ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

Posted by Vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಮಂಗಳೂರು; ಮೆಹಂದಿ ಕಾರ್ಯಕ್ರಮದ ದಿನ ವರ ಕಿಶನ್ ಶೆಟ್ಟಿ ನಾಪತ್ತೆ

Posted by Vidyamaana on 2023-05-31 17:01:17 |

Share: | | | | |


ಮಂಗಳೂರು; ಮೆಹಂದಿ ಕಾರ್ಯಕ್ರಮದ ದಿನ ವರ ಕಿಶನ್ ಶೆಟ್ಟಿ ನಾಪತ್ತೆ

ಮಂಗಳೂರು; ಮದುವೆಗೆ ಮೊದಲ ದಿನ ಮೆಹಂದಿ ಕಾರ್ಯಕ್ರಮದಂದು ವರನೊಬ್ಬ ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಕೊಣಾಜೆ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದೆ.

ತೌಡುಗೋಳಿ-ವರ್ಕಾಡಿ ದೇವಂದಪಡುವಿನ ಉದ್ಯಮಿಯೋರ್ವರ ಸುಪುತ್ರ ಕಿಶನ್ ಶೆಟ್ಟಿ ನಾಪತ್ತೆಯಾದ ವರ.ಕಿಶನ್ ಗೆ ನಾಳೆ ವಿವಾಹವಾಗಬೇಕಾಗಿತ್ತು.ಕಿಶನ್ ಗೆ ಇಂದು ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಪೋಷಕರು ಸಿದ್ಧತೆ

ಕಿಶನ್ ಹಣ್ಣು ಖರೀದಿಗೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದಾರೆ.ಇದೀಗ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.ಕಿಶನ್ ಶೆಟ್ಟಿಗೆ ಜಪ್ಪಿನಮೊಗರಿನಲ್ಲಿರುವ ಕುಟುಂಬವೊಂದರ ಉಪನ್ಯಾಸಕಿಯೊಂದಿಗೆ ವಿವಾಹ ನಿಗದಿಯಾಗಿತ್ತು.ಈ ಕುರಿತು ಕೊಣಾಜೆ ಠಾಣೆಯಲ್ಲಿ ಕಿಶನ್ ತಂದೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು

Posted by Vidyamaana on 2023-02-05 02:44:35 |

Share: | | | | |


ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು

ಬಾಯಿ ಹುಣ್ಣು ಒಂದು ಸಾಮಾನ್ಯ ಸಮಸ್ಯೆ. ಬಾಯಿ ಹುಣ್ಣು ಇದ್ದರೆ ಯಾವುದೇ ಆಹಾರವನ್ನು ತಿನ್ನಲು ಆಗುವುದಿಲ್ಲ. ನಾವು ಸೇವಿಸುವ ಆಹಾರದಲ್ಲಿ ಸ್ವಲ್ಪ ಉಪ್ಪು ಮಸಾಲೆ ಇದ್ದರಂತೂ ಉರಿಯುತ್ತದೆ. ಆಹಾರವನ್ನು ಜಗಿಯಲೂ ಕಷ್ಟವಾಗುತ್ತದೆ, ಅಲ್ಲದೆ ಮಾತನಾಡಲೂ ಕಷ್ಟವಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಕೆಲವರಿಗೆ ಪದೇ ಪದೇ ಕಾಡುತ್ತಿದ್ದರೆ ಮತ್ತೆ ಕೆಲವರಿಗೆ ಎರಡು-ಮೂರು ತಿಂಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ.

ಬಾಯಿಯ ಹುಣ್ಣು ಏಕೆ ಬರುತ್ತದೆ?

ಬಾಯಿ ಹುಣ್ಣಿಗೆ ನಿರ್ದಿಷ್ಟ ಕಾರಣ ಏನೂ ಎಂಬುದು ಇನ್ನೂ ಸರಿಯಾಗಿ ತಿಳಿದಿಲ್ಲ. ಆದರೆ ಇದು ವ್ಯಕ್ತಿಯಿಂದ ವ್ಯಕ್ತಿಗೆ ವಿಭಿನ್ನವಾಗಿರುತ್ತದೆ. ಮತ್ತು ಬಾಯಿ ಹುಣ್ಣುಗಳು ಉಂಟಾಗಲು ವಿವಿಧ ಕಾರಣಗಳು ಇರುತ್ತವೆ. ಇದು ಸಾಮಾನ್ಯವಾಗಿ ಹಾರ್ಮೋನುಗಳ ಅಸಮತೋಲನ, ಆಮ್ಲೀಯತೆ, ಮಲಬದ್ಧತೆ, ವಿಟಮಿನ್ ಬಿ ಮತ್ತು ಸಿ ಕೊರತೆ, ಜೊತೆಗೆ ಕಬ್ಬಿಣ ಮತ್ತು ಇತರ ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. ಬಾಯಿ ಹುಣ್ಣು ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರಬಹುದು.ಕೆಲವರಿಗೆ ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಬಾಯಿಯನ್ನು ಸ್ವಚ್ಛವಾಗಿ, ಸರಿಯಾಗಿ ಇಟ್ಟುಕೊಳ್ಳದಿದ್ದರೂ ಕೂಡ ಈ ಸಮಸ್ಯೆ ಉಂಟಾಗಬಹುದು. ಕೆಲವರಿಗೆ ಒತ್ತಡ, ನಿದ್ರೆಯ ಕೊರತೆ ಅಥವಾ ಹಾರ್ಮೋನುಗಳ ಬದಲಾವಣೆಯಿಂದಲೂ ಬಾಯಿ ಹುಣ್ಣು ಉಂಟಾಗಬಹುದು. ಒಟ್ಟಿನಲ್ಲಿ ಹೇಳುವುದಾದರೆ ಎಲ್ಲರೂ ಒಮ್ಮೆಯಾದರೂ ಬಾಯಿ ಹುಣ್ಣಿನ ಸಮಸ್ಯೆಯನ್ನು ಎದುರಿಸಿರುತ್ತಾರೆ. ಆದ್ದರಿಂದಲೇ ಇದೊಂದು ಸಾಮಾನ್ಯ ಸಮಸ್ಯೆ ಎನಿಸಿದೆ.ಬಾಯಿ ಹುಣ್ಣು ಆದಾಗ ಏನು ಮಾಡಬೇಕು?

ಬಾಯಿಯ ಹುಣ್ಣುಗಳು ಒಸಡುಗಳ ಕೆಳಭಾಗದಲ್ಲಿ ಮತ್ತು ಬಾಯಿಯ ಇತರ ಸ್ಥಳಗಳಲ್ಲಿ ಕಂಡುಬರುವ ಸಣ್ಣ ಸಣ್ಣ ಗಾಯಗಳಾಗಿವೆ. ಬಾಯಿ ಹುಣ್ಣು ಸಾಮಾನ್ಯವಾಗಿ ಕೆಂಪು ಅಂಚಿನೊಂದಿಗೆ ಬಿಳಿಯ ಬಣ್ಣದ್ದಾಗಿರುತ್ತದೆ. ಇದು ಸಾಂಕ್ರಾಮಿಕವಲ್ಲ ಮತ್ತು ಸೂಕ್ತವಾದ ಕ್ರಮ ಕೈಗೊಂಡಲ್ಲಿ ಕೆಲವೇ ದಿನಗಳಲ್ಲಿ ಅಥವಾ ಒಂದೆರಡು ವಾರಗಳಲ್ಲಿ ವಾಸಿಯಾಗುತ್ತವೆ. ದೀರ್ಘಕಾಲದವರೆಗೆ ಬಾಯಿಯಲ್ಲಿ ಹುಣ್ಣು ಮತ್ತು ನೋವಿನ ಹುಣ್ಣುಗಳು ಗಂಭೀರವಾದ ವೈದ್ಯಕೀಯ ಸಮಸ್ಯೆಯ ಸಂಕೇತವಾಗಬಹುದು. ಉದಾಹರಣೆಗೆ ಸಣ್ಣ ಅಥವಾ ದೊಡ್ಡ ಕರುಳಿನ ಸೋಂಕುಗಳು, ಅಸಮರ್ಪಕ ಜೀರ್ಣಕ್ರಿಯೆ, ತೀವ್ರ ಆಮ್ಲೀಯತೆಯ ಇಂತಹ ಸಮಸ್ಯೆಗಳು ಇರಬಹುದು. ಆದ್ದರಿಂದ ಹೆಚ್ಚು ಕಾಲ ಬಾಯಿ ಹುಣ್ಣು ನೋವು ಕೊಡುತ್ತಿದ್ದು ದೀರ್ಘಕಾಲದವರೆಗೆ ಇದ್ದರೆ ವೈದ್ಯರನ್ನು ತಡಮಾಡದೇ ಕಾಣಬೇಕು.

ಬಾಯಿ ಹುಣ್ಣಿಗೆ ಮನೆಮದ್ದುಗಳು

ಬಾಯಿ ಹುಣ್ಣಿನ ನೋವಿನ ತಕ್ಷಣ ಕಡಿಮೆಯಾಗಲು ಸ್ವಚ್ಛವಾದ ಹತ್ತಿಯನ್ನು ಜೀನುತುಪ್ಪಕ್ಕೆ ಅದ್ದಿ ನೋವಿರುವ ಭಾಗಕ್ಕೆ ಇಟ್ಟುಕೊಳ್ಳಬೇಕು.ಹೀಗೆಯೇ ತುಪ್ಪವನ್ನು ಬಾಯಿ ಹುಣ್ಣಿಗೆ ಹಚ್ಚಿಕೊಂಡರೂ ನೋವು ಉಪಶಮನವಾಗುತ್ತದೆ. ತೆಂಗಿನ ಎಣ್ಣೆಯನ್ನು ಬಾಯಿ ಹುಣ್ಣಿಗೆ ಹಚ್ಚಿಕೊಂಡರೆ ನೋವು ಬೇಗ ತಣಿಯುತ್ತದೆ. ಹಾಗೆಯೇ ಸ್ವಲ್ಪ ಅಲೋವೆರಾದ ತಾಜಾ ತಿರುಳನ್ನು (ಲೋಳೆಸರ) ಹುಣ್ಣಿನ ಮೇಲೆ ದಿನವೂ ಹಚ್ಚುತ್ತಿದ್ದರೆ ಒಂದೆರಡು ದಿನಗಳಲ್ಲಿ ವಾಸಿವಾಗಬಹುದು. ಅಲೋವೆರಾ ಕೂಡ ದೇಹವನ್ನು ತಂಪಾಗಿರಿಸಲು ಸಹಕಾರಿ.ಬಾಯಿ ಹುಣ್ಣು ಆದಾಗ ಎಳನೀರು ಕುಡಿದರೆ ಬಹಳ ಒಳ್ಳೆಯದು. ದಿನಕ್ಕೆ ಎರಡು ಅಥವಾ ಮೂರು ಸಲ ತಾಜಾ ಮಜ್ಜಿಗೆಯನ್ನೂ ತೆಗೆದುಕೊಳ್ಳಬಹುದು. ಇದರಿಂದ ದೇಹದ ತಾಪಮಾನ ಕಡಿಮೆಯಾಗಿ ಬಾಯಿಯಲ್ಲಿನ ಹುಣ್ಣುಗಳು ವಾಸಿಯಾಗಲು ಸಹಾಯವಾಗುತ್ತದೆ.

ಬಾಯಿ ಹುಣ್ಣಿಗೆ ಆಯುರ್ವೇದ ಪರಿಹಾರಗಳು

ಹಲವಾರು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಹೊಂದಿರುವ ಅರಿಶಿನದಲ್ಲಿಯೂ ಕೂಡ ಬಾಯಿ ಹುಣ್ಣಿನ ಸಮಸ್ಯೆಯ ವಿರುದ್ಧ ಹೋರಾಡುವ ಗುಣವಿದೆ. ಒಂದು ಟೇಬಲ್ ಚಮಚ ಜೇನುತುಪ್ಪ, ಅರ್ಧ ಟೀ ಚಮಚ ಅರಿಶಿನವನ್ನು ಸೇರಿಸಿ ಮಿಶ್ರಣ ಮಾಡಿಕೊಂಡು ಬಾಯಿ ಹುಣ್ಣಿರುವ ಜಾಗಕ್ಕೆ ಈ ಮಿಶ್ರಣವನ್ನು ಹಚ್ಚಬೇಕು. ನಾಲ್ಕೈದು ದಿನಗಳ ಪ್ರತಿದಿನ ಹೀಗೆ ಮಾಡುತ್ತಾ ಬರುವುದರಿಂದ ಕೂಡಲೇ ಈ ಸಮಸ್ಯೆ ವಾಸಿಯಾಗುತ್ತದೆ.

ಪ್ರತಿದಿನ ತುಳಸಿ ಗಿಡದ ಎಲೆಗಳನ್ನು ಚೆನ್ನಾಗಿ ಜಗಿದು ಅದರ ರಸವನ್ನು ಹೀರಬೇಕು. ತುಳಸಿ ಎಲೆಗಳ ಚಹಾ ತಯಾರು ಮಾಡಿಕೊಂಡು ದಿನದಲ್ಲಿ ಎರಡು ಬಾರಿಯಾದರೂ ಕುಡಿದರೆ ಈ ಸಮಸ್ಯೆಯಿಂದ ಪಾರಾಗಬಹುದು. ಒಂದು ಚಮಚ ನೆಲ್ಲಿಕಾಯಿ ಪುಡಿ ಮತ್ತು ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬೇಕು.ಬಾಯಿ ಹುಣ್ಣು ಆದಾಗ ಆಮ್ಲೀಯ ಹಣ್ಣುಗಳಾದ ನಿಂಬೆ, ಕಿತ್ತಳೆ, ಅನಾನಸ್, ಚಿಪ್ಸ್ ಮತ್ತು ಮಸಾಲೆಯುಕ್ತ ಆಹಾರ ಸೇವಿಸಬಾರದು. ನಿಧಾನವಾಗಿ ಮೆದುವಾಗಿರುವ ಬ್ರಿಸಲ್ಲುಗಳಿರುವ ಬ್ರಶ್ ಉಪಯೋಗಿಸಿ ಹಲ್ಲು ಉಜ್ಜಬೇಕು. ಯಾವುದೇ ರೀತಿಯ ಮಾನಸಿಕ ಒತ್ತಡ ಇದ್ದರೆ ಧ್ಯಾನ ಮಾಡಲು ಪ್ರಯತ್ನಿಸಿ. ಒತ್ತಡವನ್ನು ನಿವಾರಿಸಲು ನೀವು ಮಾಡಲು ಇಷ್ಟಪಡುವ ಯಾವುದೇ ಚಟುವಟಿಕೆಯನ್ನು ತೊಡಗಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಎಂಟು ಗಂಟೆಗಳ ಕಾಲ ಚೆನ್ನಾಗಿ ನಿದ್ರೆ ಮಾಡಬೇಕು. ಸಾಕಷ್ಟು ನೀರು ಕುಡಿಯುವುದು ಬಾಯಿ ಹುಣ್ಣುಗಳ ಸಮಸ್ಯೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಪೋಷಕಾಂಶಗಳು ಇರುವಂತಹ ಸಮತೋಲಿತ ಆಹಾರ ಕ್ರಮವನ್ನು ಪಾಲಿಸಿಕೊಂಡು ಹೋದರೆ ಬಾಯಿಯ ಹುಣ್ಣು ಕಡಿಮೆ ಆಗುವುದು. ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಆಹಾರದಲ್ಲಿ ನಿಯಮಿತವಾಗಿ ಸೇರಿಸಿಕೊಳ್ಳಬೇಕು. ಆಲ್ಕೋಹಾಲ್, ಕಾಫಿ ಮತ್ತು ತಂಪು ಪಾನೀಯಗಳ ಸೇವನೆ ಹೆಚ್ಚು ಬೇಡ. ಹಾಗೆಯೇ ಅತಿ ಮಸಾಲೆಯುಕ್ತ ಪದಾರ್ಥಗಳ ಸೇವನೆ ಸಲ್ಲ. ಪ್ರತಿದಿನ ಮೂರು ಲೀಟರ್ ನೀರನ್ನು ಕುಡಿಯಬೇಕು. ಹೀಗೆ ಮಾಡಿದರೆ ಬಾಯಿಯ ಹುಣ್ಣು ಸಮಸ್ಯೆ ಹತ್ತಿರವೂ ಸುಳಿಯುವುದಿಲ್ಲ.

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

Posted by Vidyamaana on 2024-02-07 14:55:35 |

Share: | | | | |


ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

ದೆಹಲಿ: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ.



ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಫಲಕಗಳನ್ನು ಶಾಸಕರು ಸಂಸದರು ಪ್ರದರ್ಶಿಸುವ ಮೂಲಕ ಗಮನ ಸೆಳೆದರು.

ಉಡುಪಿ: ಆನ್‌ಲೈನ್ ವಂಚನೆ ಪ್ರಕರಣ : ಆರೋಪಿ ಬಂಧನ, ಲಕ್ಷಾಂತರ ರೂ. ನಗದು ವಶ

Posted by Vidyamaana on 2024-09-05 07:48:51 |

Share: | | | | |


ಉಡುಪಿ: ಆನ್‌ಲೈನ್ ವಂಚನೆ ಪ್ರಕರಣ : ಆರೋಪಿ ಬಂಧನ, ಲಕ್ಷಾಂತರ ರೂ. ನಗದು ವಶ

ಉಡುಪಿ, ಸೆ.5: ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. 

ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30) ಬಂಧಿತ ಆರೋಪಿ. ಈತನಿಂದ 1,56,100ರೂ

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಮೃತ್ಯು

Posted by Vidyamaana on 2023-07-20 08:03:04 |

Share: | | | | |


ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಮೃತ್ಯು

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ.


ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ.

ಜಾರ್ಖಂಡ್ ಮೂಲದವರಾದ ಫಿರೋಝ್

ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ

ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಬುಧವಾರ

ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ

ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ

ಬಿದ್ದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ

Recent News


Leave a Comment: