ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಬೆಳ್ತಂಗಡಿ :ಕಕ್ಕಿಂಜೆ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ

Posted by Vidyamaana on 2023-11-25 11:44:53 |

Share: | | | | |


ಬೆಳ್ತಂಗಡಿ :ಕಕ್ಕಿಂಜೆ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ


ಬೆಳ್ತಂಗಡಿ : ಮನೆಯ ಶೆಡ್ಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಕೆಲವ 14 ದಿನದಲ್ಲಿ ಭೇದಿಸಿ ನಾಲ್ಕು ಜನರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

*ಘಟನೆ ವಿವರ:* ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್‌ ಎಂಬವರ ಅಕ್ಕನ ಮಗ ನೌಫಲ್‌ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ KA-02-MD-9042 ನೇ ಸಂಖ್ಯೆಯ ಇನ್ನೋವಾ ಕಾರನ್ನು ನಿಲ್ಲಿಸಿದ್ದು. ನವೆಂಬರ್ 10 ರಂದು ಬೆಳಿಗ್ಗೆ 6:30 ಗಂಟೆಗೆ ನೋಡಿದಾಗ ಕಾರು ಶೆಡ್ಡಿನಲ್ಲಿ ಕಾಣದೇ ಇರುವುದರಿಂದ ಈ ಬಗ್ಗೆ ಆಸುಪಾಸುಗಳಲ್ಲಿ ಹುಡುಕಾಡಿದರೂ ಪತ್ತೆಯಾಗದೇ ಇದ್ದು ಈ ಮೊದಲು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಸದ್ರಿ ಕಾರನ್ನು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುತ್ತದೆ. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂಪಾಯಿ 2,25,000/- ಆಗಬಹುದು ಎಂಬುವುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 379 IPC ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಧರ್ಮಸ್ಥಳ  ಪೊಲೀಸರ ತಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿ ನ.24 ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಕಳ್ಳತನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



*ಆರೋಪಿಗಳ ವಿವರ:* ಆರೋಪಿಗಳಾದ ಮಂಗಳೂರು ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ನಿವಾಸಿ ಜಯರಾಮ ಶೆಟ್ಟಿ ಮಗನಾದ A-1 ಅಜಯ್ ಶೆಟ್ಟಿ(32) ,ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ದಿ.ಸುರೇಶ್ ಶೆಟ್ಟಿ ಮಗನಾದ A-2 ಸೂರಜ್ ಶೆಟ್ಟಿ(23), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ A-3 ಮಂಜುನಾಥ ಪೂಜಾರಿ(30), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿ ಪೂವಪ್ಪ ಪೂಜಾರಿ ಮಗನಾದ A-4 ಕಿಶೋರ್‌.ಟಿ(32) ಎಂಬವರನ್ನು ನ.24 ರಂದು ಬೆಳಗ್ಗೆ ವಶಕ್ಕೆ ಪಡೆದು ಅವರು ಕಳ್ಳತನ ಮಾಡಿಕೊಂಡು ಹೋಗಿದ್ದ  KA-02-MD -9042 ನಂಬರಿನ ಇನ್ನೋವಾ ಕಾರನ್ನು ಸ್ವಾಧೀನಪಡಿಸಿಕೊಂಡು ನಂತರ ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.



ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಧರ್ಮಪ್ಪ ಎಂ.ಎನ್‌ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಶ್ರೀ ಪ್ರತಾಪ್‌ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಅನೀಲ್ ಕುಮಾರ್.ಡಿ (ಕಾ&ಸು) ಮತ್ತು ಸಬ್‌ ಇನ್ಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ (ತನಿಖೆ) ಹಾಗೂ ಸಿಬ್ಬಂದಿಗಳಾದ ಎ.ಎಸ್.ಐಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಊರಿಗೆ ತೆರಳಲು ಹಣ ಇಲ್ಲ ಎಂದು ಕಚೇರಿಗೆ ಬಂದ ಅಂಧ ಯುವಕ

Posted by Vidyamaana on 2023-08-03 03:50:29 |

Share: | | | | |


ಊರಿಗೆ ತೆರಳಲು ಹಣ ಇಲ್ಲ ಎಂದು ಕಚೇರಿಗೆ ಬಂದ ಅಂಧ ಯುವಕ

ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ.ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ ನನಗೆ ಸಹಾಯ ಮಾಡಿ, ನೀವು ಬಡವರಿಗೆ ಸಹಾಯ ಮಾಡುತ್ತೀರಿ ಎಂದು ಯಾರೋ ನನ್ನನ್ನು ಇಲ್ಲಿಗೆ ತಂದು ಬಿಟ್ಟಿದ್ದಾರೆ. ದಯವಿಟ್ಟು ನನಗೆ ನೆರವು ನೀಡಿ ಎಂದು ಅಂಧ ಯುವಕ ಪುತ್ತೂರು ಶಾಸಕರ ಕಚೇರಿಯಲ್ಲಿ ಬಂದು ಕೇಳಿಕೊಂಡಿದ್ದಾನೆ.

ಯುವಕನ ನೋವನ್ನು ಆಲಿಸಿದ ಶಾಸಕರು ನಿನಗೆ ಎಷ್ಟು ಹಣ ಬೇಕು ನಾನು ಕೊಡುತ್ತೇನೆ, ಸುರಕ್ಷಿತವಾಗಿ ಊರಿಗೆ ಹೋಗಿ ಎಂದು ಅಂಧ ಯುವಕ ಊರಿಗೆ ಹೋಗಲು ಅವನು ಕೇಳಿದಷ್ಟು ಹಣ ನೀಡುವ ಮೂಲಕ ಮಾನವೀಯತೆ ಮೆರೆದರು. ಎಲ್ಲಿಂದಲೋ ಬಂದ ಯುವಕ ಶಾಸಕರ ಬಳಿ ಹಣ ಕೇಳಿದಾಗ ಆತನ ಪೂರ್ವಾ ಪರ ವಿಚಾರಿಸದೆ ಆತ ಬಡವನಾದ ಕಾರಣ ನನ್ನ ಬಳಿ ಬಂದಿದ್ದಲ್ವ ಆತನಿಗೆ ಸಹಾಯ ಮಾಡುವುದು ನನ್ನ ಧರ್ಮ ಎಂದು ಶಾಸಕರು ಈ ವೇಳೆ ಹೇಳಿದರು. ಕಚೇರಿಯಲ್ಲಿ ಸೇರಿದ್ದ ಸಾರ್ವಜನಿಕರು‌ ಶಾಸಕರ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಸೂದ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಶಿವಪ್ರಸಾದ್ ಗೆ ಜಾಮೀನು

Posted by Vidyamaana on 2023-08-11 16:38:18 |

Share: | | | | |


ಮಸೂದ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಶಿವಪ್ರಸಾದ್ ಗೆ ಜಾಮೀನು

ಸುಳ್ಯ :ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಕಳಂಜದಲ್ಲಿ ಕಳೆದ ವರ್ಷ ಸಂಭವಿಸಿದ್ದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.


ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದು ಆ.೪ ರಂದು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿತ್ತು.2022 ಜು.19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು

ಅ.30: ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಝಾರ್ ಶುಭಾರಂಭ

Posted by Vidyamaana on 2023-10-23 15:26:10 |

Share: | | | | |


ಅ.30: ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಝಾರ್ ಶುಭಾರಂಭ

ಪುತ್ತೂರು: ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಝಾರ್ ಅ.30ರಂದು ಮಿತ್ತೂರಿನಲ್ಲಿ ಶುಭಾರಂಭಗೊಳ್ಳಲಿದೆ. ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ದುವಾ ನೆರವೇರಿಸಲಿದ್ದು ಎಚ್.ಎಂ.ಎಸ್ ಗ್ರೂಪ್‌ನ ಚೇರ್‌ಮೆನ್ ಹರೀಶ್ ಎಂ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ವಾಹನ ಮಾರಾಟ ಕೇಂದ್ರವನ್ನು ಉದ್ಘಾಟಿಸಲಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ರವರು ಕಚೇರಿ ಉದ್ಘಾಟಿಸಲಿದ್ದಾರೆ.


ಸಯ್ಯದ್ ಇಬ್ರಾಹಿಂ ಹಂಝ ತಂಙಳ್ ಪಾಟ್ರಕೋಡಿ ಹಾಗೂ ಸಯ್ಯದ್ ಮಹಮ್ಮದ್ ಮಿಹ್ರಾಜ್ ಅಲ್ ಹಾದಿ ಅಲ್ ಅಶ್‌ಅರಿ ತಂಙಳ್‌ರವರು ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ, ವಿಟ್ಲ ಪೊಲೀಸ್ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ಎಚ್.ಇ ನಾಗರಾಜ್, ಕೊಂಬೆಟ್ಟು ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷೆ ಸಮಿತಾ ಬಿ ಪೂಜಾರಿ, ಎಚ್.ಎಂ.ಎಸ್ ಗ್ರೂಪ್ ಬೆಂಗಳೂರು ಇದರ ಸುಬೋಧ್ ಬಿ ಶೆಟ್ಟಿ, ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಇಬ್ರಾಹಿಂ ಹಾಜಿ ಕೊಡಾಜೆ(ರಾಜ್‌ಕಮಲ್), ಮಿತ್ತೂರು ಶುಭೋದಯ ಫ್ಯೂಯಲ್ಸ್‌ನ ಮಾಲಕ ಗೋಪಾಲಕೃಷ್ಣ ಭಟ್, ಕೆದಂಬಾಡಿ ಗ್ರಾ.ಪಂ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪತ್ರಕರ್ತ ಲತೀಫ್ ನೇರಳಕಟ್ಟೆ, ನ್ಯಾಯವಾದಿ ರಮಾನಾಥ ರೈ, ಯುವ ಉದ್ಯಮಿ ಬಾತಿಷ್ ಅಳಕೆಮಜಲು, ಸಂಸ್ಥೆಯ ಕಟ್ಟಡದ ಮಾಲಕ ಎ ವೆಂಕಪ್ಪ ನಾಯ್ಕ, ಮಿತ್ತೂರು ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್ ಸಲೀಂ ಕೆ.ಎಸ್ ಭಾಗವಹಿಸಲಿದ್ದಾರೆ.

ಆರು ಮಂದಿಗೆ ಗೌರವಾರ್ಪಣೆ:

ಕಬಕ ಶ್ರೀ ಮಹಾದೇವಿ ಇಂಜಿನಿಯರಿಂಗ್ ಮತ್ತು ಮೋಟಾರ್ ವರ್ಕ್ಸ್ ಇದರ ಜಯರಾಮ ಕಬಕ, ವಿನಾಯಕ ಬೆಸ್ಟ್ ಮಾರುತಿ ಪಾಯಿಂಟ್ ಕಬಕ ಇದರ ದಿನೇಶ್ ಪಿ, ಪುತ್ತೂರು ಕಾರ್ ಡೆಕೋರ್‌ನ ತೌಫೀಕ್, ಸಾನ್ವಿ ಇಂಜಿನಿಯರಿಂಗ್ ವರ್ಕ್ಸ್ ಕಬಕ ಇದರ ಮನೋಹರ ಶೆಟ್ಟಿ, ಡೇಟಿಂಗ್ ಮತ್ತು ಪೈಂಟಿಂಗ್ ಇದರ ಬಕ್ಷ್ ಪರ್ಲಡ್ಕ ಮಚ್ಚಿಮಲೆ ಹಾಗೂ ಪೈಂಟರ್ ಹರೀಶ್ ನಾಯ್ಕ ಇವರಿಗೆ ಗೌರವರ್ಪಾಣೆ ಕಾರ್ಯಕ್ರಮ ನಡೆಯಲಿದೆ.


ಭಾರತ್ ವೆಹಿಕಲ್ ಬಝಾರ್‌ನಲ್ಲಿ ಉಪಯೋಗಿಸಿದ ಕಾರುಗಳು ಹಾಗೂ ಗೂಡ್ಸ್ ವಾಹನಗಳ ಖರೀದಿ, ಮಾರಾಟ ಮತ್ತು ವಿನಿಮಯ, ವಾಹನಗಳ ಇನ್ಸೂರೆನ್ಸ್, ವೆಹಿಕಲ್ ಫೈನಾನ್ಸ್ ಹಾಗೂ ಕಾರು ವಾಶ್ ಲಭ್ಯವಿರಲಿದೆ ಎಂದು ಎಚ್.ಎಂ.ಎಸ್ ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

Posted by Vidyamaana on 2024-01-07 22:15:59 |

Share: | | | | |


ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ  ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

ಸುಳ್ಯ , ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.


ಜ.5ರಂದು ರಾತ್ರಿ ವೇಳೆ ಬ್ಯಾನರನ್ನು ಹರಿದು ಹಾಕಿದ ಬಗ್ಗೆ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಸುಳ್ಯ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದರು. ಶ್ರೀರಾಮ ಮಂದಿರದ ಬ್ಯಾನರ್ ಹರಿದ ಬಗ್ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹ ಮಾಡಿತ್ತು.ಪೊಲೀಸರು ಸುಳ್ಯ ಪೇಟೆಯ ಆಸುಪಾಸಿನಲ್ಲಿ 40 ಕಡೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುವ ವಯಸ್ಸಾದ ವ್ಯಕ್ತಿಯೊಬ್ಬ ಆ ಬ್ಯಾನರನ್ನು ಹರಿದು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಕಂಡುಬಂದಿದೆ. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿರುವುದನ್ನು ಸಾರ್ವಜನಿಕರು ನೋಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.


ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಿದಾಗ ಶ್ರೀರಾಮನ ಫೋಟೊಗೆ ಯಾವುದೇ ಹಾನಿ ಮಾಡಿರುವುದು ಕಂಡುಬಂದಿಲ್ಲ. ಹರಿದ ಬ್ಯಾನರ್ ತುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೋಮು ದ್ವೇಷ ಹರಡಿಸುವುದಕ್ಕಾಗಿ ಇಂತಹ ಕೃತ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ತನಿಖೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಎನ್ನುವುದು ತಿಳಿಯುತ್ತಲೇ ವಾತಾವರಣ ತಿಳಿಯಾಗಿದೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 19

Posted by Vidyamaana on 2023-09-19 06:22:04 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 19

ಶಾಸಕರ ನಾಳಿನ ಕಾರ್ಯಕ್ರಮ

19 /9/2023


ಬೆಳಿಗ್ಗೆ 10 ಗಂಟೆಗೆ  ಪಾಣಾಜೆ ಆರ್ಲಪದವು ಗಣೇಶೋತ್ಸವ



11 ಗಂಟೆಗೆ ಬೆಟ್ಟಂಪಾಡಿ ಗಣೇಶೋತ್ಸವ


12 ಗಂಟೆಗೆ  ಸಂಪ್ಯ ಗಣೇಶೋತ್ಸವ


12 .30 ಕ್ಕೆ ಮುಂಡೂರು ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದಲ್ಲಿ ಗಣೇಶೋತ್ಸವ


ಮಧ್ಯಾಹ್ನ 1.30 ಮುಕ್ಕೂರು ಶಾಲೆಯಲ್ಲಿ ಚೌತಿ


2 ಗಂಟೆಗೆ ಪುತ್ತೂರು  ಪ್ರಗತಿ ಸ್ಟಡಿ ಸೆಂಟರ್ನಲ್ಲಿ ಗಣೇಶೋತ್ಸವ


3.30  ಗಂಟೆಗೆ ಮರಾಠಾ ಗಣೇಶೋತ್ಸವ ಪುತ್ತೂರು


ಸಂಜೆ 5 ,ಗಂಟೆಗೆ ಫಿಲೋಮಿನಾ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ



Leave a Comment: