ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಸುದ್ದಿಗಳು News

Posted by vidyamaana on 2024-07-01 19:31:51 |

Share: | | | | |


ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.

ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.

ಡೆಂಗ್ಯೂ ಸೊಳ್ಳೆಗಳು ಕೂಲರ್‌, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್‌ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.

ಡೆಂಗ್ಯೂ ಸೊಳ್ಳೆ ಕಚ್ಚಿದ ತಕ್ಷಣ ಡೆಂಗ್ಯೂ ಲಕ್ಷಣಗಳು ಕಾಣಿಸುವುದಿಲ್ಲ. ಆದ್ರೆ, ಕೆಲವು ದಿನಗಳ ನಂತರ ಅದರ ಪರಿಣಾಮಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಈಡಿಸ್ ಸೊಳ್ಳೆಗಳು ಕಚ್ಚಿದ 3 ರಿಂದ 5 ದಿನಗಳ ನಂತರ ಡೆಂಗ್ಯೂ ಜ್ವರ ಬರುತ್ತದೆ. ಈ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಡೆಂಗ್ಯೂ ಸೊಳ್ಳೆಗಳು ಮನೆಗಳ ಮೂಲೆಗಳಲ್ಲಿ ಪರದೆಯ ಹಿಂದೆ, ಸೊಳ್ಳೆಗಳು ಇರುವ ಸ್ಥಳಗಳಲ್ಲಿ ಅಡಗಿಕೊಳ್ಳುತ್ತವೆ.

ಡೆಂಗ್ಯೂ ಜ್ವರದ ಲಕ್ಷಣಗಳು.!

ಡೆಂಗ್ಯೂ ಈಡಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುವ ಗಂಭೀರ ಕಾಯಿಲೆಯಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಜ್ವರದಂತಿರುತ್ತವೆ. ಆದ್ರೆ, ಇದು ತೀವ್ರವಾದ ಹೆಮರಾಜಿಕ್ ಜ್ವರಕ್ಕೆ ಕಾರಣವಾಗಬಹುದು. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿದೆ ಎನ್ನುತ್ತಾರೆ ವೈದ್ಯರು.

ಲಕ್ಷಣಗಳೇನು.?

ತೀವ್ರವಾದ ಜ್ವರ, ತಲೆನೋವು, ಸ್ನಾಯು ನೋವು, ಚರ್ಮದ ಮೇಲೆ ಕೆಂಪು ಗುಳ್ಳೆಗಳು, ಕಣ್ಣುಗಳ ಕೆಳಗೆ ನೋವು, ಮೊಣಕಾಲು ನೋವು, ಊತ, ಹಲ್ಲು, ಮೂಗು, ಒಸಡುಗಳಿಂದ ರಕ್ತಸ್ರಾವ ಇತ್ಯಾದಿಗಳನ್ನ ಗಮನಿಸಿದರೆ ತಕ್ಷಣವೇ ಎಚ್ಚರಗೊಳ್ಳಿ.

ಡೆಂಗ್ಯೂ ತಡೆಗಟ್ಟುವುದು ಹೇಗೆ.?

* ವಿಶೇಷವಾಗಿ ಮಳೆಗಾಲದಲ್ಲಿ ದೇಹವನ್ನ ಸಂಪೂರ್ಣವಾಗಿ ಮುಚ್ಚುವ ಬಟ್ಟೆಗಳನ್ನ ಧರಿಸಿ.

* ಮಲಗುವಾಗ ಸೊಳ್ಳೆ ಪರದೆಗಳನ್ನ ಬಳಸಿ.

* ಸೊಳ್ಳೆ ಕಡಿತವನ್ನು ತಡೆಯಲು ದೇಹಕ್ಕೆ ಎಣ್ಣೆ ಅಥವಾ ಕ್ರೀಮ್ ಹಚ್ಚಿ.

* ನಿಮ್ಮ ಮನೆ ಮತ್ತು ಸುತ್ತಮುತ್ತ ಕೊಳಕು ನೀರು ಬರುವುದನ್ನ ತಪ್ಪಿಸಿ.

* ಅನಗತ್ಯ ವಸ್ತುಗಳು ಹಾಗೂ ಕೂಲರ್ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು.

* ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 Share: | | | | |


ಶಾಸಕ ಅಶೋಕ್ ಕುಮಾರ್ ರೈ ಕ್ಷಮೆ ಕೇಳಿದ ಪುತ್ತಿಲ ಅಭಿಮಾನಿ

Posted by Vidyamaana on 2023-10-09 20:39:31 |

Share: | | | | |


ಶಾಸಕ ಅಶೋಕ್ ಕುಮಾರ್ ರೈ ಕ್ಷಮೆ ಕೇಳಿದ ಪುತ್ತಿಲ ಅಭಿಮಾನಿ


ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಹಾಕಲಾಗಿದ್ದ ಸುವೋ ಮೋಟೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೀಡಿಯೋ ಬಿಟ್ಟಿದ್ದ ಪುತ್ತಿಲ ಅಭಿಮಾನಿಯೋರ್ವರು ಇದೀಗ ಕ್ಷಮೆ ಯಾಚಿಸಿದ್ದಾರೆ.

"ಪ್ರೀತಿದ ಶಾಸಕರೇ, ಈರ್ ಸರಕಾರದ ಒಂಜಿ ಭಾಗ ಪನ್ಪುನ ದೃಷ್ಟಿಡ್ದ್, ವಿಷಯ ತೆರಿಪಾವುನ ಬೇಲೆ ಮನ್ತೆ. ಆಂಡ ಅಯ್ನ್ ಅಪಗನೆ ಡಿಲೀಟ್ ಮನ್ತೆ. ಅಂಚ ವೀಡಿಯೋ ಪಾಡುನ ಬೋಡ್ಚಿ ಪಂಡ್ದ್ ಪಂಡೆರ್. ವೈರಲ್ ಮನ್ಪುನ ಎಂಚಾಂದ್ ಎಂಕ್ ತೆರಿದಿಜ್ಜಿ. ಶಾಸಕರೇ, ಈರ್ ಎನಾಡ್ದ್ ಹಿರಿಯರಾದುಲ್ಲಾರ್, ಎನ್ನ ಪಾತೆರಡ್ದ್ ಬೇಜರಾದಿತ್ಂಡ ಕ್ಷಮೆ ಕೇನುವೆ."

ಹೀಗೆ ಗಣೇಶ್ ವಿದ್ಯಾಪುರ ಎನ್ನುವ ವ್ಯಕ್ತಿಯೋರ್ವರು ವೀಡಿಯೋ ಹಂಚಿಕೊಂಡಿದ್ದಾರೆ. ಶಿವಮೊಗ್ಗದ ಘಟ‌ನೆ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಸುವೋ ಮೋಟೊ ಪ್ರಕರಣ ದಾಖಲಿಸಲಾಗಿತ್ತು. ಆಗ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಹೆಸರು ಹೇಳಿ ವೀಡಿಯೋ ಮಾಡಿದ್ದ ಇದೇ ಯುವಕ, ಈಗ ಕ್ಷಮೆ ಕೇಳಿದ್ದಾರೆ.

ಬೆಳ್ತಂಗಡಿ : ಕಳೆಂಜದ ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಪ್ರಕರಣ

Posted by Vidyamaana on 2024-06-02 10:35:15 |

Share: | | | | |


ಬೆಳ್ತಂಗಡಿ : ಕಳೆಂಜದ ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಪ್ರಕರಣ

ಬೆಳ್ತಂಗಡಿ : ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.ಪ್ರಕರಣ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ


ಲೋಲಾಕ್ಷ ಎಂಬಾತ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತು ಹಾಕಿದ್ದರು ಇದರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಕಾರ್ಯಕರ್ತರು ಮನೆ ನಿರ್ಮಾಣ ಮಾಡಿದ್ದರು ನಂತರ ಅರಣ್ಯ ಇಲಾಖೆ ಮನೆಯನ್ನು ತೆರವು ಮಾಡಲು 9-10- 2023 ರಂದು ಮುಂದಾದಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಇತರರು ಅರಣ್ಯ ಇಲಾಖೆಯ ಅಧಿಕಾರಿಗಳ

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು

Posted by Vidyamaana on 2023-12-28 19:30:06 |

Share: | | | | |


ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಮುಸ್ಲಿಂ ಮಹಿಳೆಯರನ್ನು ನಿಂದಿಸಿದ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು ಆಗಿದೆ ಎಂದು ಹಿರಿಯ ವಕೀಲ ಮತ್ತು ಕರ್ನಾಟಕದ ಮಾಜಿ ಎಎಜಿ ಅರುಣಾ ಶ್ಯಾಮ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ.ಡಿಸೆಂಬರ್ 24 ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಹನುಮ ಜಯಂತಿ ಆಚರಣೆಯ ಅಂಗವಾಗಿ ನಡೆದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಪ್ರಭಾಕರ್ ಭಟ್ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಚೂರಿ ಇರಿತದಿಂದ ಮೃತಪಟ್ಟ ಯುವತಿ ಮನೆಗೆ ಕೇಂದ್ರ ಸಚಿವ ಭಗವಂತ್ ಖೂಬಾ

Posted by Vidyamaana on 2023-08-25 11:22:35 |

Share: | | | | |


ಚೂರಿ ಇರಿತದಿಂದ ಮೃತಪಟ್ಟ ಯುವತಿ ಮನೆಗೆ ಕೇಂದ್ರ ಸಚಿವ ಭಗವಂತ್ ಖೂಬಾ

ವಿಟ್ಲ : ಯುವಕನೋರ್ವನಿಂದ ಆ 24ರಂದು ಹತ್ಯೆಯಾದ ವಿಟ್ಲ ಮೂಲದ ಯುವತಿ ಗೌರಿ ನಿವಾಸಕ್ಕೆ ಕೇಂದ್ರ ಸಚಿವರಾದ ಭಗವಂತ ಖೂಬಾ   ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಜಿಲ್ಲಾ ಕಾರ್ಯದರ್ಶಿ ರಂದಿಪ್, ವಿಟ್ಲ ಪಟ್ಟಣ ಪಂಚಾಯತ್‌ನ ಅರುಣ್ ವಿಟ್ಲ ಸಹಿತ ಹಲವಾರು ಮಂದಿ ಜೊತೆಗಿದ್ದರು.

ಪುತ್ತೂರಿನ ವಸ್ತ್ರ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ವಿಟ್ಲ ಮೂಲದ ಯುವತಿ ಗೌರಿಯನ್ನು ಪದ್ಮರಾಜ್ ಎಂಬಾತ ನಿನ್ನೆ ಚೂರಿಯಿಂದ ಇರಿದು ಹತ್ಯೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

Posted by Vidyamaana on 2023-07-01 16:00:10 |

Share: | | | | |


ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

ಪುತ್ತೂರು : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.

ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.

ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗೆ KUWJ ದೂರು

Posted by Vidyamaana on 2024-03-12 20:36:12 |

Share: | | | | |


ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗೆ  KUWJ ದೂರು

ಬೆಂಗಳೂರು : ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ.ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.


ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮವನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಅನಂತ ಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಆಗಿಂದ್ದಾಗೆ ಮನಸೋ ಇಚ್ಛೆ ಮಾತನಾಡುತ್ತಿರುವುದಲ್ಲದೆ ಮಾಧ್ಯಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕೆಯುಡಬ್ಲ್ಯು ಜೆ ಒತ್ತಾಯಿಸಿದೆ.

Recent News


Leave a Comment: