ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


BREAKING: ಬಿಜೆಪಿ ವಿರುದ್ಧ ಅಪಪ್ರಚಾರ:ರಾಹುಲ್‌ಗಾಂಧಿ ಗೆ ಜಾಮೀನು ಮಂಜೂರು...

Posted by Vidyamaana on 2024-06-07 11:19:08 |

Share: | | | | |


BREAKING: ಬಿಜೆಪಿ ವಿರುದ್ಧ ಅಪಪ್ರಚಾರ:ರಾಹುಲ್‌ಗಾಂಧಿ ಗೆ ಜಾಮೀನು ಮಂಜೂರು...

ಬೆಂಗಳೂರು  : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಜಾಮೂನು ಮಂಜೂರಾಗಿದೆ. 

2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು

ಪುತ್ತೂರು : ಜಂ ಇಯ್ಯತುಲ್ ಉಲಾಮಾ ವತಿಯಿಂದ ಬೃಹತ್ ಮೌಲೀದ್‌ ಮಜ್ಲಿಸ್

Posted by Vidyamaana on 2023-10-08 13:32:04 |

Share: | | | | |


ಪುತ್ತೂರು : ಜಂ ಇಯ್ಯತುಲ್ ಉಲಾಮಾ ವತಿಯಿಂದ  ಬೃಹತ್ ಮೌಲೀದ್‌ ಮಜ್ಲಿಸ್

ಪುತ್ತೂರು: ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿಯಿಂದ ಬೃಹತ್ ಮೌಲೀದ್ ಮಜ್ಲಿಸ್ ಕಾರ್ಯಕ್ರಮ ಪುತ್ತೂರು ಬದ್ರಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.


  1. ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ

ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಅಸೈಯದ್‌ ಅಹಮದ್ ಪೂಕೋಯ ತಂಙಳ್ ನೇತೃತ್ವ ವಹಿಸಿ ದುವಾಶೀರ್ವಚನ ನೀಡಿ ಮಾತನಾಡಿ ಮಿಲಾದುನ್ನೆಬಿಯ ಮಹತ್ವದ ಬಗ್ಗೆ ವಿವರಿಸಿದರು.ಯಾಹ್ಯಾ ತಂಙಳ್    ಪೋಳ್ಯ,ಪುತ್ತೂರು ಬದ್ರಿಯಾ ಮಸೀದಿಯ ಖತೀಬ್ ಅಬ್ಬಾಸ್ ಫೈಝಿ ಪುತ್ತಿಗೆ,ಪುತ್ತೂರು ಸಾಲ್ಮರ ಸೈಯದ್ ಮಲೆ ಮಸೀದಿಯ ಖತೀಬ್ ಉಮ್ಮರ್ ದಾರಿಮಿ ಸಾಲ್ಮರ,ಅಬ್ಬಾಸ್ ಮದನಿ ಮೊಟ್ಟೆತ್ತಡ್ಕ,ಉಮ್ಮರ್ ಫೈಝಿ ಸಾಲ್ಮರ,ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್‌ ಟಿ ಅಬ್ದುಲ್ ರಝಾಕ್ ಹಾಜಿ, ಪ್ರಧಾನ ಕಾರ್ಯದರ್ಶಿ ಯಾಕೂಬ್ ಖಾನ್ ಬಪ್ಪಳಿಗೆ ಮೊದಲಾದರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಮೀಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ ಸ್ವಾಗತಿಸಿದರು.ಮೌಲೀದ್‌ ಮಜ್ಲಿಸ್ ಕಾರ್ಯಕ್ರಮದಲ್ಲಿ ಜಂ ಇಯ್ಯತುಲ್ ಉಲಾಮಾದ ಪದಾಧಿಕಾರಿಗಳಾದ ಉಮರ್ ಮುಸ್ಲಿಯಾರ್ ನಂಜೆ, ಸಿರಾಜುದ್ದೀನ್ ಫೈಝಿ ಬಪ್ಪಳಿಗೆ,ರಶೀದ್ ರಹ್ಮಾನಿ ಪರ್ಲಡ್ಕ, ಅಝೀಝ್ ದಾರಿಮಿ ಕೊಡಾಜೆ, ಸಿದ್ದೀಕ್ ಫೈಝಿ ಮುಕ್ರಂಪಾಡಿ,ಶಾಫಿ ಇರ್ಫಾನಿ ಕಲ್ಲೆಗ, ಆಸಿಫ್ ಅಝ್ಹರಿ ಇರ್ದೆ ಉಪಸ್ಥಿತರಿದ್ದರು.

ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ : ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ

Posted by Vidyamaana on 2023-08-24 10:08:51 |

Share: | | | | |


ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ :  ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ

ಪುತ್ತೂರು: ಇಲ್ಲಿನ ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.


ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ.


ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ದಾಂಪತ್ಯ ಸರಿ ಹೋಗ್ತಿಲ್ಲಾಂತ ಎರಡನೇ ಹೆಂಡ್ತಿಯನ್ನು ಕೊಲೆಗೈದ ಮೂರನೇ ಗಂಡ

Posted by Vidyamaana on 2023-11-26 12:58:11 |

Share: | | | | |


ದಾಂಪತ್ಯ ಸರಿ ಹೋಗ್ತಿಲ್ಲಾಂತ ಎರಡನೇ ಹೆಂಡ್ತಿಯನ್ನು ಕೊಲೆಗೈದ ಮೂರನೇ ಗಂಡ

ವಿಜಯನಗರ : ಇಬ್ಬರೂ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುವ ನೌಕರರಾಗಿದ್ದಾರೆ. ದಾಂಪತ್ಯದಲ್ಲಿ ಕಲಹ ಉಂಟಾಗಿದ್ದರಿಂದ ಮನೆಯಲ್ಲಿಯೇ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಆರೋಪಿ ಗಂಡ ಪೊಲೀಸರ ಮುಂದೆ ಹಾಜರಾಗಿದ್ದಾನೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಪತಿ -ಪತ್ನಿ ಇಬ್ಬರೂ ಕೆಲಸ ಮಾಡುತ್ತಿದ್ದಾರೆ.ಆದರೆ, ಇಬ್ಬರಿಗೂ ಈ ಮೊದಲೇ ಮದುವೆ ಆಗಿದ್ದರೂ ಕುಟುಂಬಕ್ಕೆ ಹೆಚ್ಚು ಸಮಯ ಕೊಡಲಾಗದಿದ್ದರೊಂದ ಆದರೆ, ಇಬ್ಬರೂ ಬೇರೆ ಬೇರೆ ಗ್ರಾಮಗಳ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರಿಗೂ ಅನುಕೂಲ ಆಗುವಂತೆ ಇಟಗಿ ಗ್ರಾಮದಲ್ಲಿ ವಾಸವಾಗಿದ್ದರು. ಆದರೆ, ಇಬ್ಬರ ನಡುವೆ ದಾಂಪತ್ಯದಲ್ಲಿ ಎಲ್ಲವೂ ಸರಿಯಿರಲಿಲ್ಲ. ಕಳೆದ ಕೆಲವು ದಿನಗಳಿಂದ ದಾಂಪತ್ಯಲ್ಲಿ ಕಲಹ ಆರಂಭವಾಗಿದ್ದು, ಈಗ ಗಂಡನೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.ಕೊಲೆ ಘಟನೆ ಹೂವಿನ ಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಡಿಂಪಲ್ (36) ಚಾಮರಾಜನಗರ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದವಳಾಗಿದ್ದಳು. ಕೆಲಸದ ನಿಮಿತ್ತ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿಗೆ ಆಗಮಿಸಿದ್ದರು. ಆದರೆ, ಇಲ್ಲಿಗೆ ಆಗಮಿಸುವ ಮೊದಲೇ ಆಕೆಗೆ ಮದುವೆ ಆಗಿದ್ದರೂ ಕೆಲಸದ ಸ್ಥಳ ದೂರವಾದ್ದರಿಂದ ಗಂಡನನ್ನು ಬಿಟ್ಟು ಬಂದಿದ್ದರು. ಇನ್ನು ಕೆಲಸದಲ್ಲಿ ಪರಿಚಯವಾದ ಸ್ಥಳೀಯ ಕೋಗಳಿ ತಾಂಡದ ಶ್ರೀಕಾಂತ ಎನ್ನುವ ವ್ಯಕ್ತಿಯೊಂದಿಗೆ ಪ್ರೇಮಾಂಕುರವಾಗಿ ಇಬ್ಬರೂ ಮದುವೆ ಮಾಡಿಕೊಂಡಿದ್ದರು.


ಕೊಲೆಯಾದ ಮಹಿಳೆ ಡಿಂಪಲ್ ಹಡಗಲಿ ತಾಲೂಕಿನ ಉಲವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಕೊಲೆ ಮಾಡಿದ ವ್ಯಕ್ತಿ ಕೋಗಳಿ ತಾಂಡಾದ ನಿವಾಸಿಯಾಗಿದ್ದು, ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದನು.ಆದರೆ, ಡಿಂಪಲ್‌ಗೆ ಇದು ಮೂರನೇಯ ಮದುವೆಯಾಗಿತ್ತು. ಜೊತೆಗೆ, ಈಕೆಯನ್ನು ಮದುವೆಯಾಗಿದ್ದ ಶ್ರೀಕಾಂತನಿಗೂ ಇದು ಎರಡನೇ ಮದುವೆಯಾಗಿತ್ತು. ಪರಸ್ಪರ ಅನ್ನೋನ್ಯವಾಗಿದ್ದ ದಂಪತಿಗಳು ಏಕಾಏಕಿಯಾಗಿ ಜಗಳ ಆರಂಭವಾಗಿದ್ದು, ಗಂಡನೇ ಹೆಂಡತಿಯ ಕೊಲೆ ಮಾಡಿ ಇಟಗಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಚಿನ್ನದ ಅಂಗಡಿ ಮೇಲೆ ನಕಲಿ ಅಧಿಕಾರಿಗಳ ದಾಳಿ 1 ಕೇಜಿ ಬಂಗಾರ ತೆಗೆದುಕೊಂಡು ಪರಾರಿಯಾಗುತ್ತಿದ್ದವರು ಪೊಲೀಸರ ಬಲಗೆ ಬಿದ್ದಿದ್ದೇ ರೋಚಕ

Posted by Vidyamaana on 2024-01-31 08:13:29 |

Share: | | | | |


ಚಿನ್ನದ ಅಂಗಡಿ ಮೇಲೆ ನಕಲಿ ಅಧಿಕಾರಿಗಳ ದಾಳಿ 1 ಕೇಜಿ ಬಂಗಾರ ತೆಗೆದುಕೊಂಡು ಪರಾರಿಯಾಗುತ್ತಿದ್ದವರು ಪೊಲೀಸರ ಬಲಗೆ ಬಿದ್ದಿದ್ದೇ ರೋಚಕ

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದೆ. ಜನವರಿ 27 ರಂದು ಕೆಆರ್​ಪುರಂನಲ್ಲಿರುವ (KR Puram) ಚಿನ್ನದ ಅಂಗಡಿ (Gold Shop) ಮೇಲೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಗಳು ದಾಳಿ ಮಾಡಿದ್ದರು. ಆದರೆ ದಾಳಿ ಮಾಡಿದವರು ಅಸಲಿ ಅಧಿಕಾರಿಗಳಲ್ಲ, ಬದಲಿಗೆ ನಕಲಿ ಅಧಿಕಾರಿಗಳು. 45 ನಿಮಿಷದ ಕಾರ್ಯಾಚರಣೆ ಥೇಟ್ ಸಿನಿಮಾ ಕಥೆಯನ್ನೇ ಹೊಲುವ ರೀತಿ ಇದೆ. ಯಾವಾಗ ಇವರು ನಕಲಿ ಅಧಿಕಾರಿಗಳು ಎಂದು ತಿಳಿಯಿತು, ಆಗ 30 ನಿಮಿಷದ ಪೊಲೀಸರ ಕಾರ್ಯಾಚರಣೆ ನಡೆದಿದ್ದು, ಇದು ಪ್ರಕರಣದ ಮೇಜರ್ ಟ್ವಿಸ್ಟ್ ಆಗಿದೆ.


ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಗಳು ಅಂತ ಹೇಳಿ ಇದೇ ತಿಂಗಳು 27 ರಂದು ಇನೋವ್​ ಕಾರ್​ನಲ್ಲಿ ಎಂಟ್ರಿ ಕೊಟ್ಟಿದ್ದ ನಾಲ್ವರು ಕೆಆರ್​ಪುರಂನಲ್ಲಿರುವ ಮಹಾಲಕ್ಷ್ಮಿ ಜ್ಯುವೆಲರ್ಸ್ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ಹಲವು ಬಂಗಾರದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ‌ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ ಹೀಗಾಗಿ ದಾಳಿ ಮಾಡಿದ್ದೇವೆ ಎಂದು ನಕಲಿ ಅಧಿಕಾರಿಗಳು ಹೇಳಿದ್ದಾರೆ. ಬಳಿಕ 45 ನಿಮಿಷ ಕಾರ್ಯಾಚರಣೆ ನಡೆಸಿದ ನಕಲಿ ಅಧಿಕಾರಿಗಳು, ಅಂಗಡಿಯಲ್ಲಿದ್ದ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡರು.


ಇವೆಲ್ಲವನ್ನೂ ಸೀಜ್ ಮಾಡುವುದಾಗಿ ನಕಲಿ ಅಧಿಕಾರಿಗಳು ಹೇಳಿದ್ದರು. ಬಳಿಕ ಅಂಗಡಿ ಮಾಲಿಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಕಚೇರಿಗೆ ಬರುವಂತೆ ಹೇಳಿ ಹೋದರು. ಹೀಗೆ ಹೋಗುವಾಗ ನಕಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.ಊರು ಬಿಡುವ ಮುನ್ನವೇ ನಕಲಿ ಅಧಿಕಾರಿಗಳು ಲಾಕ್ ಆಗಿದ್ದೇಗೆ ?


ನಕಲಿ ಅಧಿಕಾರಿಗಳು ಚಿನ್ನದ ಅಂಗಡಿಯಿಂದ ಹೊರಡುವಾಗ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಕಂಡು ಅನುಮಾನಗೊಂಡ ಚಿನ್ನದ ಅಂಗಡಿ ಕೆಲ ಸಿಬ್ಬಂದಿಗಳು, ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಇದನ್ನು ತಿಳಿದ ನಕಲಿ ಅಧಿಕಾರಿಗಳು, ತಪ್ಪಿಸಿಕೊಳ್ಳುವ ಬರದಲ್ಲಿ ಟಿಸಿ ಪಾಳ್ಯದಲ್ಲಿ ಬೈಕ್​​ಗಳಿಗೆ ಗುದ್ದಿದ್ದಾರೆ.


ಇತ್ತ ಅಂಗಡಿ ಮಾಲಿಕರಿಗೂ ಅನುಮಾನ ಬಂದು ಕೆಆರ್​ಪುರಂ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತಿದ್ದಂತೆ, ಪೊಲೀಸರಿಗೆ ಸರಣಿ ಅಪಘಾತದ ಮಾಹಿತಿ ದೊರೆತಿದೆ. ಕೂಡಲೇ ಅಲರ್ಟ್ ಆದ ಪೊಲೀಸರು ಟಿಸಿ ಪಾಳ್ಯದ ಕಡೆಗೆ ಹೋಗಿದ್ದಾರೆ. ಪೊಲೀಸರು ಬರುವುದನ್ನು ಕಂಡ ನಕಲಿ ಅಧಿಕಾರಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಚೇಸ್​​ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್, ಸಂದೀಪ್ ಬಂಧಿತಕ ನಕಲಿ ಅಧಿಕಾರಿಗಳು. ಸಂಪತ್ ಈ ಹಿಂದೆ ಮಂಡ್ಯದಲ್ಲಿ ಸಹ ಕಳ್ಳತನ ಕೃತ್ಯ ಎಸಗಿದ್ದನು. ಈ ಪ್ರಕರಣ ಸಂಬಂಧ ಜೈಲು ವಾಸ ಅನುಭವಿಸಿ ಬಿಡುಗಡೆಯಾಗಿದ್ದನು. ಅದಾದ ಬಳಿಕ ತಮಿಳುನಾಡು ಮೂಲದ ಓರ್ವ ವ್ಯಕ್ತಿಯ ಸಂರ್ಪಕಕ್ಕೆ ಬಂದಿದ್ದಾನೆ. ಆತನ ನಿರ್ದೇಶನದಂತೆ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ.


ಆರೋಪಿಗಳು ಅರೆಸ್ಟ್​ ಆಗುತ್ತಿದ್ದಂತೆ ತಮಿಳುನಾಡು ಮೂಲದ ಮಾಸ್ಟರ್ ಮೈಂಡ್ ನಾಪತ್ತೆಯಾಗಿದ್ದಾನೆ. ಕೆಆರ್​ಪುರಂ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಕಳ್ಳತನವಾಗಿದ್ದ ಸಂಪೂರ್ಣ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Posted by Vidyamaana on 2024-01-14 08:28:15 |

Share: | | | | |


ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹೈದರಾಬಾದ್: ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.


ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ದೇಹಕ್ಕೆ ವಿದ್ಯುತ್​ ಪ್ರವಹಿಸಿದೆ.


ತಕ್ಷಣ ಬಾಲಕ ಕಿರುಚಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ. ಪೋಷಕರ ರೋದನ ಮುಗಿಳುಮುಟ್ಟಿದ್ದು, ಮಕ್ಕಳ ಚಲನವಲನ ಬಗ್ಗೆ ಹೆಚ್ಚಿನ ನಿಗಾ ಅಗತ್ಯ ಎಂದು ಪೊಲೀಸರು ನಾಗರಿಕರಿಗೆ ಸಲಹೆ ನೀಡಿದ್ದಾರೆ.



Leave a Comment: