ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಉಪ್ಪಿನಂಗಡಿ:ಹೆರಿಗೆ ವೇಳೆ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು

Posted by Vidyamaana on 2023-06-23 01:40:56 |

Share: | | | | |


ಉಪ್ಪಿನಂಗಡಿ:ಹೆರಿಗೆ ವೇಳೆ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ.


ಭವ್ಯರವರು ತನ್ನ 3ನೇ ಹೆರಿಗೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮಂಗಳವಾರ ರಾತ್ರಿ ಅವರು ಗಂಡು ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದರು. ಜನಿಸಿದ ಮಗುವನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವೂ ಮೃತಪಟ್ಟಿದೆ ಎನ್ನಲಾಗಿದೆ.

ಅದ್ವೈತ್ ಜೆಸಿಬಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾ‌ನ

Posted by Vidyamaana on 2023-10-09 16:10:07 |

Share: | | | | |


ಅದ್ವೈತ್ ಜೆಸಿಬಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾ‌ನ


ಮಂಗಳೂರು: ಪ್ರತಿಷ್ಠಿತ ಕಂಪೆನಿಗಳಲ್ಲೊಂದಾದ ಅದ್ವೈತ್ ಜೆಸಿಬಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಸೇಲ್ಸ್ ಎಕ್ಸಿಕ್ಯೂಟಿವ್, ಸೀನಿಯರ್ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾ‌ನೇಜರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಂಗಳೂರು, ಮೈಸೂರು, ಹಾಸನ, ಶಿವಮೊಗ್ಗ, ಕುಮ್ಟ, ಕುಂದಾಪುರದಲ್ಲಿ ಖಾಲಿ ಹುದ್ದೆಗಳಿದ್ದು, ಆಸಕ್ತರು ಸ್ವವಿವರವನ್ನು ಕಳುಹಿಸಿಕೊಡಲು ಪ್ರಕಟಣೆ ತಿಳಿಸಿದೆ.


ಸಂಪರ್ಕಕ್ಕೆ :Mail ID:

non

minho@

non

vaithjcb.com/Call: 7349768734

ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿದ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ ಪ್ರವೀಣ್

Posted by Vidyamaana on 2024-03-16 17:46:35 |

Share: | | | | |


ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿದ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ  ಪ್ರವೀಣ್

ಬಾಗಲಕೋಟೆ : ಮಗಳ ಮೇಲೆ ಕಣ್ಣು ಹಾಕಬೇಡ ಎಂದಿದ್ದಕ್ಕೆ ಯುವತಿಯ ತಂದೆಯನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೇ ಬಾಗಲಕೋಟೆಯಲ್ಲಿ ನಡೆದಿದೆ.ಪ್ರವೀಣ್ ಎಂಬ ಪ್ರೇಮಿ ಸಂಗನಗೌಡನನ್ನು ಕೊಲೆಗೈದಿದ್ದಾನೆ.ಅವನೊಬ್ಬ ಪಾಗಲ್ ಪ್ರೇಮಿ ಊರಿನ ಬಸ್‌ ನಿಲ್ದಾಣದಲ್ಲಿ ಬಳಿ ಟೀ ಅಂಗಡಿ ಇಟ್ಟುಕೊಂಡಿದ್ದ ಅದೇ ಬಸ್‌ ಸ್ಟಾಪ್‌ಗೆ ಬಸ್ ಹತ್ತಲು ಬರ್ತಿದ್ದ ಸಂಗನಗೌಡ ಮಗಳನ್ನ ಪ್ರೀತಿಸೋದಕ್ಕೆ ಶುರು ಮಾಡಿದ್ದ. ಆದರೆ ಆಕೆ ಮಾತ್ರ ಇವನ ಪ್ರೀತಿಗೆ ಯಾವತ್ತೂ ಸಹ ಓಕೆ ಅನ್ನಲಿಲ್ಲ. ಆದ್ರೂ ಅವಳ ಬೆನ್ನು ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ.


ವರ್ಷದ ಹಿಂದೆ ಇದೇ ವಿಷಯವಾಗಿ ಸಂಗನಗೌಡ ಆತನನ್ನ ಮನೆಗೆ ಕರೆಸಿ ವಾರ್ನ್ ಮಾಡಿ ಕಳುಹಿಸಿದ್ದ. ಅದೇ ಕೋಪ ಇಟ್ಟುಕೊಂಡಿದ್ದ ಪ್ರವೀಣ ಆವತ್ತು ಎಳೆನೀರು ಕೊಚ್ಚುವ ಮಚ್ಚು ತಂದು ಸಂಗನಗೌಡನ ಕಥೆಯನ್ನ ಮುಗಿಸಿಯೇಬಿಟ್ಟ. ನಮ್ಮ ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿ ವಾರ್ನ್ ಮಾಡಿದ್ದಕ್ಕೆ, ಮನಸ್ಸಲ್ಲಿ ಸೇಡಿಟ್ಟುಕೊಂಡು, ಯುವತಿಯ ತಂದೆಯನ್ನ ಮಚ್ವಿನಿಂದ ಕೊಚ್ವಿ ಬರ್ಬರವಾಗಿ ಕೊಲೆಗೈದಿದ್ದಾನೆ.

ಕುಂಬ್ರ - ಕಾರುಗಳ ಮಧ್ಯೆ ಭೀಕರ ಅಪಘಾತ : ಮಡಿಕೇರಿ ಮೂಲದ ರವೀಂದ್ರ, ಲೊಕೇಶ್ ಮೃತ್ಯು

Posted by Vidyamaana on 2024-06-16 18:38:37 |

Share: | | | | |


ಕುಂಬ್ರ - ಕಾರುಗಳ ಮಧ್ಯೆ ಭೀಕರ ಅಪಘಾತ : ಮಡಿಕೇರಿ ಮೂಲದ ರವೀಂದ್ರ, ಲೊಕೇಶ್  ಮೃತ್ಯು

ಪುತ್ತೂರು: ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

Posted by Vidyamaana on 2023-10-09 08:56:05 |

Share: | | | | |


ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತವಾಗಿದೆ, ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ , ಪ್ರಾಣತ್ಯಾಗವನ್ನು ಮಾಡಿದ್ದಾರೆ. ನಮ್ಮ ದೇಶಕ್ಕೆ ಸುಲಭದಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ ಆದರೆ ನಾವಿಂದು ದೇಶದ ಇತಿಹಾಸವನ್ನು ಮರೆತು ಧರ್ಮ, ಜಾತಿಯ ಹೆಸರಿನಲ್ಲಿ ಕಚ್ಚಾಟ ನಡೆಸಿ ಭಾರತದ ಸೌಂದರ್ಯವನ್ನೇ ಹಾಳುಮಾಡುತ್ತಿದ್ದೇವೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಟ್ಟಂಪಾಡಿ ಗ್ರಾಮದ ಇರ್ದೆ ಪೇರಲ್ತಡ್ಕ ನವೀಕೃತಗೊಂಡ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲಾ ಧರ್ಮಗಳು ನ್ಯಾಯ, ಸತ್ಯ, ಅಹಿಂಸೆಯನ್ನೇ ಕಲಿಸುತ್ತದೆ, ಆದರೆ ಆ ಧರ್ಮವನ್ನು ನಂಬಿರುವ ನಾವು ನಾನು ಮೇಲು ಅವನು ಕೀಲು ಎಂಬ ದೃಷ್ಟಿಯಿಂದ ಕಚ್ಚಾಟ ಮಾಡುತ್ತಿದ್ದೇವೆ ಇದು ಸಲ್ಲದು, ಭಾರತ ವಿಶ್ವಗುರುವಾಗಬೇಕಾದರೆ ದೇಶದಲ್ಲಿ ಕೋಮು ಸೌಹಾರ್ಧತೆ ನೆಲೆಯೂರಬೇಕು, ಪ್ರತೀಯೊಬ್ಬ ಭಾರತೀಯರೂ ಒಂದೇ ತಾಯಿ ಮಕ್ಕಳಂತೆ ಬಾಳಿಬದುಕಬೇಕಾಗಿದೆ ಎಂದು ಹೇಳಿದರು.ನೊಂದವರಿಗೆ ನಾವು ಧರ್ಮ , ಜಾತಿ ನೋಡದೆ ಸಹಾಯ ಮಾಡುವ , ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ಇದ್ದಲ್ಲಿ ಮಾತ್ರ ನಮ್ಮ ಊರು ಶಾಂತಿಯ ನೆಲೆ ಬೀಡಾಗಲು ಸಾಧ್ಯ ಎಂಬುದನ್ನು ಪ್ರತೀಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು ರಾಜಕೀಯ ಲಾಭಕ್ಕೋಸ್ಕರ ಕೆಲವೊಂದು ರಾಜಕೀಯ ಪಕ್ಷಗಳು ಇಲ್ಲಿ ಕೋಮು ವಿಷ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿದೆ ಇದರ ಬಗ್ಗೆ ಜನರಲ್ಲಿ ಜಾಗೃತಿಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಮಂಜೇಶ್ವರ ಸಾಸಕರಾದ ಎಂ ಕೆ ಎಂ ಅಶ್ರಫ್‌ರವರು ಮಾತನಾಡಿ ಭಾರತದ ಜಾತ್ಯಾತೀತ ತತ್ವ ಅದು ಎಂದೆಂದೂ ಇಲ್ಲಿ ನೆಲೆ ನಿಲ್ಲಿದೆ ಅದನ್ನು ತೊಡೆದು ಹಾಕಲು ಯಾವ ಕೋಮು ಶಕ್ತಿಗೂ ಸಾಧ್ಯವಿಲ್ಲ. ದೇಶದಲ್ಲಿ ೯೦ ಶೇ. ಜನರಲ್ಲಿ ಹರಿಯುವ ರಕ್ತ ಅದು ಸೌಹಾರ್ಧತೆಯ ರಕ್ತವಾಗಿದೆ. ದೇಶದ ಮೊದಲ ಸ್ವಾತಂತರ್‍ಯ ಹೋರಾಟವನ್ನು ಆರಂಭ ಮಾಡಿದ್ದು ಓರ್ವ ಮುಸ್ಲಿಂ ಧರ್ಮಗುರುವಾಗಿದ್ದರ ಅವರಿಗೆ ಇಲ್ಲಿನ ಶೇ.೧೦೦ ಹಿಂಧೂ ಬಂಧುಗಳು ಬೆಂಬಲ ನೀಡಿದ್ದರು ಎಂಬ ಇತಿಹಾಸವನ್ನು ನಾವು ಮರೆಯಬಾರದು. ದೇಶದ ಸೌಹಾರ್ಧತೆಯನ್ನು ಹಾಳು ಮಾಡುವ ಶಕ್ತಿಗಳ ವಿರುದ್ದ ನಾವು ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದರು. ಕೆಪಿಸಿಸಿ ಸಂಯೋಜಕರಾದ ಕವು ಹೇಮನಾಥ ಶೆಟ್ಟಿ ಮಾತನಾಡಿ ಸೌರ್ಹಾರ್ಧತೆ ಎಂಬುದು ಹೃದಯದಲ್ಲಿ ಹುಟ್ಟುವಂತದ್ದು ಕೋಮುವಾದ ಮೈಗೂಡಿಸಿಕೊಂಡಲ್ಲಿ ಈ ದೇಶದಲ್ಲಿ ಬದುಕುವುದು ಕಷ್ಟ ಸಾಧ್ಯವಾಗಿದೆ. ಕೋಮುವಾದವನ್ನು ಮಾಡಿ ಜನರ ನಡುವೆ ಕಲಹ ಸೃಷ್ಟಿಸಿದವರು ಯಾವ ಸಾಧನೆಯನ್ನು ಮಾಡಿಲ್ಲ, ಇನ್ನೂ ಮಾಡುವುದು ಇಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ ಮಂಜೇಶ್ವರ ಶಾಕರಾದ ಎಂ ಕೆ ಎಂ ಅಶ್ರಫ್‌ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಸ್ವಾಗತಿಸಿದರು. ಆಸಿಫ್ ಹಾಜಿ ತಂಬುತ್ತಡ್ಕ ವಂದಿಸಿದರು.

ಮಣಿಪುರ -ಜೈಪುರ ಸಹಿತ ಹಲವೆಡೆ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ

Posted by Vidyamaana on 2023-07-21 03:52:22 |

Share: | | | | |


ಮಣಿಪುರ -ಜೈಪುರ  ಸಹಿತ ಹಲವೆಡೆ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ

ಜೈಪುರ: ಶುಕ್ರವಾರ ಮುಂಜಾನೆ ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮೂರು ಕಂಪನಗಳು ಕೇವಲ 30 ನಿಮಿಷಗಳ ಅವಧಿಯಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ.

ಶುಕ್ರವಾರ ನಸುಕಿನ ಜಾವಾ 4 ಗಂಟೆಯಿಂದ 4;30 ನಿಮಿಷಗಳ ಅವಧಿಯಲ್ಲಿ ಮೂರು ಕಂಪನಗಳು ಸಂಭವಿಸಿದೆ ಎಂದು ಹೇಳಲಾಗಿದೆ ಅದರಲ್ಲಿ 4.09ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4.22ರ ಸುಮಾರಿಗೆ 3.1 ರ ತೀವ್ರತೆ ಹಾಗೂ 4.25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನದ ಅನುಭವಾಗಿದೆ ಎಂದು ಹೇಳಲಾಗಿದೆ.


ಕಂಪನದ ಅನುಭವವಾಗುತ್ತಿದ್ದಂತೆ ಜನ ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ, ಭೂಕಂಪನದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.


ಮಣಿಪುರದಲ್ಲೂ 3.5 ತೀವ್ರತೆಯ ಕಂಪನ:

ಶುಕ್ರವಾರ ಮುಂಜಾನೆ ಸುಮಾರು 5.01ಕ್ಕೆ ಮಣಿಪುರದ ಉಖ್ರುಲ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



Leave a Comment: