ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಚೈತ್ರಾ ಕುಂದಾಪುರ ಡೀಲ್ ಪ್ರಕರಣ

Posted by Vidyamaana on 2023-09-15 04:43:05 |

Share: | | | | |


ಚೈತ್ರಾ ಕುಂದಾಪುರ ಡೀಲ್ ಪ್ರಕರಣ

ಬೆಂಗಳೂರು: ಚೈತ್ರಾ ಕುಂದಾಪುರ ಡೀಲ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಅಭಿನವ ಹಾಲಶ್ರೀ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ, ಸ್ವಾಮೀಜಿ ಇತ್ತೀಚೆಗೆ ಹೈಫೈ ಜೀವನ ನಡೆಸಿಕೊಂಡಿದ್ದರು. ಅಲ್ಲದೆ, ಬೇರೆ ಬೇರೆ ಕಡೆ ಆಸ್ತಿ ಖರೀದಿಸಿದ್ದರು ಅನ್ನುವ ವಿಚಾರ ಬೆಳಕಿಗೆ ಬಂದಿದೆ.


ಉದ್ಯಮಿ ಗೋವಿಂದ ಬಾಬು ಪೂಜಾರಿ ಬಳಿಯಿಂದ ಸ್ವಾಮೀಜಿ ಒಂದೂವರೆ ಕೋಟಿ ಹಣ ಪಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ವಂಚನೆ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಮೂರನೇ ಆರೋಪಿಯಾಗಿದ್ದಾರೆ. ಸ್ವಾಮೀಜಿ, ಹಿರೇಹಡಗಲಿ ಬಳಿಯಲ್ಲಿ ಎಂಟು ಎಕರೆ ಜಮೀನು ಖರೀದಿಸಿದ್ದು ಆ ಜಾಗದಲ್ಲಿ ಕಬ್ಬು ಬೆಳೆದಿದ್ದಾರೆ. ಆ ಜಮೀನಿಗೆ 68 ಲಕ್ಷ ಹಣ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.




ಇದಲ್ಲದೆ, ಪತ್ನಿಯ ತಂದೆಯಾದ ಮಲ್ಲಯ್ಯ ತುಂಬಿನಕೇರ ಅವರ ಹೆಸರಿನಲ್ಲಿ 40 ಲಕ್ಷ ರೂ. ಹಣ ನೀಡಿ ಜಾಗ ಖರೀದಿಸಿದ್ದು, ಅಲ್ಲಿ ಪೆಟ್ರೋಲ್ ಬಂಕ್ ನಿರ್ಮಾಣ ಮಾಡಿದ್ದಾರೆ. ಇದಕ್ಕಾಗಿ ಚಂದ್ರಪ್ಪ ಎಂಬವರ ಹೆಸರಿನಲ್ಲಿದ್ದ ಜಾಗವನ್ನು ಖರೀದಿಸಲಾಗಿತ್ತು. ಹಿರೇಹಡಗಲಿ ರಸ್ತೆಯ ಬದಿಯಲ್ಲಿ ಎಚ್ ಪಿ ಪೆಟ್ರೋಲ್ ಪಂಪ್ ನಿರ್ಮಾಣ ಆಗಿದ್ದು ಇದನ್ನು ಸ್ವಾಮೀಜಿ ಅವರೇ ನಿರ್ವಹಿಸುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ನೀಡಿದ್ದ ಹಣದಲ್ಲಿಯೇ ಸ್ವಾಮೀಜಿ ಹೂಡಿಕೆ ಮಾಡಿದ್ದು, ಉದ್ಯಮ ಆರಂಭಿಸಿದ್ದರು.


ಆಬಳಿಕ ಗೋವಿಂದ ಬಾಬು ಪೂಜಾರಿ ತನ್ನ ಹಣವನ್ನು ವಾಪಸ್ ಕೇಳಿದಾಗ, ಪೇಚಿಗೆ ಸಿಲುಕಿದ್ದ ಸ್ವಾಮೀಜಿ ಸ್ವಲ್ಪ ಹಣ ಕೊಟ್ಟು ಸಂಭಾಳಿಸಲು ಯತ್ನಿಸಿದ್ದರು. ಇದಕ್ಕಾಗಿ ಹತ್ತು ಲಕ್ಷ ಸಾಲವನ್ನು ತನ್ನ ಪರಿಚಿತರ ಬಳಿ ಸ್ವಾಮೀಜಿ ಕೇಳಿದ್ದರಂತೆ. ಸಾಲ ಪಡೆದು ಉದ್ಯಮಿಗೆ ಹಣ ನೀಡಲು ಮುಂದಾಗಿದ್ದರು ಎನ್ನಲಾಗುತ್ತಿದೆ. ಹಣ ಹಿಂತಿರುಗಿಸುವಂತೆ ಕೇಳಿಕೊಂಡರೂ ನೀಡದೇ ಇರುವುದರಿಂದ ಗೋವಿಂದ ಬಾಬು ಪೂಜಾರಿ ಪೊಲೀಸ್ ಕೇಸು ದಾಖಲಿಸಿದ್ದರು. ಈ ನಡುವೆ, ಗೋವಿಂದ ಬಾಬು ಪೂಜಾರಿ ಹಾಗೂ ಚೈತ್ರಾ ಕುಂದಾಪುರ ಅವರು ಅಭಿನವ ಹಾಲಶ್ರೀ ಅವರ ಮಠಕ್ಕೆ ಬಂದು ಸ್ವಾಮೀಜಿಯ ಆಶೀರ್ವಾದ ಪಡೆಯುವ ಫೋಟೋಗಳು ಹೊರಬಂದಿದ್ದು, ವೈರಲ್ ಆಗಿವೆ.

ಮಂಗಳೂರು: ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ವ್ಯವಸ್ಥೆ

Posted by Vidyamaana on 2023-04-09 04:24:34 |

Share: | | | | |


ಮಂಗಳೂರು: ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ವ್ಯವಸ್ಥೆ

ಮಂಗಳೂರು :  ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ.

ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ ವ್ಯವಸ್ಥೆಯಾಗಿದ್ದು ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಚುಣಾವಣಾ ಅಧಿಕಾರಿಗಳು ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗಳಿಂದ ಒಪ್ಪಿಗೆ ಪಡೆದು ಅನುಮತಿ ಪತ್ರವನ್ನು ನೀಡುತ್ತಾರೆ. ಅರ್ಜಿದಾರರು ತಮ್ಮ ಅನುಮತಿ ಪತ್ರಗಳನ್ನು ಆನ್‍ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇ ಮಾಡಲು ಎಲ್ಲಾ ಮತ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸುವಿಧಾ ಏಕ ಗವಾಕ್ಷಿ ಕೌಂಟರ್ ಗಳನ್ನು ತೆರೆಯಲಾಗಿದೆ.

ಇನ್ನು ಜಿಲ್ಲಾ ವ್ಯಾಪ್ತಿಯ ಅನುಮತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವಸ್ಥಾನಗಳಲ್ಲಿ ಅಶೋಕ್ ರೈ ವಿಶೇಷ ಪ್ರಾರ್ಥನೆ

Posted by Vidyamaana on 2023-05-10 04:19:46 |

Share: | | | | |


ದೇವಸ್ಥಾನಗಳಲ್ಲಿ ಅಶೋಕ್ ರೈ ವಿಶೇಷ ಪ್ರಾರ್ಥನೆ

ಪುತ್ತೂರು: ಮತದಾನಕ್ಕೆ ಮೊದಲು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

Posted by Vidyamaana on 2023-10-15 10:39:08 |

Share: | | | | |


ರಾಜ್ಯ ಸರ್ಕಾರದಿಂದ ಅರ್ಚಕರು ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬಿ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ 5,000 ರೂ., ಐಟಿಐ/ ಜೆಒಸಿ/ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 5,000 ರೂ., ಪದವಿಗೆ 7,000 ರೂ., ಸ್ನಾತಕೋತ್ತರರಿಗೆ 15,000 ರೂ., ಆಯುರ್ವೇದ 25,000 ರೂ. ವಾರ್ಷಿಕ ಆರ್ಥಿಕ ನೆರವು ನೀಡಲಿದೆ. ಹೋಮಿಯೋಪತಿ ಕೋರ್ಸ್‌ಗಳು, ತಾಂತ್ರಿಕ ಶಿಕ್ಷಣಕ್ಕೆ (ಎಂಜಿನಿಯರಿಂಗ್) 25,000 ರೂ., ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ 50,000 ರೂ. ಮತ್ತು ವಿದೇಶದಲ್ಲಿ ಅಧ್ಯಯನಕ್ಕೆ 1 ಲಕ್ಷ ರೂ. ನೆರವು ಸಿಗಲಿದೆ ಎಂದು ಹೇಳಿದ್ದಾರೆ.


ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರ ಪೈಕಿ ವರ್ಷಕ್ಕೆ 1,200 ಮಂದಿಯನ್ನು ಕಾಶಿ, ಗಯಾ ಯಾತ್ರೆಗೆ ಉಚಿತವಾಗಿ ಕಳುಹಿಸಲಾಗುವುದು. ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರು ಮೃತರಾದರೆ ಅವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

Posted by Vidyamaana on 2023-05-21 13:55:04 |

Share: | | | | |


ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ : ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು : ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಜಾರಿ ಮಾಡುವ ಬಗ್ಗೆ ನನಗೆ ಗ್ಯಾರೆಂಟಿ ಇದೆ , ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಕಾಂಗ್ರೆಸ್ ನವರು ಸಿಎಂ ಸಂಪುಟ ಸಭೆಯಲ್ಲಿ ಗ್ಯಾರೆಂಟಿ ಜಾರಿಗೆ ಬಗ್ಗೆ ಒಪ್ಪಿಗೆ ಪಡೆದಿದ್ದು, ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಭರವಸೆಗಳು ನಮಗೆ ಹಿನ್ನಡೆಯಾಗಿದೆ, ಹಾಗಂತ ನಾವು ಟೀಕೆ ಟಿಪ್ಪಣಿ ಮಾಡಲ್ಲ. ಕಾಂಗ್ರೆಸ್ ಎಲ್ಲಾ ಭರವಸೆಗಳನ್ನು ಈಡೇರಿಸಲಿ, ಇದರಿಂದ ಜನರಿಗೆ ಒಳ್ಳೆಯಾದರೆ ಸಾಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಬಿಜೆಪಿ ಹಗರಣಗಳ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂಬ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಯಾವುದೇ ಹಗರಣ ಇದ್ದರೂ ತನಿಖೆ ಮಾಡಲಿ ಎಂದರು. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದರು.

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

Posted by Vidyamaana on 2024-04-29 20:10:54 |

Share: | | | | |


BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಐವರು ಸಂತ್ರಸ್ತೆಯರು ಎಸ್ ಐಟಿ ವಿಚಾರಣೆಗೆ ಹಾಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತಂಡ ತನಿಖೆ ತೀವ್ರಗೊಳಿಸಿದೆ.



Leave a Comment: