ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಪುತ್ತೂರು : ನಿಷೇದಿತ ಕೇರಳ ಲಾಟರಿ ಮಾರಾಟ : ಪಾನ್ ವಾಲ ಪೊಲೀಸ್ ವಶಕ್ಕೆ

Posted by Vidyamaana on 2024-04-02 14:45:03 |

Share: | | | | |


ಪುತ್ತೂರು : ನಿಷೇದಿತ ಕೇರಳ ಲಾಟರಿ ಮಾರಾಟ : ಪಾನ್ ವಾಲ ಪೊಲೀಸ್ ವಶಕ್ಕೆ

ಪುತ್ತೂರು : ನಿಷೇದಿತ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ ಪಡ್ನೂರು ನಿವಾಸಿ ಲಕ್ಷ್ಮಣ ಬಂಧಿತ ವ್ಯಕ್ತಿ.

ಏ.1 ರಂದು ಮಧ್ಯಾಹ್ನ ವೇಳೆ ಪುತ್ತೂರು ತಾಲೂಕು ಲಿನೆಟ್‌ ಜಂಕ್ಷನ್‌‌ನ ಬಾರ್‌ &

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ - ಸ್ಪಷ್ಠನೆ ನೀಡಿದ ಪೊಲೀಸ್ ಇಲಾಖೆ

Posted by Vidyamaana on 2024-05-17 21:46:48 |

Share: | | | | |


ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ - ಸ್ಪಷ್ಠನೆ ನೀಡಿದ ಪೊಲೀಸ್ ಇಲಾಖೆ

ಮಂಗಳೂರು : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ) ವಿಮೆಯನ್ನು ಕಡ್ಡಾಯವಾಗಿ ಹೊಂದಿರುತ್ತದೆ ಹಾಗೂ ಸದರಿ ವಿಮೆಯನ್ನು ಕಾಲ ಕಾಲಕ್ಕೆ ನವೀಕರಿಸಲಾಗಿದೆ.

ಬಿಜೆಪಿ ಮುಖಂಡ ದೇವರಾಜೇಗೌಡ ಬಿಟ್ಟರೆ ಬೇರೆ ಯಾರಿಗೂ ಪೆನ್ ಡ್ರೈವ್ ಕೊಟ್ಟಿಲ್ಲ:ಮಾಜಿ ಕಾರು ಚಾಲಕ ವಿಡಿಯೋ ಬಿಡುಗಡೆ

Posted by Vidyamaana on 2024-04-30 16:46:35 |

Share: | | | | |


ಬಿಜೆಪಿ ಮುಖಂಡ ದೇವರಾಜೇಗೌಡ ಬಿಟ್ಟರೆ ಬೇರೆ ಯಾರಿಗೂ ಪೆನ್ ಡ್ರೈವ್ ಕೊಟ್ಟಿಲ್ಲ:ಮಾಜಿ ಕಾರು ಚಾಲಕ ವಿಡಿಯೋ ಬಿಡುಗಡೆ

ಹಾಸನ, ಎ.30: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದು ತಾನು ವಿಡಿಯೋ ಇದ್ದ ಪೆನ್ ಡ್ರೈವನ್ನು ಬಿಜೆಪಿ ಮುಖಂಡ ದೇವರಾಜೇ ಗೌಡ ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್ನವರಿಗೆ ನಾನೇ ಕೊಟ್ಟಿದ್ದಾಗಿ ಸುದ್ದಿ ಹಬ್ಬಿಸುತ್ತಿದ್ದಾರೆ. ಅದೆಲ್ಲ ಸುಳ್ಳು ಎಂದು ಹೇಳಿದ್ದಾರೆ. 


ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ಕೆಲವು ವಿಚಾರಗಳನ್ನು ಹೇಳಿಕೊಂಡಿದ್ದಾನೆ. ‘ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟಿದ್ದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ದೂರವಾಗಿದ್ದೆ. ಸೇಡು ತೀರಿಸಿಕೊಳ್ಳಲು ಕಾನೂನು ಹೋರಾಟಕ್ಕೆ ಮುಂದಾಗಿದ್ದೆ

ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ವಿವೇಕ್ ಶೆಟ್ಟಿ ಶವವಾಗಿ ಪತ್ತೆ

Posted by Vidyamaana on 2024-02-04 07:39:15 |

Share: | | | | |


ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ವಿವೇಕ್ ಶೆಟ್ಟಿ ಶವವಾಗಿ ಪತ್ತೆ

ಕಾಸರಗೋಡು: ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ಯುವಕನೋರ್ವ ಬೇಕರಿ ಅಂಗಡಿಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆಯಲ್ಲಿ ನಡೆದಿದೆ.ಬಂಗ್ರಗುಡ್ಡೆಯ ವಿವೇಕ್ ಶೆಟ್ಟಿ (38) ಮೃತ ಪಟ್ಟವರು.ಬೆಳಿಗ್ಗೆ 10 ಗಂಟೆ ಸುಮಾರಿಗೆ ನೆಲ್ಲಿಕುಂಜೆ ರಸ್ತೆಯ ಬೇಕರಿ ಅಂಗಡಿಯೊಳಗಡೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶಟರ್ ಮುಚ್ಚಿರುವುದರಿಂದ ಸಂಶಯಗೊಂಡು ಸಹೋದರ ತೊರೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.


ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ವಿವೇಕ್ ಗೆ ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯ ಪ್ರಥಮ ಬಹುಮಾನ 70 ಲಕ್ಷ ರೂ. ಲಭಿಸಿತ್ತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ತಾಜ್ ಮಹಲ್ ಆವರಣದಲ್ಲಿ ರೀಲ್ : ಯುವತಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಯೋಧ Watch Video

Posted by Vidyamaana on 2024-04-07 13:42:45 |

Share: | | | | |


ತಾಜ್ ಮಹಲ್ ಆವರಣದಲ್ಲಿ ರೀಲ್ : ಯುವತಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಯೋಧ  Watch Video

ನವದೆಹಲಿ: ಆಗ್ರಾದ ತಾಜ್ ಮಹಲ್ನಲ್ಲಿ ಶನಿವಾರ ಸಿಐಎಸ್‌ಎಫ್ ಜವಾನ್ ಮತ್ತು ಮಹಿಳಾ ಪ್ರವಾಸಿಗರ ನಡುವೆ ಘರ್ಷಣೆ ಭುಗಿಲೆದ್ದಿದೆ.ವರದಿಗಳ ಪ್ರಕಾರ, ತಾಜ್ ಮಹಲ್ ಆವರಣದಲ್ಲಿ ರೀಲ್ ಚಿತ್ರೀಕರಿಸುವ ಬಗ್ಗೆ ವಾಗ್ವಾದದ ನಂತರ ಜಗಳ ಪ್ರಾರಂಭವಾಯಿತು. ಈ ಘಟನೆಯ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಮತ್ತು ಪ್ರಸ್ತುತ ವೈರಲ್ ಆಗುತ್ತಿದೆ.

ಎ.24 : ಕಲ್ಲಾರೆ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಶಿವಕೃಪಾ ಸಭಾಭವನ ಲೋಕಾರ್ಪಣೆ

Posted by Vidyamaana on 2024-04-21 08:44:30 |

Share: | | | | |


ಎ.24 : ಕಲ್ಲಾರೆ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಶಿವಕೃಪಾ ಸಭಾಭವನ ಲೋಕಾರ್ಪಣೆ

ಪುತ್ತೂರು: ಕಲ್ಲಾರೆ ಶಿವಬ್ರಾಹ್ಮಣ್ಯ (ಸ್ಥಾನಿಕ) ಸಮಾಜ ಸೇವಾ ಸಂಘ ೧೯೩೬ರಲ್ಲಿ ಸ್ಥಾಪನೆಗೊಂಡು, ಕಳೆದ೮೮ ವರ್ಷಗಳಿಂದ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ. ನೂತನವಾಗಿ ಸುಮಾರು ೧.೫೦ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ಶಿವ ಕೃಪಾ ಸಭಾಭವನದ ಲೋಕಾರ್ಪಣೆ ಏ.೨೪ರಂದು ಸಾಯಂಕಾಲ ೬.೩೦ಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಹೇಳಿದರು.



Leave a Comment: