Posted by vidyamaana on 2024-07-03 10:25:40 |
ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.
Posted by Vidyamaana on 2023-10-24 20:24:03 |
ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ.
ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಮರುನಿರ್ಮಾಣ ಮಾಡುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಉಚಿತ ಪ್ರವಾಸಿ ವೀಸಾ ನೀತಿಯನ್ನು ಪ್ರಾಯೋಗಿಕವಾಗಿ ಮಾರ್ಚ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ವಿದೇಶಾಂಗ ಸಚಿವ ಸಬ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Posted by Vidyamaana on 2024-02-08 16:48:29 |
ಪುತ್ತೂರು: ಸ್ವಂತ ಮನೆ ಹೊಂದುವ ನಿಮ್ಮ ಕನಸನ್ನು ನನಸು ಮಾಡುವ ಆಶೀರ್ವಾದ ಲಕ್ಕಿ ಸ್ಕೀಂನ ಮೊದಲ ಕಂತಿನ ಡ್ರಾ ಇಂದು (ಗುರುವಾರ) ಸಂಜೆ ನಡೆಯಲಿದೆ.
ವಿದ್ಯಮಾನ ಈ ಡ್ರಾ ಫಲಿತಾಂಶದ ನೇರ ಪ್ರಸಾರ ನಡೆಸಿಕೊಡಲಿದೆ.
ಹೌದು,ಸ್ವಂತ ಮನೆ, ಕಾರು ,ಎಲೆಕ್ಟ್ರಾನಿಕ್ಸ್ ವಸ್ತುಗಳು ಇದೆಲ್ಲವನ್ನೂ ಅತೀ ಕಡಿಮೆ ಕಂತಿನಲ್ಲಿ ಪಡೆಯುವ ಆಶೀರ್ವಾದ ಲಕ್ಕಿ ಸ್ಕೀಂ,ಕೈಗೆಟುಕುವ ಕಂತಿನಲ್ಲಿ ಪ್ರತಿ ತಿಂಗಳು ಮನೆಗೆ ಬೇಕಾಗುವ ವಸ್ತುಗಳನ್ನು ಗೆಲ್ತಾ ಇರಿ, ಇನ್ನು
ವಿಜೇತರಲ್ಲದವರು ತಲೆಗೆ ಕೈ ಹೊತ್ತು ಕುಳಿತುಕೊಳ್ಳುವ ಮಾತೇ ಇಲ್ಲ,ಯಾಕೆಂದರೆ , ಪ್ರತೀ ಸದಸ್ಯರಿಗೂ ಖಚಿತ ಉಡುಗೊರೆಯಾಗಿ, ಇನ್ವರ್ಟರು,ಸೋಫಾ ಸೆಟ್,ಟಿವಿ,ಫ್ರಿಡ್ಜ್, ವಾಷಿಂಗ್ ಮೆಷಿನ್ ಇನ್ನೂ ಅನೇಕ ಬಹುಮಾನಗಳು ಖಂಡಿತ..
ಇಷ್ಟು ಮಾತ್ರವಲ್ಲ,ಪ್ರತೀ ತಿಂಗಳು 50 ಸರ್ಪ್ರೈಸ್ ಚಿನ್ನದ ನಾಣ್ಯಗಳನ್ನು 50 ಸದಸ್ಯರಿಗೆ ನೀಡಲಾಗುತ್ತದೆ.
ಇದೀಗ ಆಶೀರ್ವಾದ 1,500 ಕ್ಕಿಂತಲೂ ಹೆಚ್ಚು ಸಂತೃಪ್ತ ಗ್ರಾಹಕರನ್ನು ಹೊಂದಿದ್ದು ಪ್ರತಿಯೊಬ್ಬ ಗ್ರಾಹಕರಿಗೂ 24/7 ಗ್ರಾಹಕ ಸೇವೆಯನ್ನು ಕೂಡ ಒದಗಿಸುತ್ತಾ ಬಂದಿದೆ.
