ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಬಾಡಿಗೆ ಆಸೆಗೆ ಬಿದ್ದು ಕೋಟ್ಯಾಂತರ ರೂ ವೆಚ್ಚದ ಮನೆ, ಫ್ಲಾಟ್ ಕಳೆದುಕೊಂಡ ಮಾಲೀಕರು: ವಂಚಿಸಿ ಪರಾರಿಯಾದ ಆಲಿ ಬೇಗ್

Posted by Vidyamaana on 2024-06-25 07:59:41 |

Share: | | | | |


ಬಾಡಿಗೆ ಆಸೆಗೆ ಬಿದ್ದು ಕೋಟ್ಯಾಂತರ ರೂ ವೆಚ್ಚದ ಮನೆ, ಫ್ಲಾಟ್ ಕಳೆದುಕೊಂಡ ಮಾಲೀಕರು: ವಂಚಿಸಿ ಪರಾರಿಯಾದ ಆಲಿ ಬೇಗ್

ಬೆಂಗಳೂರು, ಜೂನ್​ 24: ಬಾಡಿಗೆ ಆಸೆಗೆ ಬಿದ್ಧ ಮನೆ ಮಾಲೀಕರಿಗೆ ಬ್ರೋಕರ್ (broker) ಕಂಪನಿ ಹೆಸರಲ್ಲಿ ಕೋಟಿ ಕೋಟಿ ರೂ. ಪಂಗನಾಮ (cheated) ಹಾಕಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಯೂ ಹೋಮ್ಸ್ ಎಂಬ ಕಂಪನಿ ಹೆಸರಲ್ಲಿ ಮನೆಗಳು, ಫ್ಲಾಟ್​ಗಳನ್ನು ಡೀಲ್ ಮಾಡಲಾಗಿದೆ. ಬಾಡಿಗೆಗೆ ಕೊಡಿಸುತ್ತೇನೆ ಎಂದು ಮಧ್ಯಸ್ಥಿಕೆ ವಹಿಸಿದ್ದ ಆಸಾಮಿ ಅಹಮದ್ ಆಲಿ ಬೇಗ್, ಮಾಲೀಕರಿಂದ ಮನೆ ಪಡೆದು ನನ್ನದೇ ಅಂತ ನಂಬಿಸಿ ಲಕ್ಷ ಲಕ್ಷ ರೂ. ಹಣ ಪಡೆದು ಲೀಸ್​ಗೆ ಕೊಟ್ಟಿದ್ದಾರೆ.

ಕಾಡಾನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆ ತಂಡದ ವ್ಯಕ್ತಿಗೆ ಗಾಯ

Posted by Vidyamaana on 2024-06-12 10:03:01 |

Share: | | | | |


ಕಾಡಾನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆ ತಂಡದ ವ್ಯಕ್ತಿಗೆ ಗಾಯ

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿ ಎಂಬಲ್ಲಿ ಕಾಡನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಂಬಾರೆಯ ಆನೆ ಸಲಹಾ ತರಬೇತಿ ಕೇಂದ್ರದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಜೂ.11 ರ ಸಂಜೆ ನಡೆದ ಬಗ್ಗೆ ವರದಿಯಾಗಿದೆ.

ಜೂ.10 ರಂದು ರಾತ್ರಿ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿಯಲ್ಲಿ ಕೃಷಿ ಹಾನಿ ಮಾಡುತ್ತಿದ್ದ ಕಾಡಾನೆಗಳೆರಡು ಪಕ್ಕದ ಅಂದ್ರಗೇರಿ ಕಾಡು ಪ್ರದೇಶದಲ್ಲಿದ್ದು ಜನರಲ್ಲಿ ಆತಂಕವನ್ನು ಉಂಟು ಮಾಡಿತ್ತು. ಆನೆಯನ್ನು ಬಂದ ದಾರಿಯಲ್ಲೆ ಸುರಕ್ಷಿತವಾಗಿ ಕಳುಹಿಸುವಲ್ಲಿ ದುಬಾರೆ ಆನೆ ಸಲಹಾ ಸಮಿತಿಯವರು ಪಟಾಕಿ ಸಿಡಿಸಿ ಆನೆಯನ್ನು ಬೆನ್ನಟ್ಟುತ್ತಿದ್ದರು.

ಸೆ 10: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

Posted by Vidyamaana on 2023-09-08 12:11:36 |

Share: | | | | |


ಸೆ 10: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆಯು ಸೆ. 10ರಂದು ಸಂಜೆ 5 ಗಂಟೆಗೆ ಪುತ್ತೂರು ಮನಿಷಾ ಹಾಲ್’ನಲ್ಲಿ ನಡೆಯಲಿದೆ.

ಇದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 43ನೇ ವಾರ್ಷಿಕ ಮಹಾಸಭೆಯಾಗಿದೆ ಎಂದು ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾ, ಪ್ರಧಾನ ಕಾರ್ಯದರ್ಶಿ ಪಿ. ಉಲ್ಲಾಸ್ ಪೈ, ಕೋಶಾಧಿಕಾರಿ ರಾಜೇಶ್ ಆರ್. ಕಾಮತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ Ad-Lab ನಲ್ಲಿ ಬೆಂಕಿ : ತಪ್ಪಿದ ಬಾರಿ ದುರಂತ ಲಕ್ಷಾಂತರ ರೂ ನಷ್ಟ

Posted by Vidyamaana on 2023-10-17 17:21:46 |

Share: | | | | |


ಶಾರ್ಟ್ ಸರ್ಕ್ಯೂಟ್ ನಿಂದ Ad-Lab ನಲ್ಲಿ ಬೆಂಕಿ : ತಪ್ಪಿದ ಬಾರಿ ದುರಂತ ಲಕ್ಷಾಂತರ ರೂ ನಷ್ಟ

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟ ಉಂಟಾಗಿದೆ 

ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರಿಂದ ಬಾರಿ ದುರಂತ ತಪ್ಪಿದೆ.

ನೇಜಾರು ಕೊಲೆ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ‌ ವಿಸ್ತರಣೆ

Posted by Vidyamaana on 2023-12-05 20:38:13 |

Share: | | | | |


ನೇಜಾರು ಕೊಲೆ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ‌ ವಿಸ್ತರಣೆ

ಉಡುಪಿ: ನೇಜಾರಿನ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ ಉಡುಪಿಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.


ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ನ.22ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಡಿ.5ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.


ನ್ಯಾಯಾಧೀಶೆ ದೀಪಾ ಆರೋಪಿಗೆ ಡಿ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯುಟರ್ ಎಚ್.ಎಂ.ನದಾಫ್ ಮತ್ತು ಆರೋಪಿ ಪರ ನ್ಯಾಯಾಲಯ ನೇಮಿಸಿದ ಸರಕಾರಿ ವಕೀಲ ರಾಜು ಪೂಜಾರಿ ಹಾಜರಿದ್ದರು.

ಹಿಂದೂ ನಂಬಿಕೆಯ ತಳಹದಿಯಲ್ಲಿ ಕಣ್ಣೀರೊರೆಸುವ ಕಾರ್ಯ

Posted by Vidyamaana on 2024-04-12 07:14:19 |

Share: | | | | |


ಹಿಂದೂ ನಂಬಿಕೆಯ ತಳಹದಿಯಲ್ಲಿ ಕಣ್ಣೀರೊರೆಸುವ ಕಾರ್ಯ

ಸುಳ್ಯ: ನಾನೋರ್ವ ಹಿಂದೂ. ನನ್ನ ಧರ್ಮದ ತಳಹದಿಯಲ್ಲಿ ಕೆಲಸ ಮಾಡುತ್ತಾ, ಅನೇಕ ಮಂದಿಯ ಕಣ್ಣೀರೊರೆಸುವ ಕೆಲಸ ಮಾಡಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.


ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಂತಿಕಲ್ಲಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿಯಾಗಿ, ಕೋಶಾಧಿಕಾರಿಯಾಗಿ 28 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದೇನೆ. ಇದರ ಜೊತೆಗೆ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ. ತಾನು ಬೆಳೆದು ಬಂದ ಧರ್ಮ ತನಗೆ ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣಲು ತಿಳಿಸಿದೆ. ಅದರ ಪ್ರಕಾರ, ಧರ್ಮದ ಕಾರ್ಯ ನಡೆಸಿದ್ದೇನೆ ಎಂದ ಅವರು, ನಮ್ಮ ಸಂವಿಧಾನದ ಆಶಯದಂತೆ ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಬಾಳಲು ಬೇಕಾದ ವಾತಾವರಣವನ್ನು ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು.



Leave a Comment: