Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2024-02-01 16:11:52 |
ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ.
ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕೃಷ್ಣ ಉಪಾಧ್ಯಾಯ ಅವರು ಸಂಘಟನಾ ಸಂದೇಶ ನೀಡಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಉಪಸ್ಥಿತಿ ವಹಿಸಲಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ ಪುತ್ತಿಲ ಪರಿವಾರದ ಈ ಸಮಾಲೋಚನಾ ಸಮಾವೇಶ ಭಾರೀ ಮಹತ್ವ ಪಡೆದಿದ್ದು, ಕಾರ್ಯಕರ್ತರ ಬಳಿ ಅವರ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಬಿಜೆಪಿ ಸೇರ್ಪಡೆಯ ವಿಚಾರ ಬಹಳಷ್ಟು ಸದ್ದು ಮಾಡುತ್ತಿದ್ದು, ಈ ವಿಚಾರದಲ್ಲಿ ಅಭಿಪ್ರಾಯ ಸಂಗ್ರಹ ಸಮಾಲೋಚನೆ ನಡೆಯುವ ಸಾಧ್ಯತೆಯಿದೆ.
Posted by Vidyamaana on 2023-04-20 20:37:14 |
ವಿಟ್ಲ: ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ವಿಟ್ಲದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ.
ಮುಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಮೃತ ಯುವಕ ಎಂದು ತಿಳಿದುಬಂದಿದೆ.
ಹಬೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-06-18 03:09:25 |
ಮಣಿಪುರ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರಕ್ಕೆ ಕೊನೆಯೇ ಇಲ್ಲದಂತಾಗಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಿಜೆಪಿ ನಾಯಕರ ನಿವಾಸಗಳಿಗೆ ಬೆಂಕಿ ಹಚ್ಚುವ ಘಟನೆ ನಡೆದಿದ್ದರೆ, ಕಿಡಿಗೇಡಿಗಳ ಜತೆಗಿನ ಘರ್ಷಣೆಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕೇಂದ್ರ ವಿದೇಶಾಂಗ ಖಾತೆ ಸಹಾಯಕ ಸಚಿವ ಆರ್.ಕೆ.ರಂಜನ್ ಸಿಂಗ್ ನಿವಾಸಕ್ಕೆ ಬೆಂಕಿ ಹಚ್ಚಿ ದಾಂಧಲೆ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.ಬಿಷ್ಣುಪುರ ಜಿಲ್ಲೆಯ ಕ್ವಾಕ್ತಾ ಎಂಬಲ್ಲಿ ಬಿಜೆಪಿ ನಾಯಕರೊಬ್ಬರ ಮನೆಗೆ ನುಗ್ಗಿ ದಾಂಧಲೆ ಎಬ್ಬಿಸುವ ಯತ್ನ ನಡೆದಿದೆ. ಇದರ ಜತೆಗೆ ಶನಿವಾರ ಬೆಳಗ್ಗಿನ ಜಾವದವರೆಗೆ ಸ್ವಯಂಚಾಲಿತ ರೈಫಲ್ಗಳಿಂದ ಗುಂಡು ಹಾರಾಟವೂ ನಡೆದಿದೆ. ಇದಲ್ಲದೆ ಚುರಾಚಾಂದ್ಪುರ್ ಜಿಲ್ಲೆಯ ಕಂಗಾವಿ ಎಂಬಲ್ಲಿ ಸ್ಥಳೀಯ ಶಾಸಕರ ಮನೆಗೆ ನುಗ್ಗಲು ಯತ್ನಿಸಲಾಗಿದೆ.ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಅಧಿಕಾರಿಮರಿಯುಂ ಶಾರದಾ ದೇವಿ ಅವರ ನಿವಾಸಕ್ಕೆ ಅಕ್ರಮವಾಗಿ ನುಗ್ಗುವ ಪ್ರಯತ್ನ ಮಾಡಲಾಗಿದೆ. ಆದರೆ, ಭೂಸೇನೆ ಮತ್ತು ಆರ್ಎಎಫ್ನ ಯೋಧರು ಅದನ್ನು ತಡೆದಿದ್ದಾರೆ. ಮಣಿಪುರ ವಿವಿ ಕ್ಯಾಂಪಸ್ ಸೇರಿದಂತೆ ಹಲವು ಸ್ಥಳಗಳಲ್ಲಿ ಜನರು ಗುಂಪು ಸೇರಿದ್ದ ಹಲವು ಘಟನೆಗಳು ನಡೆದಿವೆ. ಇಂಫಾಲ್ನ ಆಸ್ಪತ್ರೆಯೊಂದರ ಸಮೀಪ 1 ಸಾವಿರಕ್ಕೂ ಅಧಿಕ ಮಂದಿ ಸೇರಿ ದೊಂಬಿ ಎಬ್ಬಿಸಲು ಮುಂದಾಗುತ್ತಿರುವ ಬಗ್ಗೆ ಸುಳಿವು ಸಿಕ್ಕಿದ ಕೂಡಲೇ ಭೂಸೇನೆ, ಆರ್ಎಎಫ್ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿವೆ.
ಶಸ್ತ್ರಾಸ್ತ್ರ ಲೂಟಿಗೆ ಯತ್ನ: ಇಂಫಾಲ ಪಶ್ಚಿಮ ಜಿಲ್ಲೆಯ ಪೊಲೀಸ್ ಠಾಣೆಗೆ ನುಗ್ಗಿದ 300ರಿಂ0ದ 400 ಮಂದಿ ಜನರು ಅಲ್ಲಿ ಇದ್ದ ಶಸ್ತ್ರಾಸ್ತ್ರಗಳನ್ನು ದೋಚಲು ಪ್ರಯತ್ನ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು, ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆಶಸ್ತ್ರಾಸ್ತ್ರ ಲೂಟಿಗೆ ಯತ್ನ: ಇಂಫಾಲ ಪಶ್ಚಿಮ ಜಿಲ್ಲೆಯ ಪೊಲೀಸ್ ಠಾಣೆಗೆ ನುಗ್ಗಿದ 300ರಿಂ0ದ 400 ಮಂದಿ ಜನರು ಅಲ್ಲಿ ಇದ್ದ ಶಸ್ತ್ರಾಸ್ತ್ರಗಳನ್ನು ದೋಚಲು ಪ್ರಯತ್ನ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು, ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.ಇಂದು ಪ್ರಧಾನಿ ಭೇಟಿ:
ಮಣಿಪುರ ವಿಧಾನಸಭೆಯ ಸ್ಪೀಕರ್ ತಾಕ್ಚೋಮ್ ಸತ್ಯವ್ರತ ಸಿಂಗ್ ನೇತೃತ್ವದಲ್ಲಿ ಹಲವು ಶಾಸಕರು ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂಫಾಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಚಿಸಲಾಗಿದ್ದ ಶಾಂತಿ ಸಮಿತಿಯ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆಪರಿಸ್ಥಿತಿ ಸುಧಾರಿಸದಿದ್ದರೆ…
ಮಣಿಪುರದಲ್ಲಿ ಹಿಂಸಾ ಸ್ಥಿತಿಯನ್ನು ಸುಧಾರಿಸಲು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಆದ್ಯತೆ ನೀಡಲೇಬೇಕು. ಇಲ್ಲದಿದ್ದರೆ, ಆ ಪಕ್ಷದ ಜತೆಗೆ ಹೊಂದಿರುವ ಮೈತ್ರಿಯನ್ನು ಮರು ಪರಿಶೀಲಿಸಬೇಕಾಗುತ್ತದೆ ಎಂದು ನ್ಯಾಷನಲ್ ಪೀಪಲ್ ಪಾರ್ಟಿ (ಎನ್ಪಿಪಿ)ಯ ಉಪಾಧ್ಯಕ್ಷ ಮತ್ತು ನಿವೃತ್ತ ಡಿಜಿಪಿ ಯುಮ್ನಾಮ್ ಜಯಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಮೌನ ಪ್ರೇಕ್ಷಕರಾಗಿ ಇರಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ. ರಾಜ್ಯದಲ್ಲಿನ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ರಾಜ್ಯ ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ವಿಫಲಗೊಂಡಿದೆ ಎಂದು ದೂರಿದ್ದಾರೆ
Posted by Vidyamaana on 2024-03-31 07:29:41 |
ಕಡಬ :ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣವಾದ ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದರು.
Posted by Vidyamaana on 2024-04-08 13:00:16 |
ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ.
Posted by Vidyamaana on 2024-03-27 12:26:28 |
ಬೆಳ್ತಂಗಡಿ: ಕಾಂಗ್ರೆಸ್ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.