ನಿಮ್ಮ ತಿಂಗಳ ದುಡಿಮೆಯ ಕೇವಲ ಒಂದು ಸಾವಿರ ರೂ ಹೂಡಿಕೆ ಮಾಡಿ ತಿಂಗಳ ಪ್ರತಿ ಡ್ರಾ ವಿಜೇತರಾಗಿ ಹಾಗೂ ಕನಸಿನ ಮನೆಯನ್ನು ಜೊತೆಗೆ ಎಲ್ಲಾ ಬಹುಮಾನಗಳನ್ನು ಗೆಲ್ಲಿ....ಹಾಗಾದರೆ ಇನ್ಯಾಕೆ ತಡ,ಒಂದು ಕೈ ನೋಡೇ ಬಿಡೋಣ ,ಏನಂತೀರಿ.....
ಹೆಚ್ಚಿನ ಮಾಹಿತಿಗಾಗಿ ಪುತ್ತೂರಿನಲ್ಲಿರುವ ಆಶೀರ್ವಾದ ಸಂಸ್ಥೆಗೆ ಭೇಟಿ ನೀಡಿ ಮತ್ತು ಮಾಹಿತಿಗಳನ್ನು ತಿಳಿದುಕೊಳ್ಳಿ
7022645143
7022646143
*⚡ಜೈ ತುಳುನಾಡ್ ❤️⚡*
*🚩ಮಾತ ತುಳುವಪ್ಪೆನ ಜೋಕುಳೆಗ್ ಉಡಲ್ ದಿಂಜಿ ಸೋಲ್ಮೇಲು*
*🙏🏻ಆತ್ಮೀಯರೇ,ಗೌರವ ಸೂಚಕವಾಗಿ ಮೊದಲ ಪತ್ರವನ್ನು ನಿಮ್ಮ ಮಡಿಲಿಗೆ ಅರ್ಪಿಸಿದ್ದೇನೆ ❤️*
*⚡ತುಳುನಾಡಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮನೆ ಮಾತಾಗಿರುವ ಆಶೀರ್ವಾದ⚡*
⚡ಕೊನೆಯ *3 ಬಂಪರ್ ಡ್ರಾ ಗಳಲ್ಲಿ 2bhkಯ 3 ಮನೆಗಳನ್ನು* ಗೆಲ್ಲುವ ಸುವರ್ಣಾವಕಾಶ...
⚡ಕನಸಿನ ಕಾರು *ಮಹೀಂದ್ರ ಥಾರ್ ಗೆಲ್ಲಿ...*
⚡ಚಿನ್ನದ *ನೆಕ್ಲೆಸ್* ನಿಮ್ಮದಾಗಿಸಿಕೊಳ್ಳಿ
⚡ಹಿಮಾಲಯನ್ ಬೈಕ್ ಮತ್ತು ಡಾಮಿನಾರ್ ಕೂಡ ನಿಮ್ಮದಾಗಿಸಿ
🤩 ಪ್ರತೀ ಸದಸ್ಯರಿಗೂ ಕೊನೆಯ ಖಚಿತ ಉಡುಗೊರೆಯಾಗಿ, *ಇನ್ವರ್ಟರು,ಸೋಫಾ ಸೆಟ್,ಟಿವಿ,ಫ್ರಿಡ್ಜ್, ವಾಷಿಂಗ್ ಮೆಷಿನ್* ಇನ್ನೂ ಅನೇಕ ಬಹುಮಾನಗಳು ಖಂಡಿತ..
📢ಇಷ್ಟು ಮಾತ್ರವಲ್ಲ,ಪ್ರತೀ ತಿಂಗಳು 50 ಸರ್ಪ್ರೈಸ್ ಚಿನ್ನದ ನಾಣ್ಯಗಳನ್ನು 50 ಸದಸ್ಯರಿಗೆ ನೀಡಲಾಗುತ್ತದೆ.
*📡ಫೆಬ್ರವರಿ 15 ಕ್ಕೆ ಮೊದಲ ಡ್ರಾ ,ನಿಮ್ಮ ಸ್ಥಳೀಯ ನ್ಯೂಸ್ ಚಾನೆಲ್ ನಲ್ಲಿ ನೇರ ಪ್ರಸಾರ ಇರುತ್ತದೆ📡*
*📍ನಮ್ಮ ಸಂಪೂರ್ಣ ವಿಳಾಸ ಇಲ್ಲಿದೆ,*
Opposite Shubha book store,1st floor,moideen complex Darbe,PUTTUR,D.K
574202
*ಹೆಸರು ಮತ್ತು ವಿಳಾಸ ಇಂದೇ ನೀಡಿ,*
*ನಿಮ್ಮ ಒಳ್ಳೆಯತನಕ್ಕೆ ಅದೃಷ್ಟ,* *ಇಂದಲ್ಲಾ ನಾಳೆ ಬಂದೇ ಬರುತ್ತದೆ....ಅದು ಖಂಡಿತ...*
💥ಆಶೀರ್ವಾದ ವಾಟ್ಸಪ್ ಗ್ರೂಪ್ ಸೇರಲು ಕ್ಲಿಕ್ ಮಾಡಿ
https://chat.whatsapp.com/EQZfSXbJ3Z2CjEcoHGk8ax
Posted by Vidyamaana on 2023-12-08 04:40:26 |
ಪುತ್ತೂರು: ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡು ಅವರುಗಳ ನೇತೃತ್ವದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದನ್ನು ಬಜರಂಗದಳ ಖಂಡಿಸುತ್ತದೆಯಲ್ಲದೆ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ ತಿಳಿಸಿದ್ದಾರೆ.ಮುಖ್ಯಮಂತ್ರಿಯವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಮುಸಲ್ಮಾನ ಸಮಾಜಕ್ಕೆ ಹತ್ತು ಸಾವಿರ ಕೋಟಿ ಹಣವನ್ನು ಅನುದಾನ ನೀಡುತ್ತೇನೆಂದು ಹೇಳಿದ್ದು ಕರ್ನಾಟಕದ ಮುಖ್ಯಮಂತ್ರಿ ಭಯೋತ್ಪಾದನೆಗೆ ಹಣಕಾಸು ವ್ಯವಸ್ಥೆ ಮಾಡುವ ವ್ಯಕ್ತಿಯೇ ಎಂದು ಸಂಶಯ ವ್ಯಕ್ತವಾಗುತ್ತಿದೆ. ಮತ್ತು ನಮ್ಮ ತೆರಿಗೆ ಹಣವನ್ನು ಈ ರೀತಿ ತುಷ್ಟಿಕರಣಕ್ಕೋಸ್ಕರ ಮಾತನಾಡುವುದು,ಅನುದಾನ ಘೋಷಣೆ ಮಾಡುವುದು ಬಹುಸಂಖ್ಯಾತ ಹಿಂದುಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವಹಿಂದು ಪರಿಷದ್ ಬಜರಂಗದಳ ಸಂಘಟನೆ ಡಿ.8 ರಂದು ರಾಜ್ಯಪಾಲರ ಬಳಿ ದೂರುನೀಡಿ ಕ್ರಮಕೈಗೊಳ್ಳಲು ಆಗ್ರಹಿಸಲಾಗುವುದು.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಮಾಡಿ,ಈ ರೀತಿಯ ವರ್ತನೆಯನ್ನು ನಿಲ್ಲಿಸಲು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Posted by Vidyamaana on 2024-04-20 20:38:39 |
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಘಟನೆ ನಡೆದಿದೆ.ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ.
ಶೋಭಾ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದದ್ದ ಶೋಭಾ,ಭದ್ರಪ್ಪ ಲೇಔಟ್ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದರು. ಮನೆಯಲ್ಲಿ ಆಗಾಗ್ಗೆ ಒಬ್ಬರೇ ಇರುತ್ತಿದ್ದರು
Posted by Vidyamaana on 2023-04-13 06:15:49 |
ಅಂಕೋಲಾ : ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಬಡಿದು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಭಾವಿಕೇರಿಯಲ್ಲಿ ಸಂಭವಿಸಿದೆ. ಶೋಭಾ ಗೋಪಾಲ ನಾಯಕ (28) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ.
ಸುಮಾರು 3-4 ತಿಂಗಳ ಗರ್ಭಿಣಿಯಾಗಿದ್ದ ಈಕೆ ತನ್ನ ಮನೆ ಮುಂದಿನ ಟಾರ ರಸ್ತೆ ಪಕ್ಕದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡ ವೈಭವ ನಾಯಕ ಈತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಜವರಾಯನಂತೆ ಬಂದ ರಿಕ್ಷಾ ಚಾಲಕ ಅತಿ ವೇಗ ಹಾಗೂ ನಿರ್ಲಕ್ಷದಿಂದ ತನ್ನ ವಾಹನವನ್ನು ಚಲಾಯಿಸಿ, ಮಹಿಳೆಗೆ ಜೋರಾಗಿ ಡಿಕ್ಕಿಪಡಿಸಿದ ಪರಿಣಾಮ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಗರ್ಭಿಣಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ. ಪಟ್ಟಣದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ಚಾಲಕ ಗರ್ಭಿಣಿ ಮಹಿಳೆಗೆ ಅಪಘಾತಪಡಿಸಿ ತಾನು ಚಲಾಯಿಸುತ್ತಿದ್ದ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ..ಅಪಘಾತ ಪಡಿಸಿದ ರಿಕ್ಷಾಕ್ಕೆ ಆತನೇ ಮಾಲಕನೇ ಅಥವಾ ತನ್ನ ಸಂಬಂಧಿಗಳ ರಿಕ್ಷಾವನ್ನು ಈತ ಚಾಲನೆ ಮಾಡುತ್ತಿದ್ದನೇ ಎಂಬ ಅನುಮಾನದ ಮಾತುಗಳು ಕೇಳಿ ಬರುತ್ತಿದ್ದು ಈ ಕುರಿತು ಪೊಲೀಸ್ ತನಿಖೆ ಮುಂದುವರೆದಿದೆ
Posted by Vidyamaana on 2023-07-24 07:23:21 |
ಉಡುಪಿ:ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಯುವಕ ನೀರಿಗೆ ಬೀಳುತ್ತಿರುವ ಭಯಾನಕ ದೃಶ್ಯ ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ನೀರುಪಾಲಾದ ಯುವಕ.
ನಿನ್ನೆ ಭಾನುವಾರವಾದ್ದರಿಂದ ಶರತ್ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದರು. ಬಳಿಕ ಅಲ್ಲಿಂದ ಶರತ್ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ ಅನಾಹುತ ನಡೆದು ಹೋಗಿದೆ.
ಕೂಡಲೇ ಶರತ್ ಸ್ನೇಹಿತ ಗುರುರಾಜ್ ಸಮೀಪದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿದ್ದಾರೆ .ಆದರೆ ಶರತ್ ಪತ್ತೆಯಾಗಲಿಲ್ಲ. ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು, ಕೊಲ್ಲೂರು ಪೊಲೀಸರು ಸೋಮವಾರ ಬೆಳಿಗ್ಗೆನಿಂದಲೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಈಜುಪಟು ಈಶ್ವರ್ ಮಲ್ಪೆ ಮತ್ತವರ ತಂಡವೂ ಆಗಮಿಸಿದೆ.ಶರತ್ ಸ್ವ ಉದ್ಯೋಗಿಯಾಗಿದ್ದು, ಅವರ ಸ್ನೇಹಿತ ಗುರುರಾಜ್ ಐಟಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು, ಕಳೆದ ಕೆಲ ದಿನಗಳಿಂದ ಮಳೆ ಜೋರಾಗಿ ಸುರಿಯುತ್ತಿದ್ದರಿಂದ ಅರಶಿನಗುಂಡಿ ಜಲಪಾತದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಪ್ರವೇಶ ದ್ವಾರದಲ್ಲಿರುವುದನ್ನು ಗಮನಿಸಿದ ಶರತ್ ಹಾಗೂ ಆತನ ಸ್ನೇಹಿತ ಬೇರೊಂದು ದಾರಿಯಲ್ಲಿ ಜಲಪಾತಕ್ಕೆ ತೆರಳಿದ್ದರು ಎನ್ನಲಾಗಿದೆ.
ಇನ್ನು ಶರತ್ ಸ್ನೇಹಿತ ಗುರುರಾಜ್ ಜಲಪಾತದ ದೃಶ್ಯಗಳನ್ನು ತನ್ನ ಮೊಬೈಲ್ನಲ್ಲಿಸೆರೆ ಹಿಡಿಯುತ್ತಿರುವ ವೇಳೆಯಲ್ಲೇ ಶರತ್ ಕಾಲು ಜಾರಿ ಬಿದ್ದಿದ್ದು, ಆ ದೃಶ್ಯವೂ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.