ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

ಸುದ್ದಿಗಳು News

Posted by vidyamaana on 2024-06-29 14:22:27 |

Share: | | | | |


ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

ಪುತ್ತೂರು: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಗೂಡ್ಸ್ ಹೊತ್ತ ಟೆಂಪೋ ಓಬರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಾಜಹಂಸಕ್ಕೆ ಡಿಕ್ಕಿ‌ ಹೊಡೆದು, ಹಳ್ಳಕ್ಕೆ ಬಿತ್ತು.

ಇನ್ನೊಂದೆಡೆ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾದವು.

ಸ್ಥಳದಲ್ಲಿ ಟ್ರಾಫಿಕ್ ದಟ್ಟಣೆಯಾಗಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

 Share: | | | | |


ಪುತ್ತೂರು: ಅಮಿತ್ ಶಾ ಭೇಟಿ ಹಿನ್ನೆಲೆ: ಹನುಮಗಿರಿ ದೇವಸ್ಥಾನದ ಸುತ್ತಮುತ್ತ ಹೈ ಅಲರ್ಟ್

Posted by Vidyamaana on 2023-02-10 10:09:02 |

Share: | | | | |


ಪುತ್ತೂರು: ಅಮಿತ್ ಶಾ ಭೇಟಿ ಹಿನ್ನೆಲೆ: ಹನುಮಗಿರಿ ದೇವಸ್ಥಾನದ ಸುತ್ತಮುತ್ತ ಹೈ ಅಲರ್ಟ್

ಪುತ್ತೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಹಾಗೇ ಪುತ್ತೂರಿನ ಹನುಮಗಿರಿಯ ದೇಗುಲಕ್ಕೆ ಅಮಿತ್ ಶಾ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಓರ್ವ ಎಸ್‌ಪಿ, ಐವರು ಡಿವೈಎಸ್‌ಪಿ, 10 ಇನ್ಸ್ಪೆಕ್ಟರ್‌ಗಳು ಸೇರಿದಂತೆ 500ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಭಯೋತ್ಪಾದನ ಸಂಘಟನೆ ಜೊತೆ ಸಂಪರ್ಕ ಆರೋಪ -ಡಿ 8 ರಂದು ಬಜರಂಗದಳದಿಂದ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು

Posted by Vidyamaana on 2023-12-08 04:40:26 |

Share: | | | | |


ಭಯೋತ್ಪಾದನ ಸಂಘಟನೆ ಜೊತೆ ಸಂಪರ್ಕ ಆರೋಪ -ಡಿ 8 ರಂದು ಬಜರಂಗದಳದಿಂದ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು

ಪುತ್ತೂರು: ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡು ಅವರುಗಳ ನೇತೃತ್ವದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದನ್ನು ಬಜರಂಗದಳ ಖಂಡಿಸುತ್ತದೆಯಲ್ಲದೆ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ ತಿಳಿಸಿದ್ದಾರೆ.ಮುಖ್ಯಮಂತ್ರಿಯವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಮುಸಲ್ಮಾನ ಸಮಾಜಕ್ಕೆ ಹತ್ತು ಸಾವಿರ ಕೋಟಿ ಹಣವನ್ನು ಅನುದಾನ ನೀಡುತ್ತೇನೆಂದು ಹೇಳಿದ್ದು ಕರ್ನಾಟಕದ ಮುಖ್ಯಮಂತ್ರಿ ಭಯೋತ್ಪಾದನೆಗೆ ಹಣಕಾಸು ವ್ಯವಸ್ಥೆ ಮಾಡುವ ವ್ಯಕ್ತಿಯೇ ಎಂದು ಸಂಶಯ ವ್ಯಕ್ತವಾಗುತ್ತಿದೆ. ಮತ್ತು ನಮ್ಮ ತೆರಿಗೆ ಹಣವನ್ನು ಈ ರೀತಿ ತುಷ್ಟಿಕರಣಕ್ಕೋಸ್ಕರ ಮಾತನಾಡುವುದು,ಅನುದಾನ ಘೋಷಣೆ ಮಾಡುವುದು ಬಹುಸಂಖ್ಯಾತ ಹಿಂದುಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವಹಿಂದು ಪರಿಷದ್ ಬಜರಂಗದಳ ಸಂಘಟನೆ ಡಿ.8 ರಂದು ರಾಜ್ಯಪಾಲರ ಬಳಿ ದೂರುನೀಡಿ ಕ್ರಮಕೈಗೊಳ್ಳಲು ಆಗ್ರಹಿಸಲಾಗುವುದು.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಮಾಡಿ,ಈ ರೀತಿಯ ವರ್ತನೆಯನ್ನು ನಿಲ್ಲಿಸಲು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ ನೀಟ್ ಕೋಚಿಂಗ್ ತರಗತಿ ಉದ್ಘಾಟನೆ

Posted by Vidyamaana on 2023-07-26 12:06:40 |

Share: | | | | |


ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ ನೀಟ್ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು: ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಗದ ಬಡವರ ಮಕ್ಕಳೂ ಸಿಇಟಿ, ನೀಟ್ ಪರೀಕ್ಷೆ ಬರೆದು ಉನ್ನತ ವ್ಯಾಸಂಗ ಮಾಡುವಂತಗಬೇಕು, ಪ್ರತೀಯೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಗಬೇಕೆಂಬುದೇ ನನ್ನ ಉದ್ದೇಶವಾಗಿದೆ ಇದಕ್ಕಾಗಿ ಜಿಲ್ಲೆಯಲ್ಲೇ ಪ್ರಥಮ ಬಾರಿ ಎಂಬಂತೆ ಪುತ್ತೂರಿನ ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಜು.೨೬ ರಂದು ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಶಿಕ್ಷಕರ ನೂತನ ಕೊಠಡಿ, ಗ್ರೀನ್ ಬೋರ್ಡು ಮತ್ತು ಸಿಇಟಿ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವ ಎಲ್ಲಾ ಸೌಲಭ್ಯಗಳೂ ಸರಕಾರಿ ಕಾಲೇಜಿನಲ್ಲಿ ದೊರೆಯಬೇಕು. ಸರಕಾರಿ ಕಾಲೇಜಿನಲ್ಲಿ ಯಾವುದೂ ಇಲ್ಲ ಎನ್ನುವಂತಗಬಾರದು. ಹೆಚ್ಚಾಗಿ ಬಡವರ ಮಕ್ಕಳೇ ಸರಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳು ಸೌಲಭ್ಯದ ಕೊರತೆಯಿಂದ ವಂಚತರಾಗಬಾರದು ಇದಕ್ಕಾಗಿ ನಾನು ಮೊದಲ ಬಾರಿ ಎಂಬಂತೆ ಕೋಚಿಂಗ್ ತರಗತಿಯನ್ನು ಪ್ರಾರಂಭ ಮಾಡಿಸಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಉಚಿತವಾಗಿಯೇ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡಲಾಗುವುದು ಮತ್ತು ಇದಕ್ಕಾಗಿ ಉನ್ನತ ತರಬೇತುದಾರರನ್ನು ಕರೆಸಲಾಗುವುದು ಎಂದು ಶಾಸಕರು ಹೇಳಿದರು. ಕೊಂಬೆಟ್ಟು ಸ ಪ ಪೂ ಕಾಲೇಜಿನಲ್ಲಿ ಹೊಸ ಬದಲಾವಣೆ ತರುವ ಉದ್ದೇಶವಿದ್ದು ಇದಕ್ಕಾಗಿ ಶಿಕ್ಷಕ ವೃಂದ ಮತ್ತು ಪೋಷಕರ ಸಹಕಾರವನ್ನು ಕೋರಿದರು.

ಕಾಲೇಜಿನ ಕಾರ್ಯಾಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳು ಯಾವುದೇ ಸ್ಥಾನದಲ್ಲಿದ್ದರೂ ಕಲಿತ ಶಾಲೆಯನ್ನು ಮರೆಯಬಾರದು. ತಾವು ಕಲಿತ ಶಾಲೆಗೆ ಯಾವುದಾದರೂ ಸಹಾಯ ಮಾಡುವಂತಾಗಬೇಕು, ನಮ್ಮಿಂದಾಗಿ ಒಬ್ಬ ವಿದ್ಯಾರ್ಥಿ ಭವಿಷ್ಯ ಉಜ್ವಲವಾದರೆ ಅದು ನಮಗೆ ಸಂತೋಷ ಸಂಗತಿಯಾಗಿದೆ. ಮೊದಲ ಬಾರಿಗೆ ಸರಕಾರಿ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ತರಬೇತಿ ಕೇಂದ್ರವನ್ನು ಪ್ರಾರಂಭ ಮಾಡಿರುವುದು ಗ್ರಾಮೀಣ ವಿದ್ಯಾರ್ಥಿಗಳ ಪಾಲಿಗೆ ದೊಡ್ಡ ವರದಾನವಾಗಿದೆ ಎಂದು ಹೇಳಿದರು.

ಜಿ ಎಲ್ ಆಚರ್ಯಜ್ಯುವೆಲ್ಲರ್‍ಸ್‌ನ ಲಕ್ಷ್ಮೀ ಕಾಂತ್ ಆಚಾರ್ಯ ಮಾತನಾಡಿ ನಾನು ಈ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು ಎಲ್ಲಾ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಕಾಲೇಜಿನ ಅಭಿವೃದ್ದಿಗೆ ಶ್ರಮಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಕೊಂಬೆಟ್ಟು ಕಾಲೇಜಿನಲ್ಲಿ ಕಲಿತವರೇ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ವ್ಯವಸ್ಥೆಗೆ ಬೆಂಬಲ ಸದಾ ಇರಲಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಧರ್ಣಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ಕ್ಲಾಸ್ ಹಲವು ವರ್ಷಗಳ ಕನಸಾಗಿದ್ದು ಅದು ಈಗ ನನಸಾಗಿದೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಶಾಸಕರು ಕಾಲೇಜಿನಲ್ಲಿ ಹೊಸ ಕ್ರಾಂತಿಗೆ ಮುನ್ನುಡಿಬರೆದಿದ್ದಾರೆ ಇದು ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವಂತಾಗಗಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಜೋಕಿಂ ಡಿಸೋಜಾ, ಕಾಲೇಜಿನ ಉಪಪ್ರಾಂಶುಪಾಲರಾದ ವಸಂತಮೂಲ್ಯ ಪಿ ಉಪಸ್ಥಿತರಿದ್ದರು.

ಉಪನ್ಯಾಸಕ ಗೌತಮ್ ಕೆ ಕಾಮತ್ ಸ್ವಾಗತಿಸಿದರು. ಉಪನ್ಯಾಸಕ ವಿನೋದ್ ಎ ವಂದಿಸಿದರು.ಉಪನ್ಯಾಸಕ ಪದ್ಮನಾಭ ಎಸ್ ಕಾರ್ಯಕ್ರಮ ನಿರೂಪಿಸಿದರು.

ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

Posted by Vidyamaana on 2023-05-25 04:25:36 |

Share: | | | | |


ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

ಬೆಂಗಳೂರು :ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆ ಫಲಾನುಭವಿ ಗಳಾಗಬೇಕೆಂಬ ಆಸೆಗಣ್ಣಿನಿಂದ ಕಾಯುತ್ತಿರುವ ಜನರಿಗೆ ಸಿಗುತ್ತಿಲ್ಲ ಹೊಸ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ.

ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.ರಾಜ್ಯದಲ್ಲಿ ಮೇ 14 ರಿಂದ 20ರ ನಡುವಿನ ಅವಧಿಯಲ್ಲಿ ಹೊಸ ಬಿಪಿಎಲ್ ಕಾರ್ಡ್​ಗಾಗಿ ಬರೋಬ್ಬರಿ 78 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ತುರ್ತು ಆರೋಗ್ಯ ಚಿಕಿತ್ಸೆಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾತ್ರ ಮೇ 18ರಿಂದ ವಿಲೇವಾರಿ ಮಾಡಿ ವಿತರಣೆ ಮಾಡಲಾಗುತ್ತಿದೆ. ಇನ್ನುಳಿದ ಹೊಸ ಅರ್ಜಿಗಳ ವಿಲೇವಾರಿ ಸ್ಥಗಿತಗೊಳಿಸಿದೆ. ಹೊಸ ಸರ್ಕಾರದ ಆದೇಶದ ಬಳಿಕ ಮುಂದಿನ ಅರ್ಜಿಗಳ ವಿಲೇವಾರಿ ಪ್ರಕ್ರಿಯೇ ಆರಂಭವಾಗಲಿದೆ.

2023 ಜನವರಿಗೆ ರಾಜ್ಯದಲ್ಲಿ ಬಿಪಿಎಲ್, ಅಂತ್ಯೋದಯ, ಎಪಿಎಲ್ ಸೇರಿ ಸುಮಾರು 5.28 ಕೋಟಿ ಜನರು ರೇಷನ್ ಕಾರ್ಡ್ ಫಲಾನುಭವಿಗಳಾಗಿದ್ದು, ಇವರಲ್ಲಿ ಸುಮಾರು 4.50ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ರದ್ದುಪಡಿಸಲಾಗಿದೆ. ಜತೆಗೆ ಹೊಸ ಬಿಪಿಎಲ್ ಕಾರ್ಡ್​ಗಾಗಿ ಸುಮಾರು 4.25 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಕೆಲ ಅನರ್ಹಗೊಂಡಿರುವ ಕಾರ್ಡ್​ದಾರರು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಹೊಸ ಬಿಪಿಎಲ್ ಅರ್ಜಿಗಳನ್ನು ಮರು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಬಂದ್ ಆಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ಬೇಡಿಕೆ: ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸೇಡಿಯಾಪು: ಅಪಘಾತದಿಂದ ಮೃತಪಟ್ಟ ಕುಟುಂಬಕ್ಕೆ ಶಾಸಕರಿಂದ ಸಹಾಯಧನ

Posted by Vidyamaana on 2023-08-08 01:29:06 |

Share: | | | | |


ಸೇಡಿಯಾಪು: ಅಪಘಾತದಿಂದ ಮೃತಪಟ್ಟ ಕುಟುಂಬಕ್ಕೆ ಶಾಸಕರಿಂದ ಸಹಾಯಧನ

ಪುತ್ತೂರು;  ಕೆಲವು ದಿನಗಳ ಹಿಂದೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಮೃತಪಟ್ಟಿದ್ದ ಸೇಡಿಯಾಪು ನಿವಾಸಿ ಚೈತ್ರೇಶ್ ರವರ ಕುಟುಂಬಕ್ಕೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸಹಾಯಧನವನ್ನು ವಿತರಿಸಿದರು.

ಅಪಘಾತದಿಂದ ಮೃತಪಟ್ಟ ಚೈತ್ರೇಶ್ ರವರ ತಾಯಿ ಮಂಜುಳಾ ಅವರಿಗೆ ಶಾಸಕರು ರೂ. ೨೫ ಸಾವಿರ ಮೊತ್ತವನ್ನು ವ್ಯಯುಕ್ತಿಕ ನೆಲೆಯಲ್ಲಿ ವಿತರಿಸಿದರು. ಚೈತ್ರೇಶ್ ಮನೆಗೆ ಭೇಟಿ ನೀಡಿದ್ದ ಶಾಸಕರು ಅವರ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ಕಂಡು ತನ್ನ ವ್ಯಯುಕ್ತಿಕ ನೆಲೆಯಲ್ಲಿ ಸಹಾಯ ಮಾಡುವುದಾಗಿ ಹೇಳಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ಸಹಿತ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಎಸ್ ಡಿ ಪಿ ಐ ಕುರಿಯ ಬೂತ್ ಸಮೀತಿ ವತಿಯಿಂದ ರಂಝಾನ್ ಕಿಟ್ ವಿತರಣೆ

Posted by Vidyamaana on 2023-03-24 16:34:11 |

Share: | | | | |


ಎಸ್ ಡಿ ಪಿ ಐ ಕುರಿಯ ಬೂತ್ ಸಮೀತಿ ವತಿಯಿಂದ ರಂಝಾನ್ ಕಿಟ್ ವಿತರಣೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುರಿಯ ಬೂತ್ ಸಮೀತಿ ವತಿಯಿಂದ ವರ್ಷಂಪ್ರತಿ ರಂಝಾನ್ ತಿಂಗಳಲ್ಲಿ ದಾನಿಗಳ‌ ನೆರವಿನಿಂದ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ಗಳನ್ನು ನೀಡುತ್ತಿದ್ದು ಅದೇ ರೀತಿ ಈ ಬಾರಿ ಕೂಡ ಮಾ 24 ರಂದು ಶುಕ್ರವಾರ ಸುಮಾರು 120 ರಷ್ಟು ಆಹಾರ ಕಿಟ್ ಗಳನ್ನು ನೀಡಲಾಯಿತು..

 ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ SDPI ಪುತ್ತೂರು ವಿಧಾನಸಭಾ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಹಾಗೂ SDPI ಹಿರಿಯ ನಾಯಕರಾದ PBK ಮಹಮ್ಮದ್ ಹಾಗೂ ಆರ್ಯಾಪು ಚುನಾವಣಾ ಉಸ್ತುವಾರಿಯಾದ ಅಶ್ರಫ್ ಸಂಟ್ಯಾರ್ ರವರು ಆಗಮಿಸಿ, ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು...

ಹಾಜಿ ಇಬ್ರಾಹಿಂ ಸಾಗರ್ ಮಾತನಾಡಿ ಕುರಿಯ SDPI ಯ ಯುವಕರ ಈ ಉತ್ತಮ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.ಇಂತಹ ಮಾದರಿ ಕಾರ್ಯಗಳು ಹಾಗೂ ಸಾಮಾಜಿಕ ಸೇವೆಗಳು ತಾಲೂಕಿನ ‌ಪ್ರತಿಯೊಂದು ಕಡೆಗಳಲ್ಲಿ ಕೂಡ ನಡೆಯಬೇಕಿದೆ ಕುರಿಯದ ಎಸ್ಡಿಪಿಐ ಸದಸ್ಯರಿಗೆ ಹಾಗೂ ಕಿಟ್ ನೀಡಲು ಸಹಕಾರ ನೀಡಿದ ದಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು...

ಈ ಸಂದರ್ಭದಲ್ಲಿ ಸ್ಥಳೀಯ ಎಸ್ಡಿಪಿಐ ಕಾರ್ಯಕರ್ತರಾದ ಅಶ್ರಫ್,ಝೈದ್, ಜಬ್ಬಾರ್ ಕುರಿಯ, ಜಬ್ಬಾರ್ ಅಜ್ಜಿಕಟ್ಟೆ, ಸಾದಿಕ್ ಕುರಿಯ , ಶಾಕಿರ್ ಮುಂಡೂರು,ನಿಝಾಂ ಪಂಜಳ, ಫಾರೂಕ್ ಎಸ್,,ರವುಫ್ ಕುರಿಯ,ಪವಾಝ್ ಕುರಿಯ  ಹಾಗೂ ಪಕ್ಷದ ಅಭಿಮಾನಿಗಳು ಹಾಗೂ, ಹಿತೈಷಿಗಳು ಉಪಸ್ಥಿತರಿದ್ದರು...



Leave a Comment: