ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಸುದ್ದಿಗಳು News

Posted by vidyamaana on 2024-07-08 08:41:02 |

Share: | | | | |


ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್‌ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

 Share: | | | | |


ಅ. 16ರಿಂದ 5 ದಿನ ಹೈಕೋರ್ಟ್‌ಗೆ ದಸರಾ ರಜೆ

Posted by Vidyamaana on 2023-10-15 20:54:36 |

Share: | | | | |


 ಅ. 16ರಿಂದ 5 ದಿನ ಹೈಕೋರ್ಟ್‌ಗೆ ದಸರಾ ರಜೆ

ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್‌ಗೆ (Karnataka High court) ಅಕ್ಟೋಬರ್‌ 16ರಿಂದ 21ರವರೆಗೆ ದಸರಾ ರಜೆ (Dasara Holiday) ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಎದುರಾಗುವ ತುರ್ತು ಅರ್ಜಿಗಳ ವಿಚಾರಣೆಗಾಗಿ ರಜಾಕಾಲೀನ ಪೀಠಗಳು (Holiday Benches) ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿ ಕರ್ತವ್ಯ ನಿರ್ವಹಸಲಿವೆ ಎಂದು ಪ್ರಕಟಣೆ ತಿಳಿಸಿದೆ.


ನ್ಯಾಯಿಕ ರಿಜಿಸ್ಟ್ರಾರ್‌ ಎಂ ಚಂದ್ರಶೇಖರ್‌ ರೆಡ್ಡಿ ಅವರು ಈ ವಿಷಯವನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಅದರ ಜತೆಗೆ ರಜಾಕಾಲೀನ ಪೀಠಗಳ ವಿವರವನ್ನೂ ಒದಗಿಸಿದ್ದಾರೆ.

ಬೆಂಗಳೂರು ಪೀಠದಲ್ಲಿ ಯಾರು ಇರುತ್ತಾರೆ?

ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ ಎಂ ಶ್ಯಾಮ್‌ ಪ್ರಸಾದ್‌ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಲಿದ್ದು, ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇ ಗೌಡ ಅವರ ನೇತೃತ್ವದ ಏಕಸದಸ್ಯ ಪೀಠಗಳು ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿವೆ.


ಧಾರವಾಡ ಪೀಠದ ರಜಾ ಕಾಲೀನ ನ್ಯಾಯಮೂರ್ತಿಗಳು ಇವರು:

ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೆ.ಎಸ್‌ ಹೇಮಲೇಖಾ ಮತ್ತು ಅನಿಲ್‌ ಬಿ. ಕಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳನ್ನು ವಿಚಾರಣೆ ನಡೆಸಲಿದೆ. ಆನಂತರ ಉಭಯ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.


  ಕಲಬುರ್ಗಿ  ಪೀಠದಲ್ಲಿ ಯಾರಿರುತ್ತಾರೆ?

ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಚ್‌ ಟಿ ನರೇಂದ್ರ ಪ್ರಸಾದ್‌ ಮತ್ತು ಜಿ ಬಸವರಾಜ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ನಡೆಸಲಿದ್ದು, ಆನಂತರ ಏಕಸದಸ್ಯ ಪೀಠಗಳು ಪ್ರತ್ಯೇಕವಾಗಿ ಪ್ರಕರಣಗಳ ವಿಚಾರಣೆ ನಡೆಸಲಿದೆ.

ಯಾವ ಯಾವ ಪ್ರಕರಣಗಳ ವಿಚಾರಣೆ ನಡೆಯುತ್ತದೆ?

ತುರ್ತಾಗಿ ಆಗಬೇಕಾದ ಮಧ್ಯಂತರ ತಡೆಯಾಜ್ಞೆ, ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶದಂಥ ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ರಜಾಕಾಲೀನ ಪೀಠದ ವಿಚಾರಣೆಯ ದಿನ ಹೊರತುಪಡಿಸಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಸಲ್ಲಿಸಬಹುದಾಗಿದೆ. ರಜಾಕಾಲೀನ ಪೀಠದ ವಿಚಾರಣೆಯ ದಿನದಂದು ಅರ್ಜಿ ಸಲ್ಲಿಕೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 3.30 ರವರೆಗೆ ಅವಕಾಶ ಇರಲಿದೆ. ಇದರೊಂದಿಗೆ ಇ-ಫೈಲಿಂಗ್‌ ಪೋರ್ಟಲ್‌ ಮೂಲಕ ಇ-ಫೈಲಿಂಗ್‌ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್‌ ಮತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂಬ್ರ - ಕಾರುಗಳ ಮಧ್ಯೆ ಭೀಕರ ಅಪಘಾತ : ಮಡಿಕೇರಿ ಮೂಲದ ರವೀಂದ್ರ, ಲೊಕೇಶ್ ಮೃತ್ಯು

Posted by Vidyamaana on 2024-06-16 18:38:37 |

Share: | | | | |


ಕುಂಬ್ರ - ಕಾರುಗಳ ಮಧ್ಯೆ ಭೀಕರ ಅಪಘಾತ : ಮಡಿಕೇರಿ ಮೂಲದ ರವೀಂದ್ರ, ಲೊಕೇಶ್  ಮೃತ್ಯು

ಪುತ್ತೂರು: ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಆಶಿಕ್ ಪೊಲೀಸ್ ವಶಕ್ಕೆ‌

Posted by Vidyamaana on 2023-08-03 12:40:38 |

Share: | | | | |


ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಆಶಿಕ್  ಪೊಲೀಸ್ ವಶಕ್ಕೆ‌

ಉಡುಪಿ: ಮಣಿಪಾಲ ಡಿಸಿ ಕಚೇರಿ‌ ರಸ್ತೆಯಲ್ಲಿ ರೀಲ್ಸ್ ಶೋಕಿಗಾಗಿ ಯದ್ವಾ ತದ್ವಾ ಸ್ಕೂಟರ್ ಚಲಾಯಿಸಿ ಇತರೆ ವಾಹನ ಸವಾರರಿಗೆ ತೊಂದರೆ ನೀಡಿದ್ದ‌‌ ಯುವಕ ನನ್ನು ಮತ್ತು ಸ್ಕೂಟರ್ ವಶಕ್ಕೆ ಪಡೆದು ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪರ್ಕಳ ನಿವಾಸಿ ಆಶಿಕ್(19) ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡುತ್ತಿದ್ದ ಯುವಕ.


ಆಶಿಕ್ ಯದ್ವಾ ತದ್ವಾ ಸ್ಕೂಟಿ ಓಡಿಸಿ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ಕೂಟಿ ಉಡುಪಿಯ ನೋಂದಣಿ ಸಂಖ್ಯೆ ಹೊಂದಿದ್ದು ವಿಡಿಯೋದಲ್ಲಿ ಮಣಿಪಾಲದ ಡಿಸಿ ಆಫೀಸ್ ರಸ್ತೆ ಹಾಗೂ ಉಡುಪಿಯ ಭಾಗದ ರಸ್ತೆಯಲ್ಲಿ ಯದ್ವಾ ತದ್ವಾವಾಗಿ ಸಂಚರಿಸಿರುವುದು ಕಂಡು ಬಂದಿದೆ. ಒಂದು ಕಡೆ ಹೋಗುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆಯುವ ಸಂದರ್ಭವೂ ಎದುರಾಗಿರುವುದು ವಿಡಿಯೋದಲ್ಲಿ ಕಾಣಬಹುದು.

ಸ್ಟೂಡೆಂಟ್ ವೀಕ್ಷಿತ್ ಸೂಸೈಡ್ ಪ್ರಕರಣ – ತಂದೆ ಕೊಟ್ಟ ದೂರಿನಲ್ಲೇನಿದೆ

Posted by Vidyamaana on 2023-10-10 21:21:15 |

Share: | | | | |


ಸ್ಟೂಡೆಂಟ್ ವೀಕ್ಷಿತ್ ಸೂಸೈಡ್ ಪ್ರಕರಣ – ತಂದೆ ಕೊಟ್ಟ ದೂರಿನಲ್ಲೇನಿದೆ

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೃತ ವೀಕ್ಷಿತ್ ರವರ ತಂದೆ ಚೆನ್ನಪ್ಪ ಗೌಡ ರವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.


ಕುರಿಯ ಗಡಾಜೆ ನಿವಾಸಿ ಚೆನ್ನಪ್ಪ ಗೌಡ ರವರು ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಚೆನ್ನಪ್ಪ ಗೌಡ ರವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಹಿರಿಯ ಮಗ ಬೆಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದು, ಕಿರಿಯ ಮಗ ವೀಕ್ಷಿತ್ ಪುತ್ತೂರಿನ ಫಿಲೋಮಿನ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅ.9 ರಂದು ತನ್ನ ಪತ್ನಿ ಮತ್ತು ಮಗನೊಂದಿಗೆ ಊಟ ಮಾಡಿ ಮಲಗಿದ್ದು, ಮಗ ವೀಕ್ಷಿತ್ ಆತನ ಬೆಡ್ ರೂಮಿನಲ್ಲಿ ಮಲಗಿರುತ್ತಾನೆ.


ಅ.10 ರಂದು ಬೆಳಿಗ್ಗೆ ವೀಕ್ಷಿತ್ ರವರ ರೂಮಿನ ಬಾಗಿಲು ಬಡಿದಾಗ ವೀಕ್ಷಿತ್ ರವರಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದ ಕಾರಣ ಪತ್ನಿಯನ್ನು ಕರೆದು ಇಬ್ಬರು ಸೇರಿ ಜೋರಾಗಿ ಕರೆದಿದರೂ ವೀಕ್ಷಿತ್ ರವರಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದ ಕಾರಣ ಸಂಶಯಗೊಂಡು ಒಂದು ಪಿಕಾಸಿನಲ್ಲಿ ಬಾಗಿಲನ್ನು ಮೀಟಿ ಬಾಗಿಲನ್ನು ತೆಗೆದು ನೋಡಿದಾಗ ರೂಮಿನಲ್ಲಿರುವ ಫ್ಯಾನಿಗೆ

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ UDR .No: 36/2023 ಕಲo: 174 CRPC ರಂತೆ ಪ್ರಕರಣ ದಾಖಲಾಗಿದೆ.

ಮೃತ ವೀಕ್ಷಿತ್ ತಂದೆ ನೀಡಿದ ದೂರಿನಲ್ಲಿ ಮಗ ಯಾವುದೋ ವಿಚಾರಕ್ಕೆ ಮನಸಿನಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಲ್ಲೇಖಿಸಿದ್ದು, ಮರಣದ ಮೇಲೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವೀಕ್ಷಿತ್ ರಾತ್ರಿ ಇನ್ಸ್ಟಾಗ್ರಾಮ್ ನಲ್ಲಿ ಸ್ನೇಹಿತೆಯ ಫೋಟೋ ಸ್ಟೋರಿ ಹಾಕಿದ್ದ ಎಂಬ ಮಾಹಿತಿ ಆತನ ಆಪ್ತ ವಲಯದಿಂದ ತಿಳಿದು ಬಂದಿದೆ.

ಪಿಲಿಕ್ ಮೈಟ್ ಬತ್ತಂಡ್ ಉಡುಪಿಯಲ್ಲೊಂದು ವಿಸ್ಮಯ

Posted by Vidyamaana on 2023-09-07 15:00:06 |

Share: | | | | |


ಪಿಲಿಕ್ ಮೈಟ್ ಬತ್ತಂಡ್ ಉಡುಪಿಯಲ್ಲೊಂದು ವಿಸ್ಮಯ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜಾನಪದ ಆಚರಣೆಗಳಲ್ಲಿ ಹುಲಿ ಕುಣಿತಕ್ಕೆ ತನ್ನದೇ ಆದ ನಂಬಿಕೆ ಮತ್ತು ಪ್ರಾಮುಖ್ಯತೆ ಇದೆ.

ದಕ್ಷಿಣ ಕನ್ನಡ ಭಾಗದಲ್ಲಿ ನವರಾತ್ರಿ ಸಂದರ್ಭದಲ್ಲಿ ಹುಲಿ ಕುಣಿತ ಕಂಡುಬಂದರೆ, ಉಡುಪಿ ಭಾಗದಲ್ಲಿ ಅಷ್ಟಮಿ ಮತ್ತು ಅದರ ಮರುದಿನ ವಿಟ್ಲ ಪಿಂಡಿ ಸಂದರ್ಭದಲ್ಲಿ ಹುಲಿಗಳ ಅಬ್ಬರ ಜೋರಾಗಿರುತ್ತದೆ.

ಆದರೆ, ಈ ಹುಲಿ ವೇಷ ಹಾಕುವುದರ ಹಿಂದೆ ಒಂದು ನಂಬಿಕೆ ಇದೆ. ದೇವಿಯ ವಾಹನವೆಂದೇ ನಂಬುವ ಹುಲಿಯನ್ನು ಈ ಹುಲಿ ವೇಷಧಾರಿ ತಂಡದವರು ಆರಾಧಿಸಿ ಬಳಿಕವೇ ಹುಲಿ ವೇಷವನ್ನು ಹಾಕಿಕೊಳ್ಳುತ್ತಾರೆ.

ಕೆಲವರು ತಮ್ಮ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಹರಕೆ ಹೇಳಿಕೊಂಡು ಹುಲಿ ವೇಷ ಹಾಕುವುದೂ ಇದೆ. ಇನ್ನು ಹುಲಿ ವೇಷಕ್ಕೆ ತಮ್ಮ ಮೈಯನ್ನು ಒಡ್ಡುವ ಮುನ್ನ ಅಲ್ಲಿ ಕೆಲವು ದೈವಿಕ ಕ್ರಮಗಳನ್ನು ಪಾಲಿಸಲಾಗುತ್ತದೆ.

ಮತ್ತು ಹುಲಿ ವೇಷಧಾರಿ ನಿರ್ಧಿಷ್ಟ ವ್ರತಾಚರಣೆಯಲ್ಲೂ ಇರಬೇಕಾಗಿರುವುದು ಕಡ್ಡಾಯವಾಗಿರುತ್ತದೆ.

ಮೊದಲ ಬಾರಿಗೆ ಹುಲಿ ವೇಷ ಹಾಕಿಕೊಳ್ಳುತ್ತಿರುವವರಲ್ಲಿ ಅವರ ದೇಹಕ್ಕೆ ಬಣ್ಣವನ್ನು ಬಲಿಯುವಾಗ ಕೆಲವೊಮ್ಮೆ ಅವರಲ್ಲಿ ಅಗೋಚರ ಶಕ್ತಿಯೊಂದು ಆವಾಹನೆಗೊಂಡು ಅವರು ಆವೇಶಕ್ಕೊಳಗಾಗುವುದು ಸಾಮಾನ್ಯವಾಗಿರುತ್ತದೆ.

ಹುಲಿ ವೇಷಧಾರಿಯ ಮೈಮೇಲೆ ಶಕ್ತಿ ಆವಾಹನೆಗೊಳ್ಳುವ ವಿಡಿಯೋ ಒಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. 

ಉಡುಪಿಯ ನಿಟ್ಟೂರಿನಲ್ಲಿ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿದ್ದ ಹುಲಿ ತಂಡವೊಂದರ ಸದಸ್ಯ ಪ್ರದರ್ಶನ ನೀಡುತ್ತಿದ್ದ ಸಂದರ್ಭದಲ್ಲೇ ಅವರು ಆವೇಶಕ್ಕೊಳಗಾಗಿ ಅಲ್ಲಿದ್ದ ಮ್ಯಾಟ್ ಚೂರನ್ನು ಬಾಯಿಂದ ಹರಿದು, ತನ್ನ ಸಹ ವೇಷಧಾರಿಗಳು ಮತ್ತು ತಂಡದ ಇತರರಿಗೂ ಹಿಡಿಯಲು ಸಾಧ್ಯವಾಗದಿರುವ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

BREAKING:ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ

Posted by Vidyamaana on 2024-07-06 17:15:13 |

Share: | | | | |


BREAKING:ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ ಸೂಚಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ಉಲ್ಲೇಖಿತ ಅಧಿಸೂಚನೆ ದಿನಾಂಕ:11.12.2023 ರಲ್ಲಿ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.

ಮುಂದುವರೆದು, ಕೆಲವು ಜಿಲ್ಲೆಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಈ ಅಧಿಸೂಚನೆಯೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿ ನಮೂದಿಸಿರುವಂತೆ ಮಾರ್ಪಡು ಮಾಡಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ.



Leave a Comment: