ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

ಸುದ್ದಿಗಳು News

Posted by vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಇದು ಹೇಗೆ ಕಾರ್ಯನಿರ್ವಹಿಸುತ್ತದೆ

ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.

ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ

ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ

ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.

 Share: | | | | |


ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಮೃತ್ಯು

Posted by Vidyamaana on 2024-01-12 13:00:12 |

Share: | | | | |


ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಮೃತ್ಯು

ಆಂಧ್ರ ಪ್ರದೇಶ: ಮನೆಯಲ್ಲಿ ಆಟವಾಡುತ್ತಾ ಮಗುವೊಂದು ನಿಂಬೆಹಣ್ಣು  ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರಂನಲ್ಲಿ ನಡೆದಿದೆ.ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯದ ಸಾಕಿದೀಪ ಮತ್ತು ಗೋವಿಂದರಾಜ್​​​​ ದಂಪತಿಯ  ಜಸ್ವಿತಾ (9 ತಿಂಗಳು) ಮೃತ ಮಗು.ಎಂದಿನಂತೆ ಮನೆಯಲ್ಲಿ ಆಡುತ್ತಾ ಮನೆಯಲ್ಲಿತ್ತು. ತಾಯಿ ಮಗುವನ್ನು ನೋಡುತ್ತಾ , ಮತ್ತೊಂದು ಕಡೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಮಗು ಜಗಲಿಯಲ್ಲಿದ್ದ ನಿಂಬೆಹಣ್ಣನ್ನು ಹಿಡಿದು ನುಂಗಿದೆ. ಆ ಬಳಿಕ ಮಗುವಿನ ಉಸಿರಾಟದಲ್ಲಿ ತೊಂದರೆ ಆಗಿದೆ. ಕೂಡಲೇ ತಾಯಿ ಗಂಟಲಿನಲ್ಲಿ ಸಿಲುಕಿದ್ದ ನಿಂಬೆಹಣ್ಣನ್ನು ತೆಗೆಯಲು ಯತ್ನಿಸಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆಸ್ಪತ್ರೆಯಲ್ಲಿ ವೈದ್ಯರು ಪರಿಕ್ಷೀಸಿದ ಬಳಿಕ ಆದಾಗಲೇ ಮಗು ಮೃತಪಟ್ಟಿದೆ ಎಂದಿದ್ದಾರೆ. ಸಾಕಿದೀಪ ಮತ್ತು ಗೋವಿಂದರಾಜ್ ದಂಪತಿಗೆ ಮದುವೆಯಾದ 7 ವರ್ಷದ ಬಳಿಕ ಮಗು ಜನಿಸಿತ್ತು. ಆದರೆ ಇಂತಹ ಆಕಸ್ಮಿಕ ದುರಂತದಲ್ಲಿ ಮಗು ಮೃತಪಟ್ಟಿರುವುದಕ್ಕೆ ಇಡೀ ಕುಟುಂಬವೇ ಶೋಕದಲ್ಲಿ ಮುಳುಗಿದೆ.

ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

Posted by Vidyamaana on 2023-07-26 01:56:16 |

Share: | | | | |


ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಬನ್ನೂರಿನ ಮನೆಗೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರು ಪೊಲೀಶ್ ವಶ!!

Posted by Vidyamaana on 2024-08-29 19:07:13 |

Share: | | | | |


ಬನ್ನೂರಿನ ಮನೆಗೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರು ಪೊಲೀಶ್ ವಶ!!

ಪುತ್ತೂರು: ಬನ್ನೂರಿನ ಕರ್ಮಲದ ಮನೆಗೆ ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಊರಿಗೆ ಹೊರಟಿದ್ದ ಮಹಿಳೆಯನ್ನ ಮನೆಗೆ ಕರೆದೊಯ್ದು ಕೊಲೆ; ಚಿನ್ನಾಭರಣ ಕಿತ್ಕೊಂಡು ಶವ ಸಂಪ್​​ಗೆ ಎಸೆದು ದಂಪತಿ ಎಸ್ಕೇಪ್

Posted by Vidyamaana on 2024-02-16 11:39:55 |

Share: | | | | |


ಊರಿಗೆ ಹೊರಟಿದ್ದ ಮಹಿಳೆಯನ್ನ ಮನೆಗೆ ಕರೆದೊಯ್ದು ಕೊಲೆ; ಚಿನ್ನಾಭರಣ ಕಿತ್ಕೊಂಡು ಶವ ಸಂಪ್​​ಗೆ ಎಸೆದು ದಂಪತಿ ಎಸ್ಕೇಪ್

ಬೆಂಗಳೂರು, ಫೆ.15: ಊರಿಗೆ ಹೊರಟಿದ್ದ ಮಹಿಳೆಯನ್ನ ಮನೆಗೆ ಕರೆದೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಗ್ರಾಮ ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುಳ ಮೃತ ರ್ದುದೈವಿ. ಇವರು ಟಿ.ದಾಸರಹಳ್ಳಿ(T.Dasarahalli) ಬಳಿ ಮೆಟ್ರೋ ಪಿಲ್ಲರ್ ಕೆಳಗೆ ವೀಳ್ಯದೆಲೆ ವ್ಯಾಪಾರ ಮಾಡುತ್ತಿದ್ದರು. ಊರ ಹಬ್ಬದ ಹಿನ್ನಲೆ ಫೆಬ್ರವರಿ 11ರಂದು ಮಗಳ ಮನೆಗೆ ಹೊರಟ್ಟಿದ್ದರು. ಹೀಗೆ ಹೊರಟಿದ್ದ ಮಂಜುಳಾರನ್ನ ಬಸ್ ನಿಲ್ದಾಣದವೆರಗೂ ಡ್ರಾಪ್ ಮಾಡುತ್ತೇನೆ ಎಂದು ಆರೋಪಿ ಜೀವನ್​ ಎಂಬಾತ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾನೆ. ಪರಿಚಯಸ್ಥ ಆದ್ದರಿಂದ ಮಂಜುಳ ಅವರು ಜೀವನ್ ಗಾಡಿ ಹತ್ತಿದ್ದಾರೆ. ಬಳಿಕ ಮಂಜುಳಾ ಮೈ ಮೇಲಿನ ಚಿನ್ನಾಭರಣದ ಆಸೆಗಾಗಿ ತನ್ನ ಪತ್ನಿ ಆಶಾ ಜೊತೆ ಸೇರಿ ಕತ್ತು ಹಿಸುಕಿ ಕೊಲೆ ಮಾಡಿ, ಶವವನ್ನು ಬೇರೆಡೆಗೆ ಸಾಗಿಸಲಾಗದೆ ಚೀಲದಲ್ಲಿ ತುಂಬಿ ಸಂಪ್​ನಲ್ಲಿ ಹಾಕಿ ಇಬ್ಬರು ಎಸ್ಕೇಪ್ ಆಗಿದ್ದಾರೆ.ಯಾವಾಗ ಮಂಜುಳ ಮಗಳ ಮನೆಗೆ ಬರಲಿಲ್ಲವೋ ಕುಟುಂಬಸ್ಥರು ಗಾಬರಿಯಾಗಿದ್ದಾರೆ. ಮರುದಿನ ಅಂದರೆ ಫೆ.12ನೇ ತಾರೀಖಿನಂದು ಮಂಜುಳಾರ ಪುತ್ರ ಸಂದೀಪ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲು ಮಾಡಿದ್ದ.


ಇನ್ನು ಜೀವನ್ ಹಾಗೂ ಆಶಾ ವಾಸವಿದ್ದ ಕಟ್ಟಡದ ನೀರಿನಲ್ಲಿ 13ನೇ ತಾರೀಖಿನಂದು ದುರ್ವಾಸನೆ ಯುಕ್ತ ನೀರು ಬರಲು ಶುರುವಾಗಿತ್ತು. ಈ ವೇಳೆ ಮನೆ ಮಾಲೀಕರಾದ ದೇವರಾಜ್ ಹಾಗೂ ಭಾಗ್ಯಮ್ಮ ಸಂಪ್ ಕ್ಲೀನ್ ಮಾಡಿಸಲು ಮುಂದಾಗಿದ್ರು. ಆಗ ಸಂಪ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.ಈ ವೇಳೆ ಎರಡನೇ ಮಹಡಿಯಲ್ಲಿ ವಾಸವಿದ್ದ ಆಶಾ ಹಾಗೂ ಜೀವನ್ ದಂಪತಿ ನಾಪತ್ತೆಯಾಗಿದ್ದರು. ಫೋನ್ ಮಾಡಿದ್ರೆ ಊರಲ್ಲಿ ಇರೋದಾಗಿ ಕಥೆ ಕಟ್ಟಿದ್ದರು. ಬಳಿಕ ಪೊಲೀಸರು ಮನೆ ಬಳಿ ಬನ್ನಿ ಸಣ್ಣ ವಿಚಾರಣೆ ಇದೆ ಎಂದಿದ್ದಾರೆ. ನಂತರ ಇಬ್ಬರೂ ಕೂಡ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪರಿಚಯಸ್ಥ ಎಂದು ನಂಬಿ ಆತನ ಜೊತೆ ಹೋದ ತಪ್ಪಿಗೆ ಮಹಿಳೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳಿಗಾಗಿ ತಲಾಶ್ ನಡೆಸಿದ್ದಾರೆ.

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

Posted by Vidyamaana on 2024-01-08 12:51:41 |

Share: | | | | |


ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗೆ ಉಚಿತ ತರಬೇತಿ

 ಪುತ್ತೂರು /ಸುಳ್ಯ :ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಿರುವ  ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ದಿನಾಂಕ 23.01.2024ರಂದು ನಡೆಯಲಿರುವ ಪಿ ಎಸ್ ಐ 545 ಹುದ್ದೆಗಳ ಮರು ಪರೀಕ್ಷೆಯನ್ನು ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ತರಬೇತಿಯನ್ನು ನೀಡುತ್ತಿದ್ದು, ದಿನಾಂಕ 09.01.2024 ರಿಂದ ತರಗತಿಗಳು ಪ್ರಾರಂಭವಾಗಲಿದೆ,ಈ ತರಗತಿಗಳು ಆನ್ ಲೈನ್ ಮೂಲಕ ತರಗತಿಗಳು ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಛೇರಿ ಸಂಖ್ಯೆ 9448527606ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಕ್ಕುಪತ್ರವಿದೆ..RTCಯೂ ಇದೆ.. ಜಾಗ ಮಾತ್ರ ಇಲ್ಲ..

Posted by Vidyamaana on 2023-09-09 20:20:54 |

Share: | | | | |


ಹಕ್ಕುಪತ್ರವಿದೆ..RTCಯೂ ಇದೆ.. ಜಾಗ ಮಾತ್ರ ಇಲ್ಲ..

ಪುತ್ತೂರು; `` ನಮಗೆ ಹಕ್ಕು ಪತ್ರ ಕೊಟ್ಟಿದ್ದಾರೆ, ನಮಗೆ ಕೊಟ್ಟ ಹಕ್ಕು ಪತ್ರದ ಆಧಾರದಲ್ಲಿ ಆರ್ ಟಿಸಿಯೂ ಕೊಟ್ಟಿದ್ದಾರೆ ಆದರೆ ಜಾಗ ಮಾತ್ರ ಕೊಟ್ಟಿಲ್ಲ, ಕಳೆದ ೯ ವರ್ಷಗಳಿಂದ ನಾವು ಜಾಗ ಕೊಡಿ ಎಂದು ಕಚೇರಿಗಳಿಗೆ ಅಲೆದಾಟ ಮಾಡುತ್ತಿದ್ದೇವೆ ನಮ್ಮ ನೋವನ್ನೂ ಯಾರೂ ಕೇಳಿಲ್ಲ, ನಮಗೆ ನ್ಯಾಯ ಕೊಡಿ ಎಂದು ಕೊಳ್ತಿಗೆ ಗ್ರಾಮದ ಮೇರುಸಿದ್ದಮೂಲೆಯ ಸುಮಾರು ದಲಿತ ಕುಟುಂಬಗಳು ಶಾಸಕರಾದ ಅಶೋಕ್ ರೈ ಯವರ ಬಳಿ ಬಂದು ದೂರು ನೀಡಿದ್ದು ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ.

೨೦೧೪ ರಲ್ಲಿ ಕೊಳ್ತಿಗೆ ಗ್ರಾಮದ ಮೇರು ಸಿದ್ದಮೂಲೆಯ ೧೮ ದಲಿತ ಕುಟುಂಬಗಳು ಮತ್ತು ೮ ಹಿಂದುಳಿದ ವರ್ಗಗಳ ಕುಟುಂಬಘಳಿಗೆ ಆಶ್ರಯ ಗ್ರಾಮೀಣ ನಿವೇಶನ ಯೋಜನೆಯಡಿ ನಿವೇಶನ ಹಕ್ಕು ಪತ್ರವನ್ನು ನೀಡಲಾಗಿದೆ. ಹಕ್ಕು ಪತ್ರ ನೀಡಿದ ಬಳಿಕ ಅದೇ ಸರ್ವೆ ನಂಬರ್‌ನಲ್ಲಿ ಆರ್ ಟಿಸಿಯನ್ನು ನೀಡಲಾಗಿದೆ. ಆದರೆ ಅದೇ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಅದು ಮೀಸಲು ಅರಣ್ಯ ಜಾಗಕ್ಕೆ ಸೇರಿದೆ ಎಂದು ಅಲ್ಲಿ ಗಿಡಗಳನ್ನು ನೆಟ್ಟಿದ್ದಾರೆ. ಆ ಬಳಿಕ ೨೬ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಜಾಗವನ್ನೇ ಗೊತ್ತು ಮಾಡಿರಲಿಲ್ಲ. ಕಳೆದ ೯ ವರ್ಷಗಳಿಂದ ಇವರು ಕಚೇರಿಗೆ ಅಲೆದಾಟ ಮಾಡುತ್ತಿದ್ದರೂ ಇವರಿಗೆ ನ್ಯಾಯ ಸಿಕ್ಕಿರಲಿಲ್ಲ.


ಶಾಸಕರ ಭೇಟಿ ತುರ್ತು ಪರಿಹಾರ

ಹಕ್ಕು ಪತ್ರವನ್ನು ಪಡೆದುಕೊಂಡಿದ್ದ ಕೆಲವು ಕುಟುಂಬಗಳು ಶಾಸಕರಾದ ಅಶೋಕ್ ರೈಯವರನ್ನು ಭೇಟಿಯಾಗಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಲ್ಲಿನ ಜಾಗದ ಸಮಸ್ಯೆಗಳನ್ನು ಅರಿತುಕೊಂಡರು. ಕಂದಾಯ ಇಲಾಖೆಯವರು ಹಕ್ಕು ಪತ್ರ ನೀಡಿದ ಜಾಗ ಮೀಸಲು ಅರಣ್ಯಕ್ಕೆ ಸೇರಿದ ಕಾರಣ ಅಲ್ಲಿ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಆಕ್ಷೇಪ ಸಲ್ಲಿಸಿದ ಬಗ್ಗೆ ಶಾಸಕರ ಗಮನಕ್ಕೆ ತಂದರು. ಇದೇ ಸರ್ವೆ ನಂಬರ್‌ನಲ್ಲಿ ಸರಕಾರಿ ಜಾಗವನ್ನು ಗುರುತಿಸಿ ಹಕ್ಕು ಪತ್ರವನ್ನು ಪಡೆದುಕೊಂಡಿರುವ ಎಲ್ಲಾ ಕುಟುಂಬಗಳಿಗೂ ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಿ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ತಾತ್ಕಾಲಿಕವಾಗಿ ಕೊಳ್ತಿಗೆಯಲ್ಲಿನ ಸರಕಾರಿ ಜಾಗದಲ್ಲಿ ಶೀಟ್ ಹಾಕಿ ಕೆಲವು ಕುಟುಂಬಗಳು ಮನೆ ನಿರ್ಮಾನ ಮಾಡಿಕೊಂಡಿದ್ದು ಅಲ್ಲಿಂದ ಬಡ ಕುಟುಂಬವನ್ನು ತೆರವು ಮಾಡದಂತೆ ಶಾಸಕರು ಸೂಚನೆ ನೀಡಿದ್ದಾರೆ.


ಶಾಸಕರು ನೋವಿಗೆ ಸ್ಪಂದಿಸಿದ್ದಾರೆ

ನಮ್ಮ ನೋವನ್ನು ಶಾಸಕರಾದ ಅಶೋಕ್ ರೈಯವರ ಬಳಿ ಹೇಳಿಕೊಂಡಾಗ ಅವರ ತಕ್ಷಣ ಸ್ಪಂದನೆ ನೀಡಿದ್ದಾರೆ. ಈಗ ನಾವು ತಾತ್ಕಾಲಿಕವಾಗಿ ಶೀಟ್ ಹಾಕಿ ಮನೆ ನಿರ್ಮಾಣ ಮಾಡಿಕೊಂಡಿದ್ದು ಅಲ್ಲೇ ವಾಸ್ತವ್ಯ ಇರುವಂತೆ ತಿಳಿಸಿದ್ದಾರೆ. ಮುಂದೆ ಇದೇ ಹಕ್ಕು ಪತ್ರವನ್ನು ಇಟ್ಟು ನ್ಯಾಯಾಲಯದ ಮೊರೆ ಹೋಗೋಣ ಎಂದು ಭರವಸೆಯನ್ನು ನೀಡಿದ್ದಾರೆ. ಇದುವರೆಗೆ ನಮ್ಮ ನೋವಿಗೆ ಯಾರೂ ಸ್ಪಂದನೆ ಮಾಡಿರಲಿಲ್ಲ. ಶಾಸಕರ ಬಳಿ ಬಂದು ನಮಗೆ ನ್ಯಾಯ ಸಿಕ್ಕಿದೆ


ಲವಕುಮಾರ್, ಫಲಾನುಭವಿ


ಹಕ್ಕುಪತ್ರ ಕೊಟ್ಟಿದ್ದಾರೆ ನಿವೇಶನ ಇಲ್ಲ

೨೬ ಬಡ ಕುಟುಂಬಗಳಿಗೆ ಹಕ್ಕು ಪತ್ರವನ್ನು ಕಂದಾಯ ಇಲಾಖೆ ನೀಡಿದೆ ಜಾಗ ಎಲ್ಲಿ ಎಂದು ತೋರಿಸಲಿಲ್ಲ, ಕಂದಾಯ ಇಲಾಖೆ ಗುರುತಿಸಿದ ಜಾಗ ಅರಣ್ಯಕ್ಕೆ ಸೇರಿದ್ದು ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಹಕ್ಕು ಪತ್ರ ಕೊಡುವಾಗ ಸರಿಯಾಗಿ ನೋಡಿಕೊಡದೇ ಇರುವುದು ತಪ್ಪು. ನ್ಯಾಯ ಕೊಡಿ ಎಂದು ನನ್ನಲ್ಲಿ ಬಂದಿದ್ದಾರೆ. ಅಧಿಕಾರಿಗಳ ಜೊತೆ ಮಾತನಾಡಿ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದೇನೆ, ತಾತ್ಕಾಲಿಕವಾಗಿ ಈಗ ಶೀಟ್ ಹಾಕಿರುವ ಮನೆಯಲ್ಲೇ ವಾಸ್ತವ್ಯ ಮಾಡುವಂತೆ ತಿಳಿಸಿದ್ದೇನೆ.

ಅಶೋಕ್ ರೈ ಶಾಸಕರು ಪುತ್ತೂರು

Recent News


Leave a Comment: