Posted by vidyamaana on 2024-03-23 10:38:46 |
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.
ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.
Posted by Vidyamaana on 2023-07-26 12:06:40 |
ಪುತ್ತೂರು: ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಗದ ಬಡವರ ಮಕ್ಕಳೂ ಸಿಇಟಿ, ನೀಟ್ ಪರೀಕ್ಷೆ ಬರೆದು ಉನ್ನತ ವ್ಯಾಸಂಗ ಮಾಡುವಂತಗಬೇಕು, ಪ್ರತೀಯೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಗಬೇಕೆಂಬುದೇ ನನ್ನ ಉದ್ದೇಶವಾಗಿದೆ ಇದಕ್ಕಾಗಿ ಜಿಲ್ಲೆಯಲ್ಲೇ ಪ್ರಥಮ ಬಾರಿ ಎಂಬಂತೆ ಪುತ್ತೂರಿನ ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಜು.೨೬ ರಂದು ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಶಿಕ್ಷಕರ ನೂತನ ಕೊಠಡಿ, ಗ್ರೀನ್ ಬೋರ್ಡು ಮತ್ತು ಸಿಇಟಿ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವ ಎಲ್ಲಾ ಸೌಲಭ್ಯಗಳೂ ಸರಕಾರಿ ಕಾಲೇಜಿನಲ್ಲಿ ದೊರೆಯಬೇಕು. ಸರಕಾರಿ ಕಾಲೇಜಿನಲ್ಲಿ ಯಾವುದೂ ಇಲ್ಲ ಎನ್ನುವಂತಗಬಾರದು. ಹೆಚ್ಚಾಗಿ ಬಡವರ ಮಕ್ಕಳೇ ಸರಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳು ಸೌಲಭ್ಯದ ಕೊರತೆಯಿಂದ ವಂಚತರಾಗಬಾರದು ಇದಕ್ಕಾಗಿ ನಾನು ಮೊದಲ ಬಾರಿ ಎಂಬಂತೆ ಕೋಚಿಂಗ್ ತರಗತಿಯನ್ನು ಪ್ರಾರಂಭ ಮಾಡಿಸಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಉಚಿತವಾಗಿಯೇ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡಲಾಗುವುದು ಮತ್ತು ಇದಕ್ಕಾಗಿ ಉನ್ನತ ತರಬೇತುದಾರರನ್ನು ಕರೆಸಲಾಗುವುದು ಎಂದು ಶಾಸಕರು ಹೇಳಿದರು. ಕೊಂಬೆಟ್ಟು ಸ ಪ ಪೂ ಕಾಲೇಜಿನಲ್ಲಿ ಹೊಸ ಬದಲಾವಣೆ ತರುವ ಉದ್ದೇಶವಿದ್ದು ಇದಕ್ಕಾಗಿ ಶಿಕ್ಷಕ ವೃಂದ ಮತ್ತು ಪೋಷಕರ ಸಹಕಾರವನ್ನು ಕೋರಿದರು.
ಕಾಲೇಜಿನ ಕಾರ್ಯಾಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳು ಯಾವುದೇ ಸ್ಥಾನದಲ್ಲಿದ್ದರೂ ಕಲಿತ ಶಾಲೆಯನ್ನು ಮರೆಯಬಾರದು. ತಾವು ಕಲಿತ ಶಾಲೆಗೆ ಯಾವುದಾದರೂ ಸಹಾಯ ಮಾಡುವಂತಾಗಬೇಕು, ನಮ್ಮಿಂದಾಗಿ ಒಬ್ಬ ವಿದ್ಯಾರ್ಥಿ ಭವಿಷ್ಯ ಉಜ್ವಲವಾದರೆ ಅದು ನಮಗೆ ಸಂತೋಷ ಸಂಗತಿಯಾಗಿದೆ. ಮೊದಲ ಬಾರಿಗೆ ಸರಕಾರಿ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ತರಬೇತಿ ಕೇಂದ್ರವನ್ನು ಪ್ರಾರಂಭ ಮಾಡಿರುವುದು ಗ್ರಾಮೀಣ ವಿದ್ಯಾರ್ಥಿಗಳ ಪಾಲಿಗೆ ದೊಡ್ಡ ವರದಾನವಾಗಿದೆ ಎಂದು ಹೇಳಿದರು.
ಜಿ ಎಲ್ ಆಚರ್ಯಜ್ಯುವೆಲ್ಲರ್ಸ್ನ ಲಕ್ಷ್ಮೀ ಕಾಂತ್ ಆಚಾರ್ಯ ಮಾತನಾಡಿ ನಾನು ಈ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು ಎಲ್ಲಾ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಕಾಲೇಜಿನ ಅಭಿವೃದ್ದಿಗೆ ಶ್ರಮಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಕೊಂಬೆಟ್ಟು ಕಾಲೇಜಿನಲ್ಲಿ ಕಲಿತವರೇ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ವ್ಯವಸ್ಥೆಗೆ ಬೆಂಬಲ ಸದಾ ಇರಲಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಧರ್ಣಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ಕ್ಲಾಸ್ ಹಲವು ವರ್ಷಗಳ ಕನಸಾಗಿದ್ದು ಅದು ಈಗ ನನಸಾಗಿದೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಶಾಸಕರು ಕಾಲೇಜಿನಲ್ಲಿ ಹೊಸ ಕ್ರಾಂತಿಗೆ ಮುನ್ನುಡಿಬರೆದಿದ್ದಾರೆ ಇದು ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವಂತಾಗಗಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಎಸ್ಡಿಎಂಸಿ ಕಾರ್ಯಾಧ್ಯಕ್ಷರಾದ ಜೋಕಿಂ ಡಿಸೋಜಾ, ಕಾಲೇಜಿನ ಉಪಪ್ರಾಂಶುಪಾಲರಾದ ವಸಂತಮೂಲ್ಯ ಪಿ ಉಪಸ್ಥಿತರಿದ್ದರು.
ಉಪನ್ಯಾಸಕ ಗೌತಮ್ ಕೆ ಕಾಮತ್ ಸ್ವಾಗತಿಸಿದರು. ಉಪನ್ಯಾಸಕ ವಿನೋದ್ ಎ ವಂದಿಸಿದರು.ಉಪನ್ಯಾಸಕ ಪದ್ಮನಾಭ ಎಸ್ ಕಾರ್ಯಕ್ರಮ ನಿರೂಪಿಸಿದರು.
Posted by Vidyamaana on 2024-06-22 11:31:59 |
ನವದೆಹಲಿ : ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ ಯೋಜನೆ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು. ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ) ಅನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾದ ಕಾರ್ಯತಂತ್ರದ ಹೂಡಿಕೆ ಯೋಜನೆಯಾಗಿ ಪರಿಚಯಿಸಲಾಯಿತು.
ಸುಕನ್ಯಾ ಸಮೃದ್ಧಿ ಯೋಜನೆ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅನುವು ಮಾಡಿಕೊಡುತ್ತದೆ, ಖಾತೆಯು 21 ವರ್ಷಗಳ ನಂತರ ಪರಿಪಕ್ವಗೊಳ್ಳುತ್ತದೆ. ಮುಕ್ತಾಯದ ನಂತರ, ಮಗಳ ಶಿಕ್ಷಣ ಅಥವಾ ಮದುವೆಯ ವೆಚ್ಚಗಳನ್ನು ಬೆಂಬಲಿಸಲು ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು.
Posted by Vidyamaana on 2024-06-04 21:21:27 |
ಲೋಕಸಭಾ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ಕ್ಷೇತ್ರಗಳಲ್ಲಿ ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರವೂ ಒಂದು. ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ಕೊಯಮತ್ತೂರು ಕ್ಷೇತ್ರದಲ್ಲಿ 17 ಸಾವಿರಕ್ಕೂ ಅಧಿಕ ವೋಟುಗಳ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ.
ಇಲ್ಲಿ ಅಣ್ಣಾಮಲೈ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದ ಸಮೀಕ್ಷೆಗಳು ಸುಳ್ಳಾಗಿವೆ. ಇದರೊಂದಿಗೆ ಅರಳುವ ಮುನ್ನವೇ ಕಮಲ ಮುದುಡಿದೆ.
ದ್ರಾವಿಡ್ ಮುನ್ನೇತರ ಕಜಗಂ (ಡಿಎಂಕೆ) ಪಕ್ಷದಿಂದ ಸ್ಪರ್ಧಿಸಿದ್ದ ಗಣಪತಿ ರಾಜ್ಕುಮಾರ್ ಅವರ ವಿರುದ್ಧ ಅಣ್ಣಾಮಲೈ ಸೋತಿದ್ದಾರೆ. ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಎಐಡಿಎಂಕೆ ಪಕ್ಷದಿಂದ ಸಿಂಗೈ ಜಿ ರಾಮಚಂದ್ರನ್ ಅವರು ಸಹ ಸ್ಪರ್ಧೆ ಮಾಡಿದ್ದರು. ಆದರೆ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು.
Posted by Vidyamaana on 2023-12-08 04:21:51 |
ವಿಜಯಪುರ: ಐಸಿಸ್ ಉಗ್ರರೊಂದಿಗೆ ನಾನು ಸಂಪರ್ಕ ಹೊಂದಿರುವ ಆರೋಪವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ದೇಶ ತೊರೆಯುತ್ತೇನೆ. ಆರೋಪ ಸುಳ್ಳಾದರೆ ಯತ್ನಾಳ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತ ದೇಶ ತೊರೆದು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಶ್ಮಿ ಸವಾಲು ಹಾಕಿದ್ದಾರೆ.
ತಮ್ಮ ವಿರುದ್ಧ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಯತ್ನಾಳ ಪತ್ರ ಬರೆದ ವಿಷಯ ಬಹಿರಂಗವಾದ ಬೆನ್ನಲ್ಲೇ ಪ್ರಕಟಣೆ ನೀಡಿದ ಧರ್ಮಗುರು ಸೈಯದ್ ಮೊಹಮದ್ ತನ್ವೀರ ಹಾಶ್ಮಿ, ನಾನು ಐಎಸ್ಐ ಸಂಘಟನೆಯೊಂದಿಗೆ ನಂಟು, ಭಯೋತ್ಪಾಕದರೊಂದಿಗೆ ಸಂಪರ್ಕ ಹೊಂದಿದನ್ನು ಯತ್ನಾಳ ಸಾಬೀತು ಮಾಡಿದರೆ ಭಾರತದ ದೇಶ ತೊರೆದು ಪಲಾಯನ ಮಾಡುತ್ತೇನೆ. ಸಾಬೀತು ಮಾಡದಿದ್ದರೆ ಯತ್ನಾಳ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕೆಂದು ಸವಾಲು ಎಸೆದಿದ್ದಾರೆ.
ನನ್ನ ಮೇಲೆ ಯತ್ನಾಳ ಮಾಡಿರುವ ಆರೋಪಗಳಲ್ಲಿ ಸತ್ಯಾಂಶ ಹೊಂದಿಲ್ಲ. ದಿ.4ರಂದು ಹುಬ್ಬಳ್ಳಿಯಲ್ಲಿ ನಡೆದ ಅವಲಾದ ಗೌಸ್ ಎ ಆಜಮ್ ಸಮ್ಮೇಳನದಲ್ಲಿ ನಾನು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದೆ. ಇದೇ ವೇದಿಕೆಯಲ್ಲಿ ವಿವಿಧ ದರ್ಗಾದ ಪೀಠಾಧೀಶರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ, ಸೇರಿದಂತೆ ಹಲವು ಮಂತ್ರಿಗಳು-ಶಾಸಕರು, ರಾಜಕೀಯ ಧುರೀಣರು, ಪಾಲ್ಗೊಂಡಿದ್ದರು ಎಂದು ವಿವರಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರು ಯಾವುದೇ ಕೋಮು ಅಥವಾ ಸಮಾಜದವರಿಗೆ ಸೀಮಿತವಾಗಿಲ್ಲ. ರಾಜಕಾರಣದಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಜನಪ್ರಿಯತೆ ಸಹಿಸದೆ ಹತಾಶರಾಗಿ, ಯತ್ನಾಳ ನನ್ನ ವಿರುದ್ಧ ನೀಡಿರುವ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.ಅಂತಾರಾಷ್ಟ್ರೀಯ ಭಯೋತ್ಪಾದನೆ ಖಂಡಿಸುವ ಸಮ್ಮೇಳನದಲ್ಲಿ ದೇಶದ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ನನ್ನ ಬಗ್ಗೆ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿದ್ದಾರೆ. ನನಗೆ ಐಸಿಸ್ ಜೊತೆ ನಂಟಿ ಎಂಬ ಹೇಳಿಕೆ ಮೂಲಕ ಮುಸ್ಲಿಂ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಯತ್ನಾಳ ವಿರುದ್ಧ ಪೀರಾ ಕಿಡಿ ಕಾರಿದ್ದಾರೆ.
ತಮ್ಮ ತಮ್ಮ ರಾಜಕೀಯ ಬೇಳೆ ಬೇಯಿಸುವುಕ್ಕಾಗಿ ಇಂಥ ಹೇಳಿಕೆ ನೀಡಿರುವ ಯತ್ನಾಳ, ನಾನು ಐಸಿಸ್ ಉಗ್ರರ ಜೊತೆ ನಂಟಿದೆ ಎಂಬುದನ್ನು ಕೇಂದ್ರ ಮತ್ತು ರಾಜ್ಯದ ಎಲ್ಲಾ ತನಿಖಾ ಸಂಸ್ಥೆಗಳಿಗೆ ದಾಖಲೆ ನೀಡಿ, ಒಂದು ವಾರದಲ್ಲಿ ಸಾಬೀತು ಮಾಡಲಿ ಎಂದು ಆಗ್ರಹಿಸಿದ್ದಾರೆ.
ಒಂದು ವಾರದೊಳಗೆ ಐಸಿಸ್ ಉಗ್ರರ ಜೊತೆಗೆ ನನ್ನ ನಂಟಿದೆ ಎಂಬುದನ್ನು ದಾಖಲೆ ಸಮೇತ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಯತ್ನಾಳ ಶಾಸಕರ ಸ್ಥಾನಕ್ಕೆ ರಾಜಿನಾಮೆ ನೀಡಿ, ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕೆಂದು ಸವಾಲು ಹಾಕಿದ ಧರ್ಮಗುರು, ನಾನನಷ್ಟೇ ಅಲ್ಲ, ನನ್ನ ಭಕ್ತರು, ಶಿಷ್ಯರು ಐಸಿಸ್ ಜೊತೆ ನಂಟಿದೆ ಎಂದು ಸಾಬೀತು ಪಡಿಸಿದರೆ ನಾನು ದೇಶವನ್ನು ತ್ಯಾಗ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಯತ್ನಾಳ ಅವರು ಮಾಧ್ಯಮದಲ್ಲಿ ಬಿಂಬಿಸುವ ಫೋಟೋಗಳು ಫೆಸ್ಬುಕ್ನಲ್ಲಿ ನಾನು ಹೊಂದಿರುವ ಸ್ವಂತ ಖಾತೆಯಲ್ಲಿ ಹಾಕಿರುವ ಫೋಟೋಗಳೇ ಆಗಿವೆ. 12 ವರ್ಷಗಳ ಹಿಂದೆ ಇರಾಕ್ ದೇಶದ ಅಂತಾರಾಷ್ಟ್ರೀಯ ಪ್ರಸಿದ್ದ ಮಹಾನ್ ಸೂಫಿ ಮಹೆಬೂಬ ಎ ಸುಭಾನಿ ಗೌಸ ಎ ಆಜಮ ಅವರ ದರ್ಶನಕ್ಕೆ ಹೋಗಿದ್ದೆ ಎಂದು ವಿವರಿಸಿದ್ದಾರೆ.
ಆಗ ಅಲ್ಲಿನ ದರ್ಗಾದ ಖಾಲೀದ್ ಜಿಲಾನಿ ಅವರ ಆರ್ಶೀವಚನ ಪಡೆಯುವ ಸಂಧರ್ಭದಲ್ಲಿ ತೆಗೆದಿರುವ ಫೋಟೋಗಳು. ಮತ್ತೊಂದು ಫೋಟೋ ಖಾಲೀದ ಜಿಲಾನಿ ಅವರ ಅಂಗರಕ್ಷಕ ನನ್ನನ್ನು ಅವರ ಪೀಠಕ್ಕೆ ಕರೆದುಕೊಂಡು ಹೋಗುವ ಸಮಯದಲ್ಲಿ ತೆಗೆಯಲಾಗಿದೆ ಎಂದು ವಿವರಣೆ ನೀಡಿದ್ದಾರೆ.
Posted by Vidyamaana on 2024-04-13 04:44:24 |
ಮಂಗಳೂರು, ಎ.12: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 14ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನ ಮಂತ್ರಿಗಳ ಭದ್ರತೆ ಹಾಗೂ ಸಾರ್ವಜನಿಕರ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿ ಅಂದು ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಲಾಗಿದೆ.
ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್ಬಾಗ್ – ಬಲ್ಲಾಳ್ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
1. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
2. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
Posted by Vidyamaana on 2023-12-02 08:20:47 |
ಚಿಕ್ಕಮಗಳೂರು: ಬೈಕ್ ಓಡಿಸುವಾಗ ಹೆಲ್ಮೆಟ್ ಹಾಕಿಲ್ಲದ ಕಾರಣಕ್ಕಾಗಿ ಪೊಲೀಸರು ವಕೀಲನನ್ನು ಠಾಣೆಗೆ ಕರೆದುಕೊಂಡು ಹೋಗಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಗುರುವಾರ ರಾತ್ರಿ ಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಈ ಘಟನೆಯಲ್ಲಿ ಯುವ ವಕೀಲ ಎನ್.ಟಿ ಪ್ರೀತಂ ತೀವ್ರವಾಗಿ ಗಾಯಗೊಂಡಿದ್ದರು.ಈ ಘಟನೆ ಸಂಬಂಧ 6 ಪೊಲೀಸರನ್ನು ಅಮಾನುತುಗೊಳಿಸಲಾಗಿದೆ.
ಹೆಲ್ಮೆಟ್ ಹಾಕಿರದ ಕಾರಣಕ್ಕೆ ವಕೀಲನನ್ನೇ ಥಳಿಸಿದ ಘಟನೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಪೂಜಾರಿ, ಎಎಸ್ಐ ರಾಮಪ್ಪ, ಮುಖ್ಯ ಪೇದೆ ಶಶಿಧರ, ಪೇದೆಗಳಾದ ಗುರುಪ್ರಸಾದ್, ಬಿ.ಕೆ ನಿಖಿಲ್ ಹಾಗೂ ವಿ.ಟಿ ಯುವರಾಜ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಅಮಾನತುಗೊಳಿಸಿ ಶುಕ್ರವಾರ ಆದೇಶಿಸಿದ್ದಾರೆ.ಗುರುವಾರ ರಾತ್ರಿ ಯುವ ವಕೀಲ ಪ್ರೀತಂ ಮಾರ್ಕೆಟ್ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಟೌನ್ ಠಾಣೆಯ ಮಫ್ತಿಯಲ್ಲಿದ್ದ ಪೊಲೀಸರು ಬೈಕ್ ನಿಲ್ಲಿಸಿ ಹೆಲ್ಮೆಟ್ ಎಲ್ಲಿ ಎಂದು ಕೇಳುತ್ತಲೇ ಬೈಕಿನ ಕೀಯನ್ನು ತೆಗೆದುಕೊಂಡು, ಪೊಲೀಸ್ ಠಾಣೆ ಒಳಗೆ ಹೋಗಿದ್ದಾರೆ. ಠಾಣೆಯೊಳಗೆ ಹೋಗುತ್ತಿದ್ದಂತೆ ಪೊಲೀಸರು ಲಾಠಿ, ಪೈಪ್ ಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧ ಡಿ.5ರೊಳಗೆ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.