ಉಳಾಯಿಬೆಟ್ಟು ದರೋಡೆ ಪ್ರಕರಣ ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ, ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಸುದ್ದಿಗಳು News

Posted by vidyamaana on 2024-07-05 07:31:37 |

Share: | | | | |


ಉಳಾಯಿಬೆಟ್ಟು ದರೋಡೆ ಪ್ರಕರಣ  ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ,  ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.

ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.


ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.

ಮೊದಲೇ ಕೇಸ್ ಇತ್ತು

ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 Share: | | | | |


ಕಾಸರಗೋಡಿನ ವಿವಾಹಿತ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ಅತ್ಯಾಚಾರ ; ಜಿಮ್ ಟ್ರೈನರ್ ಸುಜಿತ್ ಪೊಲೀಸ್ ವಶಕ್ಕೆ

Posted by Vidyamaana on 2024-05-30 06:44:29 |

Share: | | | | |


ಕಾಸರಗೋಡಿನ ವಿವಾಹಿತ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ಅತ್ಯಾಚಾರ ; ಜಿಮ್ ಟ್ರೈನರ್ ಸುಜಿತ್ ಪೊಲೀಸ್ ವಶಕ್ಕೆ

ಮಂಗಳೂರು, ಮೇ 29: ಕೇರಳದ ಕಾಸರಗೋಡು ಮೂಲದ ವಿವಾಹಿತ ಮಹಿಳೆಯೊಬ್ಬರನ್ನು ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ಎಸಗಿದ ಬಗ್ಗೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜಿಮ್ ಟ್ರೈನರ್ ನನ್ನು ಪೊಲೀಸರು ಬಂಧಿಸಿದ್ದಾರೆ.


ಈ ಬಗ್ಗೆ ಕಾಸರಗೋಡು ಮೂಲದ 32 ವರ್ಷದ ಮಹಿಳೆ ಕದ್ರಿ ಠಾಣೆಗೆ ಮೇ 15ರಂದು ದೂರು ನೀಡಿದ್ದಾರೆ. ಮಹಿಳೆ ಎರಡು ಮಕ್ಕಳ ತಾಯಿಯಾಗಿದ್ದು, ತನ್ನ ದೇಹ ಧಡೂತಿಯಾಗಿದೆ ಎಂದು ಜಿಮ್ ಕಸರತ್ತು ಮಾಡಲು ತೆರಳುತ್ತಿದ್ದಳು. ಅಲ್ಲಿ ಜಿಮ್ ತರಬೇತುದಾರ ಸುಜಿತ್ ಎಂಬಾತನ ಜೊತೆಗೆ ಗೆಳೆತನ ಉಂಟಾಗಿತ್ತು. ಆನಂತರ, ಮಹಿಳೆ ಫಿಸ್ತುಲಾ ರೋಗ ಬಾಧೆಗೆ ಒಳಗಾಗಿದ್ದು ಮಾರ್ಚ್ 13ರಂದು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ಗೆಳೆಯನಾಗಿದ್ದ ಸುಜಿತ್ ಬಂದಿದ್ದು, ಜೊತೆಗೆ ಉಳಿದುಕೊಂಡಿದ್ದ. ಈ ವೇಳೆ ತನ್ನ ಮೇಲೆ ಬೇಡ ಎಂದರೂ ಅತ್ಯಾಚಾರ ಎಸಗಿದ್ದಾನೆಂದು ಮಹಿಳೆ ದೂರು ನೀಡಿದ್ದಾರೆ.

ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

Posted by Vidyamaana on 2024-03-18 09:42:56 |

Share: | | | | |


ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

ಬೈಂದೂರು: ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಭೂಪ ಬೈಂದೂರು ಪೊಲೀಸರ ಅತಿಥಿಯಾಗಿದ್ದಾನೆ.

ಬೈಂದೂರು ಠಾಣೆಯ ಪೊಲೀಸ್‌ ಉಪನಿರೀಕ್ಷಕ ತಿಮ್ಮೇಶ ಬಿ.ಎನ್‌. ಠಾಣೆಯಲ್ಲಿರುವಾಗ ಬಾಗಲ ಕೋಟೆಯ ಪಕೀರಪ್ಪ ಯಲ್ಲಪ್ಪ (30) ಬಂದು ಯಡ್ತರೆ ಗ್ರಾಮದ ಮಧ್ದೋಡಿ ಗೇರು ಹಾಡಿಯಲ್ಲಿ ತಲೆ ಇಲ್ಲದ ಮನುಷ್ಯನ ದೇಹ ಬಿದ್ದಿದೆ ಎಂದನು. ಪೊಲೀಸರು ಆತನ ಜತೆಯಲ್ಲಿ ಹೋಗಿ ಸಾರ್ವಜನಿಕರ ಸಹಕಾರದೊಂದಿಗೆ ಗೇರು  ಹಾಡಿಯಲ್ಲಿ ದಿನವಿಡೀ ಹುಡುಕಿದರೂ ಎಲ್ಲಿಯೂ ಮೃತದೇಹ ಕಂಡು ಬರಲಿಲ್ಲ.

ಆತನು ಬೇರೆ ಬೇರೆ ಕಡೆಯಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇದೆ, ಇಲ್ಲಿ ಇದೆ ಎಂದು ಹೇಳಿದ್ದು ಎಲ್ಲಿ ಹುಡುಕಿದರೂ ಮೃತ ದೇಹ ಕಾಣಿಸಲಿಲ್ಲ. ಮರು ದಿನವೂ ಹುಡುಕಿದ ಪೊಲೀಸರು ಸುಸ್ತಾದರು. ಸುಳ್ಳು ಮಾಹಿತಿ ನೀಡಿದ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

Posted by Vidyamaana on 2023-11-19 20:09:24 |

Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕವಾಗಿ ಸಾಗುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ 241 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ಆರಂಭದಲ್ಲಿ ಅಬ್ಬರಿಸಿದರೂ 3 ವಿಕೆಟ್ ಕಳೆದುಕೊಂಡಿದೆ.7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು. ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.


ಬುಮ್ರಾ ಎಸೆದ  ಆಫ್-ಕಟ್ಟಿಂಗ್ ನಿಧಾನಗತಿಯ ಚೆಂಡು  ಲೆಗ್ ಸೈಡ್ ಆಡಲು ಬಯಸದ ಸ್ಮಿತ್ ಅವರ ಪ್ಯಾಡ್ ಗೆ ತಾಗಿತು. ಅಂಪಾಯರ್ ಔಟ್ ನೀಡಿದರು. ಆಸಕ್ತಿದಾಯಕರಾಗಿ ಸ್ಮಿತ್ ಅದನ್ನು ಪರಿಶೀಲಿಸಲಿಲ್ಲ. ಇನ್ನೊಂದು ಬದಿಯಲ್ಲಿದ್ದ ಹೆಡ್ ಜತೆ ಮಾತನಾಡಿ ಹೊರನಡೆದರು. ಬಾಲ್ ಎತ್ತರವು ನಿಜವಾಗಿಯೂ ಒಂದು ಪ್ರಶ್ನೆಯಾಗಿತ್ತು. ಆದರೆ ರಿಪ್ಲೇ ಇಂಪ್ಯಾಕ್ಟ್ ನಲ್ಲಿ ಔಟ್ ಆಫ್ ಸ್ಟಂಪ್ ಎಂದು ಕಂಡು ಬಂದಿತು.ಅನುಭವಿ ಆಟಗಾರ ಸ್ಮಿತ್ ಅದನ್ನು ಏಕೆ ಸರಿಯಾಗಿ ಏಕೆ ಪರಿಶೀಲಿಸಲಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.ಆಸ್ಟ್ರೇಲಿಯ 22 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

Posted by Vidyamaana on 2023-11-21 07:18:37 |

Share: | | | | |


ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

ಸುರತ್ಕಲ್: ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಸೋಮವಾರ ನಡೆದಿದೆ.



ಮೃತರನ್ನು ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ವಾಸವಾಗಿರುವ ಶಾಕಿರ್‌ (30) ಎಂದು ತಿಳಿದುಬಂದಿದೆ.


ಮೃತ ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.


ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.


ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಶರತ್

Posted by Vidyamaana on 2024-03-05 21:27:17 |

Share: | | | | |


ಪ್ರೀತಿ ನಿರಾಕರಿಸಿದ  ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಶರತ್

ಹಾಸನ : ಪ್ರೀತಿ ನಿರಾಕರಿಸಿದ ಶಾಲಾ ಬಾಲಕಿಯನ್ನು ಕೊಂದು ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ. ಅರಸೀಕೆರೆ ತಾಲೂಕಿನ ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಬಾಲಕಿಯಾಗಿದ್ದು, ಶರತ್‌ (23) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು  ಭೂಮಿಕಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಶರತ್ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ವಿದ್ಯಾರ್ಥಿನಿ ಭೂಮಿಕಾ ಶಾಲೆ ಮುಗಿಸಿ ಮನೆಗೆ ಹೋಗುವಾಗ ತೋಟದಲ್ಲಿ ಆಕೆಯನ್ನು ಅಡ್ಡಗಟ್ಟಿದ ಶರತ್‌ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.


ಕೊಲೆ ಮಾಡಿದ ಬಳಿಕ ಅರಸೀಕೆರೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಛೇರಿ ಉದ್ಘಾಟನೆ.

Posted by Vidyamaana on 2023-04-17 19:58:30 |

Share: | | | | |


ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಛೇರಿ ಉದ್ಘಾಟನೆ.

ಪುತ್ತೂರು: ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಚುನಾವಣಾ ಕಚೇರಿ ಎ.17ರಂದು ಉದ್ಘಾಟನೆಗೊಂಡಿತ್ತು.ದರ್ಬೆಯ ಆರ್‌ಇಬಿ ಎಂಕೇವ್ ಕಟ್ಟಡದಲ್ಲಿರುವ ಈ ಕಛೇರಿಯಲ್ಲಿ ಅರ್ಚಕ ಹರಿಪ್ರಸಾದ್ ಬನಾರಿಯವರ ನೇತೃತ್ವದಲ್ಲಿ ಗಣಪತಿ ಹವನ, ಪೂಜಾ ವಿಧಿವಿಧಾನಗಳು ನೆರವೇರಿತು. ಬಳಿಕ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ, ಹಿರಿಯರಾದ ವಲೇರಿಯನ್ ಡಯಾಸ್ ಮೊದಲಾದವರು ದೀಪ ಬೆಳಗಿಸಿ ಕಛೇರಿಯನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಪುತ್ತೂರು ಮಹಾಲಿಂಗೇಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿಯೇ ಅಶೋಕ್ ರೈಯವರ ಪಕ್ಷದ ಕಚೇರಿಯು ಉದ್ಘಾಟನೆಗೊಳ್ಳುತ್ತಿದ್ದು ಪುತ್ತೂರಿನಲ್ಲಿ ಹಾಗೂ ರಾಜ್ಯದಲ್ಲಿ ಪಕ್ಷದ ತೇರು ಎಳೆಯುವಂತಾಗಲಿ ಎಂದರು.ಪುತ್ತೂರಿನಲ್ಲಿ 14 ಮಂದಿ ಆಕಾಂಕ್ಷಿಯಾಗಿದ್ದರು ಅವರವರ ಅಭಿಮಾನದಲ್ಲಿ ಹಲವು ಮಂದಿಯಿದ್ದರು. ಆವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾರ ಮನಸ್ಸಿಗೂ ನೋವಾಗದಂತೆ ಕೆಲಸಮಾಡಬೇಕು ಎಂದು ಶುಭ ಹಾರೈಸಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಮಾತನಾಡಿ, ಪಕ್ಷದ ಕಾರ್ಯಕರ್ತರು ಪ್ರತಿಯೊಬ್ಬರೂ ನಾನೇ ಅಭ್ಯರ್ಥಿ ಎಂಬ ಭಾವನೆಯೊಂದಿಗೆ ಚುನಾವಣಾ ಹೋರಾಟದಲ್ಲಿ ಭಾಗಿಗಳಾಗುವ ಮೂಲಕ ಪಕ್ಷದ ಗೆಲುವಿಗೆ ಕಾರಣರಾಗಬೇಕು. ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಮಾತ್ರವಲ್ಲದೆ ರಾಜ್ಯದಲ್ಲಿಯೂ ಬದಲಾವಣೆಯನ್ನು ತರುವಂತಾಗಬೇಕು. ಕಾಂಗ್ರೆಸ್ ಪಕ್ಷದ ಶಾಸಕರ ಮೂಲಕ ಪುತ್ತೂರಿನಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಬೇಕು. ವಿಜಯದ ಸಂಕೇತ ಕಚೇರಿಯಿಂದ ಪ್ರಾರಂಭವಾಗಿದ್ದು ಮೆ.13 ರ ಫಲಿತಾಂಶವು ಇದೇ ಕಚೇರಿಯಲ್ಲಿ ನಡೆಯಬೇಕು ಎಂದು ಹೇಳಿದರು.

ಬಹಳಷ್ಟು ಜವಾಬ್ದಾರಿ ನನ್ನ ತಲೆ ಮೇಲಿದೆ

ರಾಜ್ಯದಲ್ಲಿರುವ ಬಿಜೆಪಿನ ಸರಕಾರ ಭ್ರಷ್ಠಾಚಾರದಿಂದ ತುಂಬಿ ತುಳುಕಿದೆ. ಬಿಜೆಪಿಯ ಎಲ್ಲಾ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ.ಬಿಜೆಪಿ ಸರಕಾರದಲ್ಲಿ ಈಗಿರುವಷ್ಟು ಭ್ರಷ್ಟಾಚಾರ ಈ ಹಿಂದೆ ಯಾರಿಂದಲೂ ನಡೆದಿಲ್ಲ.ನಾನು ಹಣ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ. ಪಕ್ಷಕ್ಕಾಗಿ ದುಡಿಯುತ್ತೇನೆ. ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬಡವರಿಗೆ ದೊರೆಯಬೇಕಾದ 94 ಸಿಯನ್ನು ಮನೆ ಮನೆ ಹೋಗಿ ನ್ಯಾಯ ಒದಗಿಸುತ್ತೇನೆ. ಅದರಲ್ಲಿ ಯಾವುದೇ ರಾಜಿಯಿಲ್ಲ. ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರಿಗೂ ಕಾನೂನು ಬದ್ಧವಾಗಿ ದೊರೆಯಬೇಕಾದ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಪ್ರಯತ್ನಿಸುತ್ತೇನೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ನನ್ನ ಗುರಿಯಾಗಿದೆ ಎಂದ ಅವರು, ಪುತ್ತೂರಿನಲ್ಲಿ 14 ಮಂದಿ ಆಕಾಂಕ್ಷಿಗಳಿದ್ದರೂ ನನಗೆ ಅವಕಾಶ ದೊರೆತಿದೆ. ಬಹಳಷ್ಟು ಜವಾಬ್ದಾರಿ ನನ್ನ ತಲೆ ಮೇಲಿದ್ದು ನನ್ನ ಜವಾಬ್ದಾರಿ ಅರಿತು ಕೆಲಸ ಮಾಡುತ್ತೇನೆ ಎಂದರು.

.ಎ.19 - ನಾಮಪತ್ರ

ಮೇ.18 ರಂದು ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದು ಎ.19 ರಂದು ನಾಮಪತ್ರ ಸಲ್ಲಿಸಲಾಗುವುದು. ಬೆಳಿಗ್ಗೆ 9.30ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಲಿ ನಾಮಪತ್ರ ಸಲ್ಲಿಸಲಾಗುವುದು. ಮೆರವಣಿಗೆಯಲ್ಲಿ 25000ಮಂದಿ ಭಾಗವಹಿಸುವ ಮೂಲಕ ನಮ್ಮಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.ಜಿ.ಪಂ ಮಾಜಿ ಸದಸ್ಯ ಎಂ.ಎ ಮಹಮ್ಮದ್ ಮಾತನಾಡಿ ಶುಭ ಹಾರೈಸಿದರು .ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು..

Recent News


Leave a Comment: