Posted by vidyamaana on 2024-07-25 13:38:46 |
ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ
ಇದು ಹೇಗೆ ಕಾರ್ಯನಿರ್ವಹಿಸುತ್ತದೆ
ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.
ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ
ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ
ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.
Posted by Vidyamaana on 2024-06-19 21:04:57 |
ಬೋಪಾಲ್: ದೇಶದಲ್ಲಿ ಸಿ ದರ್ಜೆ, ಡಿ ದರ್ಜೆ ನೌಕರರನ್ನು ನೇಮಿಸಿಕೊಳ್ಳಲು ಕೂಡ ಮಾನದಂಡ ಇದೆ. ಕನಿಷ್ಠ ಇಷ್ಟೇ ಶಿಕ್ಷಣ ಪಡೆದಿರಬೇಕು ಎಂಬ ನಿಯಮವಿದೆ. ಆದರೆ, ದೇಶದ ಭವಿಷ್ಯ ರೂಪಿಸಬೇಕಾದ ರಾಜಕಾರಣಿಗಳಿಗೆ ಯಾವುದೇ ಶೈಕ್ಷಣಿಕ ಹಿನ್ನೆಲೆಯ ಕಟ್ಟುಪಾಡುಗಳಿಲ್ಲ. ಇದೇ ಕಾರಣಕ್ಕೆ, 10ನೇ ಕ್ಲಾಸು ಫೇಲಾದವರು ಗ್ರಂಥಾಲಯ ಸಚಿವರಾಗುತ್ತಾರೆ, ಓದಲು ಬರದವರೂ ಶಿಕ್ಷಣ ಸಚಿವರಾಗುತ್ತಾರೆ.
ಇದಕ್ಕೆ ನಿದರ್ಶನ ಎಂಬಂತೆ, ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್ (Savitri Thakur) ಅವರು ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (Beti Bachao Beti P
non
hao) ಅಭಿಯಾನವನ್ನು ಹಿಂದಿಯಲ್ಲಿ ಬರೆಯಲು ಪರದಾಡಿದ್ದಾರೆ. ಅವರು ಅಭಿಯಾನದ ಹೆಸರನ್ನು ತಪ್ಪಾಗಿ ಬರೆದ ವಿಡಿಯೊ ಈಗ ವೈರಲ್ (Viral Video) ಆಗಿದೆ.ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಹಾಯಕ ಸಚಿವೆಯಾಗಿರುವ ಸಾವಿತ್ರಿ ಠಾಕೂರ್ ಅವರು ಮಧ್ಯಪ್ರದೇಶದ ಧಾರ್ನಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಸ್ಕೂಲ್ ಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅವರು ಬೋರ್ಡ್ ಮೇಲೆ ಬೇಟಿ ಬಚಾವೋ ಬೇಟಿ ಪಡಾವೋ ಎಂಬುದಾಗಿ ಬರೆಯಲು ಮುಂದಾಗಿದ್ದಾರೆ. ಆದರೆ, ಅಭಿಯಾನದ ಹೆಸರು ಬರೆಯಲು ಅವರಿಗೆ ಬಂದಿಲ್ಲ. ಅವರು ಬೇಡಿ ಪಡಾವೋ ಬಚ್ಚಾವ್ ಎಂಬುದಾಗಿ ತಪ್ಪಾಗಿ ಬರೆದಿದ್ದಾರೆ.
Posted by Vidyamaana on 2024-04-22 08:58:47 |
ಕಾರವಾರ: ಮಕ್ಕಳು ಸೇರಿ ಒಂದೇ ಕುಟುಂಬದ ಆರು ಪ್ರವಾಸಿಗರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ.
40 ವರ್ಷದ ನಝೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಮೃತರು. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು.
Posted by Vidyamaana on 2024-07-19 04:07:45 |
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ನಾಳೆಯಿಂದ ಜು.21ರವರೆಗೆ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಮತ್ತು ಮಳೆ ಮುಂದುವರೆಯಲಿದೆ.
Posted by Vidyamaana on 2023-08-16 10:12:33 |
ಉಪ್ಪಿನಂಗಡಿ: ಕೋಡಿಂಬಾಡಿ ಗ್ರಾ.ಪಂ.ನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ, ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಯಪ್ರಕಾಶ್ ಬದಿನಾರು ಆಯ್ಕೆಯಾಗಿದ್ದಾರೆ.11 ಸದಸ್ಯ ಬಲವನ್ನು ಹೊಂದಿರುವ ಗ್ರಾ.ಪಂ. ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮೀಸಲಾತಿ ಬಂದಿದೆ. ಇಲ್ಲಿನ 11 ಮಂದಿ ಸದಸ್ಯರಲ್ಲಿ ಆರು ಮಂದಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದು, ಐದು ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು. ಇಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಉಷಾ ಲಕ್ಷ್ಮಣ, ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯ ರಾಮಚಂದ್ರ ಪೂಜಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಪ್ರಕಾಶ್ ಬದಿನಾರು ನಾಮಪತ್ರ ಸಲ್ಲಿಸಿದ್ದರು.
Posted by Vidyamaana on 2023-05-20 07:30:03 |
ಬೆಂಗಳೂರು: “ಸಿದ್ದರಾಮಯ್ಯ ಎಂಬ ಹೆಸರಿನ ನಾನು…… “ ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
Posted by Vidyamaana on 2024-06-08 17:17:10 |
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್ ರಾಡ್ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ.
ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.
ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್ ಫಂಡ್ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.
ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.
ಬಳಿಕ ಆತನ ಮೊಬೈಲ್ ಲೋಕೇಶನ್ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.