ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


5 ವರ್ಷದಿಂದ ವಿಟ್ಲದ ಬಾಲಕಿಗೆ ಲೈಂಗಿಕ ಕಿರುಕುಳ- ಕೇರಳದ ಯುವಕರ ಮೇಲೆ ಕೇಸ್

Posted by Vidyamaana on 2023-07-30 12:11:11 |

Share: | | | | |


5 ವರ್ಷದಿಂದ ವಿಟ್ಲದ ಬಾಲಕಿಗೆ ಲೈಂಗಿಕ ಕಿರುಕುಳ- ಕೇರಳದ ಯುವಕರ ಮೇಲೆ ಕೇಸ್

ವಿಟ್ಲ: ಬಾಲಕಿ ಮೇಲೆ, ಬೇರೆ ಬೇರೆ ಯುವಕರು ಬೇರೆ ಬೇರೆ ಸಂದರ್ಭದಲ್ಲಿ ಲೈಂಗಿಕ ಅಪರಾಧ ನಡೆಸಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪರಿಶಿಷ್ಟ ಪಂಗಡಕ್ಕೆ ಸೇರಿದ 16 ವರ್ಷದ ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಅಪರಾಧ ನಡೆಸಿದ್ದರು.ಬಾಲಕಿ ಮನೆಗೆ ಈಚೆಗೆ ಒಂದು ದಿನ ಬರುವಾಗ


ತಡವಾದ ಬಗ್ಗೆ ವಿಚಾರಿಸಿದಾಗ ಆಕೆ ಈ ಬಗ್ಗೆ ಮಾಹಿತಿ ನೀಡಿದ್ದಳು. ಐವರು ಆರೋಪಿಗಳು ಲೈಂಗಿಕ ಅಪರಾಧ ನಡೆಸಿದ್ದಾರೆ. 2019ರಿಂದಲೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿಗಳಲ್ಲಿ ಒಬ್ಬಾತ ಬಾಲಕಿಯ ಬಂಧು. ಉಳಿದವರು ಕೇರಳದವರು ಎಂದು ಪೋಷಕರು ತಿಳಿಸಿದ್ದಾರೆದೂರಿನಲ್ಲಿ ಆರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸ್‌) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ

ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

Posted by Vidyamaana on 2024-02-29 04:26:07 |

Share: | | | | |


ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಾನಸಭಾ ಕಲಾಪದಲ್ಲೂ ಭಾಗವಹಿಸಲು ಸಾಧ್ಯವಾಗದೆ ಅವರು ಇಂದು ಜಯನಗರದ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಸ್ ನಿಲ್ದಾಣ ಮುಂಭಾಗ ಬಸ್ ಆಮ್ನಿ ಅಪಘಾತ

Posted by Vidyamaana on 2023-07-27 05:52:10 |

Share: | | | | |


ಬಸ್ ನಿಲ್ದಾಣ ಮುಂಭಾಗ ಬಸ್ ಆಮ್ನಿ ಅಪಘಾತ

ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗ ಬಸ್ ಹಾಗೂ ಆಮ್ನಿ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಅಪಘಾತದಿಂದ ಕಾರಿಗೆ ಹಾನಿಯಾಗಿದ್ದು, ಘಟನೆಗೆ ಕೆ.ಎಸ್.ಆರ್.ಟಿ.ಸಿ.ಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.

ಪುತ್ತೂರು ಕೆ.ಎಸ್.ಆರ್.ಟಿ.ಸಿ. ಮುಂಭಾಗ ತೀರಾ ಇಕ್ಕಟ್ಟಿನ ರಸ್ತೆ. ಹಾಗಿದ್ದು, ಕೆ.ಎಸ್.ಆರ್.ಟಿ.ಸಿ. ಮುಂಭಾಗ ಅಧಿಕಾರಿಗಳು ಬ್ಯಾರಿಕೇಡ್ ಹಾಕಿ, ಇನ್ನಷ್ಟು ಸಮಸ್ಯೆಗೆ ಕಾರಣರಾಗಿದ್ದಾರೆ. ಇದರ ಬಗ್ಗೆ ಅಧಿಕಾರಿಗಳ ಗಮನ ಸೆಳೆದರೂ, ಸ್ಪಂದಿಸದೇ ಇರುವುದು ಘಟನೆಗೆ ಕಾರಣ.

ಕೆ.ಎಸ್.ಆರ್.ಟಿ.ಸಿ. ಮುಂಭಾಗ ನಾಲ್ಕು ರಸ್ತೆ ಸಂಧಿಸುವ ಪ್ರಮುಖ ಸ್ಥಳ. ಇದರಲ್ಲಿ ಎರಡು ರಸ್ತೆ ವನ್ ವೇ ಆಗಿರುವುದು ಸಮಾಧಾನದ ಸಂಗತಿ. ಹಾಗೆಂದು ವಾಹನಗಳ ಸಂಖ್ಯೆಯೇನೂ ಕಡಿಮೆ ಇಲ್ಲ. ಹಳೆ ಪೋಸ್ಟ್ ಕಚೇರಿ ಸಂಪರ್ಕಿಸುವ ರಸ್ತೆ, ಮುಖ್ಯರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ, ನೆಲ್ಲಿಕಟ್ಟೆಯಿಂದ ಬರುವ ರಸ್ತೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಬರುವ ರಸ್ತೆ. ಈ ನಾಲ್ಕು ರಸ್ತೆಗಳ ವಾಹನಗಳು ಬಂದು ಸೇರುವ ಜಂಕ್ಷನ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗ.

ಇಷ್ಟು ಒತ್ತಡವಿದ್ದರೂ, ಕೆ.ಎಸ್.ಆರ್.ಟಿ.ಸಿ.ಗೆ ಬರುವ ಖಾಸಗಿ ವಾಹನಗಳನ್ನು ನಿಲ್ಲಿಸಲು ಸ್ಥಳಾವಕಾಶವಿಲ್ಲ. ಇದ್ದ ಸ್ಥಳವನ್ನು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಬ್ಯಾರಿಕೇಡ್ ಹಾಕಿ, ಬಂದ್ ಮಾಡಿದ್ದಾರೆ. ಹಾಗೆಂದು ಬಸ್ ಟರ್ಮಿನಲ್ ಒಳಗಡೆಗೆ ಖಾಸಗಿ ವಾಹನಗಳ ಪ್ರವೇಶ ನಿಷಿದ್ಧ. ಹಾಗಾದರೆ ಸಾರ್ವಜನಿಕರು ಬಂದಿಳಿಯಲು ವಾಹನ ನಿಲ್ಲಿಸುವುದು ಎಲ್ಲಿ? ಬಸ್ ಟರ್ಮಿನಲಿನ ಮುಂಭಾಗದ ರಸ್ತೆಯಲ್ಲೇ ನಿಲ್ಲಿಸಬೇಕಷ್ಟೇ. ಹೆಚ್ಚಲ್ಲ, ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಪ್ರಯಾಣಿಕರನ್ನು ಹತ್ತಿಸಲು ರಸ್ತೆಯಲ್ಲೇ ನಿಲ್ಲಿಸುವುದು ಇಲ್ಲಿ ಸಾಮಾನ್ಯವಾಗಿ ಕಂಡುಬರುವ ದೃಶ್ಯ.

ಹೀಗಿರುವಾಗ ಮುಂಭಾಗದ ಅಗಲ ಕಿರಿದಾದ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳು ಓಡಾಡುವುದಾದರೂ ಹೇಗೆ? ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಕೇಳಿಯೂ ಕೇಳದಂತೆ, ನೋಡಿಯೂ ನೋಡದಂತೆ ಇರುವುದಾದರೂ ಯಾಕೆ? ಕೆ.ಎಸ್.ಆರ್.ಟಿ.ಸಿ.ಯ ತಪ್ಪು ನಿರ್ಧಾರಕ್ಕೆ ಗುರುವಾರ ಬೆಳಿಗ್ಗೆ ಅಪಘಾತ ನಡೆದಿದ್ದು, ಅಮಾಯಕರು ಕಷ್ಟ ಅನುಭವಿಸುವಂತಾಯಿತು.

ಬ್ಯಾರಿಕೇಡ್ ಹಾಕಿದ್ದಾದರೂ ಯಾಕೆ?

ಕೆ.ಎಸ್.ಆರ್.ಟಿ.ಸಿ. ಮುಂಭಾಗ ಬ್ಯಾರಿಕೇಡ್ ಹಾಕಲು ಒಂದು ಕಾರಣವಿತ್ತು. ಅಂದು ಅವಳಿ ವೀರರಾದ ಕೋಟಿ – ಚೆನ್ನಯರ ಹೆಸರನ್ನು ಟಸ್ ಟರ್ಮಿನಲಿಗೆ ನಾಮಕಾರಣ ಮಾಡುವ ದಿನ. ಸಚಿವರು, ಶಾಸಕರು ಆಗಮಿಸಬೇಕಾಗಿತ್ತು. ಹಾಗೇ ಬರುವಾಗ ನಿಲ್ದಾಣದ ಮುಂಭಾಗ ಒತ್ತಡ ನಿರ್ಮಾಣವಾಯಿತು. ಈ ಒಂದೇ ಕಾರಣಕ್ಕೆ, ಬಸ್ ಟರ್ಮಿನಲ್ ಮುಂಭಾಗ ಬ್ಯಾರಿಕೇಡ್ ಹಾಕಲಾಯಿತು. ಅದನ್ನು ಒಂದು ದಿನಕ್ಕೆ ಸೀಮಿತ ಮಾಡಬಹುದಿತ್ತು. ಆದರೆ ಹಾಗೇ ಮಾಡಲಿಲ್ಲ. ಅದನ್ನೇ ಶಾಶ್ವತವಾಗಿಸುವ ಯೋಜನೆ ಅಧಿಕಾರಿಗಳದ್ದು.

ಕಾನೂನನ್ನು ಬಡವರ ಮೇಲೆ ಹೇರುವ ಅಧಿಕಾರಿಗಳು, ತಮ್ಮ ವ್ಯಾಪ್ತಿಗೆ ಬಂದಾಗ ಕಣ್ಣುಮುಚ್ಚಿ ಕುಳಿತುಕೊಳ್ಳುವುದು ಮಾತ್ರ ವಿಪರ್ಯಾಸ. ವಾಣಿಜ್ಯ ಸಂಕೀರ್ಣದ ಮುಂಭಾಗದ ಪಾರ್ಕಿಂಗ್ ಜಾಗವನ್ನು ಮುಚ್ಚುವಂತೆಯೇ ಇಲ್ಲ. ಅಥವಾ ತನ್ನ ಗ್ರಾಹಕರಿಗೆ ಮಾತ್ರ ಎಂದು ಬೋರ್ಡ್ ಹಾಕುವಂತೆ ಇಲ್ಲ ಎಂದು ಇತ್ತೀಚೆಗೆ ನ್ಯಾಯಾಲಯ ಸೂಚನೆ ನೀಡಿರುವುದೂ ಕೂಡ ಇಲ್ಲಿ ಉಲ್ಲೇಖನೀಯ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 3

Posted by Vidyamaana on 2023-09-03 01:50:16 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 3

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 3 ರಂದು



ಬೆಳಿಗ್ಗೆ 10 ಗಂಟೆಗೆ ದ ಕ ಜಿಲ್ಲಾ ಟ್ಯಾಕ್ಸಿಮೆನ್ ,ಮ್ಯಾಕ್ಸಿಕ್ಯಾಬ್  ಅಸೋಸಿಯೇಶನ್ ಸುರ್ಣಮಹೋತ್ಸವ


ಸ್ಥಳ: ಮಂಗಳೂರು ಪುರಭವನ


11 ಗಂಟೆಗೆ ಕೆಪಿಟಿ ಮಂಗಳೂರಿನಲ್ಲಿ ಅಭಿಮತ ಚಾನೆಲ್ ಉದ್ಘಾಟನೆ


12 ಗಂಟೆಗೆ ಕಂಬಳಬೆಟ್ಟುವಿನಲ್ಲಿ ಸೇವಾ ಸಹಕಾರಿ ಸಂಘ ಉದ್ಘಾಟ‌ನೆ


4 ಗಂಟೆಗೆ ಅಜ್ಜನಡ್ಕ ಸೌಹಾರ್ಧ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ 

 ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ

ಪುತ್ತೂರು : ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜುಲೈ 04) ವಿದ್ಯುತ್ ನಿಲುಗಡೆ!!!

Posted by Vidyamaana on 2023-07-03 23:42:26 |

Share: | | | | |


ಪುತ್ತೂರು : ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜುಲೈ 04) ವಿದ್ಯುತ್ ನಿಲುಗಡೆ!!!

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಟ್ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ, ಮುಕ್ವೆ ಮತ್ತು ಮುಂಡೂರು ಫೀಡರ್‌ನಲ್ಲಿ ಜು.4ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 4ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೂರ್ನಡ್ಕ, ಕೆಮ್ಮಿಂಜೆ, ಮರೀಲ್, ಮುಕ್ರಂಪಾಡಿ, ಮೊಟ್ಟೆತ್ತಡ್ಕ, ಮುಂಡೂರು ಮತ್ತು ಸಂಪ್ಯ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರು ಖಾಸಗಿ ಶಾಲಾ ಬಸ್‌ನಿಂದ ಸರಣಿ ಅಪಘಾತ

Posted by Vidyamaana on 2023-12-07 09:32:53 |

Share: | | | | |


ಪುತ್ತೂರು ಖಾಸಗಿ ಶಾಲಾ ಬಸ್‌ನಿಂದ ಸರಣಿ ಅಪಘಾತ

ಪುತ್ತೂರು: ಪುತ್ತೂರು ನಗರದ ಬೈಪಾಸ್ ನಲ್ಲಿರುವ ಖಾಸಗಿ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಡಿ. 06 ಬುಧವಾರ ಮಧ್ಯಾಹ್ನ ನಡೆದಿದೆ.


 ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದ್ದು ಇದರಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರ ಪುತ್ರ ಬಿಪಿನ್ ರವರ  ಕಾರು,ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ್ ಗೌಡ ಬೆಳ್ಳಿಪ್ಪಾಡಿಯವರ ಅಲ್ಲೋ ಕಾರು ಸೇರಿದೆ.


  ಬಸ್ ನ್ನು ಬೆಳ್ತಂಗಡಿ ಮೊಗ್ರು ಮೂಲದ ಜನಾರ್ದನ ಎಂಬವರು ಚಲಾಯಿಸುತ್ತಿದ್ದರು. ಬಸ್ಸಿನಲ್ಲಿ ಹಲವು ಮಕ್ಕಳು ಪ್ರಯಾಣಿಸುತ್ತಿದ್ದು ಅದೇ ಬಸ್ಸಿನ ಮಾಲಕ ಪಾನಮತ್ತನಾಗಿದದ್ದು ಆತಂಕಕಾರಿ ವಿಚಾರವಾಗಿದೆ.


ಸರಿ ಸುಮಾರು 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಕಾರುಗಳು  ಜಖಂ ಆಗಿದೆ.ಅದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಲು ಅವರು ರಸ್ತೆಗಿಂತ ತುಸು ದೂರದಲ್ಲಿ ಶಾಲೆಯ ಸಮೀಪ ಕಾರು ನಿಲ್ಲಿಸಿದ್ದರು. ಮಕ್ಕಳು ಕಾರಿಗೆ ಹತ್ತಿದ ಕೆಲವೇ ಕ್ಷಣದಲ್ಲಿ ಶಾಲಾ ಬಸ್ಸು ಬಂದು ಕಾರಿನ ಹಿಬ್ಬಂದಿಗೆ ಢಿಕ್ಕಿ ಹೊಡೆದಿದೆ. ಮಕ್ಕಳು ಕಾರಿಗೆ ಹತ್ತಲು ಬಂದ ದಾರಿಯಲ್ಲೆ ಬಂದ ಬಸ್ಸು ಢಿಕ್ಕಿ ಹೊಡೆದಿದ್ದು, ಬಸ್ಸು ಕೆಲವೇ ಸೆಕೆಂಡ್ ಲೇಟಾಗಿ ಬಂದಿದರಿಂದ ಮಕ್ಕಳು ಆಪಾಯದಿಂದ ಪಾರಾದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಅಪಘಾತ ನಡೆದ ಬಳಿಕವು ಬಸ್ಸನ್ನು ನಿಲ್ಲಿಸದ ಚಾಲಕ ಯದ್ವಾತದ್ವಾ ಬಸ್ಸು ಚಲಾಯಿಸಿದ್ದು, ಆಶ್ಮಿ ಕಂಫರ್ಟ್ಸ್ ನಿಂದ ಬರುತ್ತಿದ್ದ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರ ಪುತ್ರ ಬಿಪಿನ್ ಚಲಾಯಿಸುತ್ತಿದ್ದ ಹೋಂಡಾ ಸಿಟಿ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ.  ಬಸ್ಸು ಮುರದ ಸಮೀಪವು ವಾಹನವೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಸ್ಥಳೀಯರು ಬಸ್ಸನ್ನು ತಡೆದು ಚಾಲಕನನ್ನು ಹಿಡಿದು ಸಂಚಾರಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.ಬಸ್ ನಲ್ಲಿ ಮಕ್ಕಳಿದ್ದ ಕಾರಣ ಅವರನ್ನು ಮನೆಗೆ ಬಿಡುವ ನಿಟ್ಟಿನಲ್ಲಿ ಪೊಲೀಸರು ಬಸ್ಸನ್ನು ಅದೇ ವಿದ್ಯಾಸಂಸ್ಥೆಯ ಬೇರೆ ಚಾಲಕನ ಕೈಯಲ್ಲಿ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.  ಅಪಘಾತಕ್ಕಿಡಾದ ಅಲ್ಲೋ ಕಾರು ಹಾಗೂ ಹೋಂಡಾ ಸಿಟಿ ಕಾರನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. .ಶಕುಂತಳಾ ಶೆಟ್ಟಿಯವರ ಪುತ್ರ ಬಿಪಿನ್ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Recent News


Leave a Comment: