ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ಸುದ್ದಿಗಳು News

Posted by vidyamaana on 2024-06-29 11:21:28 |

Share: | | | | |


ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ವಾಷಿಂಗ್ಟನ್: ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬಚ್‌ ವಿಲ್ಮೋರ್ ಅವರು ಇನ್ನು ಕೆಲ ದಿನಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿಯಲಿದ್ದಾರೆ ಎಂದು ನಾಸಾ ತಿಳಿಸಿದೆ.ಜೂನ್ 5ರಂದು ಸುನಿತಾ ಮತ್ತು ವಿಲ್ಮೋರ್‌ ಅವರಿದ್ದ ಸ್ಟಾರ್‌ಲೈನರ್‌ ನೌಕೆಯನ್ನು ಫ್ಲಾರಿಡಾದ ಕೇಪ್‌ ಕ್ಯಾನವೆರಲ್‌ ಸ್ಪೇಸ್‌ ಫೋರ್ಸ್‌ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು.

ಜೂನ್ 6ರ ಮಧ್ಯಾಹ್ನ 1.34ಕ್ಕೆ ಗಗನನೌಕೆಯನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಡಾಕ್‌ (ಕೂಡಿಕೊಳ್ಳುವ ಪ್ರಕ್ರಿಯೆ) ಮಾಡಲಾಗಿತ್ತು. 

ತಾಂತ್ರಿಕ ದೋಷಕ್ಕೆ ಕಾರಣಗಳೇನು ಎಂಬ ಬಗ್ಗೆ ಪರೀಕ್ಷೆಗಳು ನಡೆಯುತ್ತಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ನಾಸಾ ತಿಳಿಸಿದೆ. ಆದರೆ, ಗಗನಯಾತ್ರಿಗಳು ಯಾವಾಗ ಭೂಮಿಗೆ ಹಿಂದಿರುಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ನಾವು ಭೂಮಿಗೆ ಹಿಂದಿರುಗುವ ಕುರಿತಂತೆ ಆತುರಪಡುತ್ತಿಲ್ಲ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದರು.

ಡಾಕಿಂಗ್ ಮಾಡುವ ವೇಳೆ ಥ್ರಸ್ಟರ್‌ನಲ್ಲಿ(ಪ್ಯೊಪಲ್ಷನ್‌ ಮಾಡ್ಯೂಲ್‌ಗೆ ಅಗತ್ಯ ನೂಕುಬಲ ನೀಡಲು ಅಳವಡಿಸಲಾಗಿರುವ ಯಂತ್ರ) ತೊಂದರೆ ಕಾಣಿಸಿಕೊಂಡಿದೆ. ಅಲ್ಲದೇ ಉಡಾವಣೆ ವೇಳೆ ಹೀಲಿಯಂ ಸೋರಿಕೆಯೂ ಆಗಿದೆ. ಇವೆರಡರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಡಾಕಿಂಗ್ ಸಮಯದಲ್ಲಿ ಸಂಭವಿಸಿದ ಪರಿಸ್ಥಿತಿಯ ಬಗ್ಗೆ ತಿಳಿಯಲು ನ್ಯೂ ಮೆಕ್ಸಿಕೋ ಮರುಭೂಮಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಬಚ್‌ ಮತ್ತು ಸುನಿತಾ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿಲ್ಲ ಎಂದು ಸ್ವಿಚ್ ತಿಳಿಸಿದರು.

 Share: | | | | |


ಅಮೆರಿಕದ 2.1 ಮಿಲಿಯನ್ ಡಾಲರ್‌ ಮನೆಯಲ್ಲಿ ಕೇರಳ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ ; ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

Posted by Vidyamaana on 2024-02-17 21:17:57 |

Share: | | | | |


ಅಮೆರಿಕದ 2.1 ಮಿಲಿಯನ್ ಡಾಲರ್‌ ಮನೆಯಲ್ಲಿ ಕೇರಳ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ ; ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕ್ಯಾಲಿಫೋರ್ನಿಯಾ: ಕೇರಳ ಮೂಲದ ಕುಟುಂಬವೊಂದರ ಸದಸ್ಯರು ಅಮೆರಿಕದ ಕ್ಯಾಲಿಫೋರ್ನಿಯಾದ ಮನೆಯಲ್ಲಿ ಶವಗಳಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಅಲೈಸ್ ಪ್ರಿಯಾಂಕಾ (40) ಹಾಗೂ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀತನ್ ಎಂದು ಗುರುತಿಸಲಾಗಿದೆ. ಇದು ಕೊಲೆ- ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.


ಮನೆಯಲ್ಲಿ ಯಾರೂ ಫೋನ್ ಕರೆಗಳಿಗೆ ಸ್ಪಂದಿಸದ ಕಾರಣ ಅನುಮಾನಗೊಂಡ ಕುಟುಂಬದ ಸಂಬಂಧಿಕರು, ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಅದಕ್ಕೆ ಸ್ಪಂದಿಸಿದ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮೃತದೇಹಗಳು ಪತ್ತೆಯಾಗಿವೆ.


ಇಂಡಿಯನ್- ಅಮೆರಿಕನ್ ದಂಪತಿ ಆನಂದ್ ಮತ್ತು ಅಲೈಸ್ ಅವರು ತಮ್ಮ ಸ್ನಾನದ ಕೋಣೆಯಲ್ಲಿ ಗುಂಡೇಟಿನ ಗಾಯದಿಂದ ಮೃತಪಟ್ಟಿದ್ದಾರೆ. ಅವರ ಇಬ್ಬರು ಮಕ್ಕಳ ಶವಗಳು ಬೆಡ್ ರೂಂನಲ್ಲಿ ಪತ್ತೆಯಾಗಿವೆ. ಅವರ ಸಾವಿನ ಕುರಿತಾದ ತನಿಖೆ ಇನ್ನೂ ನಡೆಯುತ್ತಿದೆ.


"ಮನೆಗೆ ಆಗಮಿಸಿದ ಪೊಲೀಸರಿಗೆ ಒಳಗಿನಿಂದ ಯಾವುದೇ ಸ್ಪಂದನೆ ಬಂದಿರಲಿಲ್ಲ. ಅವರು ಮನೆಯ ಹೊರಗಿನ ಭಾಗಗಳನ್ನು ತಪಾಸಣೆ ನಡೆಸಿದರು. ಯಾರೂ ಬಲವಂತವಾಗಿ ಪ್ರವೇಶಿಸಿದ ಸುಳಿವು ಇರಲಿಲ್ಲ. ಚಿಲಕ ಹಾಕದ ಕಿಟಕಿಯನ್ನು ಕಂಡ ಪೊಲೀಸರು, ಮನೆ ಒಳಗೆ ಪ್ರವೇಶಿಸಿದರು. ಅಲ್ಲಿ ಒಳಗೆ ನಾಲ್ವರ ಶವಗಳು ಕಂಡುಬಂದಿವೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.


9 ಎಂಎಂ ಪಿಸ್ತೂಲು ಮತ್ತು ಲೋಡೆಡ್ ಮ್ಯಾಗಜಿನ್ ಬಾತ್‌ರೂಂನಲ್ಲಿ ದೊರಕಿವೆ. 2020ರಲ್ಲಿ 2.1 ಮಿಲಿಯನ್ ಡಾಲರ್‌ಗೆ ಈ ಮನೆಯನ್ನು ದಂಪತಿ ಖರೀದಿಸಿದ್ದರು.


ಇದು ಕೊಲೆ- ಆತ್ಮಹತ್ಯೆ ಪ್ರಕರಣದಂತೆ ಕಂಡುಬರುತ್ತಿದೆ. ಆದರೆ ಯಾವುದೇ ಇತರೆ ಸಾಧ್ಯತೆಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಕುಟುಂಬ ಕೇರಳ ಮೂಲದ್ದಾಗಿದ್ದು, ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಿತ್ತು. ಆನಂದ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ಅವರ ಪತ್ನಿ ಅಲೈಸ್ ಸೀನಿಯರ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರು ನ್ಯೂಜೆರ್ಸಿಯಿಂದ ಸ್ಯಾನ್ ಮಾಟೆಯೊ ಕೌಂಟಿಗೆ ಸ್ಥಳಾಂತರವಾಗಿದ್ದರು.


ಕೋರ್ಟ್ ದಾಖಲೆಗಳ ಪ್ರಕಾರ, ಪತ್ನಿಯಿಂದ ವಿಚ್ಛೇದನ ಪಡೆಯಲು ಆನಂದ್ 2016ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಬೇರ್ಪಡುವಿಕೆಯನ್ನು ಕೋರ್ಟ್ ಮಾನ್ಯ ಮಾಡಿರಲಿಲ್ಲ. ಇದರ ಬಳಿಕ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು.


ಮೆಟಾದಲ್ಲಿ ಕೆಲಸ ಮಾಡುತ್ತಿದ್ದ ಆನಂದ್, ಕಳೆದ ವರ್ಷದ ಜೂನ್‌ನಲ್ಲಿ ಅದರಿಂದ ಹೊರಬಂದು, ಲಾಜಿಟ್ಸ್ ಎನ್ನುವ ಸ್ವಂತ ಕೃತಕ ಬುದ್ಧಿಮತ್ತೆಯ ಕಂಪೆನಿಯನ್ನು ಹುಟ್ಟುಹಾಕಿದ್ದರು.

ರಾಜ್ಯದ ಜನತೆ ಗಮನಕ್ಕೆ: ಇಂದು ಗೃಹಜ್ಯೋತಿ ನೋಂದಣಿ ಗೆ ಕೊನೇ ದಿನ

Posted by Vidyamaana on 2023-07-25 06:36:06 |

Share: | | | | |


ರಾಜ್ಯದ ಜನತೆ ಗಮನಕ್ಕೆ: ಇಂದು ಗೃಹಜ್ಯೋತಿ ನೋಂದಣಿ ಗೆ ಕೊನೇ ದಿನ

ಬೆಂಗಳೂರು :ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು ಗೃಹಜ್ಯೋತಿ ಯೋಜನೆಯ ( Gruha Jyoti Scheme ) ಕೂಡ. ಈ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ( Free Electricity ) ಪ್ರಯೋಜನ ಪಡೆಯಲು ನೋಂದಾಯಿಸಿಕೊಳ್ಳಲು ಇಂದು ಕೊನೆಯ ದಿನವಾಗಿದೆ.ಇಂದು ನೋಂದಾಯಿಸಿಕೊಂಡವರಿಗೆ ಮಾತ್ರವೇ ಆಗಸ್ಟ್ ತಿಂಗಳ ಬಿಲ್ ಮೊತ್ತ 00 ಬರಲಿದೆ.


ಗೃಹಜ್ಯೋತಿ ಯೋಜನೆಗೆ ನೋಂದಣಿ ( Gruha Jyoti Registration ) ಆರಂಭಗೊಂಡ ನಂತ್ರ, ರಾಜ್ಯದಲ್ಲಿ ಈವರೆಗೆ ಇರುವಂತ ಫಲಾನುಭವಿಗಳಲ್ಲಿ ಶೇ.60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಶೇ.40ರಷ್ಟು ವಿದ್ಯುತ್ ಗ್ರಾಹಕರು ನೋಂದಣಿ ಮಾಡುವುದು ಬಾಕಿ ಉಳಿದಿದೆ ಎನ್ನಲಾಗುತ್ತಿದೆ.


ವಿದ್ಯುತ್ ಸರಬರಾಜು ಕಂಪನಿ ನೀಡಿರುವ ಮಾಹಿತಿ ಪ್ರಕಾರ 1.92 ಕೋಟಿ ಗೃಹ ಬಳಕೆದಾರರಿದ್ದು, ಇವರಲ್ಲಿ ಶೇ.90ಕ್ಕೂ ಅಧಿಕ ಜನರು ಮಾಸಿಕ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರಂತೆ. ಇವರಲ್ಲಿ 1.18 ರಿಂದ 1.20 ಕೋಟಿ ಮಂದಿ ಮಾತ್ರವೇ ನೋಂದಣಿ ಮಾಡಿಕೊಂಡಿದ್ದು, ಉಳಿದವರು ಇನ್ನೂ ನೋಂದಣಿ ಮಾಡಿಕೊಳ್ಳಬೇಕಿದೆ.ಇಂದೇ ನೋಂದಣಿಗೆ ಕೊನೆಯ ದಿನ


ಅಂದಹಾಗೇ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಮೊದಲ ತಿಂಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಜುಲೈ.25ರ ಇಂದೇ ನೋಂದಣಿಗೆ ಕೊನೆಯ ದಿನವಾಗಿದೆ.


ಇಂದು ಯಾರೆಲ್ಲಾ ಗೃಹ ಜ್ಯೋತಿಗೆ ನೋಂದಣಿ ಮಾಡಿಕೊಳ್ಳಲಿದ್ದಾರೋ ಅವರಿಗೆಲ್ಲ ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಬರಲಿದೆ. ಒಂದು ವೇಳೆ ನೋಂದಾಯಿಸಿಕೊಳ್ಳದಿದ್ದರೇ ಆಗಸ್ಟ್ ನಂತ್ರದ ತಿಂಗಳಿನ ಬಿಲ್ ಶೂನ್ಯ ಬರಲಿದೆ.


ಗೃಹಜ್ಯೋತಿ ಯೋಜನೆಗೆ ಅಂತಿಮ ಗಡುವು ನಿಗದಿ ಪಡಿಸಿಲ್ಲ. ಸೆಪ್ಟೆಂಬರ್ ನಲ್ಲಿ ಇದರ ಲಾಭ ಪಡಿಯಲು ಅವಕಾಶ ಇದೆ. ಆದ್ರೇ ಆಗಸ್ಟ್ ತಿಂಗಳಿನಲ್ಲಿ ಉಚಿತ 200 ಯೂನಿಟ್ ವಿದ್ಯುತ್ ಪ್ರಯೋಜನ ಪಡೆಯಲು ಇಂದು ನೋಂದಣಿ ಮಾಡಿಸಬೇಕಿದೆ

ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

Posted by Vidyamaana on 2024-06-25 21:18:36 |

Share: | | | | |


ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

ಬೆಂಗಳೂರು , ಜೂನ್‌ 25: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರವಾಗಿ ಕೊಲೆಯಾಗಿದ್ದು, ಈ ಪ್ರಕರಣ ಕುರಿತು ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಜೈಲುವಶವಾಗಿದ್ದಾರೆ. ಆದರೆ ಕುಟುಂಬದ ಆಧಾರವಾಗಿದ್ದ ರೇಣುಕಾಸ್ವಾಮಿಯನ್ನು ಕಳೆದುಕೊಂಡ ತಂದೆ ತಾಯಿ ಇಂದು (ಮಂಗಳವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಪುತ್ರನಿ ಸಾವಿನ ಕುರಿತು ತಂದಿ ತಾಯಿ ಇಬ್ಬರು ಕಣ್ಣೀರು ಹಾಕಿದ್ದಾರೆ. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು ಆದರೆ ಬರ್ಬರವಾಗಿ ಕೊಂದುಬಿಡುವುದು ಯಾವ ನ್ಯಾಯ ಎಂದು ಅವಲತ್ತುಕೊಂಡಿದ್ದಾರೆ.

ಕುತ್ತಾರು : ಮನೆ ಕುಸಿತದಿಂದ ನಾಲ್ವರು ಮೃತಪಟ್ಟ ಘಟನಾ ಸ್ಥಳಕ್ಕೆ ಕಂದಾಯ ಸಚಿವರು ಭೇಟಿ

Posted by Vidyamaana on 2024-06-27 08:40:07 |

Share: | | | | |


 ಕುತ್ತಾರು : ಮನೆ ಕುಸಿತದಿಂದ ನಾಲ್ವರು ಮೃತಪಟ್ಟ ಘಟನಾ ಸ್ಥಳಕ್ಕೆ ಕಂದಾಯ ಸಚಿವರು ಭೇಟಿ

ಮಂಗಳೂರು, ಜೂನ್.26: ಪ್ರಕೃತಿ ವಿಕೋಪವನ್ನು ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ. ಆದರೆ, ಮುಂಜಾಗ್ರತೆ ವಹಿಸದೆ ಇಳಿಜಾರಿನಲ್ಲಿ ಮನೆ ಕಟ್ಟಿಕೊಂಡಿರುವುದು ಇಲ್ಲಿ ಕಂಡುಬಂದಿದೆ. ಬೆಟ್ಟದ ಇಳಿಜಾರಿನಲ್ಲಿ ಈ ರೀತಿ ಮನೆ ಮಾಡಿರುವುದು ರಾಜ್ಯದಲ್ಲಿ ಸಾವಿರಾರು ಇರಬಹುದು. ಮಳೆಯ ಸಂದರ್ಭದಲ್ಲಿ ತೊಂದರೆ ಆಗಬಲ್ಲಂತಹ ಇಂತಹ ಮನೆಗಳನ್ನು ಗುರುತಿಸಿ, ಅಲ್ಲಿನ ನಿವಾಸಿಗಳಿಗೆ ಬೇರೆಡೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ

ನಾಟೆಕಲ್: ಪ್ರಪಾತಕ್ಕೆ ಉರುಳಿದ ಲಾರಿ ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2023-07-27 13:58:51 |

Share: | | | | |


ನಾಟೆಕಲ್: ಪ್ರಪಾತಕ್ಕೆ ಉರುಳಿದ ಲಾರಿ ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಳ್ಳಾಲ: ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ಇದ್ದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದೆ. ಲಾರಿಯಲ್ಲಿ ಓವರ್ ಲೋಡ್ ಇದ್ದ ಹಿನ್ನೆಲೆಯಲ್ಲಿ ಚಾಲಕ ಎದುರಿನ ಲಾರಿಗೆ ಸೈಡ್ ಕೊಡುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ವಿದ್ಯಾರ್ಥಿ ಪವನ್ ನಿಗೂಢ ಸಾವು | ಆತ್ಮಹತ್ಯೆಯ ಬಗ್ಗೆಯೇ ಗೊಂದಲ.

Posted by Vidyamaana on 2023-03-10 11:57:43 |

Share: | | | | |


ವಿದ್ಯಾರ್ಥಿ ಪವನ್ ನಿಗೂಢ ಸಾವು | ಆತ್ಮಹತ್ಯೆಯ ಬಗ್ಗೆಯೇ ಗೊಂದಲ.

ಮಂಗಳೂರು: ಏಕಾಏಕಿ ಮನೆಯಿಂದ ನಾಪತ್ತೆಯಾದ ವಿದ್ಯಾರ್ಥಿಯೋರ್ವ ಹೊಳೆಯಲ್ಲಿ ಶವವಾಗಿ ಪತ್ತೆಯಾದ ಘಟನೆಯೊಂದು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಗುರುಪುರ ಸೇತುವೆ ಹೊಳೆಯಲ್ಲಿ ಬೆಳಕಿಗೆ ಬಂದಿದೆ.

ಮೃತ ಯುವಕನನ್ನು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸಿ ಚಿರಪರಿಚಿತನಾಗಿದ್ದ ಗುರುಪುರ- ಕೈಕಂಬ ಬಳಿಯ ಕಾಜಿಲ ಎಂಬಲ್ಲಿನ ನಿವಾಸಿ ಪವನ್ ಎಂದು ಗುರುತಿಸಲಾಗಿದೆ.ಈತ ನಿನ್ನೆ ಏಕಾಏಕಿ ಮನೆಯಿಂದ ಹೊರಟು ಹೋಗಿದ್ದು, ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಆಗಿದ್ದು, ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇತ್ತ ಗಾಬರಿಗೊಂಡ ಮನೆಮಂದಿ ಹಾಗೂ ಹಿತೈಷಿಗಳು ಈತನ ಸುಳಿವು ಕಾಣಲು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ ವಿವರಗಳನ್ನು ಹರಿಯಬಿಟ್ಟಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮಧ್ಯಾಹ್ನ ಹೊತ್ತಿಗೆ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಹಾಗೂ ಪೊಲೀಸರ ಸಹಾಯದಿಂದ ಶವ ಮೇಲಕ್ಕೆ ಎತ್ತಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಾವಿನ ಸುತ್ತ ಕೆಲವೊಂದು ಅನುಮಾನಗಳು ವ್ಯಕ್ತವಾಗಿದ್ದು, ಪ್ರೀತಿಯ ವಿಚಾರವಾಗಿ ನೊಂದುಕೊಂಡು ಆತ್ಮಹತ್ಯೆ ನಡೆಸಿದ್ದಾನೆ ಎನ್ನುವ ಮಾತುಗಳು ಕೇಳಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.



Leave a Comment: