Posted by vidyamaana on 2024-07-01 19:16:06 |
ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.
ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.
Posted by Vidyamaana on 2023-07-08 13:47:02 |
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಅದರಲ್ಲಿ ಖಾಸಗಿ ವಾಹನದಲ್ಲಿ ಬಂದಿದ್ದ ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವರು ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಶುಕ್ರವಾರ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥತೆಗೊಂಡಿದ್ದರಿಂದ ಸ್ಥಳದಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಪ್ ಅವರು ಅವರ ಅಂಬುಲೆನ್ಸ್ ನಲ್ಲಿ ವಾಹನ ದಟ್ಟಣೆಯಲ್ಲೂ ಸೈರನ್ ಹಾಕಿ ಮೂಡಿಗೆರೆ ಆಸ್ಪತ್ರೆಗೆ ತಂದು ದಾಖಲು ಮಾಡಿದರು.ಇದರಿಂದ ಗರ್ಭಿಣಿ ಮಹಿಳೆಯನ್ನು ತುರ್ತು ಸಮಯದಲ್ಲಿ ಪ್ರಾಣ ಉಳಿಸಿದಂತಾಯಿತು ಎಂದು ಕುಟುಂಬದವರು ಆರೀಫ್ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.
Posted by Vidyamaana on 2023-09-19 06:49:32 |
ಪುತ್ತೂರು: ಪುತ್ತೂರು ಉರ್ಲಾಂಡಿ ನಿವಾಸಿ ಮಹೇಶ್ ಭಂಡಾರಿ (37.ವ) ಅಲ್ಪಕಾಲದ ಅನಾರೋಗ್ಯದಿಂದ ಸೆ.18ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಂಜೆ ನಿಧನರಾದರು.ಮಹೇಶ್ರವರು ಪುತ್ತೂರಿನ ಪ್ರತಿಷ್ಠಿತ ಜವಳಿ ಅಂಗಡಿಯಲ್ಲಿ ಹಲವಾರು ವರ್ಷಗಳಿಂದ ಸೇಲ್ಸ್ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ನಂತರ ಫ್ಯಾನ್ಸಿ ಅಂಗಡಿಯನ್ನು ತೆರೆದಿದ್ದರು. ಮೃತರು ತಾಯಿ ರೇವತಿ, ಸಹೋದರಿಯರಾದ ವಿಜಯ, ಜ್ಯೋತಿರವರನ್ನು ಅಗಲಿದ್ದಾರೆ.
Posted by Vidyamaana on 2023-10-02 18:58:07 |
ಕೊಚ್ಚಿ: ಕಾರೊಂದು ಪೆರಿಯಾರ್ ನದಿಗೆ ಬಿದ್ದು ಇಬ್ಬರು ವೈದ್ಯರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.
ಇದೇ ವೇಳೆ ಇನ್ನೂ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಅದ್ವೈತ್ (29) ಮತ್ತು ಅಜ್ಮಲ್ (29) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದರು.
ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.
ಗೋತುರುತ್ನಲ್ಲಿ ಭಾರೀ ಮಳೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಚರತೆ ಕೂಡ ತುಂಬಾ ಕಡಿಮೆ ಇತ್ತು. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ.
Posted by Vidyamaana on 2023-05-31 03:52:36 |
ಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
Posted by Vidyamaana on 2023-12-29 21:43:01 |
ಚಿತ್ರದುರ್ಗ, ಡಿ 29: ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 4 ವರ್ಷದ ಹಿಂದಿನ ಡೆತ್ನೋಟ್ ಇದೀಗ ಐವರ ಸಾವಿನ ಸುಳಿವನ್ನು ಕೊಟ್ಟಿದೆ.
ಜೈಲು ಪಾಲಾಗಿದ್ದಕ್ಕೆ ಮನನೊಂದು ಐವರು ಸಾವಿಗೆ ಶರಣಾಗಿರುವುದು ಬಯಲಾಗಿದೆ. ಸಾವಿಗೂ ಮುನ್ನ ಈ ಐವರು ಡೆತ್ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ.ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ನರೇಂದ್ರ ಅವರು ತಮ್ಮ ಗೆಳೆಯರ ಜೊತೆ ತೆರಳಿ ದರೋಡೆ ಕೇಸಲ್ಲಿ ಭಾಗಿ ಆಗಿದ್ದರು. ಹೀಗಾಗಿ ದರೋಡೆ ಕೇಸಲ್ಲಿ ಕೆಲದಿನ ಜೈಲುವಾಸವನ್ನೂ ಅನುಭವಿಸಿದ್ದರು. ನರೇಂದ್ರರೆಡ್ಡಿ ವಿರುದ್ಧದ ಕೇಸಿನಿಂದ ಮನನೊಂದಿದ್ದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶರಣಾಗಿದೆ.
ಜಗನ್ನಾಥರೆಡ್ಡಿ ಮನೆಯಲ್ಲಿದ್ದ ಒಂದು ಸಾಕುನಾಯಿ ಸಹ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆ ಕೇಸ್ ಸಂಬಂಧಿಸಿದಂತೆ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮನೆಯಲ್ಲಿ ಸಾಕಿದ್ದ ನಾಯಿಯೊಂದು ಸಾವಿಗೀಡಾಗಿದ್ದು ಪತ್ತೆಯಾಗಿದೆ.
ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆಯಾದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಮೃತ ಜಗನ್ನಾಥ ರೆಡ್ಡಿ ಸಹೋದರನ ಪತ್ನಿ ಕೊಲ್ಲಿಲಕ್ಷ್ಮಿ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಜಗನ್ನಾಥ ರೆಡ್ಡಿ ಕುಟುಂಬಸ್ಥರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಕಾಲಕ್ಕೆ ಮಕ್ಕಳ ಮದುವೆ ಆಗದಿದ್ದಕ್ಕೆ ಮನನೊಂದಿದ್ದರು. ಮನನೊಂದು ಸಾವಾಗಿರುವ ಶಂಕೆ ವ್ಯಕ್ತಪಡಿಸಿದ ಅವರು, ಹಲವು ವರ್ಷಗಳಿಂದ ನಮ್ಮ ಸಂಪರ್ಕದಲ್ಲಿ ಇರಲಿಲ್ಲ ಎಂದರು.
ಇತ್ತ ಮೃತ ಪ್ರೇಮಕ್ಕ ಸಹೋದರಿ ಲಲಿತಾ ಪ್ರತಿಕ್ರಿಯಿಸಿ, 8 ವರ್ಷದಿಂದ ಅವರು ಸಂಪರ್ಕದಲ್ಲಿ ಇಲ್ಲ. 8 ವರ್ಷಗಳಿಂದ ಫೋನ್ ಮಾಡ್ತಿದ್ದೆ ಸಿಗ್ತಿರಲಿಲ್ಲ. ಎಲ್ಲೋ ಅನಾಥಶ್ರಮಕ್ಕೆ ಸೇರಬಹುದು ಅಂತಾ ಸುಮ್ಮನಾದೆ. ನನ್ನ ತಂಗಿ ಯಾರದ್ದೂ ಮದುವೆ ಮಾಡಲಿಲ್ಲ. ನನ್ನ ತಂಗಿ ಮಾಡಿದ ತಪ್ಪಿಗೆ ಯಾರಿಗೂ ಮದುವೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Posted by Vidyamaana on 2023-09-06 17:09:48 |
ಪುತ್ತೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನ್ಯೂ ಮಂಗಳೂರು ಎಲೆಕ್ಟ್ರೋನಿಕ್ಸ್ ವಿಶೇಷ ಆಫರ್ಗಳನ್ನು ಗ್ರಾಹಕರ ಮುಂದಿಟ್ಟಿದೆ.
ಪುತ್ತೂರಿನ ದರ್ಬೆ ಬುಶ್ರಾ ಟವರ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂ ಮಂಗಳೂರು ಎಲೆಕ್ಟ್ರೋನಿಕ್ಸ್ ಕಾಂಬೋ ಆಫರ್ಗಳನ್ನು ಗ್ರಾಹಕರಿಗಾಗಿ ನೀಡುತ್ತಿದೆ. ಈ ಆಫರ್ ಉತ್ಸವದವರೆಗೆ ನೀಡಲಾಗುತ್ತಿದ್ದು, ಕೆಲವೇ ದಿನಗಳವರೆಗೆ ಸೀಮಿತಗೊಳಿಸಲಾಗಿದೆ.
ಆಯ್ದ ಉತ್ಪನ್ನಗಳ ಖರೀದಿ ಮೇಲೆ ಶೇ. 26ರವರೆಗೆ ಕ್ಯಾಶ್ಬ್ಯಾಕ್ ನೀಡಲಾಗುತ್ತದೆ. ಮಾತ್ರವಲ್ಲ, ಆಯ್ದ ಉತ್ಪನ್ನಗಳಿಗೆ 888 ರೂ.ನಿಂದ ನಿಗದಿತ ಇಎಂಐ ಪ್ರಾರಂಭವಾಗಲಿದೆ. ಆಯ್ದ ಕೆಲ ಉತ್ಪನ್ನಗಳಿಗೆ 1 ಕಂತು ಉಚಿತವಾಗಿಯೂ ನೀಡಲಾಗುತ್ತಿದೆ.
ಇದರೊಂದಿಗೆ ಕಾಂಬೋ ಆಫರ್ಗಳು ಗ್ರಾಹಕರನ್ನು ಸೆಳೆಯುತ್ತಿವೆ. 4345 ರೂ.ನ ವಿಕ್ಟರ್ 600 ವ್ಯಾಟಿನ ಕುಕ್ಕರ್ ಹಾಗೂ 6944 ರೂ.ನ ವಿವಾ ಸ್ಕೈ - 2b ಗ್ಯಾಸ್ ಸ್ಟೌ ಅನ್ನು 6790 ರೂ.ಗೆ ನೀಡಲಾಗುತ್ತಿದೆ. ವೀಡಿಯಂ ಕಂಪೆನಿಯ ಈ ಉತ್ಪನ್ನಗಳಿಗೆ 5 ವರ್ಷದ ವಾರೆಂಟಿಯೂ ಇದೆ.
ಇನ್ನು, 14100 ರೂ.ನ 4 ಬರ್ನಲಿನ ಗ್ಯಾಸ್ ಸ್ಟೌ ಹಾಗೂ 12595 ರೂ.ನ ಎಲೆಕ್ಟ್ರಿಕ್ ಕಿಚನ್ ಚಿಮ್ನಿ ಅನ್ನು 14690 ರೂ.ಗೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಸಂಭ್ರಮ ನಿಮ್ಮ ಮನೆ ಬಾಗಿಲಿಗೆ ಎನ್ನುವ ಸ್ಲೋಗನಿನೊಂದಿಗೆ ನೀಡಲಾಗುತ್ತಿರುವ ಕಾಂಬೋ ಆಫರಿನ ಜೊತೆಗೆ 100ಕ್ಕೂ ಹೆಚ್ಚು ಮಾಡೆಲ್ನ ಫ್ಯಾನ್ಗಳು, 75ಕ್ಕೂ ಹೆಚ್ಚು ಮಾಡೆಲ್ನ ಮಿಕ್ಸಿಗಳು, 40ಕ್ಕೂ ಹೆಚ್ಚು ಮಾಡೆಲ್ನ ಗ್ಯಾಸ್ ಸ್ಟವ್ಗಳು, 25ಕ್ಕೂ ಹೆಚ್ಚು ಮಾಡೆಲ್ನ ಎಲ್.ಇ.ಡಿ. ಟಿವಿಗಳು, 55ಕ್ಕೂ ಹೆಚ್ಚು ಮಾಡೆಲ್ನ ವಾಷಿಂಗ್ ಮೆಷಿನ್, 25ಕ್ಕೂ ಹೆಚ್ಚು ಮಾಡೆಲ್ನ ಗ್ರೈಂಡರ್ಗಳು, 20ಕ್ಕೂ ಹೆಚ್ಚು ಮಾಡೆಲ್ನ ಇಂಡಕ್ಷನ್ ಸ್ಟವ್ಗಳು, 75ಕ್ಕೂ ಹೆಚ್ಚು ಮಾಡೆಲ್ನ ರೆಫ್ರಿಜರೇಟರ್ ಶೇ.40ರವರೆಗೆ ರಿಯಾಯಿತಿಯಲ್ಲಿ ಗ್ರಾಹಕರ ಖರೀದಿಗೆ ತೆರೆದುಕೊಳ್ಳಲಿದೆ.
ಸುಮಾರು 43 ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ನ್ಯೂ ಮಂಗಳೂರು ಫರ್ನಿಚರ್ ಸಹ ಸಂಸ್ಥೆಯಲ್ಲಿ ಟಿ.ವಿ., ಫ್ರಿಡ್ಜ್ ವಾಷಿಂಗ್ ಮೆಷಿನ್ ಇತ್ಯಾದಿ ಖರೀದಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಪ್ರತೀ ಖರೀದಿಗೆ ಹಲವು ಆಕರ್ಷಕ ಉಡುಗೊರೆಗಳು ಮತ್ತು ಗಿಫ್ಟ್ ವೋಚರ್ ಪಡೆಯುವ ಸುವರ್ಣಾವಕಾಶವನ್ನು ನೀಡಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.