ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಸುದ್ದಿಗಳು News

Posted by vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

 Share: | | | | |


ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದ ಸಂದರ್ಭ 10 ಲಕ್ಷ ರೂ. ದೋಚಿ ಪರಾರಿಯಾಗಿದ್ದ ಆರೋಪಿ ಇಳಂತಿಲ ಮುಸ್ತಫಾ ಬಂಧನ

Posted by Vidyamaana on 2023-03-24 03:17:38 |

Share: | | | | |


ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದ ಸಂದರ್ಭ 10 ಲಕ್ಷ ರೂ. ದೋಚಿ ಪರಾರಿಯಾಗಿದ್ದ ಆರೋಪಿ ಇಳಂತಿಲ ಮುಸ್ತಫಾ ಬಂಧನ

ಉಪ್ಪಿನಂಗಡಿ: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಅವರಿಂದ 10 ಲಕ್ಷ ರೂ.ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ಮುಸ್ತಫಾ (41.) ಬಂಧಿತ ಆರೋಪಿ, ಆತನಿಂದ 9 ಲಕ್ಷ ರೂ.ಹಣವನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ತಿಳಿದು ಬಂದಿದೆ.

ಇದೇ ಪ್ರಕರಣದ ಇನ್ನೋರ್ವ ಆರೋಪಿ ಒಂದು ಲಕ್ಷ ರೂಪಾಯಿಯೊಂದಿಗೆ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಸೋಮವಾರ ಇಳಂತಿಲ ಗ್ರಾಮದ ಪೆದಮಲೆಯ ಸರಳೀಕಟ್ಟೆ ರಿಫಾಯಿನಗರ ರಸ್ತೆಯಲ್ಲಿ ಈ ಪ್ರಕರಣ ನಡೆದಿದ್ದು ಕಾಯರ್ಪಾಡಿ ನಿವಾಸಿ ಮಹಮ್ಮದ್ ಪತ್ನಿ ಜೊತೆ ಮಗಳ ಮದುವೆಗೆ ಚಿನ್ನ ಖರೀದಿಸಲು ಹತ್ತು ಲಕ್ಷ ರೂ.ಹಣವನ್ನು ತೆಗೆದುಕೊಂಡು ಉಪ್ಪಿನಂಗಡಿಯ ಜ್ಯುವೆಲ್ಲರಿಗೆ ಹೋಗುವಾಗ ಹಣ ದೋಚಿ ಪರಾರಿಯಾಗಿದ್ದ.

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ನೇಣಿಗೆ ಶರಣು..!!

Posted by Vidyamaana on 2023-03-09 08:47:17 |

Share: | | | | |


ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ನೇಣಿಗೆ ಶರಣು..!!

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಶರಣಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. 

ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜ್‌ಗೆಂದು ಹೊರಟು ಹೋಗಿ ಏನೋ ಮರೆತು ಹೋಗಿದ್ದೇನೆಂದು ವಾಪಾಸ್ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..ವೈಷ್ಣವಿ ರವರ ತಂದೆ ಚಂದ್ರಶೇಖರ್ ರವರು ರಾಮಕುಂಜ ಶಾಲೆಯಲ್ಲಿ ಶಿಕ್ಷಕರಾಗಿದ್ದು, ತಾಯಿ ಸೌಮ್ಯ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ ಜು 02

Posted by Vidyamaana on 2023-07-02 02:13:16 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 02

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 2 ರಂದು..

ಬೆಳಿಗ್ಗೆ 10 ಗಂಟೆಗೆ ಬನ್ನೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಳ ವೀಕ್ಷಣೆ

10.30 ಬನ್ನೂರು ಕುಂಟ್ಯಾನ ದೇವಳದ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ 

 ಭಾಗವಹಿಸಲಿದ್ದಾರೆ.

ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Posted by Vidyamaana on 2023-10-02 07:54:25 |

Share: | | | | |


ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC  ಏಜೆಂಟ್ ನಾರಾಯಣ ಕುಲಾಲ್  ಆತ್ಮಹತ್ಯೆ

ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅ 02 ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.


    ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.


  ಅ 2 ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.


   ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.


   ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ.

ಪ್ರಸಾದ ವಿತರಣೆ ವಿಚಾರದಲ್ಲಿ ಜಗಳ ಬಿಜೆಪಿ ಯುವ ಮುಖಂಡ ಪ್ರವೀಣ್ ಕಮ್ಮಾರ ಹತ್ಯೆ.

Posted by Vidyamaana on 2023-04-19 15:55:32 |

Share: | | | | |


ಪ್ರಸಾದ ವಿತರಣೆ ವಿಚಾರದಲ್ಲಿ ಜಗಳ ಬಿಜೆಪಿ ಯುವ ಮುಖಂಡ ಪ್ರವೀಣ್  ಕಮ್ಮಾರ ಹತ್ಯೆ.

ಧಾರವಾಡ: ಗ್ರಾಮದ ಜಾತ್ರೆಯಲ್ಲಿ ಪ್ರಸಾದ ವಿತರಣೆಗೆ ನಡೆದ ಜಗಳ ಕೋಟೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ, ಬಿಜೆಪಿ ಯುವ ಮುಖಂಡ ಪ್ರವೀಣ ಕಮ್ಮಾರ ಹತ್ಯೆಯಲ್ಲಿ ಅಂತ್ಯ ಕಂಡಿದೆ.ಗ್ರಾಮದ ಇನ್ನೋರ್ವ ಬಿಜೆಪಿ ಕಾರ್ಯಕರ್ತ ರಾಘವೇಂದ್ರ ಪಟಾತ್ ಸೇರಿ ಆರು ಜನರ ಗುಂಪು ಈ ಕೃತ್ಯ ಎಸಗಿದೆ. ಪ್ರವೀಣ ಹತ್ಯೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಶೋಧ ಕಾರ್ಯವೂ ನಡೆದಿದೆ. ಮಂಗಳವಾರ ಗ್ರಾಮದ ಉಡಚಮ್ಮದೇವಿ ಜಾತ್ರೆಯಲ್ಲಿ ಪ್ರಸಾದ ವಿತರಣೆಗೆ ಎರಡು ಗುಂಪುಗಳ ಮಧ್ಯೆ ನಡೆದ ಜಗಳವನ್ನು ಕೋಟೂರು ಗ್ರಾಪಂ ಉಪಾಧ್ಯಕ್ಷ ಪ್ರವೀಣ ಮದ್ಯ ಪ್ರವೇಶಿಸಿ ಬಗೆ ಹರಿಸಿದ್ದರು ಎಂದು ಪ್ರತ್ಯಕ್ಷದರ್ಶಿ ಗ್ರಾಮಸ್ಥರು ತಿಳಿಸಿದ್ದಾರೆ.ಆದರೆ ನಂತರ ಕುಡಿದ ಅಮಲಿನಲ್ಲಿದ್ದ ರಾಘವೇಂದ್ರ ಪಟಾದ್ ಮತ್ತು ಸಹಚರರು ಪ್ರವೀಣಗೆ ಚಾಕುವಿನಿಂದ ಇರಿದಿದ್ದು, ತಕ್ಷಣ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬುಧವಾರ ಪ್ರವೀಣ ಮೃತಪಟ್ಟಿದ್ದಾನೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಹಾಗೂ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ ತಿರುವು:

ಚುನಾವಣೆಯ ಹೊತ್ತಿನಲ್ಲಿ ಪ್ರವೀಣ ಕಮ್ಮಾರ ಹತ್ಯೆ ಪ್ರಕರಣ ಇದೀಗ ರಾಜಕೀಯ ತೀರುವು ಪಡೆದಿದೆ. ಹತ್ಯೆಯ ಪ್ರಮುಖ ಆರೋಪಿ ರಾಘವೇಂದ್ರ ಪಟಾತ್ ಬಿಜೆಪಿ ಕಾರ್ಯಕರ್ತನಾಗಿದ್ದಾನೆ. ಅಲ್ಲದೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಶಾಸಕ ಅಮೃತ ದೇಸಾಯಿ ಅವರಿಗೆ ಆಪ್ತನಾಗಿದ್ದಾನೆ ಎನ್ನಲಾಗಿದೆ. ಆದರೆ ಇತ್ತಿಚೇಗೆ ಬಿಜೆಪಿ ಪಕ್ಷ ತೊರೆದ ರಾಘವೇಂದ್ರ, ಬಸವರಾಜ ಕೊರವರ ನೇತೃತ್ವದ ಜನಜಾಗೃತಿ ಹೋರಾಟ ವೇದಿಕೆ ಸೇರಿದ್ದ ಎನ್ನಲಾಗುತ್ತಿದೆ. ಪಟಾತ್, ಧಾರವಾಡ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಓಬಿಸಿ ಘಟಕದ ಉಪಾಧ್ಯಕ್ಷನಾಗಿದ್ದಾನೆ. ಜಿಲ್ಲೆಯ ಎಲ್ಲಾ ಬಿಜೆಪಿ ಹಿರಿಯ ನಾಯಕರ ಜತೆ ಒಡನಾಟ ಹೊಂದಿದ್ದಾನೆ ಎನ್ನುತ್ತಿದ್ದಾರೆ ಕೋಟೂರು ಗ್ರಾಮಸ್ತರು. ಇನ್ನೊಂದೆಡೆ ಇದು ಜಾತಿ ಜಗಳ ಎಂದು ಕೂಡ ಚರ್ಚಿಸಲಾಗುತ್ತಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ ಕಮ್ಮಾರ ಹತ್ಯೆ, ರಾಜಕೀಯ ಕೊಲೆ. ಸೂಕ್ತ ತನಿಖೆಗೆ ಪೊಲೀಸರಿಗೆ ಸೂಚಿಸಿದೆ. ಪ್ರವೀಣ ಕುಟುಂಬಕ್ಕೆ ಪರಿಹಾರ ನೀಡುವ ಜತೆ ನ್ಯಾಯ ಕೊಡಿಸಲಾಗುವುದು.

– ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರು

ಕೋಟೂರು ಗ್ರಾಮದ ಜಾತ್ರೆಯಲ್ಲಿ ಕುಡಿದು ಕೆಲವರು ಗಲಾಟೆ ಮಾಡಿದ್ದು, ಗಲಾಟೆ ಬಿಡಿಸಲು ಹೋದ ಪ್ರವೀಣ ಕಮ್ಮಾರ ಅವರನ್ನೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಪ್ರಕರಣದಡಿ ಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆದಿದೆ. ಇನ್ನೂ ಮೂವರ ಬಂಧನಕ್ಕೆ ಶೋಧ ನಡೆದಿದೆ.

– ಲೋಕೇಶ ಜಗಳಾಸರ, ಎಸ್ಪಿ,ಧಾರವಾಡ

ಗ್ರಾ.ಪಂ.ರಾಜಕೀಯಕ್ಕೆ ಕೊಲೆ

ಇನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷನಾಗಿದ್ದ ಪ್ರವೀಣ ಕಮ್ಮಾರ್ ಗುತ್ತಿಗೆ ಕಾಮಗಾರಿ ಮಾಡುತ್ತಿದ್ದ ರಾಘವೇಂದ್ರ ಪಠಾತ್‌ಗೆ ಕಾಮಗಾರಿ ಸರಿಯಾಗಿ ಮಾಡುತ್ತಿಲ್ಲ ಎಂದು ನೀಡಿರಲಿಲ್ಲ ಎನ್ನಲಾಗಿದೆ. ಅದೂ ಅಲ್ಲದೇ ಈ ಹಿಂದೆ ಗ್ರಾ.ಪಂ.ಅಧ್ಯಕ್ಷನಾಗಿದ್ದ ಶಂಕರಯ್ಯ ಮಠಪತಿ ಅವರು ಗ್ರಾ.ಪಂ.ನ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ನೇಮಿಸಿದ್ದ ಗೀತಾ ಬಾರಿಕೇರ ಎಂಬುವವರನ್ನು ಪ್ರವೀಣ ಕೆಲಸದಿಂದ ತೆಗೆದು ಹಾಕಿದ್ದ ಎನ್ನಲಾಗಿದೆ. ಇದರ ಇಂತಹ ಇನ್ನಿತರ ಗ್ರಾ.ಪಂ.ರಾಜಕೀಯ ವಿಚಾರಗಳು ಸೇಡಿನ ರೂಪತಾಳಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಪೊಲೀಸ್ ಇಲಾಖೆಗೆ ಸರ್ಜರಿ

Posted by Vidyamaana on 2023-05-30 07:42:43 |

Share: | | | | |


ಪೊಲೀಸ್ ಇಲಾಖೆಗೆ ಸರ್ಜರಿ

ಬೆಂಗಳೂರು: ನೂತನ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಸರ್ಜರಿ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ನೂತನ ಕಮಿಷನರ್ ಆಗಿ ಬಿ.ದಯಾನಂದ ಅವರನ್ನು ನೇಮಿಸಲಾಗಿದೆ.ಎಡಿಜಿಪಿ ಮತ್ತು ನಗರ ಟ್ರಾಫಿಕ್ ವಿಶೇಷ ಆಯುಕ್ತರಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ಬೆಂಗಳೂರು ಅಪರಾಧ ತನಿಖೆ ವಿಭಾಗ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಯಾಗಿ ವರ್ಗಾವಣೆ ಮಾಡಿ ನೇಮಿಸಲಾಗಿದೆಬೆಂಗಳೂರು ಅಪರಾಧ ತನಿಖೆ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ ಶರತ್ ಚಂದ್ರ ಅವರನ್ನು ಇಂಟಲಿಜೆನ್ಸ್ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

Recent News


Leave a Comment: