Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2024-06-24 18:27:43 |
ಪುತ್ತೂರು :ಇಲ್ಲಿನ ಪುರುಷರಕಟ್ಟೆಯ ನಿವಾಸಿಯಾಗಿದ್ದ ದಿ.ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಶಾಂತಿಗೋಡು ಇವರ ಸ್ಮರಣಾರ್ಥ ಟೈ ಬ್ರೇಕರ್ಸ್ ಪುರುಷರಕಟ್ಟೆ ಹಾಗೂ ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಇದರ ಜಂಟಿ ಸಾರಥ್ಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು (ರಿ.) ಸಹಯೋಗದಲ್ಲಿ ರೋಟರಿ ಕ್ಯಾಂಪ್ಕೊ ಪುತ್ತೂರು ಬ್ಲಡ್ ಸೆಂಟರ್ ಸಹಕಾರದೊಂದಿಗೆ ಮಾದರಿ ರಕ್ತದಾನ ಶಿಬಿರವು ಪುರುಷರಕಟ್ಟೆ ಜಂಕ್ಷನ್ ನಲ್ಲಿ ಜೂ 24ರಂದು ಯಶಸ್ವಿಯಾಗಿ ನಡೆಯಿತು.
60 ಮಂದಿ ಸ್ವಯಂ ಪ್ರೇರಿತರಾಗಿ ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಜೀವದಾನಿಗಳಾದರು.
Posted by Vidyamaana on 2023-04-20 03:27:37 |
ಮಂಗಳೂರು: ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ವ್ಯಕ್ತಿಯೋರ್ವ ಏಕವಚನದಲ್ಲಿ ಅವಾಚ್ಯವಾಗಿ ಬೈಯುವ ಆಡಿಯೋ ವೈರಲ್ ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ನಳಿನ್ 2019ರ ಲೋಕಸಭಾ ಚುನಾವಣೆ ಯಲ್ಲಿ ಗೆದ್ದ ಸಂದರ್ಭ ಮುಸ್ಲಿಂ ಧರ್ಮಗುರು ಗಳು ತಮ್ಮ ಬೆಂಬಲಿಗರೊಂದಿಗೆ ನಳಿನ್ ಅವರಲ್ಲಿಗೆ ಆಗಮಿಸಿ ಹೂಗುತ್ಛ ನೀಡಿ ಅಭಿನಂದಿಸಿ
ಫೋಟೋ ತೆಗೆಸಿಕೊಂಡಿದ್ದರು.ಆದರೆ ಈಗ ಯಾರೋ ದುಷ್ಕರ್ಮಿ ಆ ಫೋಟೋವನ್ನು ಜಾಲತಾಣದಲ್ಲಿ ಹಾಕಿ ಅದರೊಂದಿಗೆ ನಳಿನ್ ಅವರಿಗೆ ಏಕವಚನದಲ್ಲಿ, ಅವಾಚ್ಯ ಶಬ್ದ ಗಳಿಂದ ಬೈಯುವ ಆಡಿಯೋ ವೈರಲ್ ಮಾಡಿ ದ್ದಾನೆ. ಈ ಬಗ್ಗೆ ಬಿಜೆಪಿ ಕಾನೂನು ಪ್ರಕೋಷ್ಠ ದಿಂದ ಪೊಲೀಸರಿಗೆ ದೂರು ನೀಡಲಾಗಿದೆ. ದುಷ್ಕರ್ಮಿಯನ್ನು ಪತ್ತೆ ಹಚ್ಚಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರನ್ನು ಒತ್ತಾಯಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ ತಿಳಿಸಿದ್ದಾರೆ.
Posted by Vidyamaana on 2024-03-25 14:07:45 |
ಪುತ್ತೂರು: ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್ನ ಪುತ್ತೂರು ಶಾಖೆ ಮಾ.28ರಂದು ಪುತ್ತೂರು ಏಳ್ಳುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಮಾಧವ ಬಿ.ಎಮ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
1977ರಲ್ಲಿ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘ ನೋಂದಣಿ ಮಾಡಿಕೊಂಡು 1984ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ನ ಕಾನೂನು ಪ್ರಕಾರ ಶ್ರೀ ಭಗವತೀ ಶ್ರೇಯೋಭಿವೃದ್ಧಿ ಸಹಕಾರ ಸಂಘವು ಒಂದು ಬ್ಯಾಂಕ್ ಆಗಿ ಪರಿವರ್ತನೆಗೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಬ್ಯಾಂಕಿನ ಶಾಖೆಗಳು ವಿಸ್ತರಣೆಗೊಂಡು 2ಸಾವಿರ ಇಸವಿಯಲ್ಲಿ ವಿಟ್ಲದಲ್ಲಿ 7ನೇ ಶಾಖೆಯನ್ನು ಇದೀಗ ಪುತ್ತೂರನಲ್ಲಿ 8ನೇ ಶಾಖೆಯನ್ನು ಆರಂಭಿಸಲಾಗುತ್ತಿದೆ. ನೂತನ ಬ್ಯಾಂಕ್ನ ಉದ್ಘಾಟನೆ ಕಾರ್ಯಕ್ರಮ ನಿಶ್ಚಯ ಮಾಡಿ ಆಮಂತ್ರಣ ಪತ್ರ ನೀಡುವ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರಲಿಲ್ಲ. ಹಾಗಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೆವು. ಬಳಿಕದ ಬೆಳವಣಿಗೆಯಲ್ಲಿ ನೀತಿ ಸಂಹಿತೆ ಬಂದಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅನಾನುಕೂಲ ಆಗಿದೆ. ಈ ನಿಟ್ಟಿನಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಉದ್ಯಮಿ ಕಿಶೋರ್ ಕುಮಾರ್, ವಕೀಲರಾದ ಪಾಝೀಲ್, ಪಿ.ಕೆ.ಸತೀಶನ್, ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವೀನ್, ಉಳ್ಳಾಲದ ಚಂದ್ರಹಾಸ ಸಹಿತ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
ಶ್ರೀ ಭವತೀ ಸಹಕಾರ ಬ್ಯಾಂಕ್ ಎಲ್ಲಾ ವರ್ಷಗಳಲ್ಲಿ ಲಾಭಗಳಿಸುತ್ತಾ ಬಂದಿದ್ದು, 2024ಲ್ಲಿ ಪಸ್ತುತ 29,840 ಮಂದಿ ಸದಸ್ಯರಿದ್ದು, ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಯಲ್ಲಿ ಬ್ಯಾಂಕ ಅನ್ನು 2ನೇ ಟಯರ್ನಲ್ಲಿ ವರ್ಗೀಕರಿಸಲಾಗಿದೆ ಮಾತ್ರವಲ್ಲ ಉತ್ತಮ ಆರ್ಥಕ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂದು ಮಾಧವ ಬಿ.ಎಮ್ ಹೇಳಿದರು.
ಬ್ಯಾಂಕಿನಲ್ಲಿ ಇರುವ ಠೇವಣಿಗಳಿಗೆ ಶೇ.3 ರಿಂದ 8.60 ಬಡ್ಡಿ ನೀಡಲಾಗುತ್ತದೆ. ಹಿರಿಯ ನಾಗರಿಕರಿಗೆ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಮಹಿಳೆಯರಿಗೆ 3 ವರ್ಷಗಳಿಗಿಂತ ಹೆಚ್ಚಿನ ಅವಧಿಯ ಠೇವಣಿಗಳಿಗೆ ಕೂಡಾ 0.5 ಅಧಿಕ ಬಡ್ಡಿ ನೀಡಲಾಗುತ್ತದೆ. ಪಾಲು ಬಂಡವಾಳಕ್ಕೆ ಬ್ಯಾಂಕಿನ ಲಾಭದಲ್ಲಿ ಡಿವಿಡೆಂಡ್ ನೀಡಲಾಗುತ್ತದೆ. ಗೃಹ ಸಾಲ, ಅಡವು ಸಾಲ, ವಾಹನ ಸಾಲ, ಚಿನ್ನಾಭರಣ ಅಡವು ಸಾಲ ಹಾಗು ಸಂಬಳದ ಆಧಾರದಲ್ಲಿ ಸಾಲಗಳನ್ನು ಶೀಘ್ರವಾಗಿ ನೀಡಲಾಗುತ್ತದೆ. ಗ್ರಾಹಕರಿಗೆ ಸನ್ಮಾನ, ವಿದ್ಯಾರ್ಥಿವೇತನ ಸಹಿತ ಇತರ ಸೌಲಭ್ಯಗಳನ್ನು ಬ್ಯಾಂಕ್ನಿಂದ ನೀಡಲಾಗುವುದು ಎಂದು ಮಾಧವ ಬಿ.ಎಮ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್ನ ಉಪಾಧ್ಯಕ್ಷ ದೇವದಾಸ್ ಕೊಲ್ಯ, ಪ್ರಧಾನ ವ್ಯವಸ್ಥಾಪಕಿ ಸುಷ್ಮಾ ರಾಜೇಶ್, ನಿರ್ದೇಶಕ ಕಿರಣ್, ಬ್ಯಾಂಕ್ನ ಶಾಖಾ ವ್ಯವಸ್ಥಾಪಕ ರಾಘವ, ಪುತ್ತೂರು ನೂತನ ಶಾಖೆಯ ಮೆನೇಜರ್ ರಮೇಶ್ ಉಪಸ್ಥಿತರಿದ್ದರು.
Posted by Vidyamaana on 2023-12-18 20:14:00 |
ಪುತ್ತೂರು: ನಗರಸಭೆಯ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡೂ ಕಡೆಯೂ ಚುನಾವಣ ಆಯೋಗ ಬ್ಯಾಟ್ ಚಿಹ್ನೆಯನ್ನು ನೀಡಿದೆ.
ರಕ್ತೇಶ್ವರಿ ಘಟಕ ಕಬಕ ವಾರ್ಡ್ -1 ರಲ್ಲಿ ಅನ್ನಪೂರ್ಣ ರಾವ್ ಮತ್ತು ಚಿಕ್ಕಪುತ್ತೂರು ನೆಲ್ಲಿಕಟ್ಟೆ ವಾರ್ಡ್ ನಂ. 11 ರಲ್ಲಿ ಚಿಂತನ್.ಪಿ ಪುತ್ತಿಲ ಪರಿವಾರದ ವತಿಯಿಂದ ಪಕ್ಷೇತರ ಸ್ಪರ್ಧಿಸುತ್ತಿದ್ದು ಇಬ್ಬರಿಗೂ ಚುನಾವಣೆ ಆಯೋಗ ಬ್ಯಾಟ್ ಚಿಹ್ನೆ ನೀಡಿದೆ.
ಪುತ್ತೂರಿನ ವಿಧಾನಸೌಧ ಚುನಾವಣ ಸಂದರ್ಭ ಅರುಣ್ ಕುಮಾರ್ ಪುತ್ತಿಲರಿಗೂ ಇದೇ ಚಿಹ್ನೆ ಲಭಿಸಿತ್ತು. ಪುತ್ತೂರು ನಗರಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸಂದರ್ಭ ಚಿಹ್ನೆ ಆಯ್ಕೆ ಸಂದರ್ಭ ಎರಡು ಕಡೆಯೂ ಅರ್ಜಿಯಲ್ಲಿ ಬ್ಯಾಟ್ ಗೆ ಮೊದಲ ಪ್ರಾಶಸ್ತ್ಯ ನೀಡಲಾಗಿತ್ತು. ಚುನಾವಣ ಆಯೋಗ ನಾಮಪತ್ರ ಪರಿಶೀಲಿಸಿ ಬ್ಯಾಟ್ ಚಿಹ್ನೆಯನ್ನೇ ಅಧಿಕೃತಗೊಳಿಸಿದೆ.
ಡಿ.27ರಂದು ಎರಡು ತೆರವಾಗಿರುವ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
Posted by Vidyamaana on 2023-05-26 03:40:35 |
ಪುತ್ತೂರು: ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಲು ಶಾಸಕ ಅಶೋಕ್ ಕುಮಾರ್ ರೈ ಅವರು ಹೆಜ್ಜೆ ಮುಂದಿಟ್ಟಿದ್ದಾರೆ.
ಬೆಳಿಗ್ಗೆ 10.30 ಕ್ಕೆ ನಗರಸಭೆಯಲ್ಲಿ ಅಧಿಕಾರಿಗಳ ಸಭೆ ಬಳಿಕ ಕಂದಾಯ ಕಚೇರಿ ಮಿನಿ ವಿಧಾನ ಸೌಧ ಭೇಟಿ
ಭ್ರಷ್ಟಾಚಾರವನ್ನು ತಡೆಯಬೇಕು, ಜನಸಾಮಾನ್ಯರಿಗೆ ಇಲಾಖೆಯಲ್ಲಿ ತೊಂದರೆ ಆಗಬಾರದು, ಇಲಾಖೆಗಳು ಜನಸ್ನೇಹಿಯಾಗಿ ಮೂಡಿಬರಬೇಕು ಎನ್ನುವ ದೂರದೃಷ್ಟಿಯಿಟ್ಟುಕೊಂಡು ಶಾಸಕ ಅಶೋಕ್ ಕುಮಾರ್ ರೈ ಅವರು ಶುಕ್ರವಾರ ತಾಲೂಕಿನ ಇಲಾಖೆಗಳಿಗೆ ಭೇಟಿ ನೀಡಲಿದ್ದಾರೆ.
ಇದುವರೆಗೆ ಇಲಾಖಾ ಅಧಿಕಾರಿ, ಸಿಬ್ಬಂದಿಗಳನ್ನು ಜನಪ್ರತಿನಿಧಿ, ಶಾಸಕರು ತಮ್ಮ ಬಳಿಗೆ ಕರೆಸಿಕೊಂಡಿರುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿ ಎಂಬಂತೆ ಸ್ವತಃ ಶಾಸಕರೇ ಇಲಾಖಾ ಭೇಟಿ ನಡೆಸುತ್ತಿದ್ದಾರೆ. ಇದು ಶಾಸಕರ ಮುಂದಿನ ತಮ್ಮ ದೂರದೃಷ್ಟಿತ್ವದ ಯೋಜನೆಗಳನ್ನು ಜಾರಿಗೆ ತರಲು ಹಾಕಿಕೊಂಡ ಮೊದಲ ಹೆಜ್ಜೆ ಎಂದೇ ವಿಶ್ಲೇಷಿಸಲಾಗುತ್ತಿದೆ.
Posted by Vidyamaana on 2024-05-13 12:13:10 |
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿದ್ದು, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಅದರಲ್ಲೂ ಪ್ರಮುಖವಾಗಿ ದಾವಣಗೆರೆ, ಕೊಪ್ಪಳ, ಮಂಡ್ಯ, ಚಿಕ್ಕಬಳ್ಳಾಪುರ, ಹಾವೇರಿ, ಶಿವಮೊಗ್ಗ ಕ್ಷೇತ್ರಗಳಲ್ಲೂ ಸೋಲು-ಗೆಲುವಿನ ಬಗ್ಗೆ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವರು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಗೆಲ್ಲುತ್ತಾರೆಂದು ತಮ್ಮ ಟ್ರ್ಯಾಕ್ಟರ್ ಪಣಕ್ಕಿಟ್ಟಿದ್ದಾರೆ. ಗೀತಾ ಗೆಲ್ಲುತ್ತಾರೆ, ತಾಕತ್ತಿದ್ದರೆ ಚಾಲೆಂಜ್ ಕಟ್ಟಿ ಎಂದು ಬಿಜೆಪಿ ಕಾರ್ಯಕರ್ತರ ಬಹಿರಂಗ ಸವಾಲು ಹಾಕಿದ್ದಾರೆ.