ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

Posted by Vidyamaana on 2023-05-21 13:55:04 |

Share: | | | | |


ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು : ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ , ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಕಾಂಗ್ರೆಸ್ ನವರು ಸಿಎಂ ಸಂಪುಟ ಸಭೆಯಲ್ಲಿ ಗ್ಯಾರೆಂಟಿ ಜಾರಿಗೆ ಬಗ್ಗೆ ಒಪ್ಪಿಗೆ ಪಡೆದಿದ್ದು, ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಭರವಸೆಗಳು ನಮಗೆ ಹಿನ್ನಡೆಯಾಗಿದೆ, ಹಾಗಂತ ನಾವು ಟೀಕೆ ಟಿಪ್ಪಣಿ ಮಾಡಲ್ಲ. ಕಾಂಗ್ರೆಸ್ ಎಲ್ಲಾ ಭರವಸೆಗಳನ್ನು ಈಡೇರಿಸಲಿ, ಇದರಿಂದ ಜನರಿಗೆ ಒಳ್ಳೆಯಾದರೆ ಸಾಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಬಿಜೆಪಿ ಹಗರಣಗಳ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂಬ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಯಾವುದೇ ಹಗರಣ ಇದ್ದರೂ ತನಿಖೆ ಮಾಡಲಿ ಎಂದರು. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದರು.

ನಿಮ್ಮ ಮೊಬೈಲ್‌ ಬೇಗ ಚಾರ್ಜ್‌ ಆಗ್ಬೇಕು ಅಂದ್ರೆ ಈ ಸೆಟ್ಟಿಂಗ್ ಬದಲಾಯಿಸಿ ನೋಡಿ

Posted by Vidyamaana on 2023-08-06 09:31:21 |

Share: | | | | |


ನಿಮ್ಮ ಮೊಬೈಲ್‌ ಬೇಗ ಚಾರ್ಜ್‌ ಆಗ್ಬೇಕು ಅಂದ್ರೆ ಈ ಸೆಟ್ಟಿಂಗ್ ಬದಲಾಯಿಸಿ ನೋಡಿ

ಬೆಂಗಳೂರು : ಮೊಬೈಲ್ ಫೋನ್ ನಮಗೆ ಬಹಳ ಮುಖ್ಯವಾದ ದೈನಂದಿನ ಅಂಶವಾಗಿದೆ. ನಾವು ಒಂದು ದಿನವೂ ಮೊಬೈಲ್ ಇಲ್ಲದೆ ಇರಲು ಸಾಧ್ಯವಿಲ್ಲ. ಮೊಬೈಲ್ ಇಲ್ಲದೇ ಹೋದರೆ ನಮ್ಮ ಹಲವು ಕೆಲಸಗಳು ಸ್ಥಗಿತಗೊಳ್ಳುತ್ತವೆ. ನಾವು ನಮ್ಮ ಪ್ರತಿಯೊಂದು ಸಣ್ಣ ಮತ್ತು ದೊಡ್ಡ ಕೆಲಸಕ್ಕೆ ಮೊಬೈಲ್ ಅನ್ನು ಅವಲಂಬಿಸಿರುತ್ತೇವೆ.ಆದರೆ, ಹಲವು ಬಾರಿ ಮೊಬೈಲ್ ಚಾರ್ಜ್ ಆಗದೇ ಇರುವುದರಿಂದ ಸಮಸ್ಯೆ ಹೆಚ್ಚುತ್ತದೆ. ಕೆಲವೊಮ್ಮೆ ಫೋನ್ ಚಾರ್ಜಿಂಗ್ ತುಂಬಾ ನಿಧಾನವಾಗಿರುತ್ತದೆ. ಆದರೆ, ಒಂದು ಉಪಾಯದಿಂದ ನೀವು ನಿಮ್ಮ ಮೊಬೈಲ್ ಅನ್ನು ವೇಗವಾಗಿ ಚಾರ್ಜ್ ಮಾಡಬಹುದು. ನಿಮ್ಮ ಫೋನ್‌ನ ಸೆಟ್ಟಿಂಗ್‌ನಲ್ಲಿ ಬದಲಾವಣೆ ಮಾಡುವ ಮೂಲಕ, ಕೆಲವೇ ನಿಮಿಷಗಳಲ್ಲಿ ನಿಮ್ಮ ಫೋನ್ ಅನ್ನು ನೀವು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು. ಅದೇಗೆ ಅಂತಾ ಇಲ್ಲಿ ನೋಡೋಣ ಬನ್ನಿ.


ಫೋನ್‌ನ ಈ ಸೆಟ್ಟಿಂಗ್‌ನಿಂದ ವೇಗವಾಗಿ ಹೀಗೆ ಚಾರ್ಜ್ ಮಾಡಿ


1. ಮೊದಲು ಫೋನ್ ಸೆಟ್ಟಿಂಗ್‌ನಲ್ಲಿ ʻAbout phoneʼಗೆ ಹೋಗಿ.

2. ಇಲ್ಲಿ ಕೆಳಭಾಗದಲ್ಲಿ ನೀವು ʻBuild numberʼಅನ್ನು 7-8 ಬಾರಿ ಟ್ಯಾಪ್ ಮಾಡಬೇಕು.

3. ಇದರ ನಂತರ ʻDeveloper optionsʼ ಬರುತ್ತವೆ. ಈ ಆಯ್ಕೆಯಲ್ಲಿ ಫೋನ್‌ಗೆ ಸಂಬಂಧಿಸಿದ ಹಲವುರಹಸ್ಯ ಸೆಟ್ಟಿಂಗ್‌ಗಳಿವೆ.

4. ಈಗ ʻDeveloper optionsʼಅನ್ನು ತೆರೆಯಿರಿ.

5. ʻDeveloper optionsʼನಲ್ಲಿ ಕೆಳಭಾಗದಲ್ಲಿರುವ ʻNetworkingʼ ಆಯ್ಕೆಯಲ್ಲಿ ʻSelect USB configurationʼ ಅನ್ನು ಆಯ್ಕೆಮಾಡಿ ಆಯ್ಕೆಯನ್ನು ತೆರೆಯಿರಿ.

6. ಇದರಲ್ಲಿ MTP ಸ್ವಯಂ ಆಯ್ಕೆಯಾಗಿದೆ, ಅಲ್ಲಿಂದ ನೀವು ʻChargingʼಅನ್ನು ಆಯ್ಕೆ ಮಾಡಬೇಕು.

7. ಚಾರ್ಜಿಂಗ್ ಅನ್ನು ಆಯ್ಕೆ ಮಾಡಿದ ನಂತರ, ಫೋನ್ ಮೊದಲಿಗಿಂತ ವೇಗವಾಗಿ ಚಾರ್ಜ್ ಮಾಡಲು ಪ್ರಾರಂಭಿಸುತ್ತದೆ.

BREAKING :ರಾಜ್ಯದಲ್ಲಿ ಡೆಂಗ್ಯೂ ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಯೇ ಬಲಿ

Posted by Vidyamaana on 2024-06-13 20:00:22 |

Share: | | | | |


BREAKING :ರಾಜ್ಯದಲ್ಲಿ ಡೆಂಗ್ಯೂ ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಯೇ ಬಲಿ

ಶಿವಮೊಗ್ಗ : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ

Posted by Vidyamaana on 2024-04-03 16:35:43 |

Share: | | | | |


ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ


ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು : ಸಂಸದ ನಳಿನ್ ಕುಮಾರ್ ಕಟೀಲ್| ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ಕನಸುಗಳು ನನಸಾಗುವ ಕಾಲಘಟ್ಟದಲ್ಲಿದ್ದು, ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಶತಸಿದ್ಧ ಎಂದು ಹೇಳಿದ ಅವರು, ಕಳೆದ ಬಾರಿ 2.70 ಲಕ್ಷ ಮತಗಳಿಂದ ಸಂಸದನಾಗಿ ನಾನು ಆಯ್ಕೆಯಾಗಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಜತೆಗೆ ಪುತ್ತೂರಿನಲ್ಲಿ 70 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಡುವ ಪ್ರಯತ್ನವನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.


ಮ್ಯಾನ್ಮಾರ್ ಜೊತೆಗಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿದ ಭಾರತ

Posted by Vidyamaana on 2024-02-08 16:24:36 |

Share: | | | | |


ಮ್ಯಾನ್ಮಾರ್ ಜೊತೆಗಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿದ ಭಾರತ

ನವದೆಹಲಿ: ಭಾರತದ ಗಡಿಗಳನ್ನು ಭದ್ರಪಡಿಸುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದ ನಂತರ ಮ್ಯಾನ್ಮಾರ್ ನೊಂದಿಗಿನ ಮುಕ್ತ ಸಂಚಾರ ಆಡಳಿತವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವಾಲಯ ಗುರುವಾರ ಪ್ರಕಟಿಸಿದೆ.ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲಿಫ್ಟ್​ನಲ್ಲಿ ಸಿಲುಕಿಕೊಂಡ ಅಂಪೈರ್​, ತಡವಾಗಿ ಆರಂಭಗೊಂಡ ಪಂದ್ಯ

Posted by Vidyamaana on 2023-12-28 16:58:38 |

Share: | | | | |


ಲಿಫ್ಟ್​ನಲ್ಲಿ ಸಿಲುಕಿಕೊಂಡ ಅಂಪೈರ್​, ತಡವಾಗಿ ಆರಂಭಗೊಂಡ ಪಂದ್ಯ

ಸಿಡ್ನಿ: ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಅಂಪೈರ್​ ಲಿಫ್ಟ್​ನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಇದರಿಂದ ಪಂದ್ಯ ಕೆಲ ಕಾಲ ತಡವಾಗಿ ಆರಂಭಗೊಂಡಿದೆ. ರಿಚರ್ಡ್ ಇಲಿಂಗ್‌ವರ್ತ್(Richard Illingworth) ಲಿಫ್ಟ್‌ನಲ್ಲಿ ಸಿಲುಕಿಕೊಂಡ ಅಂಪೈರ್​ ಆಗಿದ್ದಾರೆ.

ಈ ವಿಡಿಯೊ ವೈರಲ್​(Viral Video) ಆಗಿದೆ.

ಈ ವಿಡಿಯೊ ವೈರಲ್​(Viral Video) ಆಗಿದೆ.

ಮಳೆ, ಮಂದ ಬೆಳಕು ಹೀಗೆ ಹಲವು ಕಾರಣಗಳಿಂದ ಪಂದ್ಯ ವಿಳಂವವಾಗುವು ಸರ್ವೇ ಸಾಮಾನ್ಯ ಆದರೆ, ಅಂಪೈರ್​ ಅವರಿಂದಾಗಿ ಪಂದ್ಯ ತಡವಾಗಿ ಆರಂಭಗೊಂಡಿದ್ದು ಇದೇ ಮೊದಲು. ಸುಮಾರು 5 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.ಭೋಜನ ವಿರಾಮದ ಬಳಿಕ ಮತ್ತೆ ಕಾರ್ಯ ನಿರ್ವಹಿಸಲು ಮುಂದಾಗಿದ್ದ ಮೂರನೇ ಅಂಪೈರ್​ ಇಲ್ಲಿಂಗ್​ವರ್ತ್ ಲಿಫ್ಟ್‌ನಲ್ಲಿ ಸಿಲುಕಿಕೊಂಡರು. ತಾಂತ್ರಿಕ ಕಾರಣದಿಂದಾಗಿ ಲಿಫ್ಟ್‌ ಕೆಟ್ಟುಹೋಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಅಧಿಕಾರಿಗಳು ಲಿಫ್ಟ್‌ ಸರಿಪಡಿಸಿ ಇಲಿಂಗ್‌ವರ್ತ್ ಅವರನ್ನು ಹೊರಬರುವಂತೆ ಮಾಡಿದ್ದಾರೆ. ಲಿಫ್ಟ್​ನಿಂದ ಹೊರ ಬಂದ ಬಳಿಕ ಅವರು ನಗುತ್ತಲೇ ಮೈದಾನದತ್ತ ಕೈ ಬೀಸಿದರು.


ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 318 ರನ್ ಗಳಿಸಿ ಆಲೌಟ್​ ಆಯಿತು. ಗುರಿ ಬೆನ್ನಟ್ಟಿದ ಪಾಕ್​ 264 ಸರ್ವಪತನ ಕಂಡಿತು. ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್​ ನಡೆಸುತ್ತಿರುವ ಆಸ್ಟ್ರೇಲಿಯಾ 6 ವಿಕೆಟ್​ಗೆ 187 ರನ್​ಗಳಿಸಿದೆ. 241 ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ 2 ದಿನದ ಆಟ ಬಾಕಿ ಇದ್ದು ಆಸೀಸ್​ ಗೆಲ್ಲುವ ಎಲ್ಲ ಸೂಚನೆಯೂ ಲಭ್ಯವಾಗಿದೆ. ಒಂದೊಮ್ಮೆ ಪಾಕಿಸ್ತಾನ ಈ ಪಂದ್ಯವನ್ನು ಡ್ರಾ ಮಾಡಿಕೊಂಡರೆ, ಆಗ ಪಾಕ್​ ಹೋರಾಟವನ್ನು ಮೆಚ್ಚಲೇ ಬೇಕು.ಪಾಕಿಸ್ತಾನದ ಕ್ರಿಕೆಟಿಗರು (Pakistan Cricket Team) ಮೈದಾನದಲ್ಲಿ ಮಾಡುವ ಅವಾಂತರಗಳು ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಇಂಥ ಘಟನೆಗಳಿಗೆ ಛೀಮಾರಿ ಹಾಕಿಸಿಕೊಂಡ ಬಳಿಕವೂ ಅವರು ಪಾಠ ಕಲಿಯುವುದಿಲ್ಲ. ಮೊಸದಾಟ ಹಾಗೂ ಇನ್ನಿತರ ಅಕ್ರಮಗಳ ವಿಚಾರಕ್ಕೆ ಬಂದಾಗಲೂ ಆ ದೇಶದ ಕ್ರಿಕೆಟ್​ ಕುಖ್ಯಾತಿ ಪಡೆದುಕೊಂಡಿದೆ. ಮೊದಲೇ ಪ್ರಾಮಾಣಿಕತೆ ಮತ್ತು ಪಾಕಿಸ್ತಾನದ ಕ್ರಿಕೆಟ್​ಗೆ ಎಣ್ಣೆ- ಸೀಗೆಕಾಯಿ ಸಂಬಂಧವಾಗಿರುವ ಕಾರಣ ಅಲ್ಲಿನ ಆಟಗಾರರ ಬಗ್ಗೆ ಅಂಪೈರ್​ಗಳು ಹಾಗೂ ರೆಫರಿಗಳಿಗೆ ಒಂದಿಷ್ಟು ಹೆಚ್ಚು ಅನುಮಾನ. ಅಂಥದ್ದೇ ಒಂದು ಅನುಮಾನಾಸ್ಪದ ಪ್ರಸಂಗ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್​ ಪಂದ್ಯದ ವೇಳೆ ನಡೆದಿತ್ತು.


ಪರ್ತನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಆನ್ ಫೀಲ್ಡ್ ಅಂಪೈರ್ ಪಾಕಿಸ್ತಾನದ ಆಟಗಾರ ಅಗಾ ಸಲ್ಮಾನ್ ಅವರ ತೋಳುಗಳು ಮತ್ತು ಮಣಿಕಟ್ಟುಗಳನ್ನು ಪರೀಕ್ಷಿಸಿದ ಘಟನೆ ನಡೆದಿತ್ತು. ಅವರು ತೋಳಿನಲ್ಲಿ ಏನೂ ಬಚ್ಚಿಟ್ಟುಕೊಂಡಿದ್ದಾರೆ ಹಾಗೂ ಅದನ್ನು ಮೋಸದಾಟಕ್ಕೆ ಬಳಸುತ್ತಿದ್ದಾರೆ ಎಂಬುದೇ ಅಂಪೈರ್​​ ಅನುಮಾನವಾಗಿತ್ತು. ಬಳಿಕ ಅದು ರಿಸ್ಟ್​ ಬ್ಯಾಂಡ್​ ಎಂಬುದು ಗೊತ್ತಾಗಿತ್ತು.



Leave a Comment: