Posted by vidyamaana on 2024-06-30 19:50:01 |
ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.
ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು.
ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.
ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2024-04-04 04:40:04 |
ವಿಜಯಪುರ: ಜಿಲ್ಲೆಯಲ್ಲಿ ಎರಡು ವರ್ಷದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಇಂದು ಸಂಜೆ ನಡೆದಿದ್ದು, ಕೊಳವೆ ಬಾವಿಗೆ ಬಿದ್ದಿರುವ ಮಗುವಿನ ರಕ್ಷಣೆಗಾಗಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಗುವಿನ ಉಸಿರಾಟಕ್ಕಾಗಿ ಆಕ್ಸಿಜನ್ ಪೂರೈಸಲಾಗಿದೆ.
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ ತೆರೆದ ಕೊಳವೆ ಬಾವಿಗೆ ಮಗು ಬಿದ್ದಿದೆ. ಸಾತ್ವಿಕ್ ಮುಜಗೊಂಡ (2) ಅಪಾಯದಲ್ಲಿ ಸಿಲುಕಿರುವ ಮಗು.
Posted by Vidyamaana on 2023-11-24 12:41:28 |
ಪುತ್ತೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು ಹಾಗೂ ಪಕ್ಷ ಸಂಘಟನೆಗಾಗಿ, ಸೂಕ್ತ ಸಲಹೆ ಸೂಚನೆ ನೀಡಿ ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳುವುದಕ್ಕಾಗಿ ಬೆಳ್ತಂಗಡಿ ನಗರ ಬ್ಲಾಕ್ ಗೆ ಚುನಾವಣೆ ವೀಕ್ಷಕರಾಗಿ ಎಚ್ ಮಹಮ್ಮದ್ ಅಲಿಯವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.
ಮಹಮ್ಮದ್ ಅಲಿ ಯವರು ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ ಹಾಗೂ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.
Posted by Vidyamaana on 2024-01-01 21:35:09 |
ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಇಂದು (ಸೋಮವಾರ) ಅಧಿಕಾರ ಸ್ವೀಕರಿಸಿದರು.ಈ ಕುರಿತು ಮಾತನಾಡಿದ ಅವರು ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.ಈ ಮೊದಲು ಡಿಐಜಿಯಾಗಿದ್ದ ಚಂದ್ರಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆ ಗೊಂಡಿದ್ದಾರೆ.
ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂತ್, ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿರಿದ್ದರು.
Posted by Vidyamaana on 2023-12-12 20:36:18 |
ವಿಟ್ಲ : ಸ್ನಾನಕ್ಕೆ ತೆರಳಿದ ವೇಳೆ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.
ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತ ಯುವಕ.
ಕಾರ್ತಿಕ್ ಕುದ್ದುಪದವು ಬಳಿಯಲ್ಲಿರುವ ಕೋರೆಯಲ್ಲಿ ಕೆಲಸ ಮುಗಿಸಿ ಸ್ನಾನಕ್ಕೆ ಬಂದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.
Posted by Vidyamaana on 2024-01-09 04:59:00 |
HATSAPP ವಿಶ್ವದ ಅತ್ಯಂತ ಜನಪ್ರಿಯ ಎಂಡ್-ಟು-ಎಂಡ್ ಎನ್ಕ್ರಿಪ್ಟೆಡ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ. ಆದರೆ ನೀವು ಏನು ಹೇಳುತ್ತಿದ್ದೀರಿ ಎಂಬುದರ ಕುರಿತು ಇತರ ಜನರು ಸ್ನೂಪ್ ಮಾಡಲು ಸಾಧ್ಯವಾಗದಿದ್ದರೂ, ಇತರ WhatsApp ಡೇಟಾವನ್ನು ಪ್ರಕ್ರಿಯೆಗೊಳಿಸಲಾಗುತ್ತಿಲ್ಲ ಎಂದರ್ಥವಲ್ಲನಿಮ್ಮ ಸ್ಮಾರ್ಟ್ಫೋನ್ನಲ್ಲಿ ಸೇವ್ ಆಗುತ್ತದೆ. ಇದರಿಂದ ಅವರ ಫೋನಿನ ಮೆಮೋರಿ ಕೂಡ ಬೇಗನೆ ಫುಲ್ ಆಗಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ. ಈರೀತಿ ಸ್ಟೋರೇಜ್ ಫುಲ್ ಆಗದಂತೆ ತಡೆಯಲು ಒಂದು ಟ್ರಿಕ್ ಇದೆ.
ವಾಟ್ಸ್ಆಯಪ್ನಲ್ಲಿ ನಿಮಗೆ ಯಾವುದೇ ಮಿಡಿಯಾ ಬಂದರೆ ಅದು ಅಟೋಮೆಟಿಕ್ ಡೌನ್ಲೋಡ್ ಆಗಿ ಫೋನ್ ಗ್ಯಾಲರಿಯಲ್ಲಿ ಸೇವ್ ಆಗುತ್ತದೆ. ಇದನ್ನು ತಡೆಯಲು ವಾಟ್ಸ್ಆಯಪ್ ಸೆಟ್ಟಿಂಗ್ಸ್ನಲ್ಲಿರುವ ಸ್ಟೋರೇಜ್-ಡೇಟಾ ಆಯ್ಕೆಗೆ ತೆರಳಿ ಮಿಡಿಯಾ ಅಟೋ-ಡೌನ್ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ಹೀಗೆ ಮಾಡಿದರೆ ಫೋಟೋ, ವಿಡಿಯೋ ಅಥವಾ ಯಾವುದೇ ಫೈಲ್ಗಳು ನೀವು ಡೌನ್ಲೋಡ್ ಕೊಟ್ಟರೆ ಮಾತ್ರ ಆಗುತ್ತದೆ.
ಇಂದು 16GB, 32GB, 128GB ಮೆಮೊರಿ ಹೊಂದಿರುವ ಸ್ಮಾರ್ಟ್ಫೋನುಗಳು ಹೆಚ್ಚು ಜನರ ಬಳಕೆಯಲ್ಲಿವೆ. ಹಾಗೆಂದು 16GB, 32GB, 128GB ಮೆಮೊರಿ ತುಂಬಿಸಿಕೊಳ್ಳಬಹುದು ಎಂದುಕೊಳ್ಳದಿರಿ. ಏಕೆಂದರೆ ಹೆಚ್ಚು ಸ್ಟೋರೇಜ್ ನಿಂದಾಗಿ ಫೋನುಗಳು ನಿಧಾನವಾಗುತ್ತವೆ. ಅಂತೆಯೆ ಫೋನ್ನಲ್ಲಿರುವ ಅಪ್ಲಿಕೇಷನ್ಗಳನ್ನು ತೆರೆದಂತೆ ಮೊಬೈಲ್ನಲ್ಲಿ ಅದು ಸ್ಟೋರ್ ಆಗುತ್ತಾ ಹೋಗುತ್ತದೆ.
ಮೊಬೈಲ್ನಲ್ಲಿ ಹೆಚ್ಚಿನ ಸ್ಥಳ ತಿನ್ನುವುದು ಫೋಟೋ ಮತ್ತು ವಿಡಿಯೋಗಳು. ಈ ತೊಂದರೆಯಿಂದ ದೂರವಾಗಲು ಫೋಟೋ ಮತ್ತು ವಿಡಿಯೋವನ್ನು ಮೊಬೈಲ್ನಲ್ಲಿ ಸೇವ್ ಮಾಡುವ ಬದಲು ಕ್ಲೌಡ್ ಸ್ಟೊರೇಜ್ನಲ್ಲಿ ಸೇವ್ ಮಾಡಬಹುದು.
WhatsApp ಡೌನ್ಲೋಡ್ ಸೆಟ್ಟಿಂಗ್ಗಳಿಗಾಗಿ ಕೆಲವು ಆಯ್ಕೆಗಳನ್ನು ಹೊಂದಿದೆ-ಅವು ಡೇಟಾ ಮತ್ತು ಸಂಗ್ರಹಣೆಯ ಬಳಕೆಯ ಮೆನುವಿನಲ್ಲಿ ಕಂಡುಬರುತ್ತವೆ. Android ಮತ್ತು iOS ಎರಡರಲ್ಲೂ ಆಯ್ಕೆಗಳು ಒಂದೇ ಆಗಿರುತ್ತವೆ. ನೀವು ಮೊಬೈಲ್ ಡೇಟಾವನ್ನು ಅವಲಂಬಿಸಿದ್ದರೆ, ವೈ-ಫೈ ನೆಟ್ವರ್ಕ್ಗೆ ಸಂಪರ್ಕಗೊಂಡಿದ್ದರೆ ಅಥವಾ ಎಂದಿಗೂ ಮಾಧ್ಯಮವು ಸ್ವಯಂಚಾಲಿತವಾಗಿ ಡೌನ್ಲೋಡ್ ಆಗುತ್ತದೆಯೇ ಎಂಬುದನ್ನು ನೀವು ಆಯ್ಕೆ ಮಾಡಬಹುದು. ನೀವು ರೋಮಿಂಗ್ನಲ್ಲಿರುವಾಗ ಸ್ವಯಂಚಾಲಿತ ಡೌನ್ಲೋಡ್ಗಳನ್ನು ಮಿತಿಗೊಳಿಸುವ ಆಯ್ಕೆಯನ್ನು ಆಂಡ್ರಾಯ್ಡ್ ಹೊಂದಿದೆ.
ಡೀಫಾಲ್ಟ್ ಆಗಿ, ನೀವು ಮೊಬೈಲ್ ಡೇಟಾ ಸಂಪರ್ಕವನ್ನು ಹೊಂದಿರುವಾಗ WhatsApp ಚಿತ್ರಗಳನ್ನು ಮತ್ತು ನೀವು Wi-Fi ನೆಟ್ವರ್ಕ್ಗೆ ಸಂಪರ್ಕಗೊಂಡಾಗ ವೀಡಿಯೊವನ್ನು ಡೌನ್ಲೋಡ್ ಮಾಡುತ್ತದೆ. ಈ ಆಯ್ಕೆಗಳನ್ನು ಎಂದಿಗೂ ಅಥವಾ Wi-Fi ನಲ್ಲಿ ಎಲ್ಲವನ್ನೂ ಡೌನ್ಲೋಡ್ ಮಾಡಲು ಮಾತ್ರ ಬದಲಾಯಿಸುವುದು ಕೆಲವು ಮೊಬೈಲ್ ಡೇಟಾವನ್ನು ಉಳಿಸಲು ಸಹಾಯ ಮಾಡುತ್ತದೆ ಆದರೆ ನೀವು ಅದನ್ನು ಡೌನ್ಲೋಡ್ ಮಾಡಲು ಬಯಸಿದಾಗ ಪ್ರತಿ ಚಿತ್ರ ಅಥವಾ ವೀಡಿಯೊವನ್ನು ಟ್ಯಾಪ್ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯೊಂದಿಗೆ ಬರುತ್ತದೆ.
Posted by Vidyamaana on 2023-06-13 02:18:12 |
ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ.
ಸುಮಾರು 5 ಟನ್ ಬಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ನಿಸರ್ಗಕ್ಕೆ ಧಕ್ಕೆಯಾಗದ ವಿಚಾರವನ್ನು ಹೊರತುಪಡಿಸಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಅಪರೂಪದ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮ ನಿರೂಪಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಭಾರತದ ಸ್ಟ್ರಾಟ್ ಲ್ಯಾಂಡ್ ದಕ್ಷಿಣದ ಕಾಶ್ಮೀರ ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂತಹ ಒಂದು ಅದ್ಭುತ ಯೋಜನೆ ಸ್ಥಾಪಿತವಾಗಿರುವುದು ಪ್ರವಾಸೋದ್ಯಮಕ್ಕೆ ಅಶೋದಯಕ ಬೆಳವಣಿಗೆ ಎಂದು ತಿಳಿಸಿದರು.ಟಿಕೆಟ್ ಕೌಂಟರನ್ನು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಪ್ಲೆಂಟೇಷನ್ನ ವಾಕ್ ಪಾಟ್ಅನ್ನು ಕೇಕಡ ಗಣಪತಿ ಹಾಗೂ ದೇವಯ್ಯ ಉದ್ಘಾಟಿಸಿದರು. ಫೋಟೋ ಪಾಯಿಂಟನ್ನು ಉದ್ಯಾಮಿ ಗ್ರೀನ್ ಲ್ಯಾಂಡ್ ಶರಿನ್ ಉದ್ಘಾಟಿಸಿದರು.
ಈ ಸಂದರ್ಭ ಓಂಕಾರೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ತುಳುವೆರ ಒಕ್ಕೂಟದ ಜಿಲ್ಲಾ ಖಜಾಂಚಿ ಪ್ರಭುರೈ, ಬೆಟ್ಟಗೇರಿ ಗ್ರಾ.ಪಂ ಸದಸ್ಯ ಗೋಪಾಲ, ಪ್ರಮುಖರಾದ ಮುಂಜಂದಿರ ಚಿಕ್ಕು ಕಾರ್ಯಪ್ಪ, ಅಜ್ಜಿಕುಟೀರ ನರೇನ್ ಕಾರ್ಯಪ್ಪ, ಮಿದೇರಿರ ನವೀನ್ ಹಾಜರಿದ್ದರು.