ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಸುದ್ದಿಗಳು News

Posted by vidyamaana on 2024-07-08 20:09:58 |

Share: | | | | |


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಮಂಗಳೂರು: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.

 Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರಿಂದ ಗ್ರಾಮೀಣ ಮತದಾರರ ಭೇಟಿ; ಮತ ಯಾಚನೆ

Posted by Vidyamaana on 2023-05-06 23:19:43 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರಿಂದ ಗ್ರಾಮೀಣ ಮತದಾರರ ಭೇಟಿ; ಮತ ಯಾಚನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಗ್ರಾಮಗಳಿಗೆಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಶನಿವಾರ ಮತಯಾಚನೆ ನಡೆಸಿದರು. ಮುಖ್ಯವಾಗಿ ದಲಿತ ಕಾಲನಿಗಳು ಹಾಗೂ ಮನೆ ಮನೆಗೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೆಬಂಡಾಡಿ, ಬನ್ನೂರು, ಒಳಮೊಗ್ರು, ಅರಿಯಡ್ಕ, ಬಜತ್ತೂರು, ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಹಲವಾರು ಕಾರ್ಯಕರ್ತರು ಇವರ ಜೊತೆಗಿದ್ದು ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅಶೋಕ್ ರೈ ಬಹುತೇಕ ದಲಿತ ಕಾಲನಿಗಳು ಇನ್ನೂ ಅಭಿವೃದ್ದಿ ಕಂಡಿಲ್ಲ. ರಸ್ತೆಯಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಸಮರ್ಪಕವಾಗಿ ಮಾಡಿಲ್ಲ. ದಲಿತರ ಅಭಿವೃದ್ದಿಗೆ ಸರಕಾರ ವರ್ಷದಿಂದ ವರ್ಷಕ್ಕೆ ಕೋಟಿಗಟ್ಟಲೆ ಅನುದಾನವನ್ನು ಮೀಸಲಿಡುತ್ತದೆ ಆದರೆ ಆ ಅನುದಾನ ಎಲ್ಲಿ ಬಳಕೆಯಾಗಿದೆ ಎಂಬುದು ಗೊತ್ತಾಗುತ್ತಿಲ್ಲ. ಕಳೆದ ಐದು ವರ್ಷಗಳಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ. ಮುಗ್ದ ಜನರನ್ನು ಧರ್ಮದ ಹೆಸರಿನಲ್ಲಿ ಬಲಿಪಶುಗಳನ್ನಾಗಿ ಮಡಿ ಅವರನ್ನು ಬಳಕೆ ಮಾಡಿಕೊಂಡ ಬಿಜೆಪಿ ಅವರ ಅಭಿವೃದ್ದಿಗೆಂದೇ ಬಂದ ಹಣವನ್ನು ಇಲ್ಲಿ ವಿನಿಯೋಗಿಸಿಲ್ಲ ಎಂದು ಅರೋಪಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಪುತ್ತೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಿದರೆ ಎಲ್ಲಾ ಕಾಲನೊಗಳ ಸಂಪೂರ್ಣ ಅಭಿವೃದ್ದಿ ಮಾಡುವುದಾಗಿ ಭರವಸೆ ನೀಡಿದರು.ಈ ಸಂದರ್ಬದಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅದ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಮುರಳೀಧರ್ ರೈ ಮಠಂತಬೆಟ್ಟು , ಉಪ್ಪಿನಂಗಡಿ ಗ್ರಾಪಂ ಸದಸ್ಯ ಯು ಟಿ ತೌಸೀಫ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು, ಗ್ರಾಪಂ ಸದಸ್ಯರುಗಳು, ಮಾಜಿ ಗ್ರಾಪಂ ಸದಸ್ಯರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ತಿತರಿದ್ದರು. ಮನೆ ಮನೆ ಭೇಟಿ ವೇಳೆ ಅಶೋಕ್ ರೈ ಯವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಯಿತು.

ಮೃತ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ಶಾಸಕ ಅಶೋಕ್ ರೈ ಭೇಟಿ

Posted by Vidyamaana on 2024-01-26 18:40:39 |

Share: | | | | |


ಮೃತ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಜ.25 ರಂದು ಮೃತಪಟ್ಟ ಅರಿಯಡ್ಕ ಗ್ರಾಮದ ಕುಂಜೂರು ಪನೆಕ್ಕಲ್ ನಿವಾಸಿ ರವೀಂದ್ರ ಮಣಿಯಾಣಿಯವರ ಮನೆಗೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ರವೀಂದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕರು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ.ಮೃತ ಕಾರ್ಯ ಕರ್ತನ ಮಕ್ಕಳ ವಿದ್ಯಾಬ್ಯಾಸಕ್ಕೆ ನೆರವು ನೀಡುವುದಾಗಿ ಶಾಸಕರು ತಿಳಿಸಿದರು.

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ-ತಾಯಿ

Posted by Vidyamaana on 2024-05-16 16:58:06 |

Share: | | | | |


ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ-ತಾಯಿ

ಬೆಂಗಳೂರು (ಮೇ 16): ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುತ್ತಿಗೆ ಸೀಳಿದ ರೀತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಯುವತಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾಳೆ. ಅದು ಕೂಡ ಕುತ್ತಿಗೆ ಹಾಗೂ ಕೈಗಳನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾಳೆ. ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದ್ದು, ಯುವತಿಯ ತಾಯಿ ಮಾತ್ರ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಯಾರೋ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇಂದು (ಜು.18ರಂದು) ದ.ಕ ಜಿಲ್ಲೆಯ 5 ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Posted by Vidyamaana on 2024-07-18 06:44:00 |

Share: | | | | |


ಇಂದು (ಜು.18ರಂದು) ದ.ಕ ಜಿಲ್ಲೆಯ 5 ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು :ಮಳೆ ಮುಂದುವರಿದಿರುವ ಹಿನ್ನಲೆಯಲ್ಲು ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ಡೀಸಿ ಆದೇಶ ಪ್ರಕಾರ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕು ರಜೆ ಘೋಷಣೆಯಾಗಿಲ್ಲ

ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

Posted by Vidyamaana on 2024-05-24 11:06:49 |

Share: | | | | |


ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

ಕನ್ಯಾನ : ಸಂಶಯಾಸ್ಪದವಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಶವ ದಫನ ಮಾಡಿದ ಬಳಿಕ, ಸಾವಿನಲ್ಲಿ ಸಂಶಯವಿದೆ ಎಂದು ಮೃತ ವ್ಯಕ್ತಿಯ ಸಹೋದರ ಮಂಜೇಶ್ವರ ಠಾಣೆಗೆ ದೂರು ನೀಡಿದ್ದು, ನ್ಯಾಯಾಲಯದ ಆದೇಶದಂತೆ ಕನ್ಯಾನ ಬಂಡಿತ್ತಡ್ಕ ಮಸೀದಿ ಆವರಣದಲ್ಲಿ ದಫನ ಮಾಡಿದ್ದ ಶವವನ್ನು 18 ದಿನಗಳ ಬಳಿಕ ಮೇಲೆತ್ತಿ ಮರಣೋತ್ತರ ಪರೀಕ್ಷೆಯನ್ನು ಗುರುವಾರ ನಡೆಸಲಾಯಿತು.

ಕೇರಳದ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಅವರ ದೇಹವನ್ನು ಕನ್ಯಾನದ ಬಂಡಿತ್ತಡ್ಕದಲ್ಲಿರುವ ರಹ್ಮಾನಿಯಾ ಜುಮಾ ಮಸೀದಿ ಆವರಣದಲ್ಲಿ ದಫನ ಮಾಡಲಾಗಿತ್ತು. ಆ ಶವವನ್ನು ಬಂಟ್ವಾಳ ತಹಶೀಲ್ದಾರ್ ಡಿ.ಅರ್ಚನಾ ಭಟ್, ಮಂಜೇಶ್ವರ ಸಿಪಿಐ ರಾಜೀವ್ ಕುಮಾರ್ ಕೆ., ಕೇರಳ ಆರೋಗ್ಯ ಇಲಾಖೆಯ ಡಾ.ಹರಿಕೃಷ್ಣ ಕಾಸರಗೋಡು, ಯೆನೆಪೋಯ ವಿಧಿವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಕಿಶೋರ್ ಕುಮಾರ್ ಬಿ., ವಿಟ್ಲ ಪೊಲೀಸರ ಸಮ್ಮುಖದಲ್ಲಿ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ದೇಹದ ಅಂಗಾಗಳ ಮಾದರಿಯನ್ನು ವಿಧಿವಿಜ್ಞಾನ ತಂಡ ಪಡೆದುಕೊಂಡಿದ್ದು, ತನಿಖೆಗಾಗಿ ಯೆನೆಪೋಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಬಂದಿದ್ದು, ವರದಿಯನ್ನು ಕೇರಳದ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಜು.26 – ನಾಳೆಯಿಂದ ಎಂ ಸಂಜೀವ ಶೆಟ್ಟಿಯಲ್ಲಿ ವಸ್ತ್ರ ಮೇಳ

Posted by Vidyamaana on 2023-07-25 15:47:47 |

Share: | | | | |


ಜು.26 – ನಾಳೆಯಿಂದ ಎಂ ಸಂಜೀವ ಶೆಟ್ಟಿಯಲ್ಲಿ ವಸ್ತ್ರ ಮೇಳ


ಪುತ್ತೂರು: ಮನೆಮಾತಾಗಿರುವ ಎಂ.ಸಂಜೀವ ಶೆಟ್ಟಿ ಜವುಳಿ ಮಳಿಗೆಯಲ್ಲಿ ಜುಲೈ 26ರಿಂದ ಆಟಿ ಸೇಲ್ ಆರಂಭಗೊಳ್ಳಲಿದೆ.

ಪುತ್ತೂರಿನವರಷ್ಟೇ ಅಲ್ಲ, ಹತ್ತೂರಿನ ಮಂದಿಯೂ ಮೆಚ್ಚುವ ಹೆಸರಾಂತ ವಸ್ತ್ರ ಮಳಿಗೆ ಪುತ್ತೂರಿನ ಎಂ.ಸಂಜೀವ ಶೆಟ್ಟಿ. ಹಾಗಾಗಿ ಎಂ. ಸಂಜೀವ ಶೆಟ್ಟಿಯ ಆಟಿ ಸೇಲ್’ಗೆ ಗ್ರಾಹಕರು ಕಾತರದಿಂದ ಕಾಯುತ್ತಿದ್ದು, ಇದೀಗ ಆ ದಿನ ಹತ್ತಿರ ಬಂದಿದೆ.

ಪ್ರಖ್ಯಾತ ಮಿಲ್’ಗಳಲ್ಲಿ ತಯಾರಾದ ವಸ್ತ್ರಗಳನ್ನು ನೇರವಾಗಿ ಖರೀದಿಸುವುದೇ ಎಂ. ಸಂಜೀವ ಶೆಟ್ಟಿಯ ವಿಶೇಷತೆ. ಹಾಗಾಗಿ ಕಡಿಮೆ ಲಾಭಾಂಶವನ್ನಿಟ್ಟುಕೊಂಡು, ಅತೀ ಕಡಿಮೆ ದರದಲ್ಲಿ ಗ್ರಾಹಕರ ಕೈಗೆ ನೀಡಲಾಗುತ್ತದೆ. ಸಾರಿ ಸೇರಿದಂತೆ ಇನ್ನಿತರ ಜವುಗಳಿಗಳು ಆಟಿ ಸೇಲ್’ನಲ್ಲಿ ಮಾರಾಟಗೊಳ್ಳಲಿದೆ.

ಎಂ. ಸಂಜೀವ ಶೆಟ್ಟಿಯ ಆಟಿ ಸೇಲ್’ನಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಮಡಿಕೇರಿ, ಮೈಸೂರು, ಬೆಂಗಳೂರಿನ ಜನರು ಪಾಲ್ಗೊಳ್ಳುತ್ತಾರೆ.



Leave a Comment: