ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಸುದ್ದಿಗಳು News

Posted by vidyamaana on 2024-07-26 08:10:52 |

Share: | | | | |


ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮವು ಜ 27 ಶನಿವಾರ ಅಪರಾಹ್ನ ಗಂಟೆ 2:00ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್‌ ಶೆಟ್ಟಿ ವಿಟ್ಲ ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ಪುತ್ತೂರು ತಾಲೂಕು ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ ಡಾ. ಆಶಾಲತಾ. ಪಿ. ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಗೋವಿಂದದಾಸ ಕಾಲೇಜು ಸುರತ್ಕಲ್ ಇವರು ಉಪನ್ಯಾಸ ನೀಡಲಿದ್ದಾರೆ

ವೇದಿಕೆಯಲ್ಲಿ ಪ್ರೊ.ವಿ.ಬಿ.ಅರ್ತಿಕಜೆ ಗೌರವ ಸಲಹೆಗಾರರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಮತ್ತು ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರು ಇವರನ್ನು ಡಾ ಯು.ಪಿ. ಶಿವಾನಂದ ಆಡಳಿತ ನಿರ್ದೇಶಕರು ಸುದ್ದಿ ಸಮೂಹ ಸಂಸ್ಥೆ ಪುತ್ತೂರು ಇವರು ಸನ್ಮಾನಿಸಲಿದ್ದಾರೆ.

Additional Image

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜುಬಿನ್ ಮೊಹಪಾತ್ರ ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ, ತಾರನಾಥ ಗಟ್ಟಿ ಕಾಪಿಕಾಡು ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ ಕ,ಮುರಳೀಕೃಷ್ಣ ಕೆ.ಎನ್ ಸಂಚಾಲಕರು, ವಿವೇಕಾನಂದ ಮಹಾವಿದ್ಯಾಲಯ ನೆಹರೂನಗರ ಪುತ್ತೂರು. ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಮುಖ್ಯಸ್ಥರು, ಕಹಳೆ ನ್ಯೂಸ್ ಚಾನೆಲ್ ಪುತ್ತೂರು ಇವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 Share: | | | | |


ಸರ್ಕಾರ ರಚನೆಗೆ ಮುನ್ನವೇ ನಿತೀಶ್ ಕುಮಾರ್‌ ಮಹತ್ವದ ಬೇಡಿಕೆ : ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ!

Posted by Vidyamaana on 2024-06-06 14:23:57 |

Share: | | | | |


ಸರ್ಕಾರ ರಚನೆಗೆ ಮುನ್ನವೇ ನಿತೀಶ್ ಕುಮಾರ್‌ ಮಹತ್ವದ ಬೇಡಿಕೆ : ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ!

ನವದೆಹಲಿ : 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಕ್ಕಿಲ್ಲ. ಈ ಕಾರಣದಿಂದಾಗಿ, ನರೇಂದ್ರ ಮೋದಿ ಈಗ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರವನ್ನು ನಡೆಸಬೇಕಾಗುತ್ತದೆ. ಇಲ್ಲಿಯವರೆಗೆ, ಸರ್ಕಾರ ರಚನೆಗೆ ಯಾವುದೇ ಮಾರ್ಗಸೂಚಿಯನ್ನು ನಿಗದಿಪಡಿಸಲಾಗಿಲ್ಲ, ಆದರೆ ನಿತೀಶ್ ಕುಮಾರ್ ಅವರ ಪಕ್ಷವು ಈಗಾಗಲೇ ಹಲವು ಬೇಡಿಕೆಗಳನ್ನು ಇಟ್ಟಿದೆ.

ಸೇನೆಯಲ್ಲಿ ಸೈನಿಕರ ನೇಮಕಾತಿಗಾಗಿ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ ತರಬೇಕೆಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಗುರುವಾರ ಒತ್ತಾಯಿಸಿದ್ದಾರೆ. "ಅಗ್ನಿವೀರ್ ಯೋಜನೆಗೆ ಸಾಕಷ್ಟು ವಿರೋಧವಿತ್ತು ಮತ್ತು ಅದರ ಪರಿಣಾಮವು ಚುನಾವಣೆಯಲ್ಲಿಯೂ ಕಂಡುಬಂದಿದೆ. ಆದ್ದರಿಂದ, ಅಗ್ನಿವೀರ್ ಯೋಜನೆಯನ್ನು ಮರುಪರಿಶೀಲಿಸುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ.

ಭಾರತ್ ಅಕ್ಕಿ ಪಡೆಯಲು ಮುಗಿ ಬಿದ್ದ ಜನರು; ಕೆಲವೇ ಕ್ಷಣಗಳಲ್ಲಿ ಖಾಲಿಯಾದ ಕ್ಯಾಂಟರ್

Posted by Vidyamaana on 2024-02-07 07:21:02 |

Share: | | | | |


ಭಾರತ್ ಅಕ್ಕಿ ಪಡೆಯಲು ಮುಗಿ ಬಿದ್ದ ಜನರು; ಕೆಲವೇ ಕ್ಷಣಗಳಲ್ಲಿ ಖಾಲಿಯಾದ ಕ್ಯಾಂಟರ್

ಕೋಲಾರ, ಫೆ.07: ಭಾರತ್ ಅಕ್ಕಿ(bharat brand rice) ಪಡೆಯಲು ಜನರು ಮುಗಿಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ಪಟ್ಟಣದ ಬಸ್ ನಿಲ್ದಾಣದ ಬಳಿ ಕಂಡುಬಂದಿದೆ. ಒಬ್ಬೊಬ್ಬರು ಎರಡು ಮೂರು ಬ್ಯಾಗ್ ಅಕ್ಕಿ ಖರೀದಿ ಮಾಡಿದ್ದಾರೆ. ಹತ್ತು ಕೆ.ಜಿ ತೂಕದ ಬ್ಯಾಗ್​ಗಳನ್ನು ಕ್ಯಾಂಟರ್ ವಾಹನದಲ್ಲಿ ತುಂಬಿಕೊಂಡು ಬಂದು ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ನೋಡ‌ ನೋಡುತ್ತಲೇ ಭಾರತ್ ಅಕ್ಕಿ ಪಡೆಯಲು ಜನರ ನೂಕು ನುಗ್ಗಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಕ್ಯಾಂಟರ್ ಖಾಲಿಯಾಗಿದೆ.

ಇಂದು (ಸೆ 09) ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆ-: ಪುತ್ತೂರಿನಲ್ಲಿ 13ನೇ ವರ್ಷದ ಮೊಸರು ಕುಡಿಕೆ - ಶೋಭಾಯಾತ್ರೆ

Posted by Vidyamaana on 2023-09-09 10:48:09 |

Share: | | | | |


ಇಂದು (ಸೆ 09) ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆ-: ಪುತ್ತೂರಿನಲ್ಲಿ 13ನೇ ವರ್ಷದ ಮೊಸರು ಕುಡಿಕೆ - ಶೋಭಾಯಾತ್ರೆ

ಪುತ್ತೂರು: ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಸೆ.9ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 13ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ.ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಬೆಳಗ್ಗಿನಿಂದಲೇ ವಿವಿಧ ಆಟೋಟ ಸ್ಪರ್ಧೆ ನಡೆಯಲಿದ್ದು, ಸಂಜೆ ವೈಭವದ ಶೋಭಾಯಾತ್ರೆಯೊಂದಿಗೆ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಧಾರ್ಮಿಕ ಸಭೆಯು ನಡೆಯಲಿದೆ.ಶೋಭಾಯಾತ್ರೆ ಉದ್ಘಾಟನೆ:


ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯನ್ನು ಡಾ. ಎಂ.ಕೆ.ಪ್ರಸಾದ್ ಅವರು ಉದ್ಘಾಟಿಸಲಿದ್ದಾರೆ. ಬಜರಂಗದಳ ಮಂಗಳೂರು ವಿಭಾಗದ ಸಹ ಸಂಯೋಜಕ ಪುನಿತ್ ಅತ್ತಾವರ ಅವರು ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ದೊರಕಲಿದೆ. ಶೋಭಾಯಾತ್ರೆಯು ಬೊಳುವಾರು ಓಂ ಶ್ರೀ ಶಕ್ತಿ ಅಂಜನೇಯ ಮಂತ್ರಾಲಯದ ಬಳಿಯಿಂದ ಆರಂಭಂಗೊಂಡು ಮುಖ್ಯರಸ್ತೆಯಾಗಿ ಅಂಚೆಕಚೇರಿ ಬಳಿಯಿಂದ ದೇವಸ್ಥಾನದ ಗದ್ದೆಗೆ ಸಾಗಿ ಸಭಾ ಕಾರ್ಯಕ್ರಮ ಮುಗಿದ ಬಳಿಕ ಅದೇ ರಸ್ತೆಯಾಗಿ ಸಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಾದು ಕಲ್ಲಾರೆಯ ತನಕ ಸಾಗಿ ಅಲ್ಲಿಂದ ಹಿಂದಿರುಗಿ ಅರುಣಾ ಚಿತ್ರಮಂದಿರ ಬಳಿಯಿಂದ ಎಪಿಎಂಸಿ ರಸ್ತೆಯ ಮೂಲಕ ಆದರ್ಶ ಆಸ್ಪತ್ರೆಯ ಬಳಿಯಿಂದ ತೆರಳಿ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಸಮಾಪನೆಗೊಳ್ಳಲಿದೆ.ಧಾರ್ಮಿಕ ಸಭೆ:


ಸಂಜೆ ಬೊಳುವಾರಿನಿಂದ ಹೊರಟ ಶೋಭಾಯಾತ್ರೆಯು ದೇವಳದ ಗದ್ದೆಗೆ ಬಂದ ಬಳಿಕ ಧಾರ್ಮಿಕ ಸಭೆ ನಡೆಯಲಿದೆ. ವಿಶ್ವಹಿಂದೂ ಪರಿಷದ್‌ನ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ವಿಶ್ವಹಿಂದು ಪರಿಷದ್ ಪುತ್ತೂರು ಜಿಲ್ಲೆ ಕಾರ್ಯದರ್ಶಿ ನವೀನ್ ನೆರಿಯ, ನ್ಯಾಯವಾದಿ ಅರುಣ್‌ಶ್ಯಾಮ್, ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮೆಸ್ಕಾಂ ಮಾಜಿ ನಿರ್ದೇಶಕರಾಗಿರುವ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಟಿ ತಿಳಿಸಿದ್ದಾರೆ.ಸೆ.9ಕ್ಕೆ ವಿವಿಧ ಸ್ಪರ್ಧೆಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ ಗಂಟೆ 10 ರಿಂದ 11 ವರ್ಷದಿಂದ 16 ವರ್ಷದ ಒಳಗಿನ ಮಕ್ಕಳಿಗೆ ಭಾರತಮಾತೆಯ ಚಿತ್ರಬಿಡಿಸುವ, ಜಾನಪದ ಗೀತೆ, ಸ್ಮರಣಶಕ್ತಿ ಅಡ್ಡಕಂಬ, ಗುಂಡೆಸೆತ, ಮಡಿಕೆ ಒಡೆಯುವುದು, ದೇಶಭಕ್ತಿಗೀತೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಿಕೆ ಒಡೆಯುವುದು, ಸಂಗೀತ ಸ್ಪರ್ಧೆ, ರಂಗವಲ್ಲಿ, ಗುಂಡೆಸೆತ, ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿದೆ. ಪುರುಷರಿಗೆ ಉದ್ದಕಂಬ ಸ್ಪರ್ಧೆ ನಡೆಯಲಿದೆ.

ಪುತ್ತೂರು : ಜಂ ಇಯ್ಯತುಲ್ ಉಲಾಮಾ ವತಿಯಿಂದ ಬೃಹತ್ ಮೌಲೀದ್‌ ಮಜ್ಲಿಸ್

Posted by Vidyamaana on 2023-10-08 13:32:04 |

Share: | | | | |


ಪುತ್ತೂರು : ಜಂ ಇಯ್ಯತುಲ್ ಉಲಾಮಾ ವತಿಯಿಂದ  ಬೃಹತ್ ಮೌಲೀದ್‌ ಮಜ್ಲಿಸ್

ಪುತ್ತೂರು: ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿಯಿಂದ ಬೃಹತ್ ಮೌಲೀದ್ ಮಜ್ಲಿಸ್ ಕಾರ್ಯಕ್ರಮ ಪುತ್ತೂರು ಬದ್ರಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.


  1. ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ

ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಅಸೈಯದ್‌ ಅಹಮದ್ ಪೂಕೋಯ ತಂಙಳ್ ನೇತೃತ್ವ ವಹಿಸಿ ದುವಾಶೀರ್ವಚನ ನೀಡಿ ಮಾತನಾಡಿ ಮಿಲಾದುನ್ನೆಬಿಯ ಮಹತ್ವದ ಬಗ್ಗೆ ವಿವರಿಸಿದರು.ಯಾಹ್ಯಾ ತಂಙಳ್    ಪೋಳ್ಯ,ಪುತ್ತೂರು ಬದ್ರಿಯಾ ಮಸೀದಿಯ ಖತೀಬ್ ಅಬ್ಬಾಸ್ ಫೈಝಿ ಪುತ್ತಿಗೆ,ಪುತ್ತೂರು ಸಾಲ್ಮರ ಸೈಯದ್ ಮಲೆ ಮಸೀದಿಯ ಖತೀಬ್ ಉಮ್ಮರ್ ದಾರಿಮಿ ಸಾಲ್ಮರ,ಅಬ್ಬಾಸ್ ಮದನಿ ಮೊಟ್ಟೆತ್ತಡ್ಕ,ಉಮ್ಮರ್ ಫೈಝಿ ಸಾಲ್ಮರ,ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್‌ ಟಿ ಅಬ್ದುಲ್ ರಝಾಕ್ ಹಾಜಿ, ಪ್ರಧಾನ ಕಾರ್ಯದರ್ಶಿ ಯಾಕೂಬ್ ಖಾನ್ ಬಪ್ಪಳಿಗೆ ಮೊದಲಾದರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಮೀಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ ಸ್ವಾಗತಿಸಿದರು.ಮೌಲೀದ್‌ ಮಜ್ಲಿಸ್ ಕಾರ್ಯಕ್ರಮದಲ್ಲಿ ಜಂ ಇಯ್ಯತುಲ್ ಉಲಾಮಾದ ಪದಾಧಿಕಾರಿಗಳಾದ ಉಮರ್ ಮುಸ್ಲಿಯಾರ್ ನಂಜೆ, ಸಿರಾಜುದ್ದೀನ್ ಫೈಝಿ ಬಪ್ಪಳಿಗೆ,ರಶೀದ್ ರಹ್ಮಾನಿ ಪರ್ಲಡ್ಕ, ಅಝೀಝ್ ದಾರಿಮಿ ಕೊಡಾಜೆ, ಸಿದ್ದೀಕ್ ಫೈಝಿ ಮುಕ್ರಂಪಾಡಿ,ಶಾಫಿ ಇರ್ಫಾನಿ ಕಲ್ಲೆಗ, ಆಸಿಫ್ ಅಝ್ಹರಿ ಇರ್ದೆ ಉಪಸ್ಥಿತರಿದ್ದರು.

BREAKING : ಬೆಂಕಿ ವದಂತಿಯಿಂದ ಪಕ್ಕದ ಹಳಿಗೆ ಜಿಗಿದ ಪ್ರಯಾಣಿಕರು : ಗೂಡ್ಸ್ ರೈಲು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

Posted by Vidyamaana on 2024-06-15 06:48:55 |

Share: | | | | |


BREAKING : ಬೆಂಕಿ ವದಂತಿಯಿಂದ ಪಕ್ಕದ ಹಳಿಗೆ ಜಿಗಿದ ಪ್ರಯಾಣಿಕರು : ಗೂಡ್ಸ್ ರೈಲು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ನವದೆಹಲಿ : ಸಸಾರಾಮ್ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ವದಂತಿ ಹಿನ್ನೆಲೆಯಲ್ಲಿ ರೈಲಿನಿಂದ ಜಿಗಿದ ಮೂವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಧನ್ಬಾದ್ ವಿಭಾಗದ ಕುಮಂಡಿಹ್ ರೈಲ್ವೆ ನಿಲ್ದಾಣದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆ; ಖ್ಯಾತ ನೀಲಿ ಚಿತ್ರತಾರೆ ಆತ್ಮಹತ್ಯೆ

Posted by Vidyamaana on 2024-02-20 14:29:04 |

Share: | | | | |


ಮಾನಸಿಕ ಆರೋಗ್ಯ ಸಮಸ್ಯೆ; ಖ್ಯಾತ ನೀಲಿ ಚಿತ್ರತಾರೆ ಆತ್ಮಹತ್ಯೆ

ನವದೆಹಲಿ: ಆತ್ಮಹತ್ಯೆ ಮಾಡಿಕೊಂಡು ಖ್ಯಾತ ನೀಲಿ ಚಿತ್ರತಾರೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.ಕಾಗ್ನಿ ಲಿನ್ ಕಾರ್ಟರ್(36)  ಆತ್ಮಹತ್ಯೆ ಮಾಡಿಕೊಂಡು ಪ್ರಾಣತೆತ್ತಿರುವುದನ್ನು ಅವರ ಸ್ನೇಹಿತರು ಸೋಶಿಯಲ್‌ ಮೀಡಿಯಾದಲ್ಲಿ ವಿಚಾರವನ್ನು ಅಧಿಕೃತವಾಗಿ ಹೇಳಿದ್ದಾರೆ. ಅವರು ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಸ್ನೇಹಿತರು ಹೇಳಿದ್ದಾರೆ.

2000 ಇಸವಿಯಲ್ಲಿ ನೀಲಿ ಚಿತ್ರದ ಲೋಕಕ್ಕೆ ಕಾಲಿಟ್ಟ ಅವರು ತನ್ನ ಕೆಲಸಕ್ಕಾಗಿ ಹಲವು ಅಮೇರಿಕನ್‌ ಅಡಲ್ಟ್‌ ವಿಡಿಯೋ ಪ್ರಶಸ್ತಿ(AVN Awards) ಗಳನ್ನು ಪಡೆದಿದ್ದಾರೆ. ಇದಲ್ಲದೆ ಅವರು ಗಾಯಕಿಯಾಗಿ, ಕ್ಲಬ್‌ ನಲ್ಲಿ ನೃತ್ಯಗಾರ್ತಿಯಾಗಿಯೂ ಹಾಗೂ ಮಾಡೆಲ್‌ ಆಗಿಯೂ ಅನೇಕ ವರ್ಷ ಮನರಂಜಿಸಿದ್ದರು.

2019 ರಲ್ಲಿ ಅವರು ಲಾಸ್ ಏಂಜಲೀಸ್‌ನಿಂದ ಮರಳಿ ಪೋಲ್ ಡ್ಯಾನ್ಸ್‌ನಲ್ಲಿ ತೊಡಗಿಕೊಂಡಿದ್ದರು. ಇದಾದ ನಂತರ ಅವರು ತಮ್ಮದೇ ಆದ ಸ್ಟುಡಿಯೋ ತೆರೆದು ವಯಸ್ಕ ಚಿತ್ರಗಳ ಬದಲು ಪೋಲ್ ಡ್ಯಾನ್ಸ್‌ನತ್ತ ಹೆಚ್ಚಿನ ಗಮನ ಹರಿಸಿದ್ದರು.ಕಳೆದ ಕೆಲ ಸಮಯದಿಂದ ಕಾಗ್ನಿಅವರಿಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಅವರ ಸ್ನೇಹಿತು ಹೇಳಿರುವುದಾಗಿ ವರದಿ ತಿಳಿಸಿದೆ.ಅವರ ಸ್ನೇಹಿತರು ʼಗೋ ಫಂಡ್‌ ಮಿʼ ಮೂಲಕ ನಟಿಯ ನೆನಪಿಗೆ ಹಾಗೂ ಅವರ ತಾಯಿಯ ನೆರವಿಗೆ ಹಣ ಸಂಗ್ರಹಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ

Recent News


Leave a Comment: