ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು, ಉಪ್ಪಿನಂಗಡಿ,ನಿಡ್ಪಳ್ಳಿ, ಚರ್ಚ್ ಗಳಿಗೆ ಭೇಟಿ.

Posted by Vidyamaana on 2023-04-30 05:22:52 |

Share: | | | | |


ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು, ಉಪ್ಪಿನಂಗಡಿ,ನಿಡ್ಪಳ್ಳಿ, ಚರ್ಚ್ ಗಳಿಗೆ  ಭೇಟಿ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾನುವಾರ ಬೆಳಿಗ್ಗೆ  ಬನ್ನೂರು, ಉಪ್ಪಿನಂಗಡಿ, ನಿಡ್ಪಳ್ಳಿ ಚರ್ಚ್ ಗಳಿಗೆ  ಭೇಟಿ ನೀಡಿದರು.

ದರ್ಬೆಯಲ್ಲಿ ಫಿಸಿಯೋಗ ಸೆಂಟರ್ ಮಾ‌ರ್ಚ್ 15ರಂದು ಶುಭಾರಂಭ

Posted by Vidyamaana on 2024-03-14 17:13:35 |

Share: | | | | |


ದರ್ಬೆಯಲ್ಲಿ ಫಿಸಿಯೋಗ ಸೆಂಟರ್ ಮಾ‌ರ್ಚ್ 15ರಂದು ಶುಭಾರಂಭ

ಪುತ್ತೂರು: ಇಲ್ಲಿನ ದರ್ಬೆ ಹಿತಾ ಆಸ್ಪತ್ರೆ ಮುಂಭಾಗದಲ್ಲಿ ಆಯು ಫಿಸಿಯೋಗ ಸೆಂಟರ್ ಮಾ. 15ರಂದು ಶುಭಾರಂಭಗೊಳ್ಳಲಿದೆ.

ಫಿಸಿಯೋ ಥೆರಪಿ, ಯೋಗ ಥೆರಪಿ, ಪಂಚಕರ್ಮ ಥೆರಪಿ, ಲೀಚ್ ಥೆರಪಿ, ಅಕ್ಯುಪಂಕ್ಚರ್ ಥೆರಪಿ, ಕಪ್ಪಿಂಗ್ / ಹಿಜಾಮ ಥೆರಪಿ, ಟ್ರಾಕ್ಷನ್ ಮಸಾಜ್, ವ್ಯಾಕ್ಸ್ ಥೆರಪಿ, ಕಾಸ್ಮೆಟಿಕ್ ಥೆರಪಿ, ಸೈಕ್ಯಾಟ್ರಿಕ್ ಕೌನ್ಸೆಲಿಂಗ್ ಮೊದಲಾದ ಸೌಲಭ್ಯಗಳನ್ನು ಸಂಸ್ಥೆ ನೀಡಲಿದೆ.

ಉತ್ತಮ ಸೇವೆಗಾಗಿ ಸಮರ್ಥ ಫ್ಯಾಕಲ್ಟಿಯನ್ನು ಸಂಸ್ಥೆ ಹೊಂದಿದೆ. ಡಾ. ಕ್ಷಮಾ ಕಶ್ಯಪ್, ಡಾ. ಶಿಲ್ಪ ಭಟ್ ಜಿ.ಎಸ್., ಡಾ. ಸುಶ್ಮಿತಾ ಎಂ.ಎಂ., ನಿತೇಶ್ ಕುಮಾರ್, ಎನ್. ಪೂಜಾ, ತುಳಸಿ ಎನ್., ಸಾನಿಯ ಯು. ಫ್ಯಾಕಲ್ಟಿಯಲ್ಲಿದ್ದಾರೆ.


ಪ್ರತಿದಿನ ಬೆಳಿಗ್ಗೆ 5.45ರಿಂದ 6.45ರವರೆಗೆ ಹಾಗೂ ಸಂಜೆ 5.45 6.45ರವರೆಗೆ ಯೋಗ ಕ್ಲಾಸ್ ಕೂಡ ನಡೆಯಲಿದೆ. ಇದರೊಂದಿಗೆ ಫಿಸಿಯೋ ಥೆರಪಿ ಹೋಮ್ ವಿಸಿಟ್ ಸೌಲಭ್ಯವೂ ಲಭ್ಯ ಎಂದು ಡಾ. ಪ್ರದೀಪ್ ಕುಮಾರ್ ಮಾಧ್ಯಮ ಪ್ರಕಟಣೆ ತಿಳಿಸಿದ್ದಾರೆ 

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

Posted by Vidyamaana on 2024-02-28 11:19:42 |

Share: | | | | |


ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

ರಾಜೀವ್​ ಗಾಂಧಿ(Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್​(Santhan) ಬುಧವಾರ ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಡುಗಡೆಯಾದ ಬಳಿಕ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು.


ನವೆಂಬರ್ 11, 2022 ರಂದು, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮರುದಿನವೇ ನಳಿನಿ, ಶ್ರೀಹರನ್, ಸಂತನ್, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ 32 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದರು.


ಇಲ್ಲಿ ಒಂದು ಸಮಸ್ಯೆ ಇತ್ತು. ನಳಿನಿ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆ ಮಾಡಲಾಯಿತು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು ಆದರೆ ಉಳಿದ ನಾಲ್ವರನ್ನು ತಿರುಚ್ಚಿ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು. ನಾಲ್ವರೂ ಶ್ರೀಲಂಕಾದ ಪ್ರಜೆಗಳಾಗಿದ್ದರಿಂದ ಹೀಗೆ ಮಾಡಲಾಗಿತ್ತು.


ಸಂತನ್ ಅವರು ತಿರುಚ್ಚಿ ಜೈಲಿನ ವಿಶೇಷ ಶಿಬಿರದಲ್ಲಿರುವ ತಮ್ಮ ಸೆಲ್ ನಿಂದ ಬಹಿರಂಗ ಪತ್ರ ಬರೆದಿದ್ದರು. ತ್ರದ ಮೂಲಕ, ಅವರು ತಮ್ಮ ದೇಶಕ್ಕೆ ಮರಳಲು ಧ್ವನಿ ಎತ್ತುವಂತೆ ವಿಶ್ವದಾದ್ಯಂತದ ತಮಿಳರಿಗೆ ಮನವಿ ಮಾಡಿದ್ದರು.32 ವರ್ಷಗಳಿಂದ ತಾಯಿಯನ್ನು ನೋಡಿಲ್ಲ ಎಂದಿದ್ದರು

ನನ್ನನ್ನು ಶ್ರೀಲಂಕಾಕ್ಕೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವರು ಮತ್ತು ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದರು. ನನ್ನ ಪಾಸ್‌ಪೋರ್ಟ್ ಅನ್ನು ನವೀಕರಿಸಲು ಚೆನ್ನೈನಲ್ಲಿರುವ ಶ್ರೀಲಂಕಾದ ಡೆಪ್ಯುಟಿ ಹೈಕಮಿಷನ್ ಕಚೇರಿಗೆ ಹೋಗಲು ನನಗೆ ಅನುಮತಿ ನೀಡುವಂತೆ ನಾನು ಅಧಿಕಾರಿಗಳನ್ನು ವಿನಂತಿಸಿದೆ. ನನಗೆ ಇನ್ನೂ ಯಾವುದೇ ಉತ್ತರವೇ ಬಂದಿಲ್ಲ ಎಂದಿದ್ದರು.

ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭ

Posted by Vidyamaana on 2024-05-01 15:56:14 |

Share: | | | | |


ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭ

ಪುತ್ತೂರು :ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭಗೊಂಡಿದೆ.

ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ , ಡಿಪ್ಲೋಮಾ ಇನ್ ಆಪರೇಷನ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಡಿಪ್ಲೋಮಾ ಇನ್ ಆಪ್ತಲ್ಮಿಕ್ ಟೆಕ್ನಾಲಜಿ ಹಾಗೂ ಬಿ ಎಸ್ಸಿ  ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ , ಬಿ ಎಸ್ಸಿ ಆಪರೇಷನ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಬಿಎಸ್ಸಿ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ, ಬಿಎಸ್ಸಿ ಎಮರ್ಜೆನ್ಸಿ ಅಂಡ್ ಟ್ರಾಮಾ ಕೇರ್ ಕೋರ್ಸ್ ಗಳಿಗೆ 2024 -25 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ.

ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಪ್ರಕರಣ ಪ್ರಮುಖ ಆರೋಪಿ ಹೆರದಾಸ್ ಅರೆಸ್ಟ್

Posted by Vidyamaana on 2023-07-20 05:35:30 |

Share: | | | | |


ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಪ್ರಕರಣ ಪ್ರಮುಖ ಆರೋಪಿ ಹೆರದಾಸ್ ಅರೆಸ್ಟ್

ಮಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯ ಹಳೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಒಂದು ದಿನದ ನಂತರ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದ್ದು, ಆತ ಹಸಿರು ಅಂಗಿ ಧರಿಸಿರುವ ವಿಡಿಯೋ ವೈರಲ್ ಆಗಿದ್ದು, ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿತ್ತು. ಇದೀಗ ವಿಡಿಯೋ ಹೊರಬಿದ್ದಿದೆ.


ಇದೀಗ ಈ ವಿಡಿಯೋವನ್ನು ತೆಗೆದುಹಾಕುವಂತೆ ಕೇಂದ್ರ ಸರಕಾರ ಗುರುವಾರ ಟ್ವಿಟರ್ ಸೇರದಂತೆ ಇತರ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

ಮದುವೆಯಾಗಿ ಮೂರೇ ತಿಂಗಳಲ್ಲಿ ನಡೆಯಿತು ದುರಂತ

Posted by Vidyamaana on 2024-02-27 16:39:06 |

Share: | | | | |


ಮದುವೆಯಾಗಿ ಮೂರೇ ತಿಂಗಳಲ್ಲಿ ನಡೆಯಿತು ದುರಂತ

ನವದೆಹಲಿ: ಮದುವೆಯಾಗಿ ಮೂರೂ ತಿಂಗಳಿಗೆ ಪತಿ ಪತ್ನಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯ ಗಾಜಿಯಾಬಾದ್‌ನಲ್ಲಿ ಸಂಭವಿಸಿದೆ.


ಮದುವೆಯಾಗಿ ಮೂರೇ ತಿಂಗಳಿಗೆ ಪತಿ ಹೃದಯಾಘಾತಗೊಂಡು ಮೃತಪಟ್ಟರೆ ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಆಘಾತಗೊಂಡು ವಾಸವಿದ್ದ ಏಳು ಅಂತಸ್ಥಿನ ಕಟ್ಟಡದಿಂದ ಜಿಗಿದು ಜೀವ ಕಳೆದುಕೊಂಡಿದ್ದಾಳೆ.


ಏನಿದು ಘಟನೆ:

ಗಾಜಿಯಾಬಾದ್ ನ ಅಭಿಷೇಕ್ ಅಹ್ಲುವಾಲಿಯಾ ಜೊತೆ ಅಂಜಲಿ ಕಳೆದ ವರ್ಷ ನವೆಂಬರ್ ನಲ್ಲಿ ಮದುವೆಯಾಗಿದ್ದರು ಇಬ್ಬರೂ ಜೊತೆಯಾಗಿ ತಿರುಗಾಟ ನಡೆಸಿದ್ದಾರೆ ಅದರಂತೆ ನಿನ್ನೆ (ಸೋಮವಾರ) ದೆಹಲಿಯಲ್ಲಿರುವ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ ಈ ವೇಳೆ ಇದ್ದಕಿದ್ದಂತೆ ಅಭಿಷೇಕ್ ಗೆ ಹೃದಯಾಘತವಾಗಿದೆ ಆ ಕೂಡಲೇ ಅಲ್ಲಿದ್ದ ಜನರು ಸೇರಿ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಗಾಬರಿಯಾದ ಪತ್ನಿ ಅಂಜಲಿ ತನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರಿಗೆ ಪತಿಗೆ ಹೃದಯಾಘಾತವಾದ ವಿಚಾರವನ್ನು ತಿಳಿಸಿದ್ದಾಳೆ.

ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕ್ ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಸಂಜೆ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಕುಟುಂಬ ಸದಸ್ಯರು ಅಭಿಷೇಕ್ ಮೃತದೇಹವನ್ನು ಗಾಜಿಯಾಬಾದ್ ನಲ್ಲಿರುವ ಫ್ಲಾಟ್ ಗೆ ತಂದಿದ್ದಾರೆ ಈ ವೇಳೆ ಮೃತ ಅಭಿಷೇಕ್ ಜೊತೆಗೆ ಇದ್ದ ಅಂಜಲಿ ಇದ್ದಕಿದ್ದಂತೆ ಎದ್ದು ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದಾಳೆ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಇಂದು( ಮಂಗಳವಾರ) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.



Leave a Comment: