ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಮೌಶ್ಮಿ ಶೆಟ್ಟಿ ಪಾತ್ರತೋಟ ಸಾಧನೆ

Posted by Vidyamaana on 2023-11-30 07:46:28 |

Share: | | | | |


ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಮೌಶ್ಮಿ ಶೆಟ್ಟಿ ಪಾತ್ರತೋಟ ಸಾಧನೆ

ಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರ ತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.


ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು ವಿ ಟಿವಿ ಯ ಮುಖ್ಯಸ್ಥರೂ ಆಗಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ಮತ್ತು ಸ್ನೇಹ ದಂಪತಿಯ ಪುತ್ರಿ.

ಬೆಳಿಯೂರುಕಟ್ಟೆ ಸರಕಾರಿ ಪ ಪೂ ಕಾಲೇಜು ವಾರ್ಷಿಕೋತ್ಸವ

Posted by Vidyamaana on 2023-12-18 12:23:08 |

Share: | | | | |


ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರು‌ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ.

ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡುವ ಕನಸು ಕಾಣಬೇಕು. ಕನಸೇ ಕಾಣದಿದ್ದರೆ ನನಸು ಮಾಡುವುದಾದರೂ ಏನನ್ನಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ವಿದ್ಯೆ ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು,ದುಶ್ಚಟಗಳಿಗೆ ಯಾರೂ ಬಲಿಯಾಗಬಾರದು. ತಂದೆ ತಾಯಿಯ ಹೆಸರನ್ನು ಕೆಡಿಸುವ ಕರಲಸವನ್ನು ಎಂದೂ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್ ಆರಂಭ ಮಾಡುವ ಉದ್ದೇಶ ಸರಕಾರಕ್ಕಿದ್ದು ,ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಗೆ ಮರ್ಜಿ ಮಾಡಲಾಗುವುದು ಎಂದು ಹೇಳಿದರು.


15 ತಿಂಗಳಲ್ಲಿ 24 ಗಂಟೆಯೂ ನೀರು

ಮುಂದಿನ 15 ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ದಿನದ 24 ಗಂಟೆ ನೀರು ವಿತರಣೆಯಾಗಲಿದೆ ಎಂದು ಶಾಸಕರು ತಿಳಿಸಿದರು.

Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

Posted by Vidyamaana on 2024-06-07 16:38:03 |

Share: | | | | |


Watch Video:ಸಾವು ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ?

ಕೇರಳ: ಅಯ್ಯೋ ನನ್ನ ಸಾವು ಕಣ್ಣೆದುರೇ ಪಾಸ್ ಆದಂತೆ ಆಯ್ತು. ಆ ಘಟನೆಯಿಂದ ನಾನು ಬದುಕಿ ಬಂದಿದ್ದೇ ಪವಾಡ ಹಾಗೆ ಹೀಗೆ ಅಂತ ಹೇಳೋದನ್ನು ಕೇಳಿದ್ದೀರಿ. ಆದ್ರೇ ಇಲ್ಲೊಬ್ಬ ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾರೆ. ಕಂಡೆಕ್ಟರ್ ಸಹಾಯದಿಂದ ಬದುಕಿ ಬಂದ ಬಡಜೀವದ ಬಗ್ಗೆ ಮುಂದೆ ಓದಿ.

ಕೇರಳದ ಮಲಬಾರ್ ಬಸ್ ನಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದನು. ಬಸ್ಸಿನ ಡೋರ್ ಬಳಿಯಲ್ಲೇ ನಿಂತು, ಟಿಕೆಟ್ ಖರೀದಿಸಲು ಮುಂದಾಗಿದ್ದಾನೆ. ಬಸ್ ಕಂಡಕ್ಟರ್ ತನ್ನ ಪಾಡಿಗೆ ತಾನು ಡೋರ್ ಸಮೀಪವೇ ನಿಂತಿದ್ದಂತ ವ್ಯಕ್ತಿಗೆ ಟಿಕೆಟ್ ಕೊಡೋದಕ್ಕೆ ಮುಂದಾಗಿದ್ದಾನೆ.

ನಾಳೆ ಬೆಂಗಳೂರು ತಲುಪಲಿರುವ ಸ್ಪಂದನಾ ಪಾರ್ಥೀವ ಶರೀರ ಬುಧವಾರ ಅಂತ್ಯಸಂಸ್ಕಾರ

Posted by Vidyamaana on 2023-08-07 11:50:52 |

Share: | | | | |


ನಾಳೆ ಬೆಂಗಳೂರು ತಲುಪಲಿರುವ ಸ್ಪಂದನಾ ಪಾರ್ಥೀವ ಶರೀರ ಬುಧವಾರ ಅಂತ್ಯಸಂಸ್ಕಾರ

ಬೆಂಗಳೂರು; ಇಂದು ನಿಧನರಾದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನಾಳೆ ಮುಂಜಾನೆ ಬೆಂಗಳೂರು ತಲುಪಲಿದೆ.


ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರೋದಕ್ಕಾಗಿ ಕುಟುಂಬಸ್ಥರು ಹಾಗೂ ವಿಜಯ್ ರಾಘವೇಂದ್ರ ಸ್ನೇಹಿತರು ಯತ್ನಿಸುತ್ತಿದ್ದಾರೆ. ಇದಕ್ಕಾಗಿ ಥೈಲ್ಯಾಂಡ್ ಸರ್ಕಾರದ ರಾಯಭಾರ ಕಚೇರಿಯಲ್ಲಿ ಕಾನೂನು ಪ್ರಕ್ರಿಯೆಯನ್ನು ವಿಜಯ್ ಸ್ನೇಹಿತರು ನಡೆಸುತ್ತಿದ್ದಾರೆ.


ಈಗಾಗಲೇ ವಿಷಯ ತಿಳಿದು ಸ್ಪಂದನಾ ತಂದೆ ಬಿ ಕೆ ಶಿವರಾಂ ಹಾಗೂ ಸಹೋದರ ರಕ್ಷಿತ್ ಶಿವರಾಂ ಬ್ಯಾಂಕಾಕ್ ನತ್ತ ತೆರಳಿದ್ದಾರೆ ಎ. ನಾಳೆ ಬೆಂಗಳೂರಿಗೆ ಸ್ಪಂದನಾ ಪಾರ್ಥೀವ ಶರೀರವನ್ನು ತರಲಿದ್ದು, ಬುಧವಾರ ಅಂತ್ಯಕ್ರಿಯೆ ನಡೆಸುವ ಸಾಧ್ಯತೆಯಿದೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಜ್ಞಾನ ಭಂಡಾರ ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

Posted by Vidyamaana on 2024-04-03 21:01:49 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಜ್ಞಾನ ಭಂಡಾರ ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು.

ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಭಾರತ ತಂಡದ ಆಟಗಾರರಿಗೆ ಸನ್ಮಾನ

Posted by Vidyamaana on 2024-02-10 09:59:13 |

Share: | | | | |


ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಭಾರತ ತಂಡದ ಆಟಗಾರರಿಗೆ ಸನ್ಮಾನ

ಬಂಟ್ವಾಳ : ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಜಪಾನಿನಲ್ಲಿ ನಡೆಯಲಿರುವ 17 ರ ವಯೋಮಾನದ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಕ್ರೀಡಾ ಪಟುಗಳಿಗೆ ಸನ್ಮಾನ ಕಾರ್ಯಕ್ರಮ ಕಲ್ಲಡ್ಕ ಮ್ಯೂಸಿಯಂ ಆವರಣದಲ್ಲಿ ನಡೆಯಿತು.


       2023-24 ನೇ ಸಾಲಿನಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ  ನಡೆದ ಹ್ಯಾಂಡ್ ಬಾಲ್ ಸ್ಪರ್ಧೆಗಳಲ್ಲಿ ವಿಜೇತರಾಗಿ ಇದೀಗ ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಬಂಟ್ವಾಳ ತಾಲೂಕಿನ ಅಮ್ಟೂರು ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮೊಹಮ್ಮದ್ ಅಝೀಂ ಬಿ., ಮೊಹಮ್ಮದ್ ಮಸ್ಕೂರ್, ಸೃಜನ್, ಲಕ್ಷತ್ ಎಚ್, ಮೊಹಮ್ಮದ್ ಫಾಝ್ ಹಾಗೂ ಇವರಿಗೆ ತರಭೇತು ನೀಡಿದ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.


    ಸನ್ಮಾನ ಸಮಾರಂಭದಲ್ಲಿ ಮುಖ್ಯ ಭಾಷಣಗೈದ ಬಿ.ಮೂಡ ಸರಕಾರಿ ಪ.ಪೂ.ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಮಾತನಾಡಿ ಯಾವುದೇ ಸಾಧನೆ ಮಾಡಿದ ಸಾಧಕನಿಗೆ ತನ್ನ ಊರಿನಲ್ಲಿ ಸಿಗುವ ಸನ್ಮಾನ ಆತನಿಗೆ ದೊರಕುವ ಬಹು ದೊಡ್ಡ ಪಾರಿತೋಷಕವಾಗಿದೆ, ಪ್ರತಿಯೊಂದು ಮಕ್ಕಳಲ್ಲೂ ಹುದುಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪೋಷಕರು ಹಾಗೂ ಶಿಕ್ಷಕರಿಂದ ಆಗಬೇಕಾಗಿದೆ ಎಂದರು.


    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಮಾತನಾಡಿ ಹ್ಯಾಂಡ್ ಬಾಲ್ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ  ವಿದ್ಯಾರ್ಥಿಗಳು ಮತ್ತು ವಿಶೇಷ ವಸ್ತು ಸಂಗ್ರಹದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮೂರಿನ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಕಲ್ಲಡ್ಕ ಮ್ಯೂಸಿಯಂ ನ ಸಂಸ್ಥಾಪಕ ಹಾಜಿ ಮುಹಮ್ಮದ್ ಯಾಸಿರ್ ಅವರ ಸಾಧನೆಯ ಬಗ್ಗೆ ಕೊಂಡಾಡಿದರು.


     ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಉಸ್ಮಾನ್ ದಾರಿಮಿ, ಕರಿಂಗಾನ ಚರ್ಚ್ ನ ಧರ್ಮಗುರು ರೆ.ಫಾ. ಕಿರಣ್ ಮ್ಯಾಕ್ಸಿಂ ಪಿಂಟೋ, ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಯಹ್ಯಾ ತಂಙಳ್,  ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಮಾತನಾಡಿ ಶುಭ ಹಾರೈಸಿದರು.


     ಕಲ್ಲಡ್ಕ ಕೆ.ಟಿ.ಹೋಟೇಲ್ ಮಾಲಕ ರಾಜೇಂದ್ರ ಹೊಳ್ಳ,  ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಹೈದರ್, ಹಜಾಜ್ ಸಮೂಹ ಸಂಸ್ಥೆಯ ಇಮ್ತಿಯಾಝ್ ಗೋಳ್ತಮಜಲು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಝಕರಿಯಾ ಕಲ್ಲಡ್ಕ, ಕಲ್ಲಡ್ಕದ ತ್ರಿವರ್ಣ ಸಂಗಮ ಹಾಗೂ ಝಮಾನ್ ಬಾಯ್ಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.


      ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಶೆಟ್ಟಿ ಹ್ಯಾಂಡ್ ಬಾಲ್ ಕ್ರೀಡೆ ಹಾಗೂ ಕ್ರೀಡಾಪಟುಗಳ ಸಾಧನೆಯ ಬಗ್ಗೆ ವಿವರಿಸಿದರು. ಕಲ್ಲಡ್ಕ ಮ್ಯೂಸಿಯಂ ಸಂಸ್ಥಾಪಕ   ಯಾಸಿರ್ ಕಲ್ಲಡ್ಕ ಸ್ವಾಗತಿಸಿ, ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.



Leave a Comment: