ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಪಕ್ಷದ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡಿ: ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹ.

Posted by Vidyamaana on 2023-05-31 07:40:17 |

Share: | | | | |


ಪಕ್ಷದ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡಿ: ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹ.

ಪುತ್ತೂರು: ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದು ತಕ್ಷಣ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ.

ಸರಕಾರಿ ಒದ್ಯೋಗಿಯಾಗಿದ್ದ ಈ ರೀತಿಯಾಗಿ ಒಂದು ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು. ಯಾವುದೇ ಪಕ್ಷದ ಪರ ಇರುವಂತಿಲ್ಲ. ಬೇರೆ ಬೇರೆ ಧರ್ಮ ಜಾತಿಗಳ ವಿದ್ಯಾರ್ಥಿಗಳರುವ ಈ ಕಾಲೇಜನಲ್ಲಿ ಒಬ್ಬರು ಅಧ್ಯಾಪಕರು ಈ ರೀತಿ ನಡೆದುಕೊಂಡಿರುವುದು ತಪ್ಪು ಇದನ್ನು ಗಂಭಿರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ಈ ಕುರಿತು ಪುತ್ತೂರು ನಗರ ಠಾಣೆ ಹಾಗೂ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಮಾಡಿದೆ.

ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವದ ಸ್ಮರಣಾರ್ಥ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ಬರ್ತಿದೆ ಡಿಜಿಟಲ್ ಬಸ್

Posted by Vidyamaana on 2023-11-15 21:31:50 |

Share: | | | | |


ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವದ ಸ್ಮರಣಾರ್ಥ  ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ಬರ್ತಿದೆ ಡಿಜಿಟಲ್ ಬಸ್

ಪುತ್ತೂರು : ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆಯಾಗಿದೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರಕಾರೀ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.


   ಇದಕ್ಕಾಗಿ ಕರ್ನಾಟಕ ರಾಜ್ಯದಲ್ಲೇ ಪ್ರಪ್ರಥಮವಾಗಿ ಮಂಗಳೂರಿನ ಪ್ರಸಿದ್ಧ ಸೇವಾ ಸಂಸ್ಥೆಯಾದ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ತನ್ನ ದಶಮಾನೋತ್ಸವದ ಸ್ಮರಣಾರ್ಥ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನೂತನ ತಂತ್ರಜ್ಞಾನದ ಡಿಜಿಟಲ್ ಬಸ್ ಒಂದನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸುತ್ತಿದೆ.


"ಕ್ಲಾಸ್ ಆನ್ ವ್ಹೀಲ್ಸ್" ಎಂಬ ಹೆಸರಲ್ಲಿ ಐಷಾರಾಮಿ ಹವಾನಿಯಂತ್ರಿತ ಬಸ್, ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಉಚಿತ ಸೇವೆಯೊಂದಿಗೆ ಕಾರ್ಯಾಚರಿಸಲಿದೆ. ವಾರ್ಷಿಕ ಐದು ಸಾವಿರ ಮಕ್ಕಳಿಗೆ ಕಂಪ್ಯೂಟರ್ ನ ಮೂಲಭೂತ ಶಿಕ್ಷಣ ನೀಡುವ ಗುರಿ ಮತ್ತು ಅದಮ್ಯವಾದ ಬಯಕೆಯನ್ನು ಈ ಡಿಜಿಟಲ್ ಬಸ್ ಹೊಂದಿದೆ.

ಬಸ್ ನಲ್ಲಿ ಏನೇನಿದೆ ಗೊತ್ತಾ?

ಕಂಪ್ಯೂಟರ್ ಬಸ್ ನ್ನು ಸಂಪೂರ್ಣ ಕ್ಲಾಸ್ ರೂಮ್ ಆಗಿ ಪರಿವರ್ತಿಸಲಾಗಿದೆ. ತರಗತಿಯೊಳಗೆ ಒಂದು ಟನ್ನಿನ ಎರಡು ಎ.ಸಿ. ಅಳವಡಿಸಲಾಗಿದೆ. ಏಕಕಾಲದಲ್ಲಿ 16 ಅಥವಾ 32 ವಿದ್ಯಾರ್ಥಿಗಳು ಕಲಿಯಲು 16 ಲ್ಯಾಪ್ ಟಾಪ್ ಕಂಪ್ಯೂಟರ್, ಕೀಪೇಡ್, ಮೌಸ್, ಚಾರ್ಜರ್ಸ್, ಕೂರಲು 16 ರಿವೋಲ್ವಿಂಗ್ ಚೆಯರ್ಸ್, 16 ಮಡಚುವ ಸಂವಿಧಾನವಿರುವ ಡೆಸ್ಕ್ ಇದೆ. ಶಿಕ್ಷಕರಿಗೆ ಪ್ರತ್ಯೇಕ ಕಂಪ್ಯೂಟರ್, ಚೆಯರ್, ಡೆಸ್ಕ್ ನಿರ್ಮಿಸಲಾಗಿದೆ. ಕಾನ್ಫರೆನ್ಸ್ ಗೆ ಪ್ರಾಜೆಕ್ಟರ್, ಪ್ರಸೆಂಟೇಶನ್ ಗೆ ಟಿ.ವಿ., ಮ್ಯೂಸಿಕ್ ಸಿಸ್ಟಮ್ ವ್ಯವಸ್ಥೆ, ಮೈಕ್ ಸೌಂಡ್ ಸಿಸ್ಟಮ್, ಲೈಟಿಂಗ್ಸ್, ಎಲ್ಇಡಿ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ. ಅಂತರ್ಜಾಲದ ವಿದ್ಯೆಗಾಗಿ ವೈಫೈ, ಇಂಟರ್ನೆಟ್ ನ್ನೂ ಒಳಗೊಂಡಿದೆ. ಅವಶ್ಯಕತೆಗಾಗಿ ಕಲರ್ ಪ್ರಿಂಟರ್, ಫೋಟೋ ಕೋಪಿ ಮತ್ತು ಸ್ಕ್ಯಾನರ್ ಇದೆ. ವಿದ್ಯಾರ್ಥಿಗಳ, ಶಿಕ್ಷಕರ ಹಾಜರಾತಿಗೆ ಬಸ್ ಬಾಗಿಲ ಬಳಿ ಅತ್ಯಾಧುನಿಕ ಬಯೋಮೆಟ್ರಿಕ್ ಡಿವೈಸ್ ಸ್ಥಾಪಿಸಲಾಗಿದೆ. ಇತರ ಸಮಯಗಳಲ್ಲಿ 25 ಜನರ ಸಭೆ ಸಮಾರಂಭಗಳನ್ನು ಬಸ್ ನೊಳಗೆ ಎಲ್ಲಿ ಬೇಕಾದರೂ ಮಾಡುವಂತಹ ಮಲ್ಟಿಸ್ಪೆಶಾಲಿಟಿ ವ್ಯವಸ್ಥೆ ಇದೆ. ತರಗತಿ ಒಳ ಹೋಗಲು ಮೂರು ಪ್ರವೇಶ ದ್ವಾರಗಳಿವೆ. ಮಕ್ಕಳ ಸುರಕ್ಷತೆ ಗಾಗಿ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಲಾಗಿದೆ.



ಸ್ವಂತ ವಿದ್ಯುತ್ ಸಂಚಲನಕ್ಕಾಗಿ 6.8 ಕೆ.ವಿ. ಯ ಅತ್ಯಾಧುನಿಕ ಜನರೇಟರ್, ಹೊರಗಿನ ವಿದ್ಯುತ್ ಸಂಪರ್ಕದ ಸೌಲಭ್ಯದ ಪಾಯಿಂಟ್, ಕೈ ಮುಖ ತೊಳೆಯಲು ಬಸ್ ಟಾಪಲ್ಲಿ 200 ಲೀಟರಿನ ನೀರಿನ ಟ್ಯಾಂಕ್, ವಾಶ್ ಬೇಸಿನ್, 40 ಲೀಟರಿನ ಕುಡಿಯುವ ನೀರಿನ ಸೌಲಭ್ಯ, ಎರಡು ಎಸಿ ಔಟ್ ಡೋರ್ ಯೂನಿಟ್, ಬ್ಯಾಟರಿ ಬಾಕ್ಸ್, ಟೂಲ್ ಬಾಕ್ಸ್, ಪವರ್ ಪಾಯಿಂಟ್ ಮೊದಲಾದವನ್ನು ಬಸ್ ಹೊಂದಿದೆ.

ಬಸ್ ಕನಸು ಕಂಡದ್ದಾದರೂ ಹೇಗೆ?

ಹನೀಫ್ ಪುತ್ತೂರು ಅವರು ಸದ್ಯ ದುಬೈ ಯ ಮಹಮ್ಮದ್ ಬಿನ್ ರಾಶಿದ್ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯ ಪ್ರಯೋಗಾಲಯ ದಲ್ಲಿ ಕ್ಲೌಡ್ & ಇನ್ಫ್ರಾ ಸ್ಟ್ರೆಕ್ಚರ್ ಮೆನೇಜರ್ ಆಗಿ ಉದ್ಯೋಗದಲ್ಲಿದ್ದು, ಯುಎಇ ಗೋಲ್ಡನ್ ವೀಸಾ ಹೊಂದಿದ್ದಾರೆ. ಮಂಗಳೂರು ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್’ನ ಯುಎಇ ಪ್ರಾಂತ್ಯದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.




ಯುಎಇಯ ಅಬುದಾಬಿಯಲ್ಲಿನ ಸಂಸ್ಥೆಯೊಂದು ಹಮ್ಮಿಕೊಂಡಿರುವ ಸ್ಪರ್ಧೆಯಲ್ಲಿ ಪುತ್ತೂರು ಸಮೀಪದ ಆರ್ಯಾಪು ಗ್ರಾಮದ ಬಲ್ಲೇರಿ ಅಬ್ಬಾಸ್ ಹಾಜಿ ಅವರ ಪುತ್ರ ಮಹಮ್ಮದ್ ಹನೀಫ್ ಅವರು ವಿಜೇತರಾಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಸರು ತಂದಿದ್ದರು.

ಹನೀಫ್ ಅವರು ತನ್ನೂರಿನ ಗ್ರಾಮೀಣ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಕಂಪ್ಯೂಟರ್ ಬಸ್ ಪ್ರಾರಂಭಿಸುವ ಇರಾದೆ ವ್ಯಕ್ತಪಡಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಒಂದು ಮೊಬೈಲ್ ಬಸ್ ನ್ನು ಅತ್ಯಾಧುನಿಕ ಟೆಕ್ನಾಲಜಿಯಲ್ಲಿ ನಿರ್ಮಿಸಿ ಶಾಲೆಗಳಿಗೆ ತೆರಳಿ ಕಂಪ್ಯೂಟರ್ ಬೋಧಿಸುವ ಕನಸನ್ನು ಬಿಚ್ಚಿಟ್ಟರು. ಈ ಯೋಜನೆಯನ್ನು ಮೆಚ್ಚಿ ಲಕ್ಷಾಂತರ ಜನರು ಆನ್ಲೈನ್ ವೋಟ್ ಮಾಡುವ ಮೂಲಕ ಅವರನ್ನು ವಿಜೇತರನ್ನಾಗಿಸಿದ್ದರು. ಅದರಲ್ಲಿ ದೊರೆತ ಬಹುಮಾನದ ಮೊತ್ತಕ್ಕೆ ತಮ್ಮಿಂದಾಗುವ ಹಣವನ್ನು ಸೇರಿಸಿ ತಾನು ಸೇವೆಗೈಯ್ಯುವ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಗೆ ಆ ಮೊತ್ತ ಹಸ್ತಾಂತರಿಸಿ ಬಸ್ ಕನಸನ್ನು ಸಾಕ್ಷಾತ್ಕರಿಸಿದರು. ಬಸ್ ಗೆ ಒಟ್ಟು 60 ಲಕ್ಷ ರೂ. ಖರ್ಚು ಆಗಿದ್ದು, ಹೆಚ್ಚುವರಿ ಭಾಗಶಃ ಮೊತ್ತವನ್ನು ಎಂ.ಫ್ರೆಂಡ್ಸ್ ಟ್ರಸ್ಟ್ ಭರಿಸಿದೆ. ಅರವಿಂದ್ ಮೋಟಾರ್ಸ್ ನ ಟಾಟಾ ಕಂಪೆನಿಯ ಹೀರಾ ಮಾಡೆಲಿನ ಈ ಬಸ್ ನ್ನು ಕಂಪ್ಯೂಟರ್ ಕ್ಲಾಸ್ ರೂಮ್ ಆಗಿ ಸುಸಜ್ಜಿತವಾಗಿ ಪರಿವರ್ತಿಸಿದವರು ಬೈಕಂಪಾಡಿಯ ರೋಡ್ರಿಕ್ಸ್ ಇಂಡಸ್ಟ್ರೀಸ್ ನವರು.


ಈ ಬಸ್ ಜಿಲ್ಲೆಯ ಗ್ರಾಮೀಣ ವಿದ್ಯಾಸಂಸ್ಥೆಗಳಿಗೆ ತೆರಳಿ ಶಾಲಾ ಆವರಣದಲ್ಲೇ ಕಂಪ್ಯೂಟರ್ ಶಿಕ್ಷಣ ನೀಡಲಿದೆ. ಒಂದು ವಿದ್ಯಾರ್ಥಿಗೆ ಕನಿಷ್ಟ 15 ರಿಂದ 20 ತಾಸುಗಳ ತರಬೇತಿಯನ್ನು ಹಂತ ಹಂತವಾಗಿ ಕೊಡಲಿದೆ. ಒಂದು ದಿನದಲ್ಲಿ ಮೂರು ಅಥವಾ ನಾಲ್ಕು ಶಾಲೆಗಳಿಗೆ ತೆರಳಿ ತಲಾ ಒಂದರಿಂದ ಒಂದೂವರೆ ತಾಸಿನ ತರಗತಿಯನ್ನು ಬಿತ್ತರಿಸಲಿದೆ. ಇದಕ್ಕಾಗಿಯೇ ಪ್ರತ್ಯೇಕ ಸಿಲೆಬಸ್ ರಚಿಸಲಾಗಿದೆ. ಬಸ್ ನಲ್ಲಿ ಇಬ್ಬರು ಕಂಪ್ಯೂಟರ್ ಶಿಕ್ಷಕಿಯರು, ಅನುಭವಿ ಚಾಲಕ ಮತ್ತು ನಿರ್ವಾಹಕರು ಇರುತ್ತಾರೆ. ಸರಕಾರಿ ರಜೆ ಹೊರತುಪಡಿಸಿ ಬೆಳಿಗ್ಗೆ 9 ರಿಂದ ಸಂಜೆ 4 ರ ತನಕ ಡಿಜಿಬಸ್ ಕಾರ್ಯಾಚರಿಸಲಿದೆ. ಈ ಯೋಜನೆಗೆ ವಾರ್ಷಿಕ 10 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ.

ಪ್ರಾರಂಭ ಎಲ್ಲಿಂದ?

ಹನೀಫ್ ಅವರು ಪ್ರಾಥಮಿಕ ಶಾಲಾ ಶಿಕ್ಷಣ ಪಡೆದ ಕುಂಜೂರು ಪಂಜ ಶಾಲೆಯಿಂದಲೇ ಈ ಡಿಜಿ ಬಸ್ ಪ್ರಾರಂಭವಾಗಲಿದ್ದು, ತಾನು ಉನ್ನತ ಹುದ್ದೆಗೇರಿದಾಗ ಕಲಿತ ಶಾಲೆಯನ್ನು ಮರೆತು ಬಿಡುವವರಿಗೆ ಇದೊಂದು ಪ್ರೇರಣಾ ಶಕ್ತಿಯಾಗಿ ಕಲಿತ ಶಾಲೆಗೂ, ಊರಿಗೂ ಹೆಮ್ಮೆಯ ಪ್ರತೀಕವಾಗಲಿದೆ. 


ಎಂ.ಫ್ರೆಂಡ್ಸ್ ನ ಈ ಕಂಪ್ಯೂಟರ್ ಬಸ್ ರಾಜ್ಯಕ್ಕೆ ಹೊಸ ಯೋಜನೆಯಾಗಿದೆ. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ತನ್ನ ದಶಮಾನೋತ್ಸವದ ಸವಿ ನೆನಪಿಗಾಗಿ ಈ ವಿದ್ಯಾ ಯೋಜನೆಯನ್ನು ಬಿಡುಗಡೆಗೊಳಿಸಿದೆ. 2013 ರಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಪ್ರಾರಂಭವಾದ ಎಂ. ಫ್ರೆಂಡ್ಸ್ ತಂಡ ಇಂದು ಪ್ರಸಿದ್ಧ ಚಾರಿಟಿ ಟ್ರಸ್ಟ್ ಆಗಿ ಪರಿವರ್ತನೆಗೊಂಡಿದೆ. ಕಳೆದ 10 ವರ್ಷದಲ್ಲಿ ಕೋಟ್ಯಾಂತರ ರೂಪಾಯಿ ವ್ಯಯಿಸಿ ಹಲವಾರು ಸೇವಾ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ. ಅನಾರೋಗ್ಯ ಪೀಡಿತರ ಸೇವೆ ಮೂಲಕ ಪ್ರಾರಂಭವಾದ ಟ್ರಸ್ಟ್ ನ ಸೇವೆ ಜಿಲ್ಲೆಯ 8 ಕುಗ್ರಾಮಗಳನ್ನು ಸಮೀಕ್ಷೆ ಮಾಡಿ ಅಲ್ಲಿನ ಮೂಲಭೂತ ಸೌಕರ್ಯ, ವಿದ್ಯಾಭ್ಯಾಸ, ಆರೋಗ್ಯಕ್ಕೆ ದೊಡ್ಡ ಕೊಡುಗೆ ನೀಡಿದೆ. ಅನ್ನದಾನದ ಮಹತ್ವವನ್ನು ಅರಿತು ಕಳೆದ ಆರು ವರ್ಷಗಳಿಂದ ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಹವರ್ತಿಗಳಿಗೆ ದಿನನಿತ್ಯ ಸುಮಾರು 500 ಬಡ/ಅಶಕ್ತರಿಗೆ ರಾತ್ರಿಯ ಭೋಜನವನ್ನು ಉಚಿತವಾಗಿ ವಿತರಿಸುತ್ತಿದೆ. ಇದೀಗ ಕಂಪ್ಯೂಟರ್ ಡಿಜಿಟಲ್ ಬಸ್ಸಿನ ಹೊಸ ಯೋಜನೆ ಸಹಸ್ರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.


ಕ್ಲಾಸ್ ಆನ್ ವ್ಹೀಲ್ಸ್

ಕಂಪ್ಯೂಟರ್ ಸಾಕ್ಷರತಾ ಡಿಜಿ ಬಸ್

ಎಂ.ಫ್ಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ)

ಮಂಗಳೂರು

ಸಂಪರ್ಕ ಸಂಖ್ಯೆ: 9019111177


ಸೌಹಾರ್ಧತೆಗೆ ಧಕ್ಕೆಯಾಗುವ ಬ್ಯಾನರ್ ಅಳವಡಿಕೆ ಆರೋಪ

Posted by Vidyamaana on 2023-10-30 16:59:38 |

Share: | | | | |


ಸೌಹಾರ್ಧತೆಗೆ ಧಕ್ಕೆಯಾಗುವ ಬ್ಯಾನರ್ ಅಳವಡಿಕೆ ಆರೋಪ

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಹಾಕಿದ ಬ್ಯಾನರ್ ಗಳ ಸಮೀಪ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧಕ್ಕೆ ಬಾಧಕವಾಗುವಂತಹ ಬರವಣಿಗೆ ಇರುವ ಬ್ಯಾನರ್ ಅಳವಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ನಿವಾಸಿ ಸಂದೀಪ್ ರೈ ನೀಡಿರುವ ದೂರಿನ ಮೇರೆಗೆ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.


ಅ.29 ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧತೆಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.


ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ,ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ದ ಹಾಗೂ ಸಮಾಜದ ಸ್ವಾಸ್ತ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವುದಕ್ಕೆ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶಿ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಉಡುಪಿ ವೀಡಿಯೋ ಪ್ರಕರಣ:

Posted by Vidyamaana on 2023-07-28 09:10:24 |

Share: | | | | |


ಉಡುಪಿ ವೀಡಿಯೋ ಪ್ರಕರಣ:

ಉಡುಪಿ: ಉಡುಪಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದಾರೆ.

ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.


ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.


ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.

ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿದ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ ಪ್ರವೀಣ್

Posted by Vidyamaana on 2024-03-16 17:46:35 |

Share: | | | | |


ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿದ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ  ಪ್ರವೀಣ್

ಬಾಗಲಕೋಟೆ : ಮಗಳ ಮೇಲೆ ಕಣ್ಣು ಹಾಕಬೇಡ ಎಂದಿದ್ದಕ್ಕೆ ಯುವತಿಯ ತಂದೆಯನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೇ ಬಾಗಲಕೋಟೆಯಲ್ಲಿ ನಡೆದಿದೆ.ಪ್ರವೀಣ್ ಎಂಬ ಪ್ರೇಮಿ ಸಂಗನಗೌಡನನ್ನು ಕೊಲೆಗೈದಿದ್ದಾನೆ.ಅವನೊಬ್ಬ ಪಾಗಲ್ ಪ್ರೇಮಿ ಊರಿನ ಬಸ್‌ ನಿಲ್ದಾಣದಲ್ಲಿ ಬಳಿ ಟೀ ಅಂಗಡಿ ಇಟ್ಟುಕೊಂಡಿದ್ದ ಅದೇ ಬಸ್‌ ಸ್ಟಾಪ್‌ಗೆ ಬಸ್ ಹತ್ತಲು ಬರ್ತಿದ್ದ ಸಂಗನಗೌಡ ಮಗಳನ್ನ ಪ್ರೀತಿಸೋದಕ್ಕೆ ಶುರು ಮಾಡಿದ್ದ. ಆದರೆ ಆಕೆ ಮಾತ್ರ ಇವನ ಪ್ರೀತಿಗೆ ಯಾವತ್ತೂ ಸಹ ಓಕೆ ಅನ್ನಲಿಲ್ಲ. ಆದ್ರೂ ಅವಳ ಬೆನ್ನು ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ.


ವರ್ಷದ ಹಿಂದೆ ಇದೇ ವಿಷಯವಾಗಿ ಸಂಗನಗೌಡ ಆತನನ್ನ ಮನೆಗೆ ಕರೆಸಿ ವಾರ್ನ್ ಮಾಡಿ ಕಳುಹಿಸಿದ್ದ. ಅದೇ ಕೋಪ ಇಟ್ಟುಕೊಂಡಿದ್ದ ಪ್ರವೀಣ ಆವತ್ತು ಎಳೆನೀರು ಕೊಚ್ಚುವ ಮಚ್ಚು ತಂದು ಸಂಗನಗೌಡನ ಕಥೆಯನ್ನ ಮುಗಿಸಿಯೇಬಿಟ್ಟ. ನಮ್ಮ ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿ ವಾರ್ನ್ ಮಾಡಿದ್ದಕ್ಕೆ, ಮನಸ್ಸಲ್ಲಿ ಸೇಡಿಟ್ಟುಕೊಂಡು, ಯುವತಿಯ ತಂದೆಯನ್ನ ಮಚ್ವಿನಿಂದ ಕೊಚ್ವಿ ಬರ್ಬರವಾಗಿ ಕೊಲೆಗೈದಿದ್ದಾನೆ.

ಕಾರು ಚೇಸ್ ಮಾಡಿ ಯುವತಿಗೆ ಕಿರುಕುಳ: ಇಬ್ಬರ ಬಂಧನ

Posted by Vidyamaana on 2024-04-01 19:38:18 |

Share: | | | | |


ಕಾರು ಚೇಸ್ ಮಾಡಿ ಯುವತಿಗೆ ಕಿರುಕುಳ: ಇಬ್ಬರ ಬಂಧನ

ಬೆಂಗಳೂರು: ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಚೇಸ್ ಮಾಡಿಕೊಂಡು ಬಂದು ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.



Leave a Comment: