Posted by vidyamaana on 2024-06-30 19:51:42 |
ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.
Posted by Vidyamaana on 2023-10-14 13:11:58 |
ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರತದ ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ರೀತಿಯಲ್ಲಿ ಸುಳ್ಳು ಪೋಸ್ಟ್ ಹಾಕಿದ ತುಮಕೂರು ಮೂಲದ ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಎಂಬಾಕೆಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೇಳಿಕೆ ಆರೋಪದ ಮೇಲೆ ಶಕುಂತಲಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.
ಟ್ವಿಟ್ಟರ್ ಎಕ್ಸ್ನಲ್ಲಿ ಶಕುಂತಲಾ ನಟರಾಜ್ ಸುಳ್ಳು ಪೋಸ್ಟ್ ಹಾಕಿದ್ದು, ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದಳು.
Posted by Vidyamaana on 2023-10-03 15:58:48 |
ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ.
ಲೀಲಾವತಿ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!
ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು.
ಇದರ ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಲೀಲಾವತಿಯವರಿಗೆ ವಾಂತಿ, ಭೇದಿ ಆರ೦ಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊ೦ಡು ಅ. 2ರ೦ದು ಹೆಚ್ಚಿನ ಚಿಕಿತ್ಸೆಗಾಗಿ ಮ೦ಗಳೂರಿಗೆ ಕೊ೦ಡೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ
Posted by Vidyamaana on 2024-05-06 17:19:29 |
ಬೆಂಗಳೂರು, ಮೇ 06: ನಮ್ಮ ಮೆಟ್ರೋ (Namma Metro) ರಾಜಧಾನಿ ಬೆಂಗಳೂರಿನ (Bengaluru) ಅತಿ ವೇಗದ ಸಂಪರ್ಕ ಸಾರಿಗೆಯಾಗಿದೆ. ಈ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮ (BMRCL) ಗೆ ದೂರು ನೀಡಿದ್ದಾರೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ.
Posted by Vidyamaana on 2024-04-04 12:02:54 |
ನವದೆಹಲಿ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದರು.ಆದರೆ ಅಮಿತ್ ಶಾ ಅವರು ಈಶ್ವರಪ್ಪ ಅವರ ಭೇಟಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಅವರು ವಾಪಸ್ ಆಗಿದ್ದಾರೆ.ಅಮಿತ್ ಶಾ ಬೇಟಿಗೆ ಸಮಯ ಸಿಗದ ಕಾರಣ ಇದೀಗ ಈಶ್ವರಪ್ಪ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 6 10ರ ಫ್ಲೈಟ್ ಗೆ ಕೆ ಎಸ್ ಈಶ್ವರಪ್ಪ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ. ಇವಳೆ ಸುದ್ದಿಗಾರನಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರ ಸೋಲಲಿ ಎಂಬ ಪರೀಕ್ಷೆ ಅಮಿತ್ ಶಾ ಅವರಿಗೆ ಇರಬಹುದು ಎಂದು ತಿಳಿಸಿದರು.
Posted by Vidyamaana on 2023-11-28 11:45:29 |
ಬೆಳ್ತಂಗಡಿ : ಕುಟುಂಬವೊಂದು ತನ್ನ ಪತ್ನಿ ಮನೆಗೆ ಬಂದು ಉಜಿರೆ ಶಾಪಿಂಗ್ ಹೋಗಿ ವಾಪಸ್ ನೆರಿಯ ಪತ್ನಿ ಮನೆಗೆ ಹೋಗುವಾಗ ಒಂಟಿ ಸಲಗ ಕಾರಿಗೆ ಮೇಲೆ ದಾಳಿ ಮಾಡಿದ್ದು ಇಬ್ಬರಿಗೆ ಗಾಯವಾಗಿದ್ದು , ಮೂರು ಮಕ್ಕಳು ಸೇರಿ ಐದು ಜನ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನ.27 ರಂದು ರಾತ್ರಿ 8:30 ರ ಸಮಯಕ್ಕೆ ನಡೆದಿದೆ.
*ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಇಬ್ಬರು:* ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ಮನೆಯ ಅಬ್ದುಲ್ ರಹಮಾನ್(40) ತಲೆಗೆ ಹಾಗೂ ಎಡಕಾಲು ಮುರಿದಿದ್ದು. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಹಿಟ್ಟಾಡಿ ಮನೆಯ ಅಬ್ದುಲ್ ರಹಮಾನ್ ಪತ್ನಿಯ ತಂಗಿ ನಾಸಿಯಾ(30) ಎಡಕಾಲು ಮುರಿದಿದ್ದು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
*ಆನೆ ದಾಳಿ ವೇಳೆ ಕಾರಿನದಲ್ಲಿದ್ದವರ ಮಾಹಿತಿ:* ಕಾರಿನಲ್ಲಿ ಅಬ್ದುಲ್ ರಹಮಾನ್ (40) ಪತ್ನಿ ಫೌಸಿಯಾ(35) , ನಾಸಿಯಾ ತಾಯಿ ಜುಬೈದಾ (50), ನಾಸಿಯಾ ಚಿಕ್ಕಮ್ಮ ಅಯಿಷಾ (45), ನಾಸಿಯಾ ಮಕ್ಕಳಾದ ಫಾತಿಮಾ ಅಲ್ಫಾ(1) , ಅಯಿಷಾ ವಾಫಾ(4) ,ಅಬ್ದುಲ್ ರಹಮಾನ್ ಮಗಳು ಮಹಮ್ಮದ್ ಮೋಹಜ್(4) ಸೇರಿ ಒಟ್ಟು 7 ಜನರು ಇದ್ದವರು ಎಂದು ಗಾಯಗೊಂಡ ಅಬ್ದುಲ್ ರಹಮಾನ್ ಮಾಹಿತಿ ನೀಡಿದ್ದಾರೆ.
*ಘಟನೆಯ ವಿವರ:* ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ನೆರಿಯ ಪತ್ನಿ ಮನೆಗೆ ಹೋಗಿ ಉಜಿರೆ ಶಾಪಿಂಗ್ ಮುಗಿಸಿಕೊಂಡು ನೆರಿಯ ಪತ್ನಿ ಮನೆಗೆ ಹೋಗುವಾಗ ಒಂಟಿ ಸಲಗ ಕಂಡಿದ್ದು ತಕ್ಷಣ ಕಾರನ್ನು ಬಯಲು ಬಳಿ ನಿಲ್ಲಿಸಿದ್ದು ಆನೆ ಕಾರಿನ ಮೇಲೆ ದಾಳಿ ಮಾಡಿ ಕಾರನ್ನು ಪಲ್ಟಿ ಮಾಡಿದ್ದು ಈ ವೇಳೆ ಕಾರಿನಲ್ಲಿದ್ದವರು ಜರಿದ್ದರಿಂದ ದಂತದಿಂದ ಕಾರಿನ ಡೋರ್ ಮತ್ತು ಚಾಲಕನ ಸೀಟ್ ಸಿಲಿ ಪ್ರಾಣ ಉಳಿದಿದ್ದು ಬಳಿಕ ಆನೆ ವಾಪಸ್ ಹೋಗಿದೆ ಇದರಿಂದ ಇಬ್ಬರ ಕಾಲು ಮುರಿದಿದ್ದು. ಮೂರು ಮಕ್ಕಳು ಯಾವುದೆ ಗಾಯವಾಗದೆ ಒಟ್ಟು ಐದು ಜನ ಪ್ರಾಣಾ ಉಳಿಸಿಕೊಂಡಿದ್ದಾರೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಬಂದು ಗಾಯಗೊಂಡ ಇಬ್ಬರನ್ನು ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ಸೇರಿಸಿದ್ದಾರೆ. ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಅರಣ್ಯಾ ಇಲಾಖೆ ತಂಡ ಗಾಯಗೊಂಡವರನ್ನು ಭೇಟಿ ಮಾಡಿ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಆನೆ ಹೋದ ಸ್ಥಳಕ್ಕೆ ಹೋಗಿ ಮಾಹಿತಿ ಪಡೆದುಕೊಂಡಿದ್ದಾರೆ.
*ಒಂಟಿ ಸಲಗ ಬಗ್ಗೆ ಎಚ್ಚರಿಕೆ ನೀಡಿದ ಆರ್.ಎಫ್.ಓ:* ಒಂಟಿ ಸಲಗ ನೆರಿಯ ಸುತ್ತಮುತ್ತ ತಿರುಗಾಟ ನಡೆಸುತ್ತಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮತ್ತಿ ಸಿಬ್ಬಂದಿ ರಾತ್ರಿ ಹೊತ್ತು ಸಂಚಾರಿಸುವ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಒಂಟಿ ಸಲಗದ ಬಗ್ಗೆ ನಿಗಾ ಇಡಲು ನೇಮಿಸಲಾಗಿದೆ ಎಂದು ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ , ಡಿ.ಆರ್.ಎಫ್.ಓ ಯತೀಂದ್ರ ಮತ್ತು ರಾಜ್ ಶೇಖರ್ , ಅರಣ್ಯ ಗಸ್ತು ಪಾಲಕ ಪಾಂಡುರಂಗ ಕಮತಿ ಮತ್ತು ಅಖಿಲೇಶ್, ಅರಣ್ಯ ಕವಾಲುಗಾರ ಕಿಟ್ಟಣ್ಣ ಮತ್ತು ವಿನಯಚಂದ್ರ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Posted by Vidyamaana on 2024-07-02 19:47:54 |
ಹತ್ರಾಸ್ : ಹತ್ರಾಸ್ನಲ್ಲಿ ಭೋಲೆ ಬಾಬಾ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 122 ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿದೆ.ಈ ಅವಘಡದಲ್ಲಿ 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.