ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ವರದಿ ಫಲಶ್ರುತಿ ರಸ್ತೆ ಬದಿ ನಿಲ್ಲುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಸರತಿ ಸಾಲಿಗೆ ಕೊನೆಗೂ ಸಿಕ್ತು ಮುಕ್ತಿ! | ಪಿ.ಎಸ್.ಐ. ಉದಯರವಿ ಕಾರ್ಯಕ್ಕೆ ಪ್ರಶಂಸೆ

Posted by Vidyamaana on 2023-01-25 16:11:33 |

Share: | | | | |


ವರದಿ ಫಲಶ್ರುತಿ  ರಸ್ತೆ ಬದಿ ನಿಲ್ಲುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಸರತಿ ಸಾಲಿಗೆ ಕೊನೆಗೂ ಸಿಕ್ತು ಮುಕ್ತಿ! | ಪಿ.ಎಸ್.ಐ. ಉದಯರವಿ ಕಾರ್ಯಕ್ಕೆ ಪ್ರಶಂಸೆ

ವರದಿ ಫಲಶ್ರುತಿ

ಪುತ್ತೂರು : ಮುಕ್ರಂಪಾಡಿಯಲ್ಲಿ ಮುಖ್ಯರಸ್ತೆ ಬದಿಯಲ್ಲೇ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳಿಗೆ ಕೊನೆಗೂ ಪರಿಹಾರ ನೀಡುವಲ್ಲಿ ಕೆ.ಎಸ್.ಆರ್.ಟಿ.ಸಿ. ಶಕ್ತವಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್.ಐ. ಉದಯರವಿ ಅವರು ವರದಿ ತಕ್ಷಣ ಸ್ಪಂದಿಸಿದ್ದು, ಕೆ.ಎಸ್.ಆರ್.ಟಿ.ಸಿ. ವಿಭಾಗಕ್ಕೆ ಚುರುಕು ಮುಟ್ಟಿಸಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

   ಪ್ರತಿದಿನ ಸಂಜೆ ಹೊತ್ತು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳನ್ನು ಸಾನ್ತೋಮ್ ಗುರುಮಂದಿರದಿಂದ ಡಿಪೋದವರೆಗೆ ಮುಖ್ಯರಸ್ತೆಯ ಬದಿಯಲ್ಲೇ ನಿಲ್ಲಿಸಲಾಗುತ್ತಿತ್ತು. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ದರ್ಬೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮುಕ್ರಂಪಾಡಿ ಕೆ.ಎಸ್.ಆರ್.ಟಿ.ಸಿ. ಡಿಪೋದವರೆಗೆ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಸಂಜೆ ಹೊತ್ತು ಕಚೇರಿಯಿಂದ ಮನೆಗೆ ಹೋಗುವವರ ಸಂಖ್ಯೆಯೂ ಅಧಿಕವಾಗಿರುವ ಕಾರಣದಿಂದ, ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ಇದಾವುದನ್ನು ಲೆಕ್ಕಿಸದ ಕೆ.ಎಸ್.ಆರ್.ಟಿ.ಸಿ. ಸ್ಥಳೀಯ ಪೆಟ್ರೋಲ್ ಬಂಕ್ನಿಂದ ಬಸ್ಸುಗಳಿಗೆ ಡೀಸಿಲ್ ಹಾಕಲು ಹಾಗೂ ನಂತರ ಡಿಪೋದ ಒಳ ಹೋಗಲು ಸರತಿ ಸಾಲಿನಲ್ಲಿ ಬಸ್ಸುಗಳನ್ನು ನಿಲ್ಲಿಸುತ್ತಿತ್ತು.

ಮಂಗಳವಾರ ಸಂಜೆ ಹೊತ್ತು ಸಣ್ಣಗೆ ಮಳೆ ಸುರಿಯುತ್ತಿದ್ದ ಹೊತ್ತಿನಲ್ಲಿ, ವಿಪರೀತ ವಾಹನ ದಟ್ಟಣೆ ಉಂಟಾಗಿತ್ತು. ಇದನ್ನು `ವಿದ್ಯಮಾನ’ ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ತಕ್ಷಣ ಸ್ಪಂದಿಸಿದ ಪುತ್ತೂರು ಸಂಚಾರ ಪೊಲೀಸ್ ಠಾಣೆ ಪಿ.ಎಸ್.ಐ. ಉದಯರವಿ ಅವರು ಕೆ.ಎಸ್.ಆರ್.ಟಿ.ಸಿ. ವಿಭಾಗಕ್ಕೆ ತೆರಳಿ, ಅಧಿಕಾರಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ಸುಗಳನ್ನು ಮುಖ್ಯರಸ್ತೆ ಬದಿ ನಿಲ್ಲಿಸದಂತೆ ತಿಳಿಸಿದ್ದರು.

ಬುಧವಾರ ಸಂಜೆ ಹೊತ್ತು ಕೆ.ಎಸ್.ಆರ್.ಟಿ.ಸಿ.ಯ ಓರ್ವ ಅಧಿಕಾರಿಗೆ ಜವಾಬ್ದಾರಿ ನೀಡಿದ ಕೆ.ಎಸ್.ಆರ್.ಟಿ.ಸಿ. ಹಿರಿಯ ಅಧಿಕಾರಿಗಳು, ಬಸ್ಸು ಗಳನ್ನು ಸಂಜೆ ಹೊತ್ತು ರಸ್ತೆ ಬದಿ ನಿಲ್ಲಿಸದಂತೆ ಸೂಚನೆ ನೀಡಿದ್ದರು. ಅದರಂತೆ ಅಧಿಕಾರಿಯೋರ್ವರು ಸಂಜೆ ಹೊತ್ತು ರಸ್ತೆ ಬದಿ ನಿಂತು ಬಸ್ಸುಗಳನ್ನು ಮುಖ್ಯರಸ್ತೆಯಲ್ಲಿ ನಿಲ್ಲಲು ಬಿಡದೇ, ನೇರವಾಗಿ ಡಿಪೋಗೆ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತು.


ಉದಯರವಿ ಕಾರ್ಯಕ್ಕೆ ಮೆಚ್ಚುಗೆ

ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ, ಹಲವು ಸಮಯಗಳಿಂದ ಸಾರ್ವಜನಿಕರಿಗೆ ಎದುರಾಗಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದಲ್ಲೂ ಉತ್ತಮ ಅಧಿಕಾರಿ ಎಂದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದ್ದ ಉದಯರವಿ ಅವರು, ಇದೀಗ ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿಯೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಗೃಹಜ್ಯೋತಿಗೆ ಇದುವರೆಗೂ ಅರ್ಜಿ ಸಲ್ಲಿಸದವರಿಗೆ ಉಚಿತ ವಿದ್ಯುತ್ ಇಲ್ವಾ

Posted by Vidyamaana on 2023-07-13 17:07:27 |

Share: | | | | |


ಗೃಹಜ್ಯೋತಿಗೆ ಇದುವರೆಗೂ ಅರ್ಜಿ ಸಲ್ಲಿಸದವರಿಗೆ ಉಚಿತ ವಿದ್ಯುತ್ ಇಲ್ವಾ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದೆ. ಆದರೆ, ಅರ್ಜಿ ಹಾಕದವರಿಗೆ ಉಚಿತ ವಿದ್ಯುತ್ ಇಲ್ಲ, ಅರ್ಜಿ ಹಾಕದೇ ಉಚಿತ ಹೇಗೆ ಕೊಡೋದು. ಜುಲೈ ಕೊನೆ ವಾರದೊಳಗೆ ಅರ್ಜಿ ಸಲ್ಲಿಸಿದವರಿಗೆ ಉಚಿತ ವಿದ್ಯುತ್ ಯೋಜನೆಯ ಲಾಭ ಸಿಗಲಿದೆ ಎಂದು ಇಂಧನ


ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈಗಾಗಲೇ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಜುಲೈ 1ರಿಂದ ಎಲ್ಲರಿಗೂ ಉಚಿತ ವಿದ್ಯುತ್ ಸಿಗಲಿದೆ. ಜೂನ್ ತಿಂಗಳಿನ ವಿದ್ಯುತ್ ಬಿಲ್ ಜುಲೈ ತಿಂಗಳಲ್ಲಿ ಬರಲಿದೆ. ಗೃಹಜ್ಯೋತಿ ಯೋಜನೆಗೆ ಅರ್ಹತೆ ಹೊಂದಿರುವವರಿಗೆ ಆಗಸ್ಟ್ ಒಂದಕ್ಕೆ ಈ ಯೋಜನೆಯ ಲಾಭ ಸಿಗಲಿದೆ ಎಂದು ಹೇಳಿದರು.ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕದವರು ಬೇಗ ಹಾಕಬೇಕು. ಕೆಇಬಿ ಆಫೀಸ್‌ಗೆ ಹೋಗಿ ಅರ್ಜಿಯನ್ನು ಕೊಡಬಹುದು. ಅರ್ಜಿ ಹಾಕಲು ಈಗ ಅಷ್ಟು ಸಮಸ್ಯೆ ಇಲ್ಲ, ಒತ್ತಡ ಕಡಿಮೆ ಆಗಿದೆ. ಅರ್ಜಿ ಹಾಕಲು ಯಾವುದೇ ಡೆಡ್‌ಲೈನ್ ಅನ್ನು ನಾವು ನೀಡಿಲ್ಲ. ಆದರೆ, ಅರ್ಜಿ ಹಾಕದಿದ್ದರೆ ಉಚಿತ ವಿದ್ಯುತ್ ಸಿಗುವುದಿಲ್ಲ. ಅರ್ಜಿ ಹಾಕಲೇಬೇಕು. ಅರ್ಜಿ ಸಲ್ಲಿಸುವುದು ತಡವಾದರೆ, ಸೌಲಭ್ಯ ಸಿಗುವುದು ಕೂಡ ವಿಳಂಬ ಆಗುತ್ತದೆ ಎಂದರು.ಆಗಸ್ಟ್ 1 ರಿಂದ ಜುಲೈ ತಿಂಗಳಿನಿಂದ ಬಿಲ್ಲಿಂಗ್ ಮಾಡುತ್ತೇವೆ. ಅಷ್ಟರೊಳಗೆ ಅರ್ಜಿಯನ್ನು ಸಲ್ಲಿಸಿದ್ದವರಿಗೆ ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಸಿಗುತ್ತದೆ. ಅರ್ಜಿ ಹಾಕದಿದ್ದರೆ ಮುಂದಿನ ತಿಂಗಳ ಬಿಲ್‌ನಲ್ಲಿ ವಿನಾಯಿತಿ ಸಿಗಲ್ಲ. ಎಲ್ಲರೂ ಆದಷ್ಟು ಬೇಗ ಅರ್ಜಿ ಹಾಕುವುದು ಒಳ್ಳೆಯದು. ಇನ್ನು ಟೈಂ ಇದೆ, ಬೇಗ ಅರ್ಜಿ ಹಾಕಲಿ ಎಂದು ಕೆಜೆ ಜಾರ್ಜ್ ಜನರಿಗೆ ಕರೆ ನೀಡಿದರು.ಶನಿವಾರದಿಂದ ಯೋಜನೆ ಜಾರಿ!


ಕಾಂಗ್ರೆಸ್ ಸರ್ಕಾರ ತಾನೂ ಚುನಾವಣೆ ವೇಳೆ ಘೋಷಿಸಿದಂತೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಗೃಹಜ್ಯೋತಿ ಜುಲೈ 1ರಿಂದ ಜಾರಿಯಾಗಿದೆ. ಜೂನ್ 18ರಿಂದಲೇ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ 86 ಲಕ್ಷಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣದ ಸರಾಸರಿ ಜೊತೆಗೆ ಹೆಚ್ಚುವರಿ ಶೇ.10ರಷ್ಟು ವಿದ್ಯುತ್ ಅನ್ನು ಉಚಿತವಾಗಿ ಸರ್ಕಾರ ನೀಡಲಿದೆ. 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಉಚಿತ ವಿದ್ಯುತ್ ಲಾಭ ಜನರಿಗೆ ಸಿಗುವುದಿಲ್ಲ.ಶನಿವಾರದಿಂದ ಯೋಜನೆ ಜಾರಿ!


ಕಾಂಗ್ರೆಸ್ ಸರ್ಕಾರ ತಾನೂ ಚುನಾವಣೆ ವೇಳೆ ಘೋಷಿಸಿದಂತೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಗೃಹಜ್ಯೋತಿ ಜುಲೈ 1ರಿಂದ ಜಾರಿಯಾಗಿದೆ. ಜೂನ್ 18ರಿಂದಲೇ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ 86 ಲಕ್ಷಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣದ ಸರಾಸರಿ ಜೊತೆಗೆ ಹೆಚ್ಚುವರಿ ಶೇ.10ರಷ್ಟು ವಿದ್ಯುತ್ ಅನ್ನು ಉಚಿತವಾಗಿ ಸರ್ಕಾರ ನೀಡಲಿದೆ. 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಉಚಿತ ವಿದ್ಯುತ್ ಲಾಭ ಜನರಿಗೆ ಸಿಗುವುದಿಲ್ಲ.ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಸೇವಾಸಿಂಧು ಪೋರ್ಟಲ್ ಅನ್ನು ರೂಪಿಸಲಾಗಿದೆ. ಮೊದಲ ವಾರ ಸರ್ವರ್ ಬ್ಯುಸಿಯಿಂದ ಜನರು ಅರ್ಜಿ ಸಲ್ಲಿಸಲು ಪರದಾಡಿದ್ದರು. ಈಗ ಸರ್ವರ್ ಸಮಸ್ಯೆ ಅಷ್ಟೊಂದು ಕಾಣುತ್ತಿಲ್ಲ. ಈಗ ಅರ್ಜಿಯನ್ನು ಜನರ ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್‌ಗಳಲ್ಲಿ ಸಲ್ಲಿಸಬಹುದಾಗಿದೆ

ಕುಡ್ಲದಲ್ಲಿ ಪ್ರಧಾನಿ ರೋಡ್ ಶೋ ಸಂದರ್ಭ Extra Show ಕೊಟ್ಟ ಯುವಕ

Posted by Vidyamaana on 2024-04-15 14:22:31 |

Share: | | | | |


ಕುಡ್ಲದಲ್ಲಿ ಪ್ರಧಾನಿ ರೋಡ್ ಶೋ ಸಂದರ್ಭ Extra Show ಕೊಟ್ಟ ಯುವಕ

ಮಂಗಳೂರು : ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ತಂಡದ ಮಧ್ಯೆ ವಾಗ್ವಾದ ನಡೆದು, ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ.

VIDEO ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ; ಓರ್ವ ಮೃತ್ಯು

Posted by Vidyamaana on 2023-11-05 12:16:41 |

Share: | | | | |


VIDEO  ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ; ಓರ್ವ ಮೃತ್ಯು

ನವದೆಹಲಿ: ವೇಗವಾಗಿ ಬಂದ ದೆಹಲಿ ಸಾರಿಗೆ ಸಂಸ್ಥೆಯ (DTC) ಬಸ್​ವೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.


VIDEO ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ವಿಡಿಯೋ ನೋಡಲು ಕ್ಲಿಕ್ ಮಾಡಿ

 ಅಪಘಾತ ದೆಹಲಿಯ ರೋಹಿಣಿ ನಗರ ಪ್ರದೇಶದಲ್ಲಿ ವರದಿಯಾಗಿದೆ.ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ, ಚಾಲಕ ನಿಯಂತ್ರಣ ಕಳೆದುಕೊಂಡು ಸ್ಥಳದಲ್ಲಿದ್ದ ಕಾರು ಮತ್ತು ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನಗಳು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.

ಅಪಘಾತದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ,

1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಸುಪ್ರೀಂಗೆ ಕೇಂದ್ರ ಮಾಹಿತಿ

Posted by Vidyamaana on 2024-06-13 14:31:21 |

Share: | | | | |


1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಸುಪ್ರೀಂಗೆ ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024 ರ 1,563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ನಿರ್ಧಾರವನ್ನು ರದ್ದುಗೊಳಿಸಲಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಜೂನ್ 23 ರಂದು ಮರು ಪರೀಕ್ಷೆಗೆ ಅರ್ಜಿ ಸಲ್ಲಿಸುವ ಆಯ್ಕೆಯನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.

ಸಿಎಂ ಜನತಾ ದರ್ಶನ ಕ್ಕೆ ಭರ್ಜರಿ ರೆಸ್ಪಾನ್ಸ್: 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನಗಳ ಡೆಡ್ ಲೈನ್

Posted by Vidyamaana on 2023-11-28 07:05:17 |

Share: | | | | |


ಸಿಎಂ ಜನತಾ ದರ್ಶನ ಕ್ಕೆ ಭರ್ಜರಿ ರೆಸ್ಪಾನ್ಸ್: 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನಗಳ ಡೆಡ್ ಲೈನ್

ಬೆಂಗಳೂರು : ಸೋಮವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 3,812 ಅರ್ಜಿಗಳು ಸಲ್ಲಿಕೆಯಾಗಿದ್ದಾವೆ. ಇವುಗಳ ವಿಲೇವಾರಿಗೆ ಸಿಎಂ ಸಿದ್ಧರಾಮಯ್ಯ 15 ದಿನಗಳ ಡೆಡ್ ಲೈನ್ ಅನ್ನು ಅಧಿಕಾರಿಗಳಿಗೆ ನೀಡಿದ್ದಾರೆ.ಈ ಬಗ್ಗೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದೆ.


ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.


ಸ್ಛಳದಲ್ಲೇ ಪರಿಹಾರ


ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗೆ ಸಿ.ಎ. ನಿವೇಶನ ಮಂಜೂರಾಗಿದ್ದು, ಇದಕ್ಕಾಗಿ 9 ಲಕ್ಷ ರೂ. ಪಾವತಿಸುವಂತೆ ಸೂಚಿಸಲಾಗಿತ್ತು. ಆದರೆ, ಇದನ್ನುಪಾವತಿಸುವಷ್ಟು ಆರ್ಥಿಕ ಚೈತನ್ಯ ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗಿರಲಿಲ್ಲ. ಹಾಗಂತ, ಶಾಲೆಗೆ ಅತಿ ಅಗತ್ಯವಾಗಿದ್ದ ಸಿ.ಎ. ನಿವೇಶನವನ್ನು ಕೈಬಿಡುವಂತೆಯೂ ಇರಲಿಲ್ಲ. ಇದಕ್ಕೇನು ಪರಿಹಾರ? ಎಂದು ಯೋಚಿಸಿದ ಶಾಲಾ ಆಡಳಿತ ಮಂಡಳಿ ಇಂದು ಜನತಾ ದರ್ಶನಕ್ಕೆ ಬಂದು ತಮ್ಮ ಅಹವಾಲು ಸಲ್ಲಿಸಿತು. ಜನಪರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ ಕೂಡಲೇ ಆನ್ ಲೈನ್ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವ ಮೂಲಕ ಅಂಧಮಕ್ಕಳ ಬದುಕಿಗೆ ನೆಮ್ಮದಿಯ ಸೂರು ಕಲ್ಪಿಸಿದರು. ಇಂತಹ ಪ್ರಕರಣ ಸೇರಿದಂತೆ ಅನೇಕ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿ ಸಿಎಂ ಸಿದ್ಧರಾಮಯ್ಯ ಸ್ಪಂದಿಸಿದರು.


ಒಟ್ಟಾರೆ ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜನರಿಂದಲೇ ನೇರವಾಗಿ ಅಹವಾಲುಸ್ವೀಕರಿಸಿ ಸ್ಪಂದಿಸುವ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಿದರು. ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ, ಪರಿಹರಿಸುವ ನಿಟ್ಟಿನಲ್ಲಿ ಸ್ಪಂದಿಸಿದರು.

Recent News


Leave a Comment: