊಂಡಲ್ಲಿ ಈ ದೇಶದಲ್ಲಿ ಬದುಕುವುದು ಕಷ್ಟ ಸಾಧ್ಯವಾಗಿದೆ. ಕೋಮುವಾದವನ್ನು ಮಾಡಿ ಜನರ ನಡುವೆ ಕಲಹ ಸೃಷ್ಟಿಸಿದವರು ಯಾವ ಸಾಧನೆಯನ್ನು ಮಾಡಿಲ್ಲ, ಇನ್ನೂ ಮಾಡುವುದು ಇಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ ಮಂಜೇಶ್ವರ ಶಾಕರಾದ ಎಂ ಕೆ ಎಂ ಅಶ್ರಫ್‌ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಸ್ವಾಗತಿಸಿದರು. ಆಸಿಫ್ ಹಾಜಿ ತಂಬುತ್ತಡ್ಕ ವಂದಿಸಿದರು.

ಗೆಳೆತನಕ್ಕೆ ಜಾತಿಯಿಲ್ಲ - ಪುಣಚದಲ್ಲೊಂದು ಸ್ಪೆಷಲ್ ಬರ್ತ್ ಡೇ ಸೆಲೆಬ್ರೇಷನ್

Posted by Vidyamaana on 2023-08-29 10:22:25 |

Share: | | | | |


ಗೆಳೆತನಕ್ಕೆ ಜಾತಿಯಿಲ್ಲ - ಪುಣಚದಲ್ಲೊಂದು ಸ್ಪೆಷಲ್ ಬರ್ತ್ ಡೇ ಸೆಲೆಬ್ರೇಷನ್

ಪುತ್ತೂರು: ಸದಾ ಕೋಮು ವಿಚಾರಕ್ಕೆ ಸುದ್ದಿಯಾಗುತ್ತಿರುವ ಕರಾವಳಿ ಭಾಗದಲ್ಲಿ ಇದೀಗ ಒಂದು ಸೌಹಾರ್ದತೆಯ ‘ಬರ್ತ್ ಡೇ’ ಆಚರಣೆ ಸಖತ್ ಸುದ್ದಿಯಾಗ್ತಿದೆ.


ವಿಟ್ಲದ ಪುಣಚದಲ್ಲಿ ಮುಸ್ಲಿಂ ಯುವಕರು ಸೇರಿಕೊಂಡು ತಮ್ಮ ಹಿಂದೂ ಗೆಳೆಯನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದರ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗ್ತಿದ್ದು, ಕೋಮು ಕುದಿಯಾಗಿರುವ ಕರಾವಳಿ ಭಾಗದಲ್ಲಿ ಸೌಹಾರ್ದತೆಯ ಸಿಂಚನಕ್ಕೆ ಸಾಕ್ಷಿಯಾಗಿದೆ.


ಪುಣಚದ ದಿವಾಕರ್ ಎಂಬ ಯುವಕನ ಜನ್ಮ ದಿನವನ್ನು ಇಲ್ಲಿನ ‘ಪಿರ್ಸತೆ ಚಂಹಿಮಾರ್ ಮುಸ್ಲಿಂ ಗ್ರೂಪ್’ನ ಸದಸ್ಯರು ಕೇಕ್ ಕತ್ತರಿಸುವ ಮೂಲಕ ಆಚರಿಸಿದ್ದಾರೆ.


ತಮ್ಮ ಹಿಂದು ಗೆಳೆಯನಿಗೆ ಬರ್ತ್ ಡೇ ಶುಭಾಶಯಗಳನ್ನು ಕೋರಿ ವಿಭಿನ್ನವಾಗಿ ಆಚರಿಸಿಕೊಂಡ ಈ ಜನ್ಮದಿನಾಚರಣೆಗೆ ಇದೀಗ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ ಗೊಳಿಸಿದ ಹೈಕೋರ್ಟು

Posted by Vidyamaana on 2023-10-04 22:05:55 |

Share: | | | | |


ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ ಗೊಳಿಸಿದ ಹೈಕೋರ್ಟು

ಬೆಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ

ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು(Praveen Nettar)ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶಿಸಿದೆ.


💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*


ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಟ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.ಮೇಲ್ಮನವಿದಾರ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ બેઈ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಪ್ರತ್ಯಕ್ಷವಾಗಿ ಹಾಜರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು. ಸಂಚು ರೂಪಿಸಲು ಯಾವುದೇ ಬಹಿರಂಗ ಕಾಣಿಸಬೇಕೇಂದೇನು ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*

ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಪೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.ಮೇಲ್ಮನವಿದಾರರು ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಮತ್ತು ಸುಗಮಗೊಳಿಸುವ ಕೆಲಸವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳ ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ ಮೇಲ್ಮನವಿಯನ್ನು ವಜಾಗೊಳಿಸಿದೆ.

💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*




Leave a Comment: