Posted by vidyamaana on 2024-07-05 17:20:19 |
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.
ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.
ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Posted by Vidyamaana on 2024-05-01 17:00:31 |
ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ಪ್ರಕ್ರಿಯೆ ಮುಕ್ತಾಯಗೊಂಡಿದ್ದರೂ ಕೆಲವೊಂದು ಕಾರ್ಯಕ್ರಮಗಳಲ್ಲಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ. ರಾಜಕೀಯ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ ತಿಳಿಸಿದ್ದಾರೆ.
ಅವರು ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿದ ಸಹಾಯಕ ಕಮೀಷನರ್ ಕೋರ್ಟು ಸಭಾಂಗಣದಲ್ಲಿ ಮಧ್ಯಮಗಳಿಗೆ ಮಾಹಿತಿ ನೀಡಿದರು.
ಪುತ್ತೂರು ಉಪವಿಭಾಗದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಶಿಸ್ತುಬದ್ಧವಾಗಿ ಚುನಾವಣೆ ನಡೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಜು.೬ರ ತನಕ ನೀತಿ ಸಂಹಿತೆ ಎಲ್ಲೆಡೆ ಜಾರಿಯಲ್ಲಿರುತ್ತದೆ.
Posted by Vidyamaana on 2022-12-15 13:42:18 |
ಪುತ್ತೂರು: ೧೯ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಮಡಿಕೇರಿ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಎನ್ಸಿಸಿ ಘಟಕದ ಆಶ್ರಯದಲ್ಲಿ ಶತ್ ಶತ್ ನಮನ ವಿಶೇಷ ಕಾರ್ಯಕ್ರಮ ಹವಾಲ್ದಾರ್ ದಿ. ಪರಮೇಶ್ವರ ಕೆ. ಅವರ ದೋಲ್ಪಾಡಿ ಮನೆಯಲ್ಲಿ ನಡೆಯಿತು.
ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ಅವರಿಗೆ ಗೌರವ ಅರ್ಪಿಸಲು ಹಾಗೂ ಅವರ ಕುಟುಂಬಕ್ಕೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಶತ್ ಶತ್ ನಮನ ಕಾರ್ಯಕ್ರಮ ಆಯೋಜಿಸಲಾಗುತ್ತದೆ.
೧೯ ವರ್ಷಗಳ ಹಿಂದೆ ಭೂಸೇನೆಗೆ ಸೇರ್ಪಡೆಗೊಂಡ ಯೋಧ ಪರಮೇಶ್ವರ ಗೌಡ ಅವರು ಬೆಂಗಳೂರಿನಲ್ಲಿ ತರಬೇತಿ ಪಡೆದ ಬಳಿಕ ಲೇಹ್, ಲಡಾಕ್, ಅಸ್ಸಾಂ, ರಾಜಸ್ಥಾನ, ಸೂರತ್ ಮೊದಲಾದೆಡೆ ಸೇವೆ ಸಲ್ಲಿಸಿ, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡರು. ಹುದ್ದೆಯಲ್ಲಿ ಭಡ್ತಿ ಹೊಂದಿ ಜಮ್ಮುವಿನಲ್ಲಿ ಹವಾಲ್ದಾರ್ ಆಗಿನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಕಾರ್ಗಿಲ್ ಕದನದಲ್ಲಿ ಭಾಗವಹಿಸಿದ ಅವರು, ಕಾಶ್ಮೀರದ ಉಧಂಪುರ ಸಮೀಪದ ಕೆಹರಿ ಎಂಬಲ್ಲಿ ೨೦೦೨ರ ಜೂನ್ ೯ರಂದು ಪಾಕ್ ಸೈನಿಕರ ಶೆಲ್ ದಾಳಿಗೆ ಗುರಿಯಾಗಿ ಹುತಾತ್ಮರಾದರು.
ಈ ಪರಾಕ್ರಮವನ್ನು ಸ್ಮರಿಸುವ ಸಲುವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆಯ ಉನ್ನತ ಅಧಿಕಾರಿಗಳ ಪರವಾಗಿ ಶತಶತನಮನಗಳನ್ನೊಳಗೊಂಡ ವಿಶೇಷ ಸ್ಮರಣಿಕೆಯನ್ನು ದಿ| ಪರಮೇಶ್ವರ ಗೌಡ ಕೆ. ಇವರ ಪತ್ನಿ ಕೆ.ಪಿ. ಪುಷ್ಪಾವತಿ ಹಸ್ತಾಂತರಿಸಲಾಯಿತು. ೧೯ ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಮಡಿಕೇರಿ ಇದರ ಸುಬೇದಾರ್ ಮೇಜರ್ ಮಲ್ಲಿಕಾರ್ಜುನ, ಸುಬೇದಾರ್ ರಾಜುಗುರುಂಗು, ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ. ಸಿ. ಅಧಿಕಾರಿ ಲೆಫ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೇರಾ ಮತ್ತುಎನ್. ಸಿ. ಸಿ. ಕೆಡೆಟ್ಗಳಾದ ಸೀನಿಯರ್ ಅಂಡರ್ ಆಫೀಸರ್ ಸಾತ್ವಿಕ್ ಡಿ.ಎಸ್., ಜೂನಿಯರ್ ಅಂಡರ್ ಆಫೀಸರ್ಸ್ ಸ್ವಸ್ತಿಕ ಕೆ, ಕೃತಿಕೆ ಎನ್., ಕ್ಯಾಡೆಟ್ ರಿಯಾ, ಸಂಜನಾ ಅವರು ಹಸ್ತಾಂತರಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಉಪಸ್ಥಿತರಿದ್ದರು.
ಹುತಾತ್ಮ ಸೈನಿಕ ದಿ. ಪರಮೇರ್ಶವರ ಕೆ. ಅವರ ಪತ್ನಿ ಪುಷ್ಪಾವತಿ ಅವರಿಗೆ ಸ್ಮರಣಿಕೆಯನ್ನು ಹಸ್ತಾಂತರಿಸಲಾಯಿತು.
Posted by Vidyamaana on 2023-11-09 20:05:06 |
ಪುತ್ತೂರು: ಬೆಂಗಳೂರು ಕಂಬಳಕ್ಮೆ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರಾದ ಅಶೋಕ್ ರೈ ಆಹ್ವಾನ ಮಾಡಿದರು. ಈ ಸಂಧರ್ಬದಲ್ಲಿ ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಂಬಳ ಕಾರ್ಯಾಧ್ಯಕ್ಷರಾದ ಗುರಕಿರಣ್,ಗುಣರಂಜನ್ ಶೆಟ್ಟಿ ,ಉದ್ಯಮಿ ಉಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2024-05-01 15:40:39 |
ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿರುತ್ತಾರೆ. ಸದರಿ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಪೊಲೀಸರು ಚಪ್ಪ (ಸರ್ಪರಾಜ್) ಮತ್ತು ಅಬ್ದುಲ್ ಅಸ್ಪರ್ (ಅಸ್ಫಕ್ ) ಎಂಬುವರನ್ನು ಆರೋಪಿಗಳೆಂದು ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.
ಸದ್ರಿ ಪ್ರಕರಣವನ್ನು ಕೈಗೆತ್ತಿಕೊಂಡು ನ್ಯಾಯಾಲಯವು ಈ ಪ್ರಕರಣದಲ್ಲಿ ಅಭಿಯೋಜನ ಪರ ಸುಮಾರು 21
Posted by Vidyamaana on 2023-07-16 15:26:15 |
ಬೆಳ್ತಂಗಡಿ : ರಜೆ ಇದ್ದ ಕಾರಣ ಮನೆಯಲ್ಲಿ ಸಾರಿಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.
ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
Posted by Vidyamaana on 2024-05-26 22:38:18 |
ಇಂಡಿಯನ್ ಪ್ರಿಮಿಯರ್ ಲೀಗ್ (IPL 2024) 17ನೇ ಸೀಸನ್ನ ಅಂತಿಮ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ (SRH vs KKR) ನಡುವೆ ನಡೆಯಿತು. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ಭರ್ಜರಿಯಾಗಿ ಗೆಲ್ಲುವ ಮೂಲಕ 3ನೇ ಬಾರಿಗೆ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ.ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಇದಾದ ಬಳಿಕ ಎಸ್ಆರ್ಎಚ್ ತಂಡ 18.3 ಓವರ್ಗೆ 10 ವಿಕೆಟ್ 10 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿತು. ಈ ಸುಲಭ ಗುರಿ ಬೆನ್ನಟ್ಟಿದ ಕೆಕೆಆರ್ ತಂಡವು 10.3 ಓವರ್ಗೆ 2 ವಿಕೆಟ್ ನಷ್ಟಕ್ಕೆ 114 ರನ್ ಗಳಿಸುವ ಮೂಲಕ ಭರ್ಜರಿ 8 ವಿಕೆಟ್ಗಳ ಗೆಲುವು ದಾಖಲಿಸಿತು.