Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10
ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.
ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.
ಕೊಲೆಗೆ ಕಾರಣವೇನು?
ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
Posted by Vidyamaana on 2024-04-05 21:48:40 |
ಪುತ್ತೂರು : ಬಿಜೆಪಿ ಪುತ್ತೂರು ಮಂಡಲದಲ್ಲಿ ಮಂಡಲದ ಅಧ್ಯಕ್ಷರಾದ ರಾಮಕೃಷ್ಣ ಆಳ್ವ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ ನಡೆಯಿತು.ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರರ ಮತವನ್ನು ಪಡೆದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಕರೆ ನೀಡಿದರು
Posted by Vidyamaana on 2024-04-28 14:01:13 |
ಬೆಂಗಳೂರು, (ಏಪ್ರಿಲ್ 28): ಸಂಸದ ಪ್ರಜ್ವಲ್ ರೇವಣ್ಣ (Prajwal Revanna ) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ(Prajwal Revanna Scandal Case) ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ, ಇನ್ನು ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.
Posted by Vidyamaana on 2024-04-11 15:29:45 |
ಪುತ್ತೂರು :ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಯಿಂದ ದ ಕ ಲೋಕ ಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ರಮಾನಾಥ ರೈ ಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯನ್ನು ರಚಿಸಲಾಗಿದ್ದು, ಮಹಮ್ಮದ್ ಬಡಗನ್ನೂರು ರವರನ್ನು ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
Posted by Vidyamaana on 2023-05-04 23:33:29 |
ಪುತ್ತೂರು: ಹುಟ್ಟೂರು ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಚುನಾವಣಾ ಪ್ರಚಾರ ಸಭೆ ನಡೆಸಿದರು. ಕಿಕ್ಕಿರಿದು ತುಂಬಿದ್ದ ಸಭೆಯಲ್ಲಿ ಮಾತನಾಡಿದ ಅಶೋಕ್ ರೈಯವರು ನಾನುಕೋಡಿಂಬಾಡಿಯ ಹುಡುಗ, ಹತ್ತೂರಲ್ಲಿ ನಾಲ್ಕು ಅಕ್ಷರ ಕಲಿಸಿದ ಸಂಜೀವ ರೈಯವರ ಪುತ್ರ ಈ ಸಲ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡುತ್ತಿದ್ದೇನೆ, ನೀವು ನನ್ನನ್ನು ಮನೆಮಗನಾಗಿ ಸ್ವೀಕರಿಸಿ ಆಶೀರ್ವಾದ ಮಾಡುತ್ತೀರಿ ಎಂಬ ಪೂರ್ಣ ನಂಬಿಕೆ ನನ್ನಲ್ಲಿದೆ. ಹುಟ್ಟೂರಿನ ಸಹೋದರ, ಸಹೋದರಿಯರು, ಬಂಧುಗಳು ತಾಯ೦ದಿರು, ಅಕ್ಕಂದಿರು, ಅಣ್ಣಂದಿರು ಮಾಡುವ ಆಶೀರ್ವಾದ ಅದು ದೊಡ್ಡ ಆಶೀರ್ವಾದ ಎಂಬ ನಂಬಿಕೆ ನನಗಿದೆ. ತಾಯಿ ಮಹಿಷ ಮರ್ಧಿನಿಯಲ್ಲಿಅನುಮತಿ ಪಡೆದು ನಾನು ಚುನಾವಣೆಗೆ ನಿಂತಿದ್ದೇನೆ, ತಾಯಿಯ ಆಶೀರ್ವಾದದ ಜೊತೆಗೆ ಹುಟ್ಟೂರಿನ ಬಂಧುಗಳ ಆಶೀರ್ವಾದವನ್ನು ನಾನು ಬೇಡುತ್ತಿದ್ದೇನೆ. ಚುನಾವಣೆಯಲ್ಲಿ ನನಗೆ ಮತ ಹಾಕುವ ಮೂಲಕ ಗೆಲ್ಲಿಸಿ, ನಾನು ಗೊತ್ತಿದ್ದೋ ಗೊತ್ತಿಲ್ಲದೆಯೋ ಏನಾದರೂ ತಪ್ಪು ಮಾಡಿದ್ದರೆ ನಿಮ್ಮ ಮನೆ ಮಗನಾಗಿ ನನ್ನನ್ನು ಕ್ಷಮಿಸಿ ಎಂದು ಸೇರಿದ್ದ ಸಾವಿರಾರು ಮಂದಿ ಕೋಡಿಂಬಾಡಿಯ ಜನತೆಗೆ ಕೈಮುಗಿದು ಬೇಡಿಕೊಂಡರು. ನಾನು ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ನನಗೆ ಬಿಜೆಪಿಯಿಂದ ಅನೇಕ ಕಿರುಕುಳ ಆರಂಭವಾಗಿದೆ. ನಾನು ಹೋದಲ್ಲೆಲ್ಲಾ ಬಂದಲ್ಲೆಲ್ಲಾ ನನ್ನ ಹಿಂದೆಯೇ ಜನರನ್ನು, ಅಧಿಕಾರಿಗಳನ್ನು ಕಳುಹಿಸಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ, ಎಲ್ಲಾ ಹಿಂಸೆಗಳನ್ನು ಸಹಿಸಿ ನಾನು ಹಲವು ದಿನಗಳಿಂದ ಕ್ಷೇತ್ರದಾದ್ಯಂತ ಕ್ರಯಿಸಿದ್ದೇನೆ, ಜನರ ಸಮಸ್ಯೆಗಳನ್ನು ಅರಿತುಕೊಂಡಿದ್ದೇನೆ, ಭರವಸೆಯನ್ನು ನೀಡಿದ್ದೇನೆ ಆಶೀರ್ವಾದ ಮಾಡುವುದಾಗಿ ಹೇಳಿದ್ದಾರೆ. ಸುಮಾರು 22 ಸಾವಿರ ಬಡ ಕುಟುಂಬಗಳಿಗೆ ನೆರವು ನೀಡಿದ್ದೇನೆ, ಬಡವರಿಗೆ ಮಾಡಿದ ದಾನದ ಶಕ್ತಿ ನನಗೆ ಆಶೀರ್ವಾದ ರೂಪದಲ್ಲಿ ಸಿಗಬಹುದು ಎಂಬ ನಂಬಿಕೆ ಇದೆ ಎಂದು ಮಾರ್ಮಿಕವಾಗಿ ಹೇಳಿದರು.
Posted by Vidyamaana on 2023-07-26 07:14:21 |
ಉಡುಪಿ: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ
ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ದಾಖಲಿಸಿದ್ದಾರೆ.
ಈ ಸಂಬಂಧ ಕಾಲೇಜು ನಿರ್ದೇಶಕಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮೂವರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ ಎಂದಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಪ್ರೇರಿತವಾಗಿ ದೂರು ನೀಡಬೇಕು, ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಗ್ರ ತನಿಖೆಗೆ ಆಗ್ರಹ ವ್ಯಕ್ತವಾಧ ಬೆನ್ನಲ್ಲೇ, ಇದೀಗ ಮಲ್ಪೆ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆಈ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ ತನಿಖೆ ನಡೆಸಲಾಗುವುದು. ಈ ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು. ಇದು ಅತೀ ಸೂಕ್ಷ್ಮ ವಿಚಾರವಾಗಿದೆ. ಹೆಣ್ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.