Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-11-03 12:27:34 |
ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.
ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ನ ಈ ಯೋಜನೆ ನನಸು ಮಾಡಲಿದೆ.
*ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?*
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.
*ಏನಿದು ಬ್ರೈಟ್ ಭಾರತ್!?*
ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್.
*ಈ ಯೋಜನೆಯ ಪೂರ್ಣ ಮಾಹಿತಿ*
ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.
*ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!?*
ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ.
*ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!?*
ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ, ಸಂಸ್ಥೆಯ ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು.
*ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!?*
ಬ್ರೈಟ್ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು +91 8310880814 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.
*ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!?*
ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಹತ್ತು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಒಂಬತ್ತನೇ ತಾರೀಕಿನಂದು ನಡೆಯುವ ಡ್ರಾದ ಹಣವನ್ನು, ಎರಡನೇ ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಹತ್ತು ಮಂದಿ ವಿಜೇತ ಸದಸ್ಯರು, ಬೋನಸ್ ಸರ್ಪ್ರೈಸ್ ಗಿಫ್ಟನ್ನು ಪಡೆದುಕೊಳ್ಳಲಿದ್ದಾರೆ. ಇದೀಗ ಬ್ರೈಟ್ ಭಾರತ್ ಕಂಪೆನಿಯೂ, ಪ್ರಥಮ ತಿಂಗಳ ಸರ್ಫ್ರೈಸ್ ಗಿಫ್ಟನ್ನು ಘೋಷಿಸಿದ್ದು, ಅದ್ರಷ್ಟ ಹತ್ತು ಮಂದಿ ಚಿನ್ನದ ಉಂಗುರವನ್ನು, ಬೋನಸ್ ರೂಪದಲ್ಲಿ ಪಡೆದುಕೊಳ್ಳಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು ಎಂದು ಬ್ರೈಟ್ ಭಾರತ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Call&Whatsapp: +91 8310880814
ಅಥವಾ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು.
https://chat.whatsapp.com/LfruZyWP0DK7QaDk67bvjd
Posted by Vidyamaana on 2023-12-13 17:17:52 |
ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಮೃತಪಟ್ಟ ಮಹಿಳೆ ಶ್ವೇತಾ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪತಿ ದರ್ಶನ್ ರಾಗಿ ಮುದ್ದೆಯಲ್ಲಿ ಸೈನೆಡ್ ಬೆರೆಸಿ ನೀಡಿದ್ದು ಇದರಿಂದ ಪತ್ನಿ ಶ್ವೇತಾ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.ಪ್ರಕರಣ ಸಂಬಂಧ ಪತಿ ದರ್ಶನ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಗೆ ಒಳಪಡಿಸಿದಾಗ ತಾನೇ ಮುದ್ದೆಯಲ್ಲಿ ಸೈನೆಡ್ ಬೆರೆಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಅಕ್ರಮ ಸಂಬಂಧವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ರಾತ್ರಿ ಊಟದಲ್ಲಿ ರಾಗಿ ಮುದ್ದೆಯಲ್ಲಿ ಸೈನೆಡ್ ಹಾಕಿದ್ದು, ಶ್ವೇತಾ ಸಾವನಪ್ಪಿದ ಮೇಲೆ ಸಿರಿಂಜ್ ನಿಂದ ಇಂಜಕ್ಷನ್ ನೀಡಿದ್ದಾನೆ. ಇಂಜಕ್ಷನ್ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದಾನೆ. ತನ್ನ ಪ್ಲಾನ್ ಉಲ್ಟಾ ಆಗುವ ಆತಂಕದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆಂದು ಬಿಂಬಿಸಿದ್ದಾನೆ.
ಪತಿ ದರ್ಶನ್ ಕೊಲೆ ಮಾಡಿದ್ದು, ಪ್ರಕರಣದ ಹಾದಿ ತಪ್ಪಿಸುವ ತುರಾತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದು, ಶ್ವೇತಾ ಕುಟುಂಬಸ್ಥರು ಕೊಲೆ ಮಾಡಿರುವುದಾಗಿ ಶಂಕಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದರು.ಈ ಸಂಬಂದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ವಿಕ್ರಮ್ ಅಮಟೆ ಪ್ರತಿಕ್ರಿಯಿಸಿ, ತನಿಖೆಯಲ್ಲಿ ದರ್ಶನ್ ಪತ್ನಿ ಶ್ವೇತಾ ಅವರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಇಬ್ಬರು ಲ್ಯಾಬ್ ಟ್ನೆಕ್ಷಿಶಿಯನ್ ಆಗಿದ್ದು, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಲ್ಯಾಬ್ ಇದೆ. ಎಸ್ ಎಫ್ ಎಲ್ ವರದಿ ಬಳಿಕ ಏನನ್ನು ತಿನ್ನಿಸಿದ್ದಾನೆ ಎಂದು ಸ್ಪಷ್ಟವಾಗಲಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ದರ್ಶನ್ ಬಂಧನದ ಬಳಿಕ ಅಕ್ರಮ ಸಂಬಂಧ ಹೊಂದಿದ್ದ ಬೆಂಗಳೂರಿನ ಮಹಿಳೆ ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.
Posted by Vidyamaana on 2024-02-13 15:12:16 |
ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ನವೆಂಬರ್ 12 ರಂದು ಒಂದೇ ಕುಟುಂಬದ ಹಸೀನಾ ಮತ್ತು ಮೂವರು ಮಕ್ಕಳ ಕೊಲೆ ನಡೆದಿದ್ದು, ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿದ್ದರು.
ಈಗಾಗಲೇ ತನಿಖೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ಚಾರ್ಜ್ ಶೀಟ್ ಸಲ್ಲಿಸಲು ಫೆ.12 ಕೊನೆಯ ದಿನವಾಗಿರುವುದರಿಂದ ಶನಿವಾರ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ವೃತ್ತ ನಿರೀಕ್ಷಕರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
Posted by Vidyamaana on 2023-07-10 16:23:37 |
ಕಡಬ; ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ನಿಶಾಂತ್ (20 ) ಬಂಧಿತ ಆರೋಪಿ . ಆತನ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿದೆ.
ನಿಶಾಂತ್ ತನ್ನ ಸೋದರ ಸಂಬಂಧಿ 14 ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿದ್ದ ಪರಿಣಾಮ ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಾಳೆ. ತಾಯಿ ಜೊತೆ ಬಾಲಕಿ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾದ ಈ ಘಟನೆ ಬೆಳಕಿಗೆ ಬಂದಿದೆ.
ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಯುವಕನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ
Posted by Vidyamaana on 2023-02-25 06:24:25 |
ಮೂಡುಬಿದಿರೆ: ಫೆ 25 ಮಹಿಳೆಯ ದ್ವನಿಯನ್ನು ಅನುಕರಣೆ ಮಾಡಿ ವ್ಯಕ್ತಿಗೆ ಕರೆ ಮಾಡಿ ಬ್ಲ್ಯಾಕ್ ಮೇಲೆ ಹಣ ಪೀಕಿಸಿದ ವ್ಯಕ್ತಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ಧನಂಜಯ ಎಂದು ಗುರುತಿಸಲಾಗಿದೆ.
ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿ ಹೊಸಬೆಟ್ಟು ನಿವಾಸಿಯೋರ್ವರಿಗೆ ಉಷಾ ಎಂದು ಪರಿಚಯಿಸಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್ ಮಾಡಿ, ಯಾವುದೋ ಹುಡುಗಿಯ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ ಆರೋಪ ಈತನ ಮೇಲಿದೆಆರೋಪಿ ಬಿರಾವು ಧನಂಜಯವು, ಹೊಸಬೆಟ್ಟು ನಿವಾಸಿಗೆ ಕರೆ ಮಾಡಿ 25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಈ ವೀಡಿಯೋ ಕ್ಲಿಪ್ಪಿಂಗನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ. ಕಂಗಾಲಾಗಿ ಸಂತ್ರಸ್ತರು ಒಮ್ಮೆ 2 ಸಾವಿರ ಗೂಗಲ್ ಪೇ ಮಾಡಿದ್ದರು. ಬಳಿಕವೂ ಪದೇಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. ಕೊನೆಗೆ ಸುರತ್ಕಲ್ ಠಾಣೆಗೆ ದೂರು ನೀಡಿದರು. ಸುರತ್ಕಲ್ ಪೊಲೀಸರು ಉಷಾ ಹೆಸರಿನ ಧನಂಜಯನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Posted by Vidyamaana on 2023-11-18 20:21:24 |
ಪುತ್ತೂರು : ಕೆಲ ತಿಂಗಳುಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅಜಿತ್ ರೈ ಪರ ವಾದ ಮಂಡಿಸಿದ್ದಾರೆ.