Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34
ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.
ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
Posted by Vidyamaana on 2023-09-14 15:34:50 |
ಬೆಂಗಳೂರು : ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವಂತ ಕಾಂಗ್ರೆಸ್ ಸರ್ಕಾರವು, ಈಗ ದೈವ ಭಕ್ತರ ಭಾವನೆ ಗೌರವಿಸಲು ಮುಜರಾಯಿ ಇಲಾಖೆಯಿಂದ ಮಹತ್ವದ ನಿರ್ಧಾರ ಎನ್ನುವಂತೆ, ದೇವಸ್ಥಾನಗಳ ಸುತ್ತಮುತ್ತಾ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ.ಈ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಎಕ್ಸ್ ಮಾಡಲಾಗಿದ್ದು, ಧರ್ಮ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ ಎಂದು ಹೇಳಿದೆ.
ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ನಮ್ಮ ಸರ್ಕಾರ ಎಂದು ತಿಳಿಸಿದೆ.
ಧರ್ಮ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ.
ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.
ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ.ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವಂತ ದೇವಾಲಯಗಳ ಸುತ್ತಾಮುತ್ತ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶ್ರೀಘ್ರವೇ ಬ್ರೇಕ್ ಬೀಳಲಿದೆ. ಈ ಸಂಬಂಧ ಅಧಿಕೃತ ಆದೇಶವನ್ನು ಇಲಾಖೆ ಹೊರಡಿಸಿದೆ.
ಈ ನಿಯಮ ಇಲಾಖೆ ವ್ಯಾಪ್ತಿಯಲ್ಲಿ ಇರುವಂತ 33 ಸಾವಿರ ದೇವಾಲಯಗಳಿಗೂ ಅನ್ವಯ ಆಗಲಿದೆ. ದೇವಾಲಯದ ಹೊರ ಭಾಗದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಕಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಿರೋದು, ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಬಳಕೆಗೆ ನಿಷೇಧ ವಿದ್ಧರೂ ನಿಯಮ ಅನುಸರಿಸದ ಕಾರಣ, ಸರ್ಕಾರ ಈ ನಿಯಮ ಜಾರಿಗೆ ನಿರ್ಧಾರ ಕೈಗೊಂಡಿದೆ.
ಈಗಾಗಲೇ ಶಾಲಾ-ಕಾಲೇಜು ಆವರಣ ವ್ಯಾಪ್ತಿಯ ನೂರು ಮೀಟರ್ ಗಳಲ್ಲಿ ಯಾವುದೇ ಅಂಗಡಿಗಳಲ್ಲಿ ಬೀಡಿ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಮಾರಾಟ ಮಾಡುವಂತಿಲ್ಲ ಎಂಬ ಆದೇಶ ಮಾಡಲಾಗಿದೆ
Posted by Vidyamaana on 2024-05-13 21:27:54 |
ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ.
Posted by Vidyamaana on 2023-11-11 19:55:28 |
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಸಂಸ್ಥಾಪಕರ ದಿನಾಚರಣೆ ಹಾಗೂ ರಕ್ತದಾನ ಶಿಬಿರವು ನ.10ರಂದು ನೆರವೇರಿತು.
ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್ ಮಾತನಾಡಿ, ನನ್ನ ವಿದ್ಯಾರ್ಥಿ ಜೀವನದಲ್ಲಿಯೇ ಜಿ.ಎಲ್ ಆಚಾರ್ಯ ಜ್ಯವೆಲ್ಲರ್ಸ್ ಪುತ್ತೂರಿನ ಪ್ರತಿಷ್ಠಿತ ಜ್ಯುವೆಲ್ಸರ್ಸ್ ಎಂಬ ಖ್ಯಾತಿ ಪಡೆದಿತ್ತು. ಅಂದಿನಿಂದ ಇಂದಿನ ತನಕ ವ್ಯವಹಾರದಲ್ಲಿ ನೈತಿಕಯನ್ನು ಇಂದಿಗೂ ಬೆಳೆಸಿಕೊಂಡು ಬಂದಿದ್ದಾರೆ. ಜಿ.ಎಲ್ ಆಚಾರ್ಯ ಕುಟುಂಬದವರು ರೋಟರಿ ಸಂಸ್ಥೆಯ ಅಸ್ಥಿತ್ವಕ್ಕೂ ಬಹಳಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಸಂಸ್ಥಾಪಕರ ದಿನಾಚರಣೆಯು ಅರ್ಥಪೂರ್ಣವಾದ ದಿನವಾಗಿ ಆಚರಿಸಲಾಗುತ್ತಿದೆ. ಅವರ ಕುಟುಂಬವು ಸಮಾಜ ಸೇವೆಗೆ ತ್ಯಾಗ ಮಾಡುವ ಉದ್ದೇಶದಲ್ಲಿದ್ದು ರಕ್ತದಾನ ಶಿಬಿರವು ಸದುದ್ದೇಶದಿಂದ ಆಯೋಜಿಸಿಕೊಳ್ಳಲಾಗಿದೆ ಎಂದರು.
ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಮಾತನಾಡಿ, ರೋಟರಿ ಕ್ಲಬ್ ಅಧ್ಯಕ್ಷರಾಗಿ ಜಿ.ಎಲ್ ಆಚಾರ್ಯ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಬ್ಲಡ್ ಬ್ಯಾಂಕ್ನ ಬೆಳ್ಳಿ ಹಬ್ಬ ಸಂಭ್ರಮವನ್ನು ಬಂಗಾರದ ಅಂಗಡಿಯಲ್ಲಿ ಆಚರಿಸಲಾಗುತ್ತಿದೆ. ವರ್ಷದ 365 ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಬ್ಲಡ್ ಬ್ಯಾಂಕ್ ಐದು ತಾಲೂಕಿಗೆ ರಕ್ತ ಸರಬರಾಜ ಮಾಡಲಾಗುತ್ತದೆ ಎಂದರು.
ಸಂಸ್ಥೆಯ ಮ್ಹಾಲಕ ಬಲರಾಮ ಆಚಾರ್ಯ ಮಾತನಾಡಿ, ಸಂಸ್ಥೆಯ ಸಂಸ್ಥಾಪಕರ ದಿನದ ಅಂಗವಾಗಿ ನಮ್ಮ ಸಿಬ್ಬಂದಿ ವರ್ಗದವರೇ ಆಸಕ್ತಿಯಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದಾರೆ. ಮಳಿಗೆ ಎಲ್ಲಾ ಸಿಬ್ಬಂದಿಗಳು ಹಾಗೂ ನಮ್ಮ ಮಕ್ಕಳು ರಕ್ತದಾನ ಮಾಡಲಿದ್ದಾರೆ. ಅಲ್ಲದೆ ಸಂಸ್ಥಾಪಕರ ದಿನದ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಪರಿಕರಗಳ ಖರೀದಿಗೆ ದೇಣಿಗೆ ನೀಡಲಾಗುವುದು ಎಂದರು.
ರೋಟರಿ ಕ್ಲಬ್ ಕಾರ್ಯದರ್ಶಿ ಸುಜಿತ್ ರೈ, ಜಿ.ಎಲ್ ಆಚಾರ್ಯ ಮಳಿಗೆಯ ಸುದನ್ವ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಟ್ಟೆ ಶಾಲೆಗೆ ದೇಣಿಗೆ:
ಮಳಿಗೆಯ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ದೇಣಿಗೆ ನೀಡಲಾಗಿದ್ದು ಶಿಕ್ಷಕ ವಿಶ್ವನಾಥರವರು ಚೆಕ್ ಸ್ವೀಕರಿಸಿದರು. ಬಲರಾಮ ಆಚಾರ್ಯ ಸ್ವಾಗತಿಸಿದರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀಕಾಂತ ಆಚಾರ್ಯ ವಂದಿಸಿದರು.
Posted by Vidyamaana on 2024-05-17 08:12:31 |
ರಾಮನಗರ(ಮೇ.17): ಖಾಸಗಿ ಫೋಟೋ - ವಿಡಿಯೋಗಳನ್ನು ತೋರಿಸಿ ಹಣಕ್ಕೆ ಬೇಡಿಕೆ ಇಡುತ್ತಿರುವ ವೈದ್ಯನ ವಿರುದ್ಧ ಮಹಿಳೆಯೊಬ್ಬರು ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ವಿನಾಯಕನಗರ ಬಡಾವಣೆ ನಿವಾಸಿ ಪರಸಪ್ಪ ಖಾಸಗಿ ಫೋಟೋ - ವಿಡಿಯೋಗಳನ್ನು ಇಟ್ಟುಕೊಂಡು ತನ್ನನ್ನು ತೇಜೋವಧೆ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ಆತನ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಮಹಿಳೆ ಕೋರಿದ್ದಾರೆ.
Posted by Vidyamaana on 2023-09-14 18:46:57 |
ಪುತ್ತೂರು; ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮರಳಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರಯಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳಗ್ರಾಮದ ಮಹಿಳೆ ಚಂದ್ರಾವತಿ ಎಂಬವರು ಶಾಸಕರ ಬಳಿ ಬಂದು ನನ್ನ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಿಲ್ಲ, ನನಗೆ ಅಕ್ರಮ ಸಕ್ರಮ ಸಂಜೂರು ಮಾಡಿಲ್ಲ, ನಾನು ಉಗ್ರಾನಿಗೆ ೩೦ ಸಾವಿರ ಹಣ ನೀಡಿದ್ದೇನೆ, ಬೀಡಿ ಕಟ್ಟಿ ಜೀವನ ಮಾಡುವ ನನ್ನಿಂದ ಉಗ್ರಾನಿ ೩೦ ಸಾವಿರ ಲಂಚ ಪಡೆದುಕೊಂಡಿದ್ದಾರೆ, ಹಣ ಕೊಟ್ಟರೂ ನನ್ನ ಕೆಲಸ ಮಾಡಿಕೊಟ್ಟಿಲ್ಲ ನನಗೆ ನ್ಯಾಯ ಕೊಡಬೇಕು, ನನಗೆ ಅಕ್ರಮ ಸಕ್ರಮ ಮಾಡಿಕೊಡಬೇಕು ಎಂದು ಶಾಸಕರಾದ ಅಶೋಕ್ ರೈಯವರಲ್ಲಿ ಹೇಳಿಕೊಂಡಿದ್ದರು.
ಮಹಿಳೆಯ ಆರೋಪವನ್ನು ಆಲಿಸಿದ ಶಾಸಕರು ತಕ್ಷಣವೇ ಉಗ್ರಾನಿಯ ನಂಬರ್ ಪಡೆದು ಕರೆ ಮಾಡಿ ನೀವು ಚಂದ್ರಾವತಿಯವರಿಂದ ಅಕ್ರಮ ಸಕ್ರಮ ವಿಲೇವಾರಿಗೆ ಪಡೆದುಕೊಂಡಿರುವ ೩೦ ಸಾವಿರ ಹಣವನ್ನು ಒಂದು ವಾರದೊಳಗೆ ಮರಳಿ ಕೊಡಬೇಕು ಇಲ್ಲವಾದರೆ ನಿಮ್ಮನ್ನು ಕೆಲಸದಿಂದ ಸಸ್ಪೆಂಡ್ ಮಾಡಿಸುತ್ತೇನೆ, ಬಡವರಿಂದ ಹಣ ಯಾಕೆ ಪಡೆದುಕೊಂಡಿದ್ದೀರಿ ಎಂದು ಹೇಳಿ ಪಡೆದ ಹಣವನ್ನು ಮರಳಿಸಲು ಒಂದು ವಆರದ ಗಡುವು ನೀಡಿದ್ದರು.
ಸೆ. ೧೪ ರಂದು ಮಹಿಳೆಯ ಮನೆಗೆ ಬಂದ ಉಗ್ರಾಣಿ ತಾನುಪಡೆದುಕೊಂಡಿದ್ದ ೩೦ ಸಾವಿರ ಲಂಚದ ಹಣವನ್ನು ಮರಳಿಸಿದ್ದಾರೆ.
Posted by Vidyamaana on 2024-06-08 17:17:10 |
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್ ರಾಡ್ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ.
ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.
ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್ ಫಂಡ್ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.
ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.
ಬಳಿಕ ಆತನ ಮೊಬೈಲ್ ಲೋಕೇಶನ್ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